ಸುಂಟಿಕೊಪ್ಪ ಮೇ 20 NEWS DESK : ಸುಂಟಿಕೊಪ್ಪ ವ್ಯಾಪ್ತಿಯ ಶಾಂತಿಗೇರಿ, ಅಂದಗೋವೆ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಕಾಫಿ ತೋಟಗಳಲ್ಲಿ ಠಿಕಾಣಿ ಹೂಡಿ ಉಪಟಳ ನೀಡುತ್ತಿದ್ದ ಏಳು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ. ಅರಣ್ಯ ಇಲಾಖೆಯ ಆರ್ ಆರ್ ಟಿ ತಂಡ ಅಂದಗೋವೆಯಲ್ಲಿ ಸೇರಿಕೊಂಡಿರುವ ಕಾಡಾನೆಗಳನ್ನು ಕಲ್ಲೂರು ಮೂಲಕ ಆನೆಕಾಡು ಅರಣ್ಯಕಟ್ಟುವ ಪ್ರಯತ್ನ ಮಾಡುತ್ತಿದೆ. ಈ ಗ್ರಾಮಗಳ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಲೇಖಕ: admin
ಸುಂಟಿಕೊಪ್ಪ ಮೇ 20 NEWS DESK : ದೇಶದ ಪ್ರತಿಷ್ಠಿತ ವೈದಕೀಯ ಕಾಲೇಜುಗಳಲ್ಲಿ ಒಂದಾಗಿರುವ ಮೈಸೂರು ಮೆಡಿಕಲ್ ಕಾಲೇಜಿನ ಶತಮಾನೋತ್ಸವ ಸಮಾರಂಭದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಪೈಕಿ ಕಾಲೇಜಿನ ಇತಿಹಾಸದಲ್ಲೇ ಅತ್ಯುನ್ನತ ಪದವಿ ಪುರಸ್ಕಾರ ಮತ್ತು ಗೌರವಗಳಿಗೆ ಪಾತ್ರರಾದ ಮೂಲತಃ ಕೊಡಗಿನವರಾದ ಲೆ.ಜ. ಡಾ.ಬಿ.ಎನ್.ಬಿ.ಎಂ. ಪ್ರಸಾದ್ ಎಸ್.ಎಂ.,ವಿ ಎಸ್.ಎಂ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ಮತ್ತು ನಿರ್ದೇಶಕರಾದ ಡಾ.ದಾಕ್ಷಾಯಿಣಿ ಅವರು ಇತರ ಗಣ್ಯರ ಸಮುಖದಲ್ಲಿ ಡಾ.ಪ್ರಸಾದರನ್ನು ಮೈಸೂರು ಪೇಟಾ ಶಾಲು ಫಲ ತಾಂಬೂಲ ಪ್ರಶಸ್ತಿ ಪತ್ರದೊಂದಿಗೆ ಗೌರವಿಸಿದರು. ಡಾ.ಪ್ರಸಾದ್ ಈ ಕಾಲೇಜಿನಿಂದ 1977 ರಲ್ಲಿ ವೈಧ್ಯರಾಗಿ ಹೊರಹೊಮ್ಮಿ ಭಾರತೀಯ ಭೂಸೇನೆಯನ್ನು ಸೇರಿದರು ಸೇನೆಯಲ್ಲಿ ವಿವಿಧ ಜವಬ್ಧಾರಿಗಳೊಂದಿಗೆ ಹಂತ ಹಂತವಾಗಿ ಪದನ್ನೋತ್ತಿ ಹೊಂದಿ ಅವರು ಭಾರತೀಯ ರಕ್ಷಣಾ ಪಡೆಗಳ ವೈದಕೀಯ ವಿಭಾಗದ ಮಹಾ ನಿರ್ದೇಶಕರಾಗಿ ಮುಖ್ಯ ಸಮಲೋಚಕರಾಗಿ ಜೋತೆಗೆ ಭಾರತ ರಾಷ್ಟ್ರಪತಿಗಳ ಗೌರವ ಸರ್ಜನ್ ಆಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ರಾಷ್ಟ್ರಮಟ್ಟದ ಪ್ರಶಸ್ತಿ…
ಸುಂಟಿಕೊಪ್ಪ ಮೇ 20 NEWS DESK : ಸೋಮವಾರಪೇಟೆ ತಾಲೂಕಿನ ಮಾದಾಪುರ ವ್ಯಾಪ್ತಿಯಲ್ಲಿನ ಕುಂಬೂರಿನಲ್ಲಿ ನಿರ್ಮಿಸಲಾಗಿರುವ ಪವಿತ್ರ ಕುಟುಂಬ ದೇವಾಲಯವು ಮೇ 21 ರಂದು ಲೋಕಾರ್ಪಣೆಗೊಳ್ಳಲಿದೆ. ನೂತನ ದೇವಾಲಯದ ಉದ್ಘಾಟನೆ ಮತ್ತು ಆರ್ಶಿವಚನವನ್ನು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಪರಮಪೂಜ್ಯ ಡಾ.ಬರ್ನಾಡ್ ಮೊರಾಸ್ ನೇರವೇರಿಸಲಿದ್ದು, ಅತೀ ವಂ.ಗುರುಗಳಾದ ಮೈಸೂರು ಧರ್ಮಾಕ್ಷೇತ್ರದ ಜಾನ್ ಅಲ್ಬರ್ಡ್ ಮೆಂಡೋನ್ಸಾ, ಮಡಿಕೇರಿ ವಲಯದ ಶೇಷ್ಠಗುರುಗಳಾದ ಜಾರ್ಜ್ ದೀಪಕ್ ಉಪಸ್ಥಿತರಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿಗಳಾದ ದೀವಕರ್ ಎಂ.ಲಕ್ಷ್ಮೀಜಾಲ ಎಸ್ಟೇಟ್ ಮಾಲೀಕರಾದ ಕೋಗಂಡ ವಿನಯ್ಸೋಮಯ್ಯ ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿದ್ದಪ್ಪ ಉಪಾಧ್ಯಕ್ಷರಾದ ಸುರೇಶ್ ಸದಸ್ಯರುಗಳಾದ ಅಂತೋಣಿ ಪಿ.ಡಿ.ಜೆರ್ಮಿ, ದಮಯಂತಿ ಪಾಲ್ಗೊಳ್ಳಲಿದ್ದಾರೆ. ಮಡಿಕೇರಿ ವಲಯಾದ ಶೃದ್ಧಾ ಕೇಂದ್ರಗಳಲ್ಲಿ ಒಂದಾಗಿರುವ ಕುಂಬೂರುವಿನ ಪವಿತ್ರ ಕುಟುಂಬ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಭವ್ಯ ದಿವ್ಯ ನವೀನ ದೇವಾಲಯಕ್ಕೆ 10 ಹಲವು ಧರ್ಮಗುರುಗಳು ಕನ್ಯಾಸ್ತ್ರೀಯರು ಮತ್ತು ಭಕ್ತರ ತ್ಯಾಗ ಪರಿಶ್ರಮ…
ಮಡಿಕೇರಿ ಮೇ 20 NEWS DESK : ನಾಲ್’ನಾಡ್ ಹಾಕಿ ಕ್ಲಬ್ ವತಿಯಿಂದ ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಮೇ 22 ರಿಂದ ಬಲ್ಲಮಾವಟಿ ನೇತಾಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಯಬೇಕಾಗಿದ್ದ ನಾಲ್’ನಾಡ್ ವ್ಯಾಪ್ತಿಯ ಅಂತರಗ್ರಾಮ ಹಾಕಿ ಪಂದ್ಯಾಟ ಮತ್ತು ಮಹಿಳೆಯರ ಹಗ್ಗಜಗ್ಗಾಟವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದ್ದು, ಪಂದ್ಯಾವಳಿಯನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕ್ರೀಡಾಭಿಮಾನಿಗಳು ಮತ್ತು ನೊಂದಾಯಿತ ತಂಡಗಳು ಬದಲಿಸಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ನಾಲ್’ನಾಡ್ ಹಾಕಿ ಕ್ಲಬ್ ನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಕೋರಿದೆ.
ಸೋಮವಾರಪೇಟೆ ಮೇ 20 NEWS DESK : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚು ಒತ್ತು ನೀಡಿದರೆ ಉತ್ತಮ ಸಾಧನೆ ಮಾಡಬಹುದು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು. ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವತಿಯಿಂದ ಪಟ್ಟಣದಲ್ಲಿರುವ ಹಾಕಿ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಆರ್ಹತಾ ಪತ್ರ ವಿತರಿಸಿ ಮಾತನಾಡಿದರು. ಕ್ರೀಡಾಕ್ಷೇತ್ರದಲ್ಲಿ ಆಸಕ್ತಿಯಿರುವ ಮಕ್ಕಳಿಗೆ ನಾವುಗಳು ಪ್ರೋತ್ಸಾಹ ನೀಡಬೇಕು. ಸಿಕ್ಕ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಡಿಸಿಕೊಳ್ಳಬೇಕು ಎಂದು ಹೇಳಿದರು. ಕೊಡಗಿನಲ್ಲಿ ಹಾಕಿ ಎಂಬುದು ರಕ್ತದಲ್ಲಿದೆ. ಇಲ್ಲಿನ ಮೈದಾನದಲ್ಲಿ ಆಟವಾಡಿದ ಹಾಕಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಂತಹ ಪ್ರತಿಭಾವಂತರು ಸೃಷ್ಟಿಯಾಗಬೇಕಿದೆ. ಗ್ರಾಮೀಣ ಭಾಗದಲ್ಲಿ ಎಲೆಮರೆ ಕಾಯಿಯಂತಿರುವ ಪ್ರತಿಭೆಗಳನ್ನು ಹುಡುಕಿ ತರಬೇತಿ ನೀಡಬೇಕು. ಸಿಂಥೆಟಿಕ್ ಟರ್ಫ್ ಮೈದಾನ ಉಪಯೋಗವಾಗಬೇಕು. ಕ್ರೀಡಾ ಇಲಾಖೆಯವರು ಹಾಕಿ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ…
ಮಡಿಕೇರಿ ಮೇ 20 NEWS DESK : ಭಾರೀ ಗಾತ್ರದ ಕಾಡುಕೋಣವನ್ನು ಬೇಟೆಯಾಡಿ ಮಾಂಸ ಮಾಡಿ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಖಾ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಮ್ಮೆಮಾಡು ಗ್ರಾಮದ ನಿವಾಸಿ ಹ್ಯಾರಿಸ್(42) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಬಂಧಿತ ವ್ಯಕ್ತಿಯಿಂದ ಸುಮಾರು 549 ಕೆ.ಜಿ. ಕಾಡುಕೋಣದ ಮಾಂಸ, ಎರಡು ಕತ್ತಿ ಹಾಗೂ ಪಿಕಪ್ ವಾಹನವೊಂದನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ನಂದಿಮೊಟ್ಟೆ ಎಂಬಲ್ಲಿ ಕಾಡುಕೋಣವನ್ನು ಬೇಟೆಯಾಡಲಾಗಿದೆ ಎನ್ನಲಾಗಿದ್ದು, ಇದರ ಮಾಂಸವನ್ನು ವಾಹನದ ಮೂಲಕ ಸಾಗಾಟ ಮಾಡುವ ಸಂದರ್ಭ, ಸುಳಿವರಿತ ಅರಣ್ಯ ಇಲಾಖಾ ತಂಡ ಆರೋಪಿಗಳ ವಾಹನವನ್ನು ರಾತ್ರಿಯ ವೇಳೆ ಬೆನ್ನಟ್ಟಿ ಅಪ್ಪಂಗಳ ಬಳಿ ವಾಹನ ಸಹಿತ ಆರೋಪಿತಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಂತದಲ್ಲಿ ಹ್ಯಾರಿಸ್ನೊಂದಿಗೆ ಇದ್ದ ಮತ್ತೊಬ್ಬ ಪರಾರಿಯಾಗಿದ್ದಾನೆ. ಕಾರ್ಯಾಚರಣೆಯಲ್ಲಿ ಡಿಎಫ್ಓ ಭಾಸ್ಕರ್, ಎಸಿಎಫ್ ಮೊಹಿಸಿನ್ ಬಾಷ, ಆರ್ಎಫ್ಓ ಪೂಜಶ್ರಿ, ಸಿಬ್ಬಂದಿಗಳಾದ ಮಲ್ಲಯ್ಯ ಹೀರೆಮಠ್, ಸಂತೋಷ್ ವಾಸುದೇವ, ಜೀವನ್, ಯಶವಂತ್, ಕುಶನ್, ಪ್ರವೀಣ್, ಮಹೇಶ,…
ಮಡಿಕೇರಿ ಮೇ 20 NEWS DESK : 2024-25 ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತ್ರ, ಶೂ, ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಶುಚಿ ಸಂಭ್ರಮ ಕಿಟ್(ಸೋಪು, ಎಣ್ಣೆ, ಬ್ರಶಸ್, ಪೇಸ್ಟ್, ಪೌಡರ್), ಕಂಪ್ಯೂಟರ್ ಲ್ಯಾಬ್, ಆಟೋಪಕರಣಗಳು ಹಾಗೂ ಇತರೆ ಸೌಲಭ್ಯಗಳು ಮತ್ತು ನುರಿತ ಬೋಧಕರಿಂದ ಬೋಧನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕುಶಾಲನಗರ ತಾಲ್ಲೂಕು ನಂಜರಾಯಪಟ್ಟಣ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, (6362555320), ಕುಶಾಲನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (9481143491), ಸೋಮವಾರಪೇಟೆ ತಾಲ್ಲೂಕಿನ ಮಾಲಂಬಿ ವಾಲ್ಮೀಕಿ ಆಶ್ರಮ ಶಾಲೆ (6362555320), ಯಡವನಾಡು ವಾಲ್ಮೀಕಿ ಆಶ್ರಮ ಶಾಲೆ (8618546009), ಕುಶಾಲನಗರ ಬಸವನಹಳ್ಳಿ ವಾಲ್ಮೀಕಿ ಆಶ್ರಮ ಶಾಲೆ…
ಮಡಿಕೇರಿ ಮೇ 20 NEWS DESK : ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ)ಗೆ 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ (2 ವರ್ಷ ಎನ್ಸಿವಿಟಿ ಸಂಯೋಜನೆ), ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (1 ವರ್ಷ ಎನ್ಸಿವಿಟಿ ಸಂಯೋಜನೆ) ವೃತ್ತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಜೂನ್, 03 ಕೊನೆಯ ದಿನವಾಗಿದೆ. ಅರ್ಜಿಯನ್ನು ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ), ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ.08274-200221 ಮತ್ತು 9036796935, 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಮಡಿಕೇರಿ ಮೇ 19 NEWS DESK : ಕೊಡಗು ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಚುರುಕು ಪಡೆಯುತ್ತಿದ್ದು, ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಕೊಡಗು ಜಿಲ್ಲಾಡಳಿತ ಅತಿವೃಷ್ಟಿಯನ್ನು ಎದುರಿಸಲು ಸನ್ನದ್ಧವಾಗುತ್ತಿದೆ. ::: ಸಿಬ್ಬಂದಿಗಳಿಗೆ ತರಬೇತಿ ::: ಮುನ್ನೆಚ್ಚರಿಕಾ ಕ್ರಮಗಳ ಭಾಗವಾಗಿ ಕೊಡಗು ಜಿಲ್ಲಾ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ತನ್ನ ಸಿಬ್ಬಂದಿಗಳಿಗೆ ಕೂಟುಹೊಳೆ ಹಿನ್ನೀರಿನಲ್ಲಿ ಪ್ರವಾಹ ರಕ್ಷಣಾ ಕ್ರಮಗಳ ಕುರಿತು ತರಬೇತಿ ನೀಡಿತು. ರ್ಯಾಫ್ಟ್ ಬೋಟ್ ಮೂಲಕ ಹಿನ್ನೀರಿನಲ್ಲಿ ಅಭ್ಯಾಸ ನಡೆಸಿದ ಸಿಬ್ಬಂದಿಗಳು ಪ್ರವಾಹ ಎದುರಾದ ಸಂದರ್ಭ ಸ್ಥಳಕ್ಕೆ ಧಾವಿಸುವುದು, ಹರಿಯುವ ನದಿ ನೀರಿನ ಪ್ರವಾಹಕ್ಕೆ ಎದುರಾಗಿ ಬೋಟ್ ಚಲಾಯಿಸುವುದು, ಜನ ಜಾನುವಾರುಗಳ ರಕ್ಷಣೆ ಮಾಡುವುದು, ಹಗ್ಗದ ಸಹಾಯದಿಂದ ಜನರನ್ನು ರಕ್ಷಿಸುವುದು ಸೇರಿದಂತೆ ವಿವಿಧ ರೀತಿಯ ಕಸರತ್ತನ್ನು ನಡೆಸುವ ಮೂಲಕ ತನ್ನ ಸಿಬ್ಬಂದಿಗಳಿಗೆ ಮಳೆಗಾಲ ಎದುರಾಗುವ ವಿಪತ್ತುಗಳನ್ನು ಎದುರಿಸಲು ಸಿದ್ಧಗೊಳಿಸಿದೆ. ::: ರಕ್ಷಣಾ…
ಬಂಟವಾಳ ಮೇ 20 NEWS DESK : ಎನ್ ಡಿಎ ಮೈತ್ರೂಕೂಟದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಬಂಟವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು. ಬಂಟವಾಳ ಸರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಹೆಚ್ಚು ನೋಂದಣಿ ಮಾಡಿದ ಕ್ಷೇತ್ರವಿದು, ಈ ಭಾಗದಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡಲು ಶ್ರಮಿಸುವುದಾಗಿ ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕ ವಿಕಾಸ್ ಪುತ್ತೂರ್ ಮಾತನಾಡಿ, ಎಲ್ಲ ಮಹಾಶಕ್ತಿ ಕೇಂದ್ರದ ಪ್ರಮುಖರು ಒಟ್ಟಾಗಿ ಕೆಲಸ ಮಾಡಬೇಕಿದೆ. ವಿಧಾನ ಸಭೆ ಹಾಗೂ ಲೋಕಸಭಾ ಚುನಾವಣೆಗಿಂತ ವಿಭಿನ್ನವಾಗಿ ಈ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಾರ್ಯಶೀಲರಾಗಬೇಕಿದೆ, ಪ್ರತಿ ಮತದಾರರನ್ನು ಮತಗಟ್ಟೆಗೆ ಕರೆ ತಂದು ಮೊದಲ ಪ್ರಾಶಸ್ತ್ಯದ ಮತ ಹಾಕಿಸಬೇಕು ಎಂದು ಹೇಳಿದರು. ಕ್ಯಾಪ್ಟನ್ ಬ್ರಿಜೇಶ್ ಮಾತನಾಡಿ, ಬೇರೆಲ್ಲಾ ಚುನಾವಣೆಗಿಂತ ಪರಿಷತ್ ಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು,…






