ಲೇಖಕ: admin

ಉಡುಪಿ ಜೂ.2 NEWS DESK : ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ನಿಮಿತ್ತ ಉಡುಪಿಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಪ್ರಭಾವಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಜಂಟಿಯಾಗಿ ಭರ್ಜರಿ ಪ್ರಚಾರ ನಡೆಸಿದರು. ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ ಅರುಣ್  ಪುತ್ತಿಲ ಬಾರ್ ಅಸೋಸಿಯನ್ ಪದಾಧಿಕಾರಿಗಳನ್ನು ಭೇಟಿಯಾಗಿ ಮತಯಾಚಿಸಿದರು. ಉಡುಪಿ ಕಟಪಾಡಿಯ  ಆನಂದತೀರ್ಥ ವಿದ್ಯಾಲಯ, ಉಡುಪಿ ಟೌನ್ ಸಹಕಾರಿ ಬ್ಯಾಂಕ್, ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ, ಸಿಟಿ ಹಾಸ್ಪಿಟಲ್ ಉಡುಪಿ,ಪ್ರಸಾದ್ ನೇತ್ರಾಲಯ ಉಡುಪಿ, ಗಾಂಧಿ ಹಾಸ್ಪಿಟಲ್ ಉಡುಪಿ , ಶ್ರೀ ಪೂರ್ಣಪ್ರಜ್ಞ ಇವ್ನಿಂಗ್ ಸ್ಕೂಲ್ ಉಡುಪಿ,ಬೆಲ್ ಓ ಸಿಲ್ ಕಾರ್ಖಾನೆ, ಬಾಳಿಗ ಫಿಶ್ ನೆಟ್ಸ್ ಕಾರ್ಖಾನೆ, ಪ್ರಕಾಶ್ ಇಂಡಸ್ಟ್ರಿ ಅಂಬಲಪಾಡಿಯಲ್ಲಿ ಶಾಸಕ  ಯಶ್ಪಾಲ್ ಸುವರ್ಣ ಹಾಗೂ ಅರುಣ್ ಪುತ್ತಿಲ ಜಂಟಿಯಾಗಿ ಮತಯಾಚನೆ ನಡೆಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಬಿಜೆಪಿ ವಕ್ತಾರೆ ಶ್ರೀಮತಿ ಗೀತಾಂಜಲಿ ಸುವರ್ಣ ಜೊತೆಗಿದ್ದರು. ಉಡುಪಿ ಜಿಲ್ಲಾ…

Read More

ಮಡಿಕೇರಿ ಜೂ.2 NEWS DESK : ಪದವೀಧರ ಕ್ಷೇತ್ರದ ಅಭ್ಯರ್ಥಿ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯ ಕ್ರ.ಸಂ 2ಕ್ಕೆ ಮತದಾನ ಮಾಡುವಂತೆ ರಾಜ್ಯದ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಮನವಿ ಮಾಡಿದ್ದಾರೆ. ಜಯದೇವ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ಅವರು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ  ಬಿಜೆಪಿಯಿಂದ ಸ್ಪರ್ಧಿಸಿದ್ದು, ಡಾ.ಸರ್ಜಿ ಅವರಿಗೆ ಮತದಾನ ಮಾಡುವಂತೆ ನೈರುತ್ಯ ಪದವೀಧರ ಕ್ಷೇತ್ರದ ಪದವೀಧರ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪದವೀಧರ ಮತದಾರರು ಜೂ.3ರಂದು ನಡೆಯುವ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಡಾ.ಧನಂಜಯ ಸರ್ಜಿ ಅವರಿಗೆ  ಮತದಾನ ಮಾಡುವ ಮೂಲಕ ವಿಧಾನ ಪರಿಷತ್ತಿನ ಘನತೆ ಗೌರವ ಹೆಚ್ಚಾಗುವಂತೆ ಮಾಡಬೇಕು ಎಂದು ಕೋರಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ರಾಜ್ಯದ ಖ್ಯಾತ ಹೃದ್ರೋಗ ತಜ್ಞರಾಗಿದ್ದು ಜಯದೇವ ಆಸ್ಪತ್ರೆಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞರಾಗಿದ್ದು,  ಹಲವು ಅನಾಥ ಮಕ್ಕಳ ಪಾಲನೆಯನ್ನು ಮಾಡುತ್ತಿದ್ದಾರೆ.

Read More

ಮಡಿಕೇರಿ ಜೂ.1 NEWS DESK : ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಮಾಲೀಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ, ವಾಹನ ಪರವಾನಿಗೆ ಹೊಂದಿಲ್ಲದವರಿಗೆ ವಾಹನ ಚಲಾಯಿಸಲು ಆಸ್ಪದ ನೀಡಬಾರದು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವುದು ಕಂಡುಬಂದಲ್ಲಿ ವಾಹನ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುವುದು, ಬೈಕ್, ಕಾರುಗಳನ್ನು ಚಲಾಯಿಸುವಾಗ ಯಾವುದೇ ರೀತಿಯ ಸ್ಟಂಟ್‌ಗಳನ್ನು ಮಾಡಿರುವ ಭಾವಚಿತ್ರ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಗ್ಗೆ ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. ರಸ್ತೆಯಲ್ಲಿ ಯಾವುದೇ ಅಪಘಾತಗಳು ಸಂಭವಿಸಿದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮತ್ತು ಕೆ.ಎಸ್.ಪಿ ತಂತ್ರಾಶದ ಮೂಲಕವೂ ಮಾಹಿತಿ ನೀಡಬಹುದು. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

Read More

ಮಡಿಕೇರಿ ಜೂ.1 NEWS DESK : ಅಪ್ರಾಪ್ತ ಚಾಲಿಸಿದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರನಗರದಲ್ಲಿ 2024 ಮೇ 31 ರಂದು ಬೈಕ್ ಸವಾರರೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಮಾಲೀಕರಾದ ಬಾಲಕನ ತಾಯಿ ತುಳಸಿ.ಟಿ ಹಾಗೂ ತಂದೆ ಪರಮೇಶ್ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕುಶಾಲನಗರ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸುಮಾರು 9 ಗಂಟೆ ಸುಮಾರಿನಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಚಿಕ್ಕತ್ತೂರು ಗ್ರಾಮದ ನಿವಾಸಿ ಶಿವಶಂಕರ್ (22) ಮೃತಪಟ್ಟಿದ್ದರು. ಬೈಕ್ ಸವಾರ ಮೃತನಾಗಿರುವ ಕುರಿತು ದೂರು ಸ್ವೀಕರಿಸಿದ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು 279, 304(ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈ ಪ್ರಕರಣದಲ್ಲಿ ಸುಂದರನಗರ ವಿನಾಯಕ ಬಡವಾಣೆ ನಿವಾಸಿ ತುಳಸಿ.ಟಿ ಹಾಗೂ ಪರಮೇಶ್ ಅವರ ಅಪ್ರಾಪ್ತ ವಯಸ್ಸಿನ ಪುತ್ರ ಟ್ರ್ಯಾಕ್ಟರ್ ಅನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಅಪಘಾತಗೊಳಿಸಿರುವುದು ತನಿಖೆಯಿಂದ…

Read More

ಮಡಿಕೇರಿ ಜೂ.1 NEWS DESK : ಸಿದ್ದಾಪುರದ ಕಾಫಿ ತೋಟದ ಬೃಹತ್ ಭೂಪರಿವರ್ತನೆ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಭೂಪರಿವರ್ತನೆಗಳ ವಿರುದ್ಧ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.3 ರಿಂದ ಜಿಲ್ಲಾವ್ಯಾಪಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸೋಮವಾರ ಬಿರುನಾಣಿಯಿಂದ ಜನಜಾಗೃತಿ ಕಾರ್ಯಕ್ರಮವನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಮಡಿಕೇರಿ, ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ಚೇರಂಬಾಣೆ, ಮೂರ್ನಾಡು, ಕಕ್ಕಬೆ, ನಾಪೋಕ್ಲು, ವಿರಾಜಪೇಟೆ, ಸಿದ್ದಾಪುರ, ಗೋಣಿಕೊಪ್ಪ, ತಿತಿಮತಿ, ಬಾಳೆಲೆ, ಪೊನ್ನಂಪೇಟೆ, ಹುದಿಕೇರಿ, ಕುಟ್ಟ, ಶ್ರೀಮಂಗಲ, ಟಿ.ಶೆಟ್ಟಿಗೇರಿ ಮತ್ತಿತರೆಡೆ ಕೂಡ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಾಫಿ ತೋಟಗಳ ಭೂಪರಿವರ್ತನೆಯಿಂದ ಕೊಡಗಿನ ಎಲ್ಲಾ ಗ್ರಾಮಗಳು ನಾಶವಾಗುತ್ತಿವೆ. ಮಣ್ಣು ಅಗೆಯುವ ಕೆಲಸದಿಂದ ಬಹುವಾರ್ಷಿಕ ಜಲಮೂಲಗಳ ನರ ಕೇಂದ್ರಗಳು ಈಗಾಗಲೇ ಮುಚ್ಚಿವೆ. ಈ ಬಗ್ಗೆ ಜಿಲ್ಲೆಯ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಇದರೊಂದಿಗೆ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ,…

Read More

ಮಡಿಕೇರಿ ಜೂ.1 NEWS DESK : ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ, ವಿತರಣೆ, ದಾಸ್ತಾನು ಮತ್ತಿತರ ವಿಷಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಸಂದರ್ಭದಲ್ಲಿ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೃಷಿಕರಿಂದ ದೂರು ಕೇಳಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ನುಡಿದರು. ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಜಿಲ್ಲೆಗೆ ಬೇಕಿರುವ ರಸಗೊಬ್ಬರ ದಾಸ್ತಾನು ಮಾಡಿಕೊಂಡು ಕೃಷಿಕರಿಗೆ ಕಾಲಕಾಲಕ್ಕೆ ಪೂರೈಸಬೇಕು. ರಸಗೊಬ್ಬರ ದಾಸ್ತಾನು, ವಿತರಣೆ ಸಂಬಂಧ ಮಾಹಿತಿಯ ಪಟ್ಟಿಯನ್ನು ಪ್ರತೀ ನಿತ್ಯ ಪ್ರಕಟಿಸುವುದರ ಜೊತೆಗೆ ಮಾಧ್ಯಮಗಳಲ್ಲಿಯೂ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಜಿ.ಪಂ.ಸಿಇಒ ವರ್ಣಿತ್…

Read More

ಶಿವಮೊಗ್ಗ ಜೂ.1 NEWS DESK :  ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರದ ಮತದಾರರೊಂದಿಗೆ ಜಿಲ್ಲಾ ಬಂಜಾರ ಸಭಾಭವನದಲ್ಲಿ ಸಮಾವೇಶ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರವಾಗಿ ಮತ ಯಾಚಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೆಗೌಡ್ರು, ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ತಾಲ್ಲೂಕು ಅಧ್ಯಕ್ಷ ಸಿಂಗನಹಳ್ಳಿ ಸುರೇಶ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಸವರಾಜಪ್ಪ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ಕೆಎಂಎಫ್ ನಿರ್ದೇಶಕರಾದ ದಿನೇಶ್ ಬುಳ್ಳಾಪುರ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ವೀರಭದ್ರಪ್ಪ ಪೂಜಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗಣೇಶ್ ಪಿಳ್ಳಂಗಿರಿ, ಜಿಲ್ಲಾ ಉಪಾಧ್ಯಕ್ಷರಾದ ಅಣ್ಣಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನಾಗರತ್ನ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರೇಮಾ ಸುಧಾಕರ್, ತಮಿಳು ಸಮಾಜದ ಮುಖಂಡ ಪೆರುಮಾಳ್, ಮಾಜಿ ತಾಲ್ಲೂಕು ಅಧ್ಯಕ್ಷ ಭಾಗ್ಯ ಜಗದೀಶ್, ಬಿಜೆಪಿ ಯುವ…

Read More

ಮಡಿಕೇರಿ ಜೂ.1 NEWS DESK : ಕುಶಾಲನಗರ “220/11 ಕೆವಿ ಮತ್ತು 66/11 ಕೆವಿ ಸುಂಟಿಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.3 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಕುಶಾಲನಗರ ಪಟ್ಟಣ, ಹೆಬ್ಬಾಲೆ ಶಿರಂಗಾಲ, ಕೂಡಿಗೆ, ರಸಲ್‍ಪುರ, ಭುವನಗಿರಿ, ಬಲಮುರಿ, ಹಾರಂಗಿ, ನಂಜರಾಯಪಟ್ಟಣ, ಎಸ್.ಎಲ್.ಎನ್, ಸಿದ್ದಲಿಂಗಪುರ ಕಾವೇರಿ ನಿಸರ್ಗಧಾಮ, ಸೋಮೇಶ್ವರ, ಕೂಡುಮಂಗಳೂರು, ನಾಕೂರು, ಮಾದಾಪುರ, ಹಟ್ಟಿಹೊಳೆ, ಕಾಂಡನಕೊಲ್ಲಿ, ಗರ್ವಾಲೆ, ಬಿಳಿಗೇರಿ, ಕಂಬಿಬಾಣೆ, ಕೊಡಗರಹಳ್ಳಿ, ಉಪ್ಪುತೋಡು, ಚೆಟ್ಟಳ್ಳಿ, ಶಿರಂಗಾಲ, ವಾಲ್ನೂರು ತ್ಯಾಗತ್ತೂರು, ಮತ್ತಿಕಾಡು, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.

Read More

ಮಡಿಕೇರಿ ಜೂ.1 NEWS DESK : ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಎನ್ ಡಿ ಆರ್ ಎಫ್ ತಂಡವು ಕೊಡಗು ಜಿಲ್ಲೆಗೆ ಆಗಮಿಸಿದೆ. ಎನ್ ಡಿ ಆರ್ ಎಫ್ ತಂಡದಲ್ಲಿ 25 ಪರಿಣತರಿದ್ದು, ಇವರನ್ನು ಕುಶಾಲನಗರ ತಾಲ್ಲೂಕು ಆಡಳಿತ ಬರಮಾಡಿಕೊಂಡಿತು. ಈ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ ಇದ್ದರು.

Read More

ಮಡಿಕೇರಿ ಜೂ.1 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಮತ ಎಣಿಕೆ ಜೂ. 4 ರಂದು ನಡೆಯಲಿದ್ದು, ಈ ದಿನದಂದು ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜೂ. 4 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ  ಆದೇಶ ಹೊರಡಿಸಿದ್ದಾರೆ.

Read More