ಲೇಖಕ: admin

ಮಡಿಕೇರಿ ಜೂ.3 NEWS DESK : ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಮತ್ತು ದೈಹಿಕ ಶಿಕ್ಷಣ ವಿಭಾಗ ಬಿ.ಎಸ್.ಹೆಚ್ ವತಿಯಿಂದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಗೆ 15 ದಿನಗಳ ಕಾಲ ಉಚಿತ ಟೇಬಲ್ ಟೆನ್ನಿಸ್ ಮತ್ತು ಚೆಸ್ ತರಬೇತಿ ಶಿಬಿರ ನಡೆಯಿತು. ಶಿಬಿರದಲ್ಲಿ ಜಿಲ್ಲೆಯ ಸುಮಾರು 48 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಜಿ.ಎಂ.ದೇವಗಿರಿ, ಶಿಸ್ತುಬದ್ಧ ಜೀವನಕ್ಕೆ ಕ್ರೀಡೆ ಸಹಕಾರಿ ಎಂದರು. ಶಿಬಿರವನ್ನು ಸಹಾಯಕ ಪ್ರಾಧ್ಯಾಪಕ ಡಾ. ಕೆ.ಎ.ಈಶ್ವರ್ ಆಯೋಜಿಸಿದರು.

Read More

ಮಡಿಕೇರಿ ಜೂ.3 NEWS DESK : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಗ್ರಾಮಾತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಅಭ್ಯತ್ ಮಂಗಲ ನಿವಾಸಿ ಪ್ರಶಾಂತ್.ಹೆಚ್.ಕೆ (32) ಹಾಗೂ ಎಂ.ಬಾಡಗ ನಿವಾಸಿ ಬೋಪಯ್ಯ ಎ.ಎಸ್ (31) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. 419.93 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ 2 ಮೊಬೈಲ್ ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಮೂರ್ನಾಡು ನಗರದ ಕುಂಬಳದಾಳು ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮತ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು. ಮಡಿಕೇರಿ ಉಪವಿಭಾಗದ ಡಿವೈಎಸ್‍ಪಿ ಮಹೇಶ್ ಕುಮಾರ್, ಮಡಿಕೇರಿ ಗ್ರಾಮಾಂತರ ಪಿಐ ಉಮೇಶ್.ಯು, ಪಿಎಸ್‍ಐಗಳಾದ ಶ್ರೀನಿವಾಸಲು, ರಮೇಶ್ ಕರಕಿಕಟ್ಟಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ::: ವಿಶೇಷ ಸೂಚನೆ ::: ಯುವಕ-ಯುವತಿಯರು ಮಾದಕ…

Read More

ಮಡಿಕೇರಿ ಜೂ.3 NEWS DESK : ಸೋಮವಾರಪೇಟೆ ಲಯನ್ಸ್ ಕ್ಲಬ್ ನ ಸದಸ್ಯರಾದ ಶಾರದಾ ಶಂಕರ್ ಹಾಗೂ ಎ.ಪಿ.ಶಂಕರಪ್ಪ ಅವರು ವಿಕಾಸ್ ಜನ ಸೇವಾ ಟ್ರಸ್ಟ್‌ ವೃದ್ಧಾಶ್ರಮಕ್ಕೆ ತಟ್ಟೆ ಮತ್ತು ಲೋಟವನ್ನು ನೀಡಿದರು. ಲಯನ್ಸ್ ಸೇವಾ ಸಂಸ್ಥೆಯ ಅಧ್ಯಕ್ಷ ಎ.ಎಸ್.ಮಹೇಶ್, ಕೆ.ಎಂ.ಜಗದೀಶ್,  ವಲಯಾಧ್ಯಕ್ಷರಾದ ಸಿ.ಕೆ.ರೋಹಿತ್ , ಎಸ್.ಎನ್.ಯೋಗೇಶ್ ಹಾಗೂ ಸುಬ್ಬಯ್ಯ ಹಾಜರಿದ್ದು, ವಿವಿಧ ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭ ವಿಕಾಸ ಜನ ಸೇವಾ ಟ್ರಸ್ಟ್ ನ ಮುಖ್ಯಸ್ಥ ಮಂಜುನಾಥ್  ಹಾಜರಿದ್ದು, ಎಲ್ಲರನ್ನೂ ಅಭಿನಂದಿಸಿದರು.

Read More

ನಾಪೋಕ್ಲು ಜೂ.2 NEWS DESK : ಕುಂಜಿಲದ ಪಯ್ಯಡಿ ಕುಟುಂಬಸ್ಥರು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಗ್ರಾಂಡ್ ರಾತೀಬ್ ಹಾಗೂ ದುವಾ ಮಜ್ಲಿಸ್ ಪಯ್ಯಡಿ ಹಂಸ ಅವರ ಮನೆಯಲ್ಲಿ ಸಂಭ್ರಮದಿಂದ ನಡೆಯಿತು. ಕುಂಜಿಲ ಖುತುಬುಲ್ ಆರಿಫೀನ್ ರಾತೀಬ್ ಸಂಘದ ನೇತೃತ್ವದಲ್ಲಿ ರಾತೀಬ್ ಮಜ್ಲಿಸ್‍ ಕಾರ್ಯಕ್ರಮ ನಡೆದಿದ್ದು, ದುವಾ ನೇತೃತ್ವವನ್ನು ಕತೀಬರಾದ ನಿಝಾರ್ ಅಹ್ಸನಿ ಕಕ್ಕಡಿಪುರಮ್ ಉಸ್ತಾದ್  ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಹುಸೇನ್ ಉಸ್ತಾದ್ ಸರ್ವರಿಗೂ ಶುಬಕೋರಿ, ಎಲ್ಲರೂ ಸಮರಸ್ಯದಿಂದ ಬಾಳುವಂತೆ ಕರೆ ನೀಡಿದರು. ಪ್ರಮುಖರಾದ ಮುಸಾ ಮಾತನಾಡಿ ಮುಂದಿನ ವರ್ಷ ರಾತೀಬ್ ಅನ್ನು ಮತ್ತಷ್ಟು ಸಂಭ್ರಮದಿಂದ ನಡೆಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸುಲೇಮಾನ್ ದಾರಿಮಿ,ಅಧ್ಯಕ್ಷರಾದ ಹಂಸ, ಹಸನ್, ಸಿರಾಜ್ ಸೇರಿದಂತೆ ಕುಟುಂಬಸ್ಥರು ಹಾಗೂ ಸಮುದಾಯ ಬಾಂಧವರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ಸಾಜಿದ್ ಪಯ್ಯಡಿ 

Read More

ಪುತ್ತೂರು ಜೂ.3 NEWS DESK : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2023-24ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಶೇ.99 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಇದೇ ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 266 ವಿದ್ಯಾರ್ಥಿಗಳು ಹಾಜರಾಗಿದ್ದು, 252 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್-ಶೇ.100, ಕಂಪ್ಯೂಟರ್ ಸೈನ್ಸ್-ಶೇ.99, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್- ಶೇ.98, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-ಶೇ.100 ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ- ಶೇ.96 ಫಲಿತಾಂಶವನ್ನು ದಾಖಲಿಸಿವೆ. ಈ ಪೈಕಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ಪ್ರಥಮ ಬ್ಯಾಚಿನ ವಿದ್ಯಾರ್ಥಿಗಳು ಶೇ.100 ಫಲಿತಾಂಶವನ್ನು ಗಳಿಸಿಕೊಂಡು ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ…

Read More

ಮಡಿಕೇರಿ ಜೂ.3 NEWS DESK : ನೈರುತ್ಯ ಪದವೀಧರ ಕ್ಷೇತ್ರ ಸಂಬಂಧ ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ ಹಾಗೂ ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಅವರು ನಗರಸಭೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು. 

Read More

ಮೂರ್ನಾಡು ಜೂ.3 NEWS DESK  : ಮೂರ್ನಾಡು ಗಾಂಧಿನಗರದ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ 11ನೇ ವರ್ಷದ ವಾರ್ಷಿಕ ಉತ್ಸವವು ಜೂ. 5 ಮತ್ತು 7 ರಂದು ನಡೆಯಲಿದೆ. ಶ್ರೀ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ವಾರ್ಷಿಕಉತ್ಸವದ ಪ್ರಯುಕ್ತ ಜೂ.5 ರಂದು ಸಂಜೆ 4 ಗಂಟೆಗೆ ಮಹಾಪೂಜೆ, 7 ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ನಂತರ ತೀರ್ಥಪ್ರಸಾದ ವಿತರಣೆ ನಡೆಯಲಿದೆ. ಜೂ.7 ರಂದು ಬೆಳಗ್ಗೆ 7 ಗಂಟೆಗೆ ಮಹಾಪೂಜೆ ನಡೆಯಲಿದ್ದು, ನಂತರ ಭಕ್ತಾದಿಗಳಿಂದ ದೇವರಿಗೆ ಹರಕೆ ವಸ್ತುಗಳನ್ನು ಒಪ್ಪಿಸಲಾಗುವುದು. 3 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಚಿತ್ರ ಮತ್ತು ವರದಿ : ಟಿ.ಸಿ. ನಾಗರಾಜ್, ಮೂರ್ನಾಡು  

Read More

ಮಡಿಕೇರಿ ಜೂ.3 NEWS DESK : ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರ ಚುನಾವಣೆ-2024 ರ ಅಂಗವಾಗಿ  ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 31 ರಲ್ಲಿ  ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್  ಮತ ಚಲಾಯಿಸಿದರು.

Read More

ಮಡಿಕೇರಿ ಜೂ.3 NEWS DESK  : ವಿಧಾನ ಪರಿಷತ್ತು ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.  

Read More

ಮಡಿಕೇರಿ ಜೂ.2 NEWS DESK : ಕಳೆದ ವರ್ಷದಂತೆ ಪ್ರಸಕ್ತ ಸಾಲಿನಲ್ಲೂ ಮಳೆಗಾಲದಲ್ಲಿ ಮಳೆಯ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣೆಯ ನಿವೃತ್ತ ಉಪ ಮಹಾ ನಿರ್ದೇಶಕ ಡಾ.ಹೆಚ್.ಎಸ್.ಎಂ.ಪ್ರಕಾಶ್ ತಿಳಿಸಿದ್ದಾರೆ. ಇಂದಿನವರೆಗಿನ ಜಿಯೋ ಮೀಟಿಯೋರಾಲಜಿ ಅಧ್ಯಯನದ ಆಧಾರದಂತೆ 2024ನೇ ಸಾಲಿನ ಜೂನ್ ನಿಂದ ಸೆಪ್ಟೆಂಬರ್ ಅವಧಿಯ ಮುಂಗಾರು ಕಳೆದ 2023ನೇ ಸಾಲಿನ ಪರಿಸ್ಥಿತಿಯಂತೆ ಇರಲಿದೆ ಎನ್ನುವುದು ತಿಳಿದು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಳೆದ ಸಾಲಿನ ಮುಂಗಾರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ತೀರಾ ದುರ್ಬಲವಾಗಿದ್ದ ಹಿನ್ನೆಲೆಯಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿ ಜಿಲ್ಲೆಯ ತಾಲ್ಲೂಕುಗಳನ್ನು ಬರದ ಪಟ್ಟಿಗೆ ಸೇರಿಸಲಾಗಿತ್ತು. ಈ ಬಾರಿಯ ಮುಂಗಾರು ಕೂಡ ಕೊರತೆಯ ಮುಂಗಾರು ಆಗುವ ಸಾಧ್ಯತೆಯಿದೆ. ಹಿಂಗಾರಿನ ಬಗ್ಗೆ ಅಕ್ಟೋಬರ್ 2024ರ ಮೊದಲ ವಾರದಲ್ಲಿ ನಿಷ್ಕರ್ಷೆ ಮಾಡಬಹುದಾಗಿದೆ ಎಂದು ಡಾ.ಹೆಚ್.ಎಸ್.ಎಂ.ಪ್ರಕಾಶ್ ಹೇಳಿದ್ದಾರೆ. ::: ಕೊರತೆಗೆ ಕಾರಣ ::: ಆವಿಯ ಮೂಲಗಳಾದ ಭಾರತ ದೇಶದ ಸುತ್ತಮುತ್ತಲಿನ ಸುಮತ್ರ, ಇಂಡೋನೇಷ್ಯಾ, ಫಿಲಿಪ್ಪೀನ್ಸ್, ಪಪುವಾ ನ್ಯೂ…

Read More