ಮಡಿಕೇರಿ ಜೂ.1 NEWS DESK : ಲೇಖಕಿ ಪ್ರತಿಮಾ ಹರೀಶ್ ರೈ ಬರೆದಿರುವ ಅಂತರಗಂಗೆ ಪುಸ್ತಕ ಜೂ.9 ರಂದು ಲೋಕಾಪ೯ಣೆಯಾಗಲಿದೆ. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಜೂ.9 ರಂದು ಬೆಳಗ್ಗೆ 10.30 ಗಂಟೆಗೆ ಆಯೋಜಿತ ಕಾಯ೯ಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉದ್ಘಾಟಿಸಲಿದ್ದು, ಸಾಹಿತಿ ಸಾಹಿತಿ ಶ.ಗ. ನಯನತಾರಾ ಅಂತರಗಂಗೆಯನ್ನು ಲೋಕಾಪ೯ಣೆ ಮಾಡಲಿದ್ದಾರೆ. ಮಡಿಕೇರಿ ಆಕಾಶವಾಣಿ ಉದ್ಘೋಷಕರು ಸುಬ್ರಾಯ ಸಂಪಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮ್ಮದ್ ಕೃತಿಯ ಕುರಿತು ಮಾತನಾಡಲಿದ್ದಾರೆ. ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ., ಕೊಡಗು ಬಂಟರ ಸಂಘದ ಅಧ್ಯಕ್ಷ ಡಿ.ಜಗದೀಶ್ ರೈ, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಲೇಖಕಿ ಪ್ರತಿಮಾ ಹರೀಶ್ ರೈ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಲೇಖಕ: admin
ಮಡಿಕೇರಿ ಜೂ.1 NEWS DESK : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ವತಿಯಿಂದ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಿತು. ಜಿಲ್ಲೆಯ ಸುಮಾರು 160 ಕ್ಕಿಂತಲೂ ಹೆಚ್ಚಿನ ಮಕ್ಕಳು ಚಿತ್ರಕಲೆ ಸ್ಪರ್ಧೆ ಮತ್ತು 30 ಮಕ್ಕಳು, 30 ಮಕ್ಕಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಕ್ಕಳ ಪರಿಸರ ಜಾಗೃತಿ ಮೂಡಿಸುವ ಚಿತ್ರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳೊಂದಿಗೆ ಅಂಗನವಾಡಿ ಮಕ್ಕಳು, ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಮಕ್ಕಳು ಕೂಡ ಅತಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ಸಂರಕ್ಷಣೆ ಕುರಿತು ವೈವಿಧ್ಯಮಯ ಚಿತ್ರಗಳನ್ನು ರಚಿಸಿದ್ದರು. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವುದನ್ನು ಪರಿಸರ ನಾಶ, ಬರಗಾಲಕ್ಕೆ ಆಹ್ವಾನ ನಿರೂಪಿಸುವ ಚಿತ್ರ, ಅರಣ್ಯ ನಾಶ, ಮನುಷ್ಯನಿಂದ ಜೀವ ಭಿಕ್ಷೆ ಬೇಡುತ್ತಿರುವ ವೃಕ್ಷ ದೇವತೆ, ಸುಂದರ ಪರಿಸರದ ರಮಣೀಯ ಚಿತ್ರಗಳು, ನೆಲ-…
ಮಡಿಕೇರಿ ಜೂ.1 NEWS DESK : ನಾವು ಪ್ರಾಕೃತಿಕ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾವು ನೆಲ- ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ…
ಮಡಿಕೇರಿ ಜೂ.1 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜೂ.2 ರಂದು ಮೊಣಕಾಲು ನೋವಿನ ಚಿಕಿತ್ಸಾ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್ ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಆರ್ಥ್ರೋಸ್ಕೋಫಿ ಮತ್ತು ಸ್ಪೋರ್ಟ್ಸ್ ಮೆಡಿಸಿನ್ ಟ್ರಾಮಾ ಕನ್ಸಲ್ಟೆಂಟ್ ಹಾಗೂ ಹಿರಿಯ ಸಲಹೆಗಾರರಾದ ಡಾ. ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜೂ.1 NEWS DESK : ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯರ ಸಮ್ಮಿಲನ ಕಾರ್ಯಕ್ರಮವು ಜೂ.2 ರಂದು ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ನಗರದ ಕ್ರೆಸೆಂಟ್ ಶಾಲೆಯ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಒಕ್ಕೂಟದ ಅಡ್ಮಿನ್ ನಿವೃತ್ತ ಸುಬೇದಾರ್, ಮೇಜರ್, ಹಾನರರಿ ಕ್ಯಾಪ್ಟನ್ ಡೇವಿಡ್ ವೇಗಸ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಹಿರಿಯ ಅಡ್ಮಿನ್ ಎಂ.ಇ.ಮಹಮದ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಮಾಜ ಸೇವಕರಾದ ಮೈಕಲ್ ವೇಗಸ್, ಗಾಯತ್ರಿ ನರಸಿಂಹ, ಒಕ್ಕೂಟದ ಪ್ರತಿನಿಧಿ ತೋರೇರ ಅಪ್ಪಿ ಪೂವಣ್ಣ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಹಾಗೂ ಒಕ್ಕೂಟದ ಪ್ರತಿನಿಧಿಗಳಾದ ಬೇಬಿ ಮ್ಯಾಥ್ಯೂ, ವಾಮನ ಟೀಚರ್, ಬಲ್ಲಮಾವಟಿ ನೇತಾಜಿ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಮೆಹಬೂಬ್ ಮಾಸ್ಟರ್, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಹಾಕತ್ತೂರು, ಚೆನ್ನಯ್ಯನ ಕೋಟೆ, ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ.ಶಿವಪ್ಪ, ಸೀನಿಯರ್ ಸಾಫ್ಟ್ವೇರ್ ಇಂಜಿನಿಯರ್ ನಿಯಾಝ್ ಸುಂಟಿಕೊಪ್ಪ ಪಾಲ್ಗೊಳ್ಳಲಿದ್ದಾರೆ. ಒಕ್ಕೂಟದ ಪ್ರತಿನಿಧಿ ಹಾಗೂ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ…
ಮಡಿಕೇರಿ ಜೂ.1 NEWS DESK : ಮಂಗಳೂರಿನ ಕಂಕನಾಡಿ ಬಳಿ ಅನುಮತಿ ಇಲ್ಲದೆ ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಕಲಾಗಿರುವ “ಬಿ” ರಿಪೋರ್ಟ್ ನ್ನು ರದ್ದುಗೊಳಿಸಬೇಕು, ಈ ಪ್ರಕರಣದಲ್ಲಿ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿಯ ಮೇಲಿನ ಅಮಾನತು ಆದೇಶವನ್ನು ಕೈಬಿಡಬೇಕು ಮತ್ತು ಹಿಂದೂ ಮುಖಂಡ ಶರಣ್ ಪಂಪುವೆಲ್ ಅವರನ್ನು ಗುರಿಯಾಗಿಸಿಕೊಂಡು ದಾಖಲಿಸಿರುವ ಪ್ರಕರಣವನ್ನು ವಾಪಾಸ್ಸು ಪಡೆಯಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಪ್ರಮುಖರು ಜಿಲ್ಲಾಧಿಕಾರಿಗಳ ಮೂಲಕ ಇಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರಿಗೆ ಮನವಿ ಪತ್ರ ಸಲ್ಲಿಸಿದ ಸಂಘಟನೆಗಳ ಪ್ರಮುಖರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಂಗಳೂರು ಕಂಕನಾಡಿ ಬಳಿ ರಸ್ತೆಯಲ್ಲಿ ಕೆಲವರು ಅನುಮತಿ ಇಲ್ಲದೆ ನಮಾಝ್ ಮಾಡಿದ್ದರು. ಪೊಲೀಸರು ಇದನ್ನು ಗಮನಿಸಿ ಸುಮೋಟೊ ಪ್ರಕರಣ ದಾಖಲಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷ ಹಾಗೂ ಮುಸ್ಲಿಂ ಸಂಘಟನೆಯ ಒತ್ತಡದ ಮೇರೆಗೆ ಆ ಪ್ರಕರಣವನ್ನು ‘ಬಿ’ ರಿಪೋರ್ಟ್ ಹಾಕಿ ಹಿಂಪಡೆಯಲಾಗಿದೆ. ಕಾನೂನು…
ಮಡಿಕೇರಿ ಜೂ.1 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯ ಯುವ ಮೋರ್ಚಾದ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವರಿಂದ ರಾಜೀನಾಮೆ ಪಡೆಯದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು, ಸೂಕ್ತ ತನಿಖೆ ನಡೆಸಬೇಕು ಮತ್ತು ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರಭಾವಿಗಳು ಒತ್ತಡ…
ಮಡಿಕೇರಿ ಮೇ 31 NEWS DESK : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಇದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ ಹಾಗೂ ದೃಶ್ಯ ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತದೆ. ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-577-515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗ ಶಾಲೆಯ ವೆಬ್ಸೈಟ್…
ಸುಂಟಿಕೊಪ್ಪ ಜೂ.1 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಾನ್ಬೈಲ್ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಲಾಕಾವೇರಿ ಜ್ಞಾನ ವಿಕಾಸ ತಂಡದ ವತಿಯಿಂದ ಬೀದಿನಾಟಕದ ಮೂಲಕ ಸಾರ್ವಜನಿಕರಿಗೆ ಸಾಮಾಜಿಕ ಅರಿವು ಮೂಡಿಸಲಾಯಿತು. ನಾಕೂರು-ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಮಂಜಿಕೇರೆ ಸಮುದಾಯ ಭವನದಲ್ಲಿ ತಲಾಕಾವೇರಿ ಜ್ಞಾನವಿಕಾಸ ತಂಡದ ವತಿಯಿಂದ ಬೀದಿನಾಟಕದ ಮೂಲಕ ವೈಯಕ್ತಿಕವಾಗಿ ಆರೋಗ್ಯ ಬಗ್ಗೆ ಕಾಳಜಿ ವಹಿಸುವುದು, ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಿವಾಹ ನಡೆಸುವುದರಿಂದ ಮುಂದಾಗುವ ದುಷ್ಪಾರಿಣಾಮ, ತಮ್ಮ ಸುತ್ತ ಮುತ್ತಲಿನ ಪರಿಸರ ಸ್ವಚ್ಚತೆ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುತ್ತಿರುವ ಹಾನಿಕಾರ ಹಾಗೂ ತಮ್ಮ ಸುತ್ತ ಮುತ್ತಲ್ಲಿನಲ್ಲಿ ಹಸಿರು ಪರಿಸರವನ್ನು ಸಂರಕ್ಷಿಸುವ ವಿಚಾರದ ಕುರಿತು ಈ ಭಾಗದ ಜನತೆಯಲ್ಲಿ ಜಾಗೃತಿಯನ್ನು ಮೂಡಿಸಿದರು. ಗ್ರಾ.ಪಂ ಕಾರ್ಯದರ್ಶಿ ಚಂದ್ರಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದ ವೇದಿಕೆಯಲ್ಲಿ ಕಾನ್ಬೈಲ್ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಮೂರ್ತಿ, ಗ್ರಾ.ಪಂ ಸದಸ್ಯೆ ಪ್ರೇಮಾ, ಜ್ಞಾನವಿಕಾಸ ಕೇಂದ್ರ ಸಮನ್ವಯ ಅಧಿಕಾರಿ ಮಾಲಿನಿ, ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಸೇವಾ ಪ್ರತಿನಿಧಿ ಯಶೋಧ…
ಕುಶಾಲನಗರ ಜೂ.1 NEWS DESK : ಅಂತರಾಷ್ಟ್ರೀಯ ಮಟ್ಟದ ಮಾದಕ ವಸ್ತುಗಳ ಜಾಲ ಯುವಜನತೆಯನ್ನು ತನ್ನ ತೆಕ್ಕೆಗೆ ಬೀಳಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಫಾಯಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಚಿಕ್ಕ ಅಳುವಾರದ ಕೊಡಗು ವಿಶ್ಚವಿದ್ಯಾಲಯ ಕ್ಯಾಂಪಸ್ನಲ್ಲಿ ಏರ್ಪಡಿಸಿದ್ದ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳನ್ನು ಬೆಳೆಸುವುದು ಸೂಕ್ಷ್ಮ ಕಲೆಯಾಗಿದೆ. ಮನೆಯಿಂದ ಸಂಸ್ಕಾರ ಪ್ರಾರಂಭ ಆಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮನೆಯ ವಾತಾವರಣವೇ ಬದಲಾಗಿದೆ. ಮನೆಯಲ್ಲಿ ವ್ಯಸನಿಗಳು ಇದ್ದರೆ ಅಂಥ ಮನೆಯಲ್ಲಿ ಶೇ. 10ರಷ್ಟು ಪ್ರಕರಣಗಳಲ್ಲಿ ಜವಾಬ್ದಾರಿಯುತ ಮಕ್ಕಳು ಹುಟ್ಟುತ್ತಾರೆ. ಶೇ.10 ಪ್ರಕರಣಗಳಲ್ಲಿ ಹೊಂದಾಣಿಕೆ ಪ್ರವೃತ್ತಿ ಬೆಳೆಸಿಕೊಳ್ಳುತ್ತಾರೆ. ಶೇ.30ರಷ್ಟು ಮಕ್ಕಳು ಮಾನಸಿಕ ಗೊಂದಲಕ್ಕೆ ಒಳಗಾಗುತ್ತಾರೆ. ಇವೆಲ್ಲದರ…






