ಲೇಖಕ: admin

ಸುಂಟಿಕೊಪ್ಪ, ಜೂ.3 NEWS DESK : ಗರಗಂದೂರು ಬಿ ತೋಟದ ಸಮೀಪದ (ಹೊಸತೋಟ) ಬಸ್ ಸ್ಟ್ಯಾಂಡ್ ನಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಪತ್ತೆಯಾಗಿದೆ. ಸೋಮವಾರ ಸಂಜೆ ಹೊಸತೋಟ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು,  ಮೃತ ವ್ಯಕ್ತಿ ಮೈಸೂರು ಜಿಲ್ಲೆಯ ಇಲವಾಲ ಸಮೀಪದ ಹೊಸಕೋಟೆ ಚಂದ್ರು (42) ಎಂದು ಗುರುತಿಸಲಾಗಿದೆ. ಊಟದ ಬ್ಯಾಗ್ ಇರಿಸಿಕೊಂಡಿದ್ದ ಚಂದ್ರು, ಬಸ್ ನಿಲ್ದಾಣದಲ್ಲಿ ಕುಳಿತಲ್ಲೇ ಅಸುನಿಗಿದ್ದಾರೆ. ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ಬಂದಮೇರೆಗೆ  ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಜೂ.3 NEWS DESK : ಆದಿವಾಸಿಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಒದಗಿಸಲು ಎಸ್‌ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡಬೇಕೆಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಇದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಒಳಮೀಸಲಾತಿಯನ್ನು ತಂದು ಕೆಲವು ಸಮುದಾಯಗಳಿಗೆ ನೆರವಾಗಿದೆ. ಇದೀಗ ರಾಜ್ಯದಲ್ಲಿ ಅಧಿಕಾರದಲ್ಲಿರುವ ಅಹಿಂದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರಕಾರ ಎಸ್‌ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡುವ ಮೂಲಕ 49 ಸಮುದಾಯಗಳಿಗೆ ನ್ಯಾಯ ಒದಗಿಸಲಿ ಎಂದರು. ಎಸ್‌ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡಲು ಸರಕಾರ ಸಮಿತಿಯೊಂದನ್ನು ರಚಿಸಬೇಕು. ಈ ಬೇಡಿಕೆಯ ಕುರಿತು ಆದಿವಾಸಿಗಳಿರುವ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸಲಾಗುವುದು ಮತ್ತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು. ಜಾತಿ ಜನ ಗಣತಿ ವರದಿಯನ್ನು ಬಿಡುಗಡೆ ಮಾಡಿದರೆ ನಿಖರವಾದ ಅಂಕಿ ಅಂಶಗಳು ಲಭಿಸಲಿದ್ದು, ಜನಸಂಖ್ಯಾ ಆಧಾರದಲ್ಲಿ ಮೀಸಲಾತಿ ನೀಡಿ ಆದಿವಾಸಿಗಳಿಗೆ ನ್ಯಾಯ…

Read More

ಮಡಿಕೇರಿ ಜೂ.3 NEWS DESK : ನೈಋತ್ಯ ಪದವೀದರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಗೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ ನಡೆಯಿತು. ನೈಋತ್ಯ ಪದವೀಧರ ಕ್ಷೇತ್ರದ ಕೊಡಗಿನ 3909 ಮತದಾರರಲ್ಲಿ 3170 ಮಂದಿ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಶೇ.81.09 ಮತದಾನ ದಾಖಲಾಗಿದೆ. ಶಿಕ್ಷಕರ ಕ್ಷೇಢತ್ರದ 1578 ಮತದಾರರಲ್ಲಿ 1371 ಮಂದಿ ಮತ ಚಲಾಯಿಸುವ ಮೂಲಕ ಶೇ.86.88 ಮತದಾನವಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ, ತಾಲ್ಲೂಕು ಕೇಂದ್ರಗಳಾದ ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ವ್ಯವಸ್ಥೆಮಾಡಲಾಗಿದ್ದ ಮತಗಟ್ಟೆಗಳಲ್ಲಿ ಇಂದು ಬೆಳಗ್ಗಿನಿಂದಲೆ ಶಿಕ್ಷಕರು ಮತ್ತು ಪದವೀಧರರು ಸರದಿಯ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದುದು ಗೋಚರಿಸಿತು. ಮಡಿಕೇರಿಯ ನಗರಸಭಾ ಕಚೇರಿಯಲ್ಲಿ ವ್ಯವಸ್ಥೆ ಮಾಡಿದ್ದ ಪದವೀಧರರ ಕ್ಷೇತ್ರದ ಚುನಾವಣಾ ಮತಗಟ್ಟೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯ್ತಿ ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಒಟ್ಟಾಗಿ ಬಂದು ಸರದಿಯ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ವಿಶೇಷವಾಗಿತ್ತು. ನೈಋತ್ಯ…

Read More

ಸುಂಟಿಕೊಪ್ಪ ಜೂ.3 NEWS DESK : ಸುಂಟಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ಭಾನುವಾರ ನಡೆದಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆದಕಲ್ ಗ್ರಾಮದ ಏಳನೇ  ಮೈಲು  ನಿವಾಸಿ  ಇಬ್ರಾಹಿಂ (60) ಮೃತ ದುರ್ದೈವಿ. ಸುಂಟಿಕೊಪ್ಪದಿಂದ ಕುಶಾಲನಗರದತ್ತ ತೆರಳುತ್ತಿದ್ದ ಸ್ಕೂಟಿಗೆ ಹಿಂಬದಿಯಲ್ಲಿ ಬರುತ್ತಿದ್ದ ಕೇರಳ ಕಣ್ಣೂರಿನ ಇನ್ನೋವಾ ಕಾರು ಡಿಕ್ಕಿಯಾಗಿತ್ತು. ಗಾಯಾಳು ಇಬ್ರಾಹಿಂ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಆಗಲಿದ್ದಾರೆ.

Read More

ಮಡಿಕೇರಿ ಜೂ.3 NEWS DESK : ಸಿದ್ದಾಪುರ ಕಾವೇರಿ ಜಲಾನಯನ ಪ್ರದೇಶದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆಗಳನ್ನು ತಡೆಯದಿದ್ದಲ್ಲಿ ಮುಂದೊಂದು ದಿನ ಪವಿತ್ರ ಕಾವೇರಿಯ ತವರು ಕೊಡವ ಲ್ಯಾಂಡ್ ಮರೆಯಾಗಿ ಕೊಡವರು ಅಲೆಮಾರಿಗಳಾಗಬೇಕಾಗುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಭೂಪರಿವರ್ತನೆಯ ವಿರುದ್ಧ ಬಿರುನಾಣಿಯಲ್ಲಿ ಶಾಂತಿಯುತ ಮಾನವ ಸರಪಳಿ ನಿರ್ಮಿಸುವ ಮೂಲಕ ಸಿಎನ್‍ಸಿಯ ಜನಜಾಗೃತಿ ಕಾರ್ಯಕ್ರಮವನ್ನು ಆರಂಭಿಸಿದ ಅವರು ಕೊಡವ ಲ್ಯಾಂಡ್ ನ್ನು ಉಳಿಸಿಕೊಳ್ಳಲು ಕೊಡವರೆಲ್ಲರು ಒಗ್ಗೂಡುವಂತೆ ಕರೆ ನೀಡಿದರು. ಭೂಪರಿವರ್ತನೆಯಿಂದ ಸಾವಿರಾರು ಮಂದಿ ನೆಲೆಸುವ ಸಾಧ್ಯತೆ ಇದೆ. ಈ ಬೆಳವಣಿಗೆಯಿಂದ ಕೊಡಗಿನಲ್ಲಿ ಜನಸಂಖ್ಯಾ ಸ್ಫೋಟ ಸಂಭವಿಸಿ ಆದಿಮಸಂಜಾತ ಬುಡಕಟ್ಟು ಜನಾಂಗ ಮೂಲನಿವಾಸಿ ಕೊಡವರ ಅಸ್ತಿತ್ವಕ್ಕೆ ದಕ್ಕೆ ಬರಬಹುದು ಎಂದು ತಿಳಿಸಿದರು. ಮೂಲನಿವಾಸಿಗಳು ವಾಸದ ಮನೆ ನಿರ್ಮಿಸಲು ಅನುಮತಿ ಕೋರಿದರೆ ಹಸಿರು ವಲಯ ಪ್ರದೇಶವೆಂದು ಅಡ್ಡಿ ಪಡಿಸುವ ಆಡಳಿತ ವ್ಯವಸ್ಥೆ ಭೂಮಾಫಿಯಾಗಳು ಸಾವಿರಾರು ಏಕರೆ ಹಸಿರ ಭೂಮಿಯನ್ನು…

Read More

ಮಡಿಕೇರಿ ಜೂ.3 NEWS DESK : ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಆಗಮಿಸಿರುವ ಎನ್‍ಡಿಆರ್‍ಎಫ್ ತಂಡವು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಮಾಡಿ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿದರು. ಎನ್‍ಡಿಆರ್‍ಎಫ್‍ನ ಅಜಯ್ ಕುಮಾರ್ ನೇತೃತ್ವದ ತಂಡವು ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ, ಎನ್‍ಡಿಆರ್‍ಎಫ್ ತಂಡ ಪ್ರಮುಖರು ಇದ್ದರು. ಎನ್‍ಡಿಆರ್‍ಎಫ್ ತಂಡವು ಬೆಂಗಳೂರಿನ ಆರ್‍ಆರ್‍ಸಿ ವಿಭಾಗದಿಂದ ಆಗಮಿಸಿದೆ.

Read More

ಮಡಿಕೇರಿ ಜೂ.3 NEWS DESK : ಬ್ಯೂ ಬ್ಯಾಂಡ್ ಸಂಸ್ಥೆ ವತಿಯಿಂದ ನಾಸಿಕ್ ನಲ್ಲಿ ಆಯೋಜಿತ ಜೂನಿಯರ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್ ಶಿಪ್ ನ ರ‍್ಯಾಲಿ ಆಫ್ ಮಹರಾಷ್ಟ್ರದಲ್ಲಿ ಮೇಕೇರಿಯ ಅಭಿನ್ ರೈ ಎರಡನೇ ಸ್ಥಾನ ಪಡೆದಿದ್ದಾರೆ. ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್ ಶಿಪ್ ನ ವಿಭಾಗ 3 ರಲ್ಲಿ ಪಾಲ್ಗೊಂಡಿದ್ದ ಅಭಿನ್ ರೈ ನಾಲ್ಕನೇ ಸ್ಥಾನ ಪಡೆದಿದ್ದು, ದೇಶದ ವಿವಿಧೆಡೆಗಳ 29 ರ‍್ಯಾಲಿ ಚಾಲಕರು ಈ ವಿಭಾಗದಲ್ಲಿ ಪಾಲ್ಗೊಂಡಿದ್ದರು. ಅಭಿನ್ ರೈ ಮೇಕೇರಿ ಗ್ರಾಮದ ರತ್ನಾಕರ್ ರೈ ಮತ್ತು ನಮಿತಾ ರೈ ದಂಪತಿ ಪುತ್ರನಾಗಿದ್ದು, ಕಳೆದ ವಷ೯ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಚಾಂಪಿಯನ್ ಆಗಿದ್ದರು.

Read More

ಮಡಿಕೇರಿ ಜೂ.3 NEWS DESK : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ  ಯಾವುದಾದರೂ ನೆರೆ ಹಾವಳಿಯಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದರೆ ಸಾರ್ವಜನಿಕರ ಸಹಾಯಕ್ಕೆ ಧಾವಿಸಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಡಿಎಆರ್, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಉಪ ವಿಭಾಗಗಳ ತಲಾ 15 ಸಿಬ್ಬಂದಿಗಳನ್ನೊಳಗೊಂಡ 4 ವಿಪತ್ತು ನಿರ್ವಹಣಾ ತಂಡವನ್ನು ರಚಿಸಲಾಗಿದ್ದು, ಈ ತಂಡಗಳಿಂದ  ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ರಕ್ಷಣಾ ಕಾರ್ಯಾಚರಣೆಯ ಅಭ್ಯಾಸವನ್ನು ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿ಼ಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಕುಶಾಲನಗರ ವೃತ್ತ ನಿರೀಕ್ಷಕ ಕೆ.ರಾಜೇಶ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಜೂ.3 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಗೋಣಿಕೊಪ್ಪಲಿನ ನದಿ ಪುನಶ್ಚೇತನ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಶಾಸಕ ಪೊನ್ನಣ್ಣ, ಘನತ್ಯಾಜ್ಯ ನಿರ್ವಹಣೆಗೆ ನಿರ್ದೇಶನ ನೀಡಿ ಈ ನದಿ ಮೊದಲಿನಂತೆ ನೀರು ಹರಿಯುವಂತಾಗಬೇಕು. ಈ ಕೆಲಸಕ್ಕೆ ಹಲವಾರು ಸಂಸ್ಥೆಗಳು ಕೈಜೋಡಿಸಿದ್ದು, ಕ್ಲೀನ್‌ ಕೂರ್ಗ್‌ ಇನಿಶಿಯೇಟಿವ್ ಸಂಸ್ಥೆ ವೈಜ್ಞಾನಿಕ ತಡೆ ಟ್ರಾಶ್ ಬ್ಯಾರಿಯರ್‌ ಯನ್ನು ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಗೋಣಿಕೊಪ್ಪ ಪಂಚಾಯಿತಿಯ ಅಧ್ಯಕ್ಷ ಪ್ರಮೋದ್ ಗಣಪತಿ ಹಾಜರಿದ್ದರು.

Read More

ಮಡಿಕೇರಿ ಜೂ.3 NEWS DESK : ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ 28ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಸಂಭ್ರಮದಿಂದ ನಡೆಯಿತು. ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘ, ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮನ್ನು ಕಾಸರಗೋಡಿನ ನಿವೃತ್ತ ಹಿರಿಯ ಮಕ್ಕಳ ತಜ್ಞ ಡಾ.ಬಿ.ನಾರಾಯಣ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚಿನ ನೀರನ್ನು ಸೇವಿಸಬೇಕೆಂದು ಸಲಹೆ ನೀಡಿದರು. ಬೆಂಗಳೂರಿನ ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಯ ಮುಖ್ಯ ವಿಜ್ಞಾನಿ ಎಂ.ಟಿ.ಶೋಭಾವತಿ ಅವರು ಮಾತನಾಡಿ, 85 ಸದಸ್ಯರಿಂದ ಸ್ಥಾಪನೆಯಾದ ಸಂಘದ ಸದಸ್ಯತ್ವವನ್ನು 763ಕ್ಕೆ ಹೆಚ್ಚಿಸಿದ ಆಡಳಿತ ಮಂಡಳಿಯ ಶ್ರಮ ಶ್ಲಾಘನೀಯವೆಂದರು. ಸಂಘದ ಬೆಳವಣಿಗೆ, ಸಂಘ ಹೊಂದಿರುವ ಆಸ್ತಿ ಮತ್ತು ಕಟ್ಟಡ ನಿರ್ಮಾಣದ ವಿವಿಧ ಹಂತಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಮಾಜದ ಕಟ್ಟಡ ಕಾಮಗಾರಿ ಸಂಪೂರ್ಣಗೊಳ್ಳಲು ಸರ್ವರೂ ಸಹಕರಿಸಬೇಕೆಂದು ಕರೆ ನೀಡಿದರು. ಸಂಘದ ಹಿರಿಯ…

Read More