ಮಡಿಕೇರಿ ಜೂ.2 NEWS DESK : ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಇಂಜಲಗೆರೆ ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯಲ್ಲಿ ಸಿಬ್ಬಂದಿ ಮುರುಗ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ವಿರಾಜಪೇಟೆ ಆಸಪತ್ರೆಯಲ್ಲಿ ದಾಖಲಿಸಲಾಗಿದೆ. ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಕಾಫಿತೋಟದಲ್ಲಿ ಬೀಡುಬಿಟ್ಟ 12 ಕಾಡಾನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆಯೇ ವನ್ಯಜೀವಿಗಳು ದಾಳಿ ಮಾಡಿವೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಅಧಿಕಾರಿಗಳು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಗ ಅವರ ಆರೋಗ್ಯ ವಿಚಾರಿಸಿದರು.
ಲೇಖಕ: admin
ಮಡಿಕೇರಿ ಜೂ.2 NEWS DESK : ಕೊಳ್ಳೇಗಾಲ ಕಾಮಗೆರೆಯ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ನ ಧರ್ಮಗುರುಗಳು ಮತ್ತು ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾಗಿ ರೆ.ಫಾ.ಐಸಾಕ್ ರತ್ನಾಕರ್ ರವರು ಅಧಿಕಾರವನ್ನು ಸ್ವೀಕರಿಸಿದರು. ಮೈಸೂರು ಧರ್ಮಕ್ಷೇತ್ರದ ಶ್ರೇಷ್ಠ ಗುರುಗಳಾದ ಫಾ.ಆಲ್ಫ್ರೆಡ್ ಜಾನ್ ಮೆಂಡೋಂಜಾ ಚರ್ಚ್ ನಲ್ಲಿ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಧಿಕಾರವನ್ನು ಹಸ್ತಾಂತರ ಮಾಡಿಸಿದರು ಮತ್ತು ವಿಶೇಷ ಪೂಜಾ ಕಾರ್ಯಕ್ರಮವು ಈ ಸಂದರ್ಭದಲ್ಲಿ ಜರುಗಿತು. ರೆ.ಫಾ.ಐಸಾಕ್ ರತ್ನಾಕರ್ ರವರು ಈ ಹಿಂದೆ ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಜನಾನುರಾಗಿದ್ದರು. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಹನೂರು ಕ್ಷೇತ್ರದ ಶಾಶಕರಾದ ಎಂ. ಆರ್. ಮಂಜುನಾಥ್ ರವರು ಚರ್ಚ್ ಗೆ ಆಗಮಿಸಿ ನೂತನ ಧರ್ಮಗುರುಗಳಿಗೆ ಶುಭ ಕೋರಿದರು. ಭಕ್ತರು, ಸಾರ್ವಜನಿಕರು, ಚರ್ಚ್ ಪಾಲನಾ ಸಮಿತಿಯವರು ಉಪಸ್ಥಿತರಿದ್ದರು.
ಸೋಮವಾರಪೇಟೆ ಜೂ.2 NEWS DESK : ಸೋಮವಾರಪೇಟೆ ಸಮೀಪದ ನಗರೂರು ಗ್ರಾಮದಲ್ಲಿ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಮೃತನ ಕುಟುಂಬಸ್ಥರು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಗರೂರು ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ನ ಕಂಬದಲ್ಲಿ ಹಾನಗಲ್ಲು ಶೆಟ್ಟಳ್ಳಿ ಗ್ರಾಮದ ಕೆ.ಪಿ.ಲೋಕೇಶ ಹಾಗೂ ಬಿ.ಯು.ಹರ್ಷಿಣಿ ಅವರ ಪುತ್ರ, ಉಲ್ಲಾಸ್ (21) ಎಂಬ ಯುವಕನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೃತ ಉಲ್ಲಾಸ್ ನ ತಂದೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿಯ ಶವಾಗಾರಕ್ಕೆ ಸಾಗಿಸಲಾಗಿದೆ. ಮೃತನ ತಂದೆ ನೀಡಿದ ದೂರಿನ ಅನ್ವಯ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸೋಮವಾರಪೇಟೆ ಜೂ.2 NEWS DESK : ಸಿದ್ಧಲಿಂಗಪುರದ ಅರಸಿನಕುಪ್ಪೆ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ತಾ. 5 ಮತ್ತು 6 ರಂದು ನವ ಚಂಡಿಕಾ ಯಾಗ ನೆರವೇರಿಸಲಾಗುವುದು ಎಂದು ದೇವಾಲಯದ ಚಂಡಿಕಾಯಾಗ ನಿರ್ವಹಣಾ ಸಮಿತಿ ಅಧ್ಯಕ್ಷ ಹೊಸೊಕ್ಲು ಸತೀಶ್ ತಿಳಿಸಿದ್ದಾರೆ. ಅರಸಿನಕುಪ್ಪೆಯಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ಈಗಾಗಲೇ ನವನಾಗನಾಥ ದೇವಾಲಯ ನಿರ್ಮಾಣಗೊಂಡಿದ್ದು, ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಎನ್.ಎಂ. ಮುತ್ತಪ್ಪ ಹಾಗೂ ಗೌರವಾಧ್ಯಕ್ಷರಾಗಿ ಎನ್.ಎಂ. ಮುದ್ದಪ್ಪ ಅವರುಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀರಾಜೇಶ್ನಾಥ್ ಜೀ ಅವರ ಮಾರ್ಗದರ್ಶನದಲ್ಲಿ, ಪ್ರಧಾನ ಅರ್ಚಕ ಜಗದೀಶ್ ಉಡುಪ ಅವರ ಪೌರೋಹಿತ್ಯದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಪಂಚಮಿ ಪೂಜೆ, ವಾರ್ಷಿಕ ಮಹಾಶಿವರಾತ್ರಿ ಉತ್ಸವ, ಯುಗಾದಿ, ಧನುರ್ಮಾಸದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ ಎಂದರು. ಇದೇ ಪ್ರಥಮ ಬಾರಿಗೆ ಕ್ಷೇತ್ರದಲ್ಲಿ ಲೋಕ ಕಲ್ಯಾಣಾರ್ಥ ನವ ಚಂಡಿಕಾಯಾಗ ಆಯೋಜಿಸಿದ್ದು, ಎರಡು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ. ತಾ. 5 ರಿಂದ…
ಸುಂಟಿಕೊಪ್ಪ ಜೂ.2 NEWS DESK : ಭಾರತೀಯ ಜನತಾ ಪಕ್ಷದ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯ ಹಿನ್ನಲೆಯಲ್ಲಿ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸುಂಟಿಕೊಪ್ಪ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಧನುಕಾವೇರಪ್ಪ ಹಾಗೂ ಕಾರ್ಯಕರ್ತರು ಮತಯಾಚನೆ ಮಾಡಿದರು. ಸುಂಟಿಕೊಪ್ಪ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆ, ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಭೋಜೇಗೌಡರಿಗೆ ಮತದಾನ ಮಾಡಿ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಚುನಾವಣೆ ಸಂಚಾಲಕರಾದ ಪಿ.ಆರ್.ಸುನಿಲ್ಕುಮಾರ್, ಚಂದ್ರಶೇಖರ್ ಹೆರೂರು, ಅಧ್ಯಕ್ಷ ಗೌತಮ್, ಪ್ರಶಾಂತ್, ಪ್ರಧಾನ ಕಾರ್ಯದರ್ಶಿ ವಿ.ಕೆ.ರಾಜು, ಪದ್ಮನಾಭ ನೆಲ್ಯುಹುದಿಕೇರಿ, ಮಂಡಲ ಅಧ್ಯಕ್ಷ ಗೌತಮ್, ಸಹನಾ ಮತ್ತಿತರರು ಇದ್ದರು.
ಸುಂಟಿಕೊಪ್ಪ ಜೂ.2 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ನೂತನ ಧರ್ಮಗುರುಗಳಾಗಿ ರೇ.ವಂ.ಫಾ.ವಿಜಯಕುಮಾರ್ ಭಾನುವಾರ ಅಧಿಕಾರ ವಹಿಸಿಕೊಂಡರು. ಸಂತ ಅಂತೋಣಿ ದೇವಾಲಯದಲ್ಲಿ ಮಡಿಕೇರಿ ವಲಯ ಗುರುಗಳು, ಸಂತ ಮೈಕಲರ ದೇವಾಲಯದ ಧರ್ಮಗುರುಗಳಾದ ರೇ.ವಂ.ಫಾಧರ್ ಜಾರ್ಜ್ ದೀಪಕ್ ಹಾಗೂ ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ಧರ್ಮಗುರುಗಳಾದ ಅವಿನಾಶ್ ಅವರುಗಳು ದಿವ್ಯ ಬಲಿಪೂಜೆಯನ್ನು ಸರ್ಮಪಿಸಿದರು. ಸಂತ ಅಂತೋಣಿ ದೇವಾಲಯದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ಫಾ.ಅರುಳ್ ಸೇಲ್ವಕುಮಾರ್ ಅವರು ವರ್ಗಾವಣೆಗೊಂಡಿದ್ದು ತೆರವಾದ ಸ್ಥಾನಕ್ಕೆ ಮೈಸೂರು ಸಂತ ಜೋಸೆಫರ ದೇವಾಲಯದಲ್ಲಿ ಧರ್ಮಗುರುಗಳಾಗಿದ್ದ ರೇ.ವಂ.ಫಾ.ವಿಜಯಕುಮಾರ್ ಅವರನ್ನು ನೇಮಿಸಲಾಗಿದೆ. ಮಡಿಕೇರಿ ವಲಯ ಗುರುಗಳಾದ ರೇ.ವಂ.ಫಾಧರ್ ಜಾರ್ಜ್ ದೀಪಕ್ ಅವರು ನೂತನ ಧರ್ಮಗುರುಗಳಿಗೆ ಅಧಿಕಾರ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು ರೇ.ವಂ.ಫಾ.ವಿಜಯಕುಮಾರ್ ಅವರ ಸೇವೆಯಿಂದ ಈ ದೇವಾಲಯವು ಮತ್ತಷ್ಟು ಏಳಿಗೆಯನ್ನು ಕಾಣಲಿ ಎಂದು ಹಾರೈಸಿದರು. ನೂತನ ಧರ್ಮಗುರು ರೇ.ವಂ.ಫಾ.ವಿಜಯಕುಮಾರ್ ಮಾತನಾಡಿ ಎಲ್ಲರ ಪ್ರೀತಿ, ವಿಶ್ವಾಸ, ಸಲಹೆ ಸಹಕಾರ ಪಡೆದು ಉತ್ತಮ ಸೇವೆಯನ್ನು ಸಲ್ಲಿಸುವ ಆಶಯವನ್ನು ವ್ಯಕ್ತಪಡಿಸಿದರು.
ಮಡಿಕೇರಿ ಜೂ.2 NEWS DESK : ರಸಾಯನಿಕ ಯುಕ್ತ ಜಂಕ್ ಆಹಾರಗಳನ್ನು ದೂರವಿಟ್ಟು ನಿಸಗ೯ದಲ್ಲಿ ಸ್ವಾಭಾವಿಕವಾಗಿ ಸಿಗುವ ತರಕಾರಿ ಕಾಯಿಪಲ್ಯೆಗಳನ್ನು ಬಳಸಿ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳುವಂತೆ , ಕೊಡಗಿನ ಪ್ರಥಮ ಪಾಕಶಾಸ್ತ್ರ ಕೈಪಿಡಿಯ ಲೇಖಕಿ ಚೆಟ್ಟಳ್ಳಿಯ ಆಶಾ ತಿಮ್ಮಪ್ಪಯ್ಯ ಸಲಹೆ ನೀಡಿದ್ದಾರೆ. ಅರಮೇರಿ ಕಳಂಚೇರಿ ಮಠದ ಲಿಂಗರಾಜೇಂದ್ರ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ ಹೊಂಬೆಳಕು ‘ ಮಾಸಿಕ ತತ್ವ ಚಿಂತನಾ ಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ” ಉತ್ತಮ ಆಹಾರದ ಮೂಲಮಂತ್ರಗಳು ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಅವರು ವ್ಯಾಪಾರೀಕರಣ ಇಂದು ವ್ಯಾಪಕವಾಗಿ ಹರಡುತ್ತಿದೆ, ಈ ದಿನಗಳಲ್ಲಿ ದಾರಿ ತಪ್ಪಿಸುವ ಜಾಹೀರಾತುಗಳಿಗೆ ಮಾರುಹೋಗಿ ದೇಹಕ್ಕೆ ಅಗತ್ಯವಿಲ್ಲದ ತಿನಿಸುಗಳನ್ನು ತಿನ್ನುವುದು ತಪ್ಪಬೇಕು ಎಂದು ಅವರು ಅಭಿಪ್ರಾಯಪಟ್ಟರು. ಪ್ರಕೃತಿಯು ಕಾಲಕಾಲಕ್ಕೆ ನಮಗೆ ಪೂರೈಸುವ ಎಲ್ಲಾ ರೀತಿಯ ಹಣ್ಣುಗಳನ್ನು ನಾವು ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದಬಹುದಾಗಿದೆ. ಹಾಗೆಯೇ ಕಣಿಲೆ, ಬಾಳೆ ದಿಂಡು, ಹಲಸು ಮೊದಲಾದ ತಿನಿಸುಗಳನ್ನು ಮಕ್ಕಳಿಗೆ ನೀಡುವ…
ಸುಂಟಿಕೊಪ್ಪ ಜೂ.2 NEWS DESK : ಹಿಂಬದಿಯಿಂದ ಸ್ಕೂಟಿಗೆ ಇನ್ನೋವಾ ವಾಹನ ಡಿಕ್ಕಿಯಾಗಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಸುಂಟಿಕೊಪ್ಪದ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ. ಇನ್ನೋವಾ ವಾಹನ ಡಿಕ್ಕಿಯಾಗಿ ಸ್ಕೂಟಿ ಸವಾರ ಇಬ್ರಾಹಿಂ (60) ಅವರು ರಸ್ತೆಗೆ ಬಿದ್ದ ಪರಿಣಾಮ ತಲೆಗೆ ತೀವ್ರ ರೀತಿಯಲ್ಲಿ ಗಾಯವಾಗಿದೆ. ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೇರಳದ ಕಣ್ಣೂರಿನಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಇನ್ನೋವಾ ಇಬ್ರಾಹಿಂ ಅವರ ಸ್ಕೂಟಿಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೋಲಿಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜೂ.2 NEWS DESK : ವಿರಾಜಪೇಟೆಯ ಆಶೀರ್ವಾದ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ವತಿಯಿಂದ ಜೂ.10 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಹಕಾರದೊಂದಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಈವೆಂಟ್ ಐಟಿ, ಇಂಜಿನಿಯರಿಂಗ್, ಮಾರ್ಕೆಟಿಂಗ್, ಹಣಕಾಸು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. 10 ನೇ ತರಗತಿ ಹಾಗೂ ಯಾವುದೇ ವಿದ್ಯಾರ್ಹತೆ ಹೊಂದಿರುವ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ವಿರಾಜಪೇಟೆಯ ಆಶೀರ್ವಾದ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗಲು ಸಂಸ್ಥೆಯ ಸಲಹೆಗಾರರಾದ ಮೇಘ ಮನವಿ ಮಾಡಿದ್ದಾರೆ. ನೋಂದಣಿ ಶುಲ್ಕ ಇರುವುದಿಲ್ಲ, ಹೆಚ್ಚಿನ ಮಾಹಿತಿಗೆ ಮೊ.ಸಂ.70259 94000 ನ್ನು ಸಂಪರ್ಕಿಸಬಹುದಾಗಿದೆ. ಆಶೀರ್ವಾದ್ ಇನ್ಸ್ಟಿಟ್ಯೂಟ್ ಆಫ್…
ಮಡಿಕೇರಿ ಜೂ.2 NEWS DESK : ಸಂವಿಧಾನದ ಆಶಯ ಈಡೇರಬೇಕಾದರೆ ಪತ್ರಕರ್ತರು ಅನಿವಾರ್ಯವಾಗಿದ್ದಾರೆ. ಸಮಾಜದಲ್ಲಿ ನಡೆಯುವ ವಿದ್ಯಮಾನಗಳನ್ನು ಸಂಬಂಧಪಟ್ಟವರಿಗೆ ತಿಳಿಸುವ ಮೂಲಕ ಸಮಸ್ಯೆಗಳಿದ್ದರೆ ಪರಿಹರಿಸುವುದು, ತಪ್ಪುಗಳಿದ್ದರೆ ತಿದ್ದಿಕೊಳ್ಳುವಂತೆ ಮಾಡಿ ಸದೃಢ ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾಗಿದೆ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ “ಪಿಂಜರಿ” ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪತ್ರಕರ್ತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪತ್ರಕರ್ತರ ನಡುವೆ ತನಗೆ ಒಡನಾಟ ಇರುವ ಕಾರಣ ನೋವು- ನಲಿವಿನ ಪೂರ್ಣ ಅರಿವಿದೆ. ಪತ್ರಕರ್ತರು ಸಂಘಟಿತರಾಗಿ ಸರಕಾರದ ಮಟ್ಟದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು. ಸಮಸ್ಯೆ ಪರಿಹಾರಕ್ಕೆ ಎಂದಿಗೂ ಜೊತೆಗಿರುವೆ ಎಂದು ಅಭಯ ನೀಡಿದರು. ರಜತ ಮಹೋತ್ಸವವನ್ನು ಹಬ್ಬದ ರೀತಿಯಲ್ಲಿ ಪತ್ರಕರ್ತರು ಸಂಭ್ರಮಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಿರುವುದು ಗಮನಾರ್ಹವಾಗಿದೆ. ಪ್ರೆಸ್ ಕ್ಲಬ್ 25 ವರ್ಷಗಳ ಕಾಲ ನಡೆದು ಬಂದ ಹಾದಿಯನ್ನು ಯಾರೂ ಮರೆಯಬಾರದು. ಸ್ಮರಣ ಸಂಚಿಕೆಗಳಿಂದ…






