ಲೇಖಕ: admin

ಮಡಿಕೇರಿ ಜೂ.5 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು, ಜೂ.20 ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ.ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ. ವರದಿಗಳು 2023 ರ ಜನವರಿಯಿಂದ 2023 ಡಿಸೆಂಬರ್ 31 ರೊಳಗೆ ಪ್ರಕಟವಾಗಿರಬೇಕು. ಪ್ರಶಸ್ತಿಗೆ ವರದಿ ಹಾಕುವವರು ಮೂರು ಪ್ರತಿಗಳನ್ನು ಹಾಕಬೇಕು. ದೃಶ್ಯಮಾಧ್ಯಮದವರು ತಮ್ಮ ಚಾನಲ್​ ಗಳಲ್ಲಿ ಪ್ರಸಾರವಾದ ವರದಿಯ ಸಿಡಿ ಯನ್ನು ಸಲ್ಲಿಸಬೇಕು. ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ,  ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿ, ಸಂಘದ ಉಪಾಧ್ಯಕ್ಷರಾಗಿದ್ದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿ, ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ, ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿ, ರಾಜ್ಯ…

Read More

ಮಡಿಕೇರಿ ಜೂ.5 NEWS DESK : ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಮಾತೆ  ಪ್ರಮೋದಾ ದೇವಿ ಅವರೊಂದಿಗೆ ಪ್ರಮಾಣ ಪತ್ರ ಸ್ವೀಕರಿಸಿದರು. ಮೈಸೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ  ಪ್ರಮಾಣ ಪತ್ರ ನೀಡಿದರು. ಈ ಸಂದರ್ಭ ಶಾಸಕ ಜಿ.ಟಿ.ದೇವೇಗೌಡ,  ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ಜಿ.ಪಂ.ಸಿಇಒ ಹಾಗೂ ಚುನಾವಣಾ ವೀಕ್ಷಕರು ಇದ್ದರು.

Read More

ಸುಂಟಿಕೊಪ್ಪ ಜೂ.5 NEWS DESK : ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಪಕ್ಷದ ಧ್ವಜವನ್ನು ಹಿಡಿದು, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು. ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ರಾಷ್ಟ್ರದ ಪ್ರಧಾನಿಯಾದ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‍ಶಾ, ರಾಜಾಧ್ಯಕ್ಷ ಬಿ.ವೈ.ವಿಜೇಯೇಂದ್ರ, ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ಪಕ್ಷ ಹಾಗೂ ಎನ್‍ಡಿಎಗಳಿಗೆ ಜೈಕಾರ ಕೂಗಿ ಸಂಭ್ರಮಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಸುಂಟಿಕೊಪ್ಪ ಸ್ಥಾನೀಯ ಸಮಿತಿ ಅಧ್ಯಕ್ಷ ಧನುಕಾವೇರಪ್ಪ, ಕಾರ್ಯದರ್ಶಿ ವಿ.ಕೆ.ರಾಜ, ಅಧ್ಯಕ್ಷರಾದ ಪ್ರಶಾಂತ್(ಕೋಕ), ಪಂ.ಸದಸ್ಯರುಗಳಾದ ಬಿ.ಎಂ.ಸುರೇಶ್, ಗೀತಾ, ಪಕ್ಷದ ಹಿರಿಯ ಮುಖಂಡ ಡಿ.ನರಸಿಂಹ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಮಾಜಿ ಸದಸ್ಯರುಗಳಾದ ಗೀತಾ, ಆನಂದ, ಹರೀಶ್, ಸಹನಾ ಹಾಗೂ ಬಿಜೆಪಿ ಕಾರ್ಯರ್ತರು ಇದ್ದರು.

Read More

ಮಡಿಕೇರಿ ಜೂ.4 : ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ ಅವರ ಗೆಲುವಿಗಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಾಕಷ್ಟು ಪರಿಶ್ರಮ ಪಟ್ಟರೂ ಗೆಲುವು ಸಾಧ್ಯವಾಗಿಲ್ಲ. ಜನರ ತೀರ್ಪಿಗೆ ತಲೆ ಬಾಗುತ್ತೇವೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಎಷ್ಟು ಶ್ರಮ ವಹಿಸಿದ್ದೆವೋ ಅಷ್ಟೇ ಶ್ರಮ ಈ ಬಾರಿಯೂ ಪಟ್ಟಿದ್ದೇವೆ. ಆದರೆ ಕಾಂಗ್ರೆಸ್‌ಗೆ ಗೆಲುವು ಸಾಧ್ಯವಾಗದಿರುವುದು ನಿರಾಶೆ ಮೂಡಿಸಿದೆ. ಬಿಜೆಪಿಯ ಸಾಂಪ್ರದಾಯಿಕ ಮತಗಳು ಪರಿವರ್ತನೆಯಾಗಿಲ್ಲ. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದರು.

Read More

ಮಡಿಕೇರಿ ಜೂ.4 NEWS DESK : ಪ್ರಧಾನಿ ನರೇಂದ್ರಮೋದಿ ಅವರ ಆಡಳಿತವನ್ನು ಮೆಚ್ಚಿ, ಒಳ್ಳೆಯ ಅಭ್ಯರ್ಥಿ ಎನ್ನುವ ಅಭಿಮಾನದಿಂದ ಯದುವೀರ್ ಒಡೆಯರ್ ಅವರನ್ನು ಕೊಡಗಿನ ಜನ ನಿರೀಕ್ಷೆಗೂ ಮೀರಿ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಯಂತೆಯೆ ಉತ್ತಮ ಮುನ್ನಡೆಯನ್ನು ಜಿಲ್ಲೆಯ ಜನತೆ ನೀಡಿದ್ದಾರೆ. ಜಿಲ್ಲೆಯ ಮತದಾರ ಕಾಂಗ್ರೆಸ್ ಪಕ್ಷದ ಎಲ್ಲಾ ಭಾಗ್ಯ ಮತ್ತು ಗ್ಯಾರಂಟಿಗಳನ್ನು ಬದಿಗಿಟ್ಟು ಮೋದಿ ನಾಯಕತ್ವಕ್ಕೆ ಬೆಂಬಲವನ್ನು ಮತದಾನದ ಮೂಲಕ ನೀಡಿದ್ದಾರೆ. ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಜನರ ನಿರೀಕ್ಷೆ ಹುಸಿಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು.

Read More

ಮಡಿಕೇರಿ ಜೂ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ವಕೀಲರ ಸಂಘ, ಮಡಿಕೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.5 ರಂದು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ‘ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ’ ವಿಷಯದಡಿ ಕಾರ್ಯಕ್ರಮ ನಡೆಯಲಿದೆ. ಜೂ.5 ರಂದು ಬೆಳಗ್ಗೆ 9.30 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಾಥಾ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ, ಹಿರಿಯ…

Read More

ಮಡಿಕೇರಿ ಜೂ.4 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಕೊಡಗು ಜಿಲ್ಲೆಯಲ್ಲಿ 73859 ಮತಗಳು ಲೀಡ್ ದೊರೆತ್ತಿದೆ. ಮಡಿಕೇರಿ ಕ್ಷೇತ್ರದಲ್ಲಿ 41408 ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ  32451 ಲೀಡ್ ದೊರೆತ್ತಿದೆ. ಕಳೆದ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೊಡಗು ಜಿಲ್ಲೆ ಸುಮಾರು 85 ಸಾವಿರ ಲೀಡ್ ನೀಡಿತ್ತು.

Read More

ಮಡಿಕೇರಿ ಜೂ.4 NEWS DESK : ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ ಹಿಂಡಿ…

Read More

ಮಡಿಕೇರಿ ಜೂ.4 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ವಿರುದ್ಧ 139262 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಯದುವೀರ್ ಒಡೆಯರ್  ಅವರು ಒಟ್ಟು 795503 ಮತಗಳನ್ನು ಪಡೆದರೆ ಲಕ್ಷ್ಮಣ್ ಅವರು 656241 ಮತಗಳನ್ನಷ್ಟೇ ಪಡೆಯಲು ಶಕ್ತರಾದರು. ಮತ ಎಣಿಕೆಯ ಎಲ್ಲಾ ಸುತ್ತುಗಳಲ್ಲಿ ಯದುವೀರ್ ಮುನ್ನಡೆಯನ್ನು ಕಾಯ್ದುಕೊಂಡರು. ಕೊಡಗು ಜಿಲ್ಲೆಯಲ್ಲಿ ಯದುವೀರ್ ಅವರಿಗೆ ಸುಮಾರು 73859 ಮತಗಳು ಲೀಡ್ ದೊರೆತ್ತಿದೆ. ಕಳೆದ ಚುನಾವಣೆಯಲ್ಲಿ ಕೊಡಗು ಪ್ರತಾಪ್ ಸಿಂಹ ಅವರಿಗೆ ಸುಮಾರು 85 ಸಾವಿರ ಮತಗಳನ್ನು ಲೀಡ್ ನೀಡಿತ್ತು. ಪ್ರತಾಪ್ ಸಿಂಹ ಅವರು ಕಳೆದ ಬಾರಿ 138647 ಮತಗಳ  ಅಂತರದಿಂದ ಕಾಂಗ್ರೆಸ್ ನ ವಿಜಯಶಂಕರ್ ಅವರ ವಿರುದ್ಧ ಗೆಲುವು ದಾಖಲಿಸಿದ್ದರು. ಯದುವೀರ್ ಅವರ ಗೆಲುವಿನಿಂದ ಕೊಡಗು ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು- ಕೊಡಗು ಪ್ರತಿಷ್ಠೆಯ ಕ್ಷೇತ್ರವಾಗಿತ್ತಾದರೂ ಗೆದ್ದು ಬೀಗಲು ಸಾಧ್ಯವಾಗಿಲ್ಲ.

Read More

ಕುಶಾಲನಗರ, ಜೂ.4 NEWS DESK :  ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ( ಎನ್.ಎಸ್.ಎಸ್.) ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಘಟಕದ ವತಿಯಿಂದ “ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ”ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನಾಚರಣೆ:2024 ರ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ “ಪರಿಸರ ಸಂಭ್ರಮ”: “ನಮ್ಮನಡೆ ಪರಿಸರದೆಡೆಗೆ” “ಗೋ ಗ್ರೀನ್ ಅಭಿಯಾನ” ಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸಿ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದರು. ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ರಾಯಭಾರಿಗಳಾಗಿ ರೂಪುಗೊಳ್ಳಬೇಕು ಎಂದು ಪ್ರೇಮಕುಮಾರ್ ಹೇಳಿದರು. ವಿದ್ಯಾರ್ಥಿಗಳು…

Read More