ಮಂಗಳೂರು ಮೇ 19 NEWS DESK : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡುವ ಮೂಲಕ ಶ್ರಮಿಸಬೇಕು, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದರು. ಇಲ್ಲಿನ ಅಸೈಗೋಳಿಯ ಬಂಟರ ಭವನದಲ್ಲಿ ಭಾನುವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿಯೊಂದು ಚುನಾವಣೆಗೂ ಅದರದ್ದೇ ಆದ ಮಹತ್ವವಿದೆ,ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಡಾ.ಧನಂಜಯ ಸರ್ಜಿ ಅವರು, ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ್ರು ಸ್ಪರ್ಧಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡಬೇಕು. ಹಾಗಾಗಿ ಶಕ್ತಿ ಕೇಂದ್ರ ಮಹಾ ಶಕ್ತಿ ಕೇಂದ್ರದ ಪ್ರಮುಖರು ಚುರುಕಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್, ಈ ಬಾರಿ ಹೆಚ್ಚು ನೋಂದಣಿ ಆಗಿದ್ದಾರೆ, ಒಬ್ಬ ಗಟನಾಯಕರು 20 ಮತದಾರರನ್ನು ತಲುಪಬೇಕು, ಮತದಾರರ…
ಲೇಖಕ: admin
ಮಂಗಳೂರು ಮೇ 19 NEWS DESK : ಶಿಕ್ಷಕರು ಸಮಾಜವನ್ನು ತಿದ್ದವವರು ಹಾಗೂ ಪದವೀದರರು ಪ್ರಜ್ಞಾವಂತರು. ಜನಸಾಮಾನ್ಯರು ಮಾಡುವ ತಪ್ಪುಗಳನ್ನು ಶಿಕ್ಷಕರು, ಪದವೀಧರರು ಮಾಡುವುದಿಲ್ಲ, ಮೈತ್ರಿಯ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸುತ್ತಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಮಂಗಳೂರು ನಗರ ಉತ್ತರ ಬಿಜೆಪಿ ಕಾರ್ಯಾಲಯದಲ್ಲಿ ನೈರುತ್ಯ ಪದವೀಧರ ಮ್ತತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪರಿಷತ್ ಚುನಾವಣೆಯನ್ನು ನಾವೆಲ್ಲರೂ ಇದು ನಮ್ಮ ಚುನಾವಣೆ ಎಂದು ಸ್ವೀರಿಸಬೇಕು, ಗ್ರಾಮ, ವಾರ್ಡ್, ಬೂತ್ ಮಟ್ಟದಲ್ಲಿ ಚುರುಕಾಗಿ ಕಲಸ ಮಾಡಬೇಕು, ಪ್ರತಿ ಶಿಕ್ಷಕರು ಹಾಗೂ ಪದವೀಧರರನ್ನು ತಲುಪಿ ಅಭ್ಯರ್ಥಿಗಳ ಬಗ್ಗೆ ಮನವರಿಕೆ ಮಾಡಿ ಮತ ನೀಡುವಂತೆ ಮನವೊಲಿಸಬೇಕು ಎಂದು ಹೇಳಿದರು. ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡುವ ಶಕ್ತಿ ಮಂಗಳೂರು ಜಿಲ್ಲೆಗಿದೆ, ಇವತ್ತಿನಿಂದ ಚುನಾವಣೆ ತನಕ ಮತದಾರರ ಸಂಪರ್ಕ ಮತ್ತು ಸಂಬಂಧವನ್ನು ಬೆಳೆಸಿ…
ಮಡಿಕೇರಿ ಮೇ 19 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಬೆನ್ನಲ್ಲೇ ಜಿಲ್ಲೆಯಾದ್ಯಂತ ಮೇ 23ರವರೆಗೆ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆ ಸುರಿಯಲಿದ್ದು, ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ ಇರಲಿದೆ. ಸಾರ್ವಜನಿಕರು ಜಾಗೃತರಾಗಿರುವಂತೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಮಡಿಕೇರಿ ಮೇ 19 NEWS DESK : ಬೌದ್ಧಿಕ ಸಾಮರ್ಥ್ಯವನ್ನು ಅನಾವರಣಗೊಳಿಸಲು ಸ್ಪರ್ಧಾ ಕಾರ್ಯಕ್ರಮಗಳು ತುಂಬಾ ಅಗತ್ಯವಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ.ಮೇಜರ್ ಬಿ.ರಾಘವ ತಿಳಿಸಿದ್ದಾರೆ. ಸ್ನಾತಕ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನಡೆದ Brain Hack 0.2 ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೈಯುಕ್ತಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಸ್ಪರ್ಧೆಗಳು ತುಂಬಾ ಅಗತ್ಯ. ಇದು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ ಮತ್ತು ಸ್ಪರ್ಧಾಯುಗಕ್ಕೆ ಹೊಂದಿಕೊಳ್ಳುವ ಅವಕಾಶವನ್ನು ಕಲ್ಪಿಸಿಕೊಡುತ್ತವೆ ಎಂದರು. ಸ್ನಾತಕ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗವು ಉತ್ತಮವಾದ ಸ್ಪರ್ಧಾ ಕಾರ್ಯಕ್ರಮವನ್ನು ರೂಪಿಸಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಈ ರೀತಿಯ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಸಂಯೋಜಕರಾದ ಡಾ.ಪವಿತ್ರ ಹಾಗೂ ಐಕ್ಯೂಎಸಿ ಸಂಯೋಜಕ ಡಾ.ರಾಜೇಂದ್ರ ಆರ್. ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ಕೌಶಲ್ ಸೋಮಯ್ಯ ಸ್ವಾಗತಿಸಿ, ಅಲೆನ್ ಜೀಸ್ಮಾ ಕಾರ್ಯಕ್ರಮ ನಿರೂಪಿಸಿದರು. ವಿಭಾಗದ ಅಧ್ಯಾಪಕರಾದ ಅಮೃತ ಹಾಗೂ…
ಮಂಗಳೂರು ಮೇ 19 NEWS DESK : ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಬಂಧನ ಖಂಡನೀಯವೆಂದು ವಿಧಾನ ಪರಿಷತ್ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸಿ ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್ಸಿನ ಹಳೆ ಚಾಳಿ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸ್ ಆಧಾರದ ಮೇಲೆ ಶಶಿರಾಜ್ ರನ್ನು ಬಂಧಿಸಿದೆ. ಆಡಳಿತ ಯಂತ್ರವನ್ನು ಉಪಯೋಗಿಸಿ, ಕೀಳುಮಟ್ಟದ ತಂತ್ರಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಲು ಸಾಧ್ಯವಿಲ್ಲ. ಕಾರ್ಯಕರ್ತರ ಜೊತೆ ಸಂಘಟನೆ ನಿಲ್ಲಲಿದೆ, ಏನೇ ಬರಲಿ ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸರ್ಜಿ ತಿಳಿಸಿದ್ದಾರೆ.
ಮಂಗಳೂರು ಮೇ 19 NEWS DESK : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ರನ್ನು ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ .ಭೋಜೇಗೌಡ ಅವರು ಭೇಟಿಯಾಗಿ ವಿಧಾನ ಪರಿಷತ್ ಚುನಾವಣೆ ಕುರಿತು ಸಮಾಲೋಚಿಸಿದರು. ಈ ಸಂದರ್ಭ ಬಿಜೆಪಿ ರಾಜ್ಯ ಪ್ರಕೋಸ್ಟಗಳ ಸಂಯೋಜಕ ಎಸ್ ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಎಚ್ ಮಾಲ್ತೇಶ್ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಮೇ 19 NEWS DESK : ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಕಳೆದ 1 ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ನದಿಯಲ್ಲಿ ನೀರಿನ ಮಟ್ಟ ಏರಿಕೆ ಕಾಣುತ್ತಿದೆ. ನೆಲ್ಯಹುದಿಕೇರಿ, ತೆಪ್ಪದಕಂಡಿ, ಕೊಪ್ಪ ಸೇತುವೆಯ ಕೆಳಭಾಗ ಹಾಗೂ ಕೂಡಿಗೆ ಬಳಿ ಹರಿಯುವ ಕಾವೇರಿ ನದಿಯ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದ್ದು, ನದಿ ಬರಡಾಗಿ ದಡ ಸೇರಿದ್ದ ರ್ಯಾಫ್ಟ್ ಗಳು ದುಬಾರೆಯಲ್ಲಿ ಮತ್ತೆ ನೀರಿಗಿಳಿದಿವೆ. ಮಳೆಯಾಗಿ ತಂಪಿನ ಹವಾಮಾನ ಕಂಡು ಬಂದಿರುವ ಕಾರಣ ದುಬಾರೆಗೆ ಅತೀ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದುಬಾರೆಯಲ್ಲಿ ಮತ್ತೆ ರಿವರ್ ರ್ಯಾಫ್ಟಿಂಗ್ ಕ್ರೀಡೆಗೆ ಚಾಲನೆ ನೀಡಲಾಗಿದೆ. ಬಿರುಬಿಸಿಲಿನಿಂದ ಕಾವೇರಿ ನದಿ ಬತ್ತಿಹೋದ ಪರಿಣಾಮ ಕಳೆದ ಒಂದೂವರೆ ತಿಂಗಳಿನಿಂದ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿತ್ತು. ಪ್ರವಾಸೋದ್ಯಮ ನಂಬಿ ಬದುಕು ಕಟ್ಟಿಕೊಂಡಿದ್ದ ರಿವರ್ ರ್ಯಾಫ್ಟ್ ಉದ್ಯಮಿಗಳಿಗೆ ಪ್ರಸ್ತುತ ಮಳೆಯ ವಾತಾವರಣ ಸಮಾಧಾನ ತರಿಸಿದೆ. ದುಬಾರೆ ರಿವರ್ ರ್ಯಾಫ್ಟಿಂಗ್ ಅನ್ನು ನಂಬಿಕೊಂಡು ಸುಮಾರು 41 ಮಂದಿ ರಿವರ್ ರ್ಯಾಫ್ಟಿಂಗ್ ಮಾಲೀಕರು, 80…
ಮಡಿಕೇರಿ ಮೇ 19 NEWS DESK : ಕಾಳು ಮೆಣಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು 24 ಗಂಟೆಗಳಲ್ಲಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಅರವತ್ತೊಕ್ಲು ಗ್ರಾಮದ ನಿವಾಸಿ ಎಂ.ಸುಬ್ಬಯ್ಯ ಅವರ ಮನೆಯ ಸಂಗ್ರಹಣಾ ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ 450 ಕೆ.ಜಿ ಕಾಳುಮೆಣಸನ್ನು ಮೇ 16 ರಂದು ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಐವರನ್ನು ಬಂಧಿಸಿದ್ದಾರೆ. ಅರವತ್ತೊಕ್ಲು ಗ್ರಾಮದ ನಿವಾಸಿಗಳಾದ ಸುಬ್ರಮಣಿ (24), ಮಂಜು (25), ಬೆಳ್ಳಿ (36), ಕರ್ಪ (49) ಹಾಗೂ ಕುಶಾಲ (19) ಬಂಧಿತ ಆರೋಪಿಗಳು. ಇವರ ಬಳಿಯಿಂದ 450 ಕೆ.ಜಿ ಕಾಳುಮೆಣಸು ಮತ್ತು ಕೃತ್ಯಕ್ಕೆ ಬಳಸಿದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ಮೋಹನ್ಕುಮಾರ್, ಗೋಣಿಕೊಪ್ಪ ವೃತ್ತದ ಸಿಪಿಐ ಶಿವರಾಜ ಮುಧೋಳ್, ಪಿಎಸ್ಐಗಳಾದ ರೂಪದೇವಿ ಬಿರಾದರ್, ಗೌರಿಶಂಕರ್, ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತನಿಖಾ ತಂಡ…
ಮಡಿಕೇರಿ ಮೇ 19 NEWS DESK : ಕೇಕ್ ಪ್ರಿಯರ ಹಲವು ದಿನಗಳ ಕನಸು ನನಸಾಗಿದೆ. ಕುಶಾಲನಗರದ ರಥಬೀದಿಯ ಗಿರಿಜಾ ಕಾಂಪ್ಲೆಕ್ಸ್ ನಲ್ಲಿ ಸದ್ದಾಂ ಹುಸೇನ್ ಮಾಲೀಕತ್ವದ ಆರ್ಟ್ ಆಫ್ ಕೇಕ್ಸ್ (ART OF CAKES)- The Unwind Cafe ಮಳಿಗೆ ಆರಂಭಗೊಂಡಿದೆ. >>> ಹೋಂ ಮೇಡ್ ಕೇಕ್ ಗಳು <<< Bride to be & groom to be Pastries, Wedding Pastries, Birthday Pastries, Customized Pastries, Unique type of desserts, ಗ್ರಾಹಕರ ಅವಶ್ಯಕತೆಗೆ ಅನುಗುಣವಾಗಿ ಎಲ್ಲಾ ತರಹದ ಪೇಸ್ಟ್ರೀಸ್ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮತ್ತು Order ಗಳಿಗಾಗಿ ಸಂಪರ್ಕಿಸಿ : 8197300217 | 9742155293 (ಶುಚಿ, ರುಚಿ ಮತ್ತು ತಾಜಾತನಕ್ಕೆ ಮತ್ತೊಂದು ಹೆಸರೇ ಆರ್ಟ್ ಆಫ್ ಕೇಕ್ಸ್ (ART OF CAKES). ಗ್ರಾಹಕರ ಹಿತವೇ ನಮ್ಮ ಹಿತ, ಕುಟುಂಬ ಸಹಿತರಾಗಿ ಇಂದೇ ಭೇಟಿ ನೀಡಿ.
ಮಡಿಕೇರಿ ಮೇ 18 NEWS DESK : ಶಿಕ್ಷಕರೇ ಅಲ್ಲದವರು, ರಾಜಕಾರಣಿಗಳು, ಕೆಲವು ಸಂದರ್ಭಗಳಲ್ಲಿ ಪದವಿಯನ್ನೇ ಪಡೆಯದವರು ಸುಶಿಕ್ಷಿತ ಮತದಾರರ ಕ್ಷೇತ್ರದಿಂದ ಚುನಾಯಿತರಾಗುತ್ತಿರುವುದು ವಿಪರ್ಯಾಸ ಎಂದು ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಶಸ್ತ್ರ ಚಿಕಿತ್ಸಾ ತಜ್ಞ ಹೆಬ್ರಿಬೀಡುವಿನ ಡಾ.ನರೇಶ್ಚಂದ್ ಹೆಗ್ಡೆ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 3 ರಂದು ನಡೆಯುವ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಸಿದ್ದೇನೆ. ಈ ಬಾರಿ ಮತದಾರರು ವಿದ್ಯಾವಂತರನ್ನು ಬಹುಮತದಿಂದ ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನೈಋತ್ಯ ಶಿಕ್ಷಕರ ಕ್ಷೇತ್ರ ಅತ್ಯಂತ ಸುಶಿಕ್ಷಿತ ಮತದಾರರ ಕ್ಷೇತ್ರವಾಗಿದೆ. ಇಲ್ಲಿನ ಮತದಾರರು ಕನಿಷ್ಠ ಎರೆಡೆರಡು ಪದವಿಗಳನ್ನು ಪಡೆದಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರ ರಚನೆಯಾದ ಬಳಿಕ ಎಲ್ಲೋ ಒಂದೆರಡು ಸಂದರ್ಭದಲ್ಲಿ ಮಾತ್ರ ಪದವೀದರರು, ಸುಶಿಕ್ಷಿತರು ಆಯ್ಕೆಯಾಗಿದ್ದಾರೆ. ಅರ್ಹರು ವಿಧಾನ ಪರಿಷತ್ ಪ್ರವೇಶ ಮಾಡಬೇಕು ಎನ್ನುವುದು ನನ್ನ ಉದ್ದೇಶ ಎಂದರು. ಸುಮಾರು 22 ಸಾವಿರಕ್ಕೂ ಅಧಿಕ…






