ಮಡಿಕೇರಿ ಮೇ 18 NEWS DESK : ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಕಾರ್ಯಕರ್ತರನ್ನು ಮೀರಿ, ಇತರೆ ಪಕ್ಷಗಳಿಂದ ಬಂದವರಿಗೆ ಮಣೆ ಹಾಕಲಾಗಿದೆ. ಇಂತಹ ಪಕ್ಷಾಂತರಿಗಳ ವಿರುದ್ಧ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ತಾನು ಸ್ಪರ್ಧೆಗೆ ಇಳಿದಿದ್ದೇನೆ ಎಂದು ವಿಧಾನ ಪರಿಷತ್ ಅಭ್ಯರ್ಥಿ ಶಿವಮೊಗ್ಗದ ಎಸ್.ಪಿ.ದಿನೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2012 ರ ಎಂಎಲ್ಸಿ ಚುನಾವಣೆಯಲ್ಲಿ ತಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯ ಪ್ರಬಲ ಅಭ್ಯರ್ಥಿ ಡಿ.ಹೆಚ್.ಶಂಕರಮೂರ್ತಿ ಅವರ ವಿರುದ್ಧ ಕೇವಲ 918 ಮತಗಳ ಅಲ್ಪ ಅಂತರದಿಂದ ಪರಾಭವಗೊಂಡಿದ್ದೆ. 2018 ರಲ್ಲು ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದೆ. ಈ ಬಾರಿ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಪಕ್ಷದಿಂದ ನಿಷ್ಠಾವಂತ ಯಾವುದೇ ಕಾರ್ಯಕರ್ತನನ್ನು ಪಕ್ಷ ಕಣಕ್ಕಿಳಿಸಿದ್ದಲ್ಲಿ ತಾನು ಕಣಕ್ಕಿಳಿಯುತ್ತಿರಲಿಲ್ಲ. ಆದರೆ ಹಿಂದೆ ಬಿಜೆಪಿಯಲ್ಲಿದ್ದು ವಿಧಾನಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡು, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಬಂದವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆ ನನ್ನ ಸ್ಪರ್ಧೆ ಪಕ್ಷಾಂತರಿಯ ವಿರುದ್ಧ ಎಂದು ಪರೋಕ್ಷವಾಗಿ ಕಾಂಗ್ರೆಸ್…
ಲೇಖಕ: admin
ಮಡಿಕೇರಿ ಮೇ 18 NEWS DESK : ಹಾಡಹಗಲೇ ನಿರಾತಂಕವಾಗಿ ಕಾಡಾನೆಯೊಂದು ವಸತಿ ಪ್ರದೇಶದ ಮುಖ್ಯ ರಸ್ತೆಯಲ್ಲಿ ಸಂಚರಿಸಿ ಸಾರ್ವಜನಿಕರನ್ನು ಆತಂಕಕ್ಕೆ ದೂಡಿದ ಘಟನೆ ಸುಂಟಿಕೊಪ್ಪ ಬಳಿಯ ಕಂಬಿಬಾಣೆಯಲ್ಲಿ ನಡೆದಿದೆ. ಕಂಬಿಬಾಣೆ ಗ್ರಾಮದ ಮುಖ್ಯ ರಸ್ತೆಯ ಇಕ್ಕೆಲಗಳು ಜನವಸತಿಯ ಪ್ರದೇಶವಾಗಿದ್ದು, ಶನಿವಾರ ಬೆಳಗ್ಗೆ ಅಚಾನಕ್ ಕಾಡಾನೆಯೊಂದು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಣಿಸಿಕೊಂಡಿತು. ಇದರಿಂದ ಕಂಗಾಲಾದ ಅಲ್ಲಿನ ನಿವಾಸಿಗಳು ತಕ್ಷಣ ಸ್ಥಳದಿಂದ ದೂರಕ್ಕೆ ತೆರಳಿದರು. ಕಾಡಾನೆ ಮುಖ್ಯ ರಸ್ತೆಯ ಉದ್ದಕ್ಕೂ ಸಾಗಿ ಕೆಲ ಕಾಲ ಆತಂಕವನ್ನುಂಟುಮಾಡಿತಾದರು, ಬಳಿಕ ಗ್ರಾಮದ ಅಂಚಿನಿಂದ ಅgಣ್ಯ ಪ್ರದೇಶದತ್ತ ಸಾಗಿತು. ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಹಗಲಿನಲ್ಲೆ ಇದೀಗ ಕಾಡಾನೆಗಳು ಬರುತ್ತಿರುವುದು ಸಾರ್ವಜನಿಕರ ಸಂಕಷ್ಟಕ್ಕೆ ಕಾರಣವಾಗಿದೆ.
ಮಡಿಕೇರಿ ಮೇ.18 NEWS DESK : ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಸಂಬಂಧ ಭಾರತ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶಿಸಿದೆ. ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ (ಕೊಡಗು ಜಿಲ್ಲೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ) ಚುನಾವಣಾ ವೀಕ್ಷಕರಾಗಿ ಅನಿಲ್ ಕುಮಾರ್ ಟಿ.ಕೆ, ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆ ತೋಟಗಾರಿಕೆ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪ ನಿರ್ದೇಶಕರಾದ ರುದ್ರೇಶ್ ಕೆ. ದೂ. ಸಂ.9964174107, 7204064565. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ(ಕೊಡಗು ಜಿಲ್ಲೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ) ಕ್ಕೆ ಹರ್ಷ್ ಗುಪ್ತ ಅವರನ್ನು ಚುನಾವಣಾ ವೀಕ್ಷಕರಾಗಿ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಅವರನ್ನು…
ಮಡಿಕೇರಿ ಮೇ 18 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೃಜನಶೀಲತೆ, ನಾವೀನ್ಯತೆ ಮತ್ತು ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಸಕ್ರಿಯತೆಯನ್ನು ಉತ್ತೇಜಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹಾಗೂ ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳ ಬಗ್ಗೆ ತಮ್ಮ ಕೊಡುಗೆ ನೀಡಲು ಅವಕಾಶವನ್ನು ಒದಗಿಸುತ್ತದೆ. ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿಷ್ನಲ್ಲಿ ಸಲ್ಲಿಸಬಹುದು. ಪ್ರತಿ ಭಾಷೆಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಯಾವುದೇ ಸ್ಪರ್ಧಿಯು ಒಂದು ನಿರ್ದಿಷ್ಟ ಭಾಷೆಯಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬಂದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರಬಂಧದ ಕೊನೆಯಲ್ಲಿ ಹೆಸರು, ವಿಳಾಸ. ಸಂಪರ್ಕ ಸಂಖ್ಯೆ ಮತ್ತು ಇ-ಮೇಲ್ ವಿವರಗಳನ್ನು ಒದಗಿಸಬೇಕು. ಪ್ರಬಂಧವನ್ನು ಸಲ್ಲಿಸಲು ಮೇ, 27 ಕೊನೆಯ…
ಶಿವಮೊಗ್ಗ ಮೇ 18 NEWS DESK : ನಗರದ ಪಿಇಎಸ್ ಕಾಲೇಜ್ ಸಭಾಂಗಣದಲ್ಲಿ ಶನಿವಾರ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಪಿಎಸ್ ಕಾಲೇಜಿನ ಆಡಳಿತ ಸಂಯೋಜಕರಾದ ಡಾ. ನಾಗರಾಜ್ ಮಾತನಾಡಿ, ಡಾ. ಧನಂಜಯ ಸರ್ಜಿ ಅವರು ರಾಜ್ಯದ ಹೆಸರಾಂತ ಮಕ್ಕಳ ತಜ್ಞರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ಬಾರಿ ಹೇಳುತ್ತಲೇ ಇರುತ್ತಾರೆ , ಅಂತೆಯೇ ಡಾ. ಧನಂಜಯ ಸರ್ಜಿ ಇಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಮ್ಮ ಮುಂದಿದ್ದಾರೆ. ಕೃಷಿ ಮತ್ತು ವ್ಯಾಪಾರ ಕುಟುಂಬದ ಹಿನ್ನೆಲೆಯಲ್ಲಿ ಬಂದ ಸರ್ಜಿ, ಉತ್ತಮ ಸೇವೆ ಸಲ್ಲಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಇದೀಗ ನೈರುತ್ಯ ಪದವೀಧರ ಕ್ಷೇತ್ರದ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸರ್ಜಿ ಅವರಿಗೆ ಮತ ಹಾಕುವುದರ ಮೂಲಕ ಈ ಬಾರಿ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು…
ಶಿವಮೊಗ್ಗ ಮೇ 18 NEWS DESK : ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮನವಿ ಮಾಡಿದರು. ನಗರದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವೈದ್ಯ ಶಿಕ್ಷಣ ಮುಗಿದ ತಕ್ಷಣ ನಾನು ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ನಂತರ ಚಿಕ್ಕದಾಗಿ ಒಂದು ಕ್ಲಿನಿಕ್ ಆರಂಭಿಸಿದ್ದು, ಇದೀಗ 1000 ಸಿಬ್ಬಂದಿ ಹಾಗೂ 100 ವೈದ್ಯರು ಆಸ್ಪತ್ರೆಯಲ್ಲಿ ಸೇವೆಸಲ್ಲಿಸುತ್ತಿದ್ದಾರೆ, ವಿವಿಧ ಹಂತಗಳಲ್ಲಿ ಪದವೀದರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತುಕೊಂಡಿದ್ದೇನೆ, ನೈರುತ್ಯ ಪದವೀಧರ ಕ್ಷೇತ್ರವು 14 ಮೆಡಿಕಲ್ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಕ್ಕಿಂತ ಹೆಚ್ಚು ದೊಡ್ಡ ದೊಡ್ಡ ವಿದ್ಯಾಸ್ಥೆಗಳನ್ನು ಹೊಂದಿದ ಸುಶಿಕ್ಷಿತರ ಕ್ಷೇತ್ರ. ಈ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಮಂಗಳೂರು, ದಕ್ಷಿಣ ಕನ್ನಡ…
ಮಡಿಕೇರಿ ಮೇ 18 NEWS DESK : ಆಟೋರಿಕ್ಷಾದಲ್ಲಿ ಕಳೆದು ಹೋಗಿದ್ದ ಮೊಬೈಲ್ ಫೋನ್ ನ್ನು ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಎರಡು ತಿಂಗಳ ಹಿಂದೆ ಮಡಿಕೇರಿ ಮಾರುಕಟ್ಟೆ ವ್ಯಾಪಾರಿ ಎಂ.ಎ.ರಜಾ಼ಕ್ ಅವರು ಶ್ರೀ ರಾಜರಾಜೇಶ್ವರಿ ನಗರದ ರಸ್ತೆಯಲ್ಲಿ ಆಟೋರಿಕ್ಷಾವೊಂದರಲ್ಲಿ ಮೊಬೈಲ್ ಫೋನ್ ಕಳೆದುಕೊಂಡಿದ್ದರು. ಈ ಬಗ್ಗೆ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎರಡು ತಿಂಗಳ ತನಿಖೆಯ ನಂತರ ಮೊಬೈಲ್ ಫೋನ್ ಪತ್ತೆಯಾಗಿದ್ದು, ಠಾಣಾಧಿಕಾರಿ ಶ್ರೀಕಾಂತ್ ಅವರು ಇಂದು ಎಂ.ಎ.ರಜಾ಼ಕ್ ಅವರಿಗೆ ಹಸ್ತಾಂತರಿಸಿದರು. ಪೊಲೀಸರ ಕಾರ್ಯದಕ್ಷತೆಯ ಬಗ್ಗೆ ರಜಾ಼ಕ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸೈಬರ್ ಅಪರಾಧ ಠಾಣೆಯ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಡಿಕೇರಿ ಮೇ 17 NEWS DESK : ಮಹಿಳೆಯರು ಹಾಗೂ ಯುವತಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಕಠಿಣ ಕಾನೂನು ಜಾರಿಗೆ ತರಬೇಕು ಮತ್ತು ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ. ನಗರದಲ್ಲಿ ನಡೆದ ಬಿಜೆಪಿ ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಪದಾಧಿಕಾರಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರು ಆತಂಕದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹತ್ಯೆ, ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ ಎಂದು ಆರೋಪಿಸಿದರು. ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತçಗೊಳಿಸಿ ದೌರ್ಜನ್ಯ ನಡೆಸಲಾಗಿದೆ. ರಾಣಿಬೆನ್ನೂರಿನಲ್ಲಿ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ವಿವಸ್ತçಗೊಳಿಸಿ ಥಳಿಸಲಾಗಿದೆ. ಹಾವೇರಿಯಲ್ಲಿ ಏಳು ಪುರುಷರು ಯುವತಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ ನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರಿ…
ಮಡಿಕೇರಿ ಮೇ 17 NEWS DESK : ಜಿಲ್ಲೆಯಲ್ಲಿ ಕಾಡಾನೆಗಳ ಸಂಖ್ಯೆ ಮಿತಿಮೀರಿದ್ದು, ಅವುಗಳ ಉಪಟಳದಿಂದ ಗ್ರಾಮೀಣರು ಕಂಗಾಲಾಗಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಅರಣ್ಯ ಭವನದ ಎದುರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರ ಕಾಡಾನೆ ಉಪಟಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ‘ಅರಣ್ಯ ಭವನ’ವನ್ನೇ ಆನೆ ಸಾಕಾಣಿಕೆ ಕೇಂದ್ರ’ವನ್ನಾಗಿ ಮಾಡಲಿ. ಪರಿಸರವಾದಿಗಳು ತಮ್ಮ ಮನೆಯಲ್ಲಿ ಕಾಡಾನೆಗಳನ್ನು ಸಾಕಿಕೊಳ್ಳಲಿ, ಇಲ್ಲದಿದ್ದಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ನಮಗೆ ಅವಕಾಶ ನೀಡಲಿ ಎಂದರು.
ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಮರಗಳ ಗಣತಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಅರಣ್ಯ ಭವನದ ಎದುರು ಅರಣ್ಯ ಇಲಾಖೆ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮರ ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಮತ್ತು ವಿನಾಕಾರಣ ಬೆಳೆಗಾರರಿಗೆ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಮರಗಳ ಸರ್ವೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗುತ್ತಿರುವ ಬಗ್ಗೆ ಅರಿವಿದ್ದರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಉದ್ದೇಶ ಪೂರ್ವಕವಾಗಿಯೇ ಇಂದು ಬೆಂಗಳೂರಿನ ಸಭೆಯ ನೆಪದಲ್ಲಿ ಗೈರು ಹಾಜರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಖಾಸಗಿ ಜಮೀನುಗಳಲ್ಲಿನ…






