ಲೇಖಕ: admin

ಮಡಿಕೇರಿ ಜೂ.1 NEWS DESK : ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ”ಯನ್ನು ಆಚರಿಸಲಾಯಿತು. ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳದೆ ಉತ್ತಮ ಜೀವನವನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ.ವಿಶಾಲ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯುವಕರು ಹೆಚ್ಚಾಗಿ ತಂಬಾಕುವಿನ ಸೇವನೆ, ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ಇದರಿಂದ ಅನೇಕ ಅಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ,…

Read More

ಪುತ್ತೂರು ಮೇ 31 NEWS DESK : ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳು ಕ್ಷಣ ಕ್ಷಣಕ್ಕೂ ಬದಲಾವಣೆಯಾಗುತ್ತಿವೆ. ಅದು ಪಠ್ಯಕ್ರಮದಲ್ಲಿ ಸೇರ್ಪಡೆಗೊಂಡು ವಿದ್ಯಾರ್ಥಿಗಳನ್ನು ತಲಪುವುದು ತಡವಾಗುತ್ತದೆ. ಆದರೆ ಇಂಡಸ್ಟ್ರಿಗಳು ಬದಲಾದ ತಂತ್ರಜ್ಞಾನಗಳನ್ನೇ ಬಯಸುತ್ತವೆ. ಈ ಕ್ಷಿಪ್ರ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಪಠ್ಯಕ್ರಮದ ಜತೆಯಲ್ಲಿ ಅನೇಕ ಪೂರಕ ವಿಷಯಗಳನ್ನು ಕಲಿತುಕೊಳ್ಳುವುದು ತುಂಬಾ ಅವಶ್ಯಕ ಎಂದು ಮಂಗಳೂರಿನ ಯುನಿಕೋರ್ಟ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಆಂಟೋನಿಯೋ ಧರ್ಮದಾಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಐಇಇಇ ಮಂಗಳೂರು ಉಪ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಐಎಸ್‍ಟಿಇ ನವದೆಹಲಿ, ವಿವೇಕಾನಂದ ಸೆಂಟರ್ ಫಾರ್ ರೀಸರ್ಚ್ ಸ್ಟಡೀಸ್, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗ ಇದರ ಸಹಭಾಗಿತ್ವದಲ್ಲಿ ನಡೆದ ರಾಜ್ಯಮಟ್ಟದ ಐ2 ಕನೆಕ್ಟ್-2024 (I2CONECCT-2024) ಪ್ರಾಜೆಕ್ಟ್‍ಗಳ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಂತ್ರಜ್ಞಾನದ ನೆರವು ಸಿಗುವಂತೆ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಹೇಳಿದರು ಇನ್ನೋರ್ವ ಅತಿಥಿ ಐಇಇಇ…

Read More

ಮಡಿಕೇರಿ ಮೇ 31 NEWS DESK : ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರಾರಂಭೋತ್ಸವವು ನಡೆದಿದೆ. ಶಾಲೆಗಳಲ್ಲಿ ತಳಿರು ತೋರಣ ಕಟ್ಟಿ, ಗುಲಾಬಿ ಹೂವು ನೀಡಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್ ಅವರು ಬೋಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದ್ದಾರೆ. ಶಾಲಾ ಆವರಣ, ಶಾಲಾ ಕೊಠಡಿ ಹಾಗೂ ಶೌಚಾಲಯ ಸ್ವಚ್ಛತೆ, ಸಂಪು, ಟ್ಯಾಂಕ್ ಸ್ವಚ್ಛತೆ, ಅಡುಗೆ ಮನೆಯಲ್ಲಿ ಶುಚಿತ್ವ ಕಾಪಾಡುವುದು, ಆಹಾರ ಧಾನ್ಯಗಳ ವ್ಯವಸ್ಥೆ ಮತ್ತಿತರವನ್ನು ಪರಿಶೀಲಿಸಿದರು. ಶಾಲೆ ಆರಂಭವಾದ ಶುಕ್ರವಾರ ಮಧ್ಯಾಹ್ನ ಬಿಸಿಯೂಟದಲ್ಲಿ ಪಾಯಸ ಬಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿಗಧಿಪಡಿಸಿರುವ ವೇಳಾಪಟ್ಟಿಯಂತೆ ತರಗತಿಗಳು ನಡೆಯಲಿದೆ. ಸೇತುಬಂಧ ಚಟುವಟಿಕೆ ಮತ್ತು ಮೂಲ ಕಲಿಕಾಂಶ ಆಧಾರಿತ ಕಲಿಕೆಯನ್ನು ಅನುಷ್ಠಾನಗೊಳಿಸಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನವನ್ನು ಅಭಿವೃದ್ಧಿ ಪಡಿಸಿ ಕಲಿಕಾ ಅಂತರವನ್ನು ನೀಗಿಸಲು ಸಲಹೆ…

Read More

ಮಡಿಕೇರಿ ಮೇ 31  NEWS DESK : ಬಿತ್ತನೆ ಬೀಜದ ಬೆಲೆಯನ್ನು ಏರಿಕೆ ಮಾಡಿರುವ ರಾಜ್ಯ ಸರಕಾರದ ಕ್ರಮ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಬಿಜೆಪಿಯ ಕೃಷಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಬಿತ್ತನೆ ಬೀಜದ ಬೆಲೆ ಅವೈಜ್ಞಾನಿಕವಾಗಿದ್ದು, ಕೃಷಿಕ ವರ್ಗಕ್ಕೆ ಹೊರೆಯಾಗಿದೆ. ಸರಕಾರದ ದ್ವಂದ್ವ ನಿಲುವುಗಳಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು. ರೈತರ ಬದುಕಿಗೆ ಮಾರಕವಾಗುವ ನಿರ್ಧಾರಗಳನ್ನು ಕೈಗೊಂಡರೆ ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಕ್ತಾರರಾದ ಮಹೇಶ್ ಜೈನಿ, ತಳೂರು ಕಿಶೋರ್ ಕುಮಾರ್,…

Read More

ಶಿವಮೊಗ್ಗ ಮೇ 31 NEWS DESK : ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರದ ಮತದಾರರೊಂದಿಗೆ ಜಿಲ್ಲಾ ಬಂಜಾರ ಸಭಾಭವನದಲ್ಲಿ ಸಮಾವೇಶ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಪರವಾಗಿ ಮತ ಯಾಚಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೆಗೌಡ್ರು, ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ತಾಲ್ಲೂಕು ಅಧ್ಯಕ್ಷ ಸಿಂಗನಹಳ್ಳಿ ಸುರೇಶ್,  ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜಪ್ಪ, ಜಿ.ಪಂ ಮಾಜಿ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ಕೆಎಂಎಫ್ ನಿರ್ದೇಶಕರಾದ ದಿನೇಶ್ ಬುಳ್ಳಾಪುರ, ಜಿ.ಪಂ ಮಾಜಿ ಸದಸ್ಯರಾದ ವೀರಭದ್ರಪ್ಪ ಪೂಜಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗಣೇಶ್ ಪಿಳ್ಳಂಗಿರಿ, ಜಿಲ್ಲಾ ಉಪಾಧ್ಯಕ್ಷರಾದ ಅಣ್ಣಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷ  ನಾಗರತ್ನ ಪ್ರಕಾಶ್, ಜಿ.ಪಂ ಸದಸ್ಯರಾದ ಪ್ರೇಮಾ ಸುಧಾಕರ್, ತಮಿಳು ಸಮಾಜದ ಮುಖಂಡ ಪೆರುಮಾಳ್, ಮಾಜಿ ತಾಲ್ಲೂಕು ಅಧ್ಯಕ್ಷ ಭಾಗ್ಯ ಜಗದೀಶ್, ಬಿಜೆಪಿ ಯುವ ಮುಖಂಡ…

Read More

ಪುತ್ತೂರು ಮೇ 31 NEWS DESK : ಎನ್.ಡಿ.ಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು. ಪುತ್ತೂರಿನ ವಕೀಲರ ಸಂಘ, ಪುತ್ತೂರಿನ ನೆಹರುನಗರದ ವಿವೇಕಾನಂದ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ನರೇಂದ್ರ ಪದವಿಪೂರ್ವ ಕಾಲೇಜು, ಅಂಬಿಕಾ ಪದವಿಪೂರ್ವ ಹಾಗೂ ಪದವಿ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಜೂನಿಯರ್ ಕಾಲೇಜು ಕೊಂಬೆಟ್ಟು, ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು, ಸಂಪ್ಯ ಅಕ್ಷಯ ಕಾಲೇಜಿನ   ಶಿಕ್ಷಕರು ಹಾಗೂ ಶಿಕ್ಷಕೇತರರೊಂದಿಗೆ ಮತಯಾಚಿಸಿದರು. ಬಿಜೆಪಿ ಮುಖಂಡ ಅರುಣ್ ಪುತ್ತಿಲ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಅಧ್ಯಕ್ಷ ಜೀವಂದರ್ ಜೈನ್, ಪ್ರಸನ್ನ ಮಾರ್ತ , ನಿತೀಶ್ ಶಾಂತಿವನ, ಯುವರಾಜ್ ಪೆರಿಯೋತ್ತಡಿ, ಅಜಿತ್ ಬಲ್ನಾಡು ಸಹಿತ ಹಲವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡರು.

Read More

ಮಡಿಕೇರಿ ಮೇ 31 NEWS DESK : ವಯೋನಿವೃತ್ತಿ ಹೊಂದಿದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಉಮಾಕಾಂತ್, ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ಎಂ.ಇ ಮೋಹನ್ ಅವರಿಗೆ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಬಾಂಡ್ ಗಣಪತಿ, ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಸೇರಿದಂತೆ ಬ್ಯಾಂಕ್ ನಿದೇ೯ಶಕರು, ಸಿಬ್ಬಂದಿ ವಗ೯ ಹಾಜರಿದ್ದು, ಉಮಾಕಾಂತ್ ಮತ್ತು ಮೋಹನ್ ಅವರು ಬ್ಯಾಂಕ್ ನ ಶ್ರೆಯೋಭಿವೖದ್ದಿಗಾಗಿ ನೀಡಿದ ಕೊಡುಗೆಯನ್ನು ಸ್ಮರಿಸಿದರು.

Read More

ಮಡಿಕೇರಿ ಮೇ 31 NEWS DESK : ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಮತ್ತು ಕರಿಮೆಣಸು ಬೆಳೆಗೆ ವಿಮೆ ಪಾವತಿ ಮಾಡಿದ್ದರೂ ವಿಮಾ ಸಂಸ್ಥೆ ಬೆಳೆಗಾರರ ಖಾತೆಗೆ ವಿಮಾ ಮೊತ್ತವನ್ನು ಪಾವತಿ ಮಾಡುತ್ತಿಲ್ಲವೆಂದು ಆರೋಪಿಸಿ ಮಡಿಕೇರಿ ತಾಲ್ಲೂಕು ಮೂರ್ನಾಡುವಿನ ಮುತ್ತಾರ್ಮುಡಿ ಕುಂಬಳದಾಳು ಗ್ರಾಮದ ಬೆಳೆಗಾರರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ದೂರು ನೀಡಿದ್ದಾರೆ. ಬೆಳೆಗಾರರ ಪರವಾಗಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಬೆಳೆಗಾರರಾದ ತೆಕ್ಕಡೆ ಆರ್.ಸುನಂದ ಹಾಗೂ ದೇವಜನ ಕೆ.ಉತ್ತಯ್ಯ ಅವರು ವಿಮಾ ಸಂಸ್ಥೆಯಿಂದ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. 2023-24ನೇ ಸಾಲಿನಲ್ಲಿ ಬ್ಯಾಂಕ್ ಖಾತೆಯಿಂದ ಅಡಿಕೆ ಮತ್ತು ಕರಿಮೆಣಸು ಬೆಳೆಗೆ ವಿಮಾ ಸಂಸ್ಥೆಗೆ ಪ್ರೀಮಿಯಂ ಮೊತ್ತವನ್ನು ಪಾವತಿಸಲಾಗಿದೆ. ಇದೇ ಸಾಲಿನಲ್ಲಿ ಮಡಿಕೇರಿ ತಾಲ್ಲೂಕು ಸೇರಿದಂತೆ ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಸರಕಾರವೇ ಘೋಷಣೆ ಮಾಡಿದೆ. ಕಳೆದ ಸಾಲಿನ ಮಳೆಗಾಲದಲ್ಲಿ ಮಳೆ ಬಾರದೆ ಅಡಿಕೆ ಮತ್ತು ಕರಿಮೆಣಸು ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಸಕಾಲದಲ್ಲಿ ಬೆಳೆ ಸರಿಯಾಗಿ ಕೈಗೆ ಬಾರದೆ ಬ್ಯಾಂಕ್ ಸಾಲಕ್ಕೆ…

Read More

ಕುಶಾಲನಗರ ಮೇ 31 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಉಭಯ ಶಾಲೆಗಳ ಮಕ್ಕಳು ವಿನೂತನ ರೀತಿಯಲ್ಲಿ ಶಾಲೆಗೆ ಆಗಮಿಸಿದ್ದು, ಗ್ರಾಮಸ್ಥರು ಗಮನ ಸೆಳೆಯಿತು. ಗ್ರಾಮಸ್ಥರು ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾದರು. ಶಾಲಾ ಪ್ರಾರಂಭೋತ್ಸವದ ಮೊದಲ ದಿನ ಕೂಡ್ಲೂರು ಗ್ರಾಮದಲ್ಲಿ ಉಭಯ ಶಾಲೆಯ ವತಿಯಿಂದ ಜಂಟಿಯಾಗಿ ಏರ್ಪಡಿಸಿದ್ದ ಎತ್ತಿನ ಗಾಡಿಯ ಮೆರವಣಿಗೆ ಮೂಲಕ ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಹೂವು ಹಾಗೂ ಸಿಹಿ ವಿತರಿಸಿ ಸ್ವಾಗತಿಸಿ ಶಾಲೆಗೆ ಬರಮಾಡಿಕೊಂಡರು. ಜಾನಪದ ಸಂಸ್ಕೃತಿಯ ಪ್ರತೀಕವಾದ ಎತ್ತಿನ ಗಾಡಿಯನ್ನು ಏರಿದ ಮಕ್ಕಳು ಸರ್ಕಾರಿ ಶಾಲೆಗೆ ಹೋಗೋಣ ಬನ್ನಿ, ಸರ್ಕಾರಿ ಶಾಲೆ ನಮ್ಮ ಹೆಮ್ಮೆ, ಸರ್ಕಾರಿ ಶಾಲೆ ನಮ್ಮೂರ ಶಾಲೆ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸೋಣ ಬನ್ನಿ, ‘ಶಿಕ್ಷಣವೇ ಶಕ್ತಿ’ ಎಂಬಿತ್ಯಾದಿ ಘೋಷಣೆಗಳ ಫಲಕಗಳನ್ನು ಹಿಡಿದು ಎತ್ತಿನ ಗಾಡಿಯ ಮೂಲಕ ಸಂಭ್ರಮದಿಂದ…

Read More

ವಿರಾಜಪೇಟೆ ಮೇ 31 NEWS DESK : ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಬಿ.ಎಸ್.ಸಿ ವಿದ್ಯಾರ್ಥಿನಿ ಪಿ.ವಿ.ವಿನಿಷಾ ಆರು ಸೆಮಿಸ್ಟರ್ ಪರೀಕ್ಷೆಗಳಲ್ಲಿ 4200 ಅಂಕಗಳಿಗೆ 4086 ಅಂಕಗಳನ್ನು ಪಡೆದು ಶೇ. 97.29 ರಷ್ಟು ಸಾಧನೆ ಮಾಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಆರನೇ ರ‍್ಯಾಂಕ್ ಪಡೆದು ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿನಿಷಾ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್ ಹಾಗೂ ಕೆ.ವಿದ್ಯಾ ದಂಪತಿಗಳ ಪುತ್ರಿ. ಪ್ರಸ್ತುತ ವಿನಿಷಾ  ಮೈಸೂರಿನ ಜೆ. ಎಸ್. ಎಸ್. ಶಿಕ್ಷಣ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿ ವಿನಿಷಾ ಸಾಧನೆಯನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶ್ಲಾಘಿಸಿದ್ದಾರೆ.

Read More