ಮಡಿಕೇರಿ ಮೇ 17 NEWS DESK : ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಗಳಿಸಿ ಹೆಸರು ಮಾಡಿರುವ ಕೊಡಗಿನ ನಿರ್ದೇಶಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರ ನಿರ್ದೇಶನದಲ್ಲಿ ಮತ್ತೊಂದು ಕನ್ನಡ ಚಿತ್ರ ತೆರೆಗೆ ಬರಲಿದೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದ ಬಹು ನಿರೀಕ್ಷಿತ “ಕೌಮುದಿ” ಕನ್ನಡ ಚಲನಚಿತ್ರಕ್ಕೆ ಕನಕಪುರದ ಶ್ರೀ ಬಿಸಿಲು ಮಾರಮ್ಮ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮುಹೂರ್ತ ನೆರವೇರಿಸಲಾಯಿತು. ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಈ, ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಲನ ನಾಗೇಶ್ ಎನ್, ಛಾಯಾಗ್ರಹಣ ಪಿವಿಆರ್ ಸ್ವಾಮಿ ಗೂಗಾರೆದೊಡ್ಡಿ, ಚಿತ್ರಕಥೆ ನಾಗೇಶ್ ಎನ್, ಎಸ್.ಹರೀಶ್ ಹಾಗೂ ಶ್ರೀ ಸುರೇಶ್ ಸಂಗೀತ ನೀಡಿದ್ದಾರೆ. ತಾರಾಂಗಣದಲ್ಲಿ ಪ್ರಶಸ್ತಿ ವಿಜೇತ ನಟಿ, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ, ನೀನಾಸಂ ನಟರಾಜ್, ಶ್ರೀಧರ್, ಪಿ.ಬಿ.ರಾಜು ನಾಯಕ, ರೋಹಿಣಿ, ಕುಮಾರಿ ಅಂಕಿತಾ, ಕುಮಾರಿ ದೀಪಿಕಾ,…
ಲೇಖಕ: admin
ವಿರಾಜಪೇಟೆ ಮೇ 17 NEWS DESK : ಬ್ರಹ್ಮಲೀನರಾದ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ಅವರ 16ನೇ ದಿನದ ಶೋಡಶಿ ಪೂಜೆಯನ್ನು ಸಾಧು-ಸಂತರು ಹಾಗೂ ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು. ವಿರಾಜಪೇಟೆಯ ಅಪ್ಪಯ್ಯಸ್ವಾಮಿ ರಸ್ತೆಯ ಕಾವೇರಿ ಆಶ್ರಮದಲ್ಲಿ ನಡೆದ ಪೂಜಾ ಕಾರ್ಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶ್ರೀ ಪುರುಷೋತ್ತಮನಂದ ನಾಥ ಸ್ವಾಮೀಜಿ, ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಪರ ಹಿತಾನಂದ ಸ್ವಾಮೀಜಿ, ಓಂಕಾರ ಆಶ್ರಮದ ಪೀಠಾಧಿಪತಿಗಳು, ಶ್ರೀ ಆಚಾರ್ಯ ಮಹಾ ಮಂಡಲೇಶ್ವರ, ಡಾ.ಮಧುಸೂದಾನಂದಪುರಿ ಸ್ವಾಮೀಜಿ, ಬೆಂಗಳೂರಿನ ಶ್ರೀ ಕೈಲಾಸ ಆಶ್ರಮದ ಶ್ರೀ ಬುದ್ಧಾನಂದಪುರಿ ಸ್ವಾಮೀಜಿ, ಊಟಿ ಕೈಲಾಸ ಆಶ್ರಮದ ಸುಗುಣಾನಂದ ಪುರಿ ಸ್ವಾಮೀಜಿ, ಬೆಂಗಳೂರಿನ ವಿಶ್ವ ಒಕ್ಕಲಿಗರ ಮಠದ ಶ್ರೀ ರಮಣನಂದನಾಥ ಸ್ವಾಮೀಜಿ, ಬೆಂಗಳೂರಿನ ರಾಮಕೃಷ್ಣ ಕುಟೀರ ಆಶ್ರಮದ ಶಾಂತನಂದ ಸ್ವಾಮೀಜಿ ಮತ್ತು ಭಕ್ತರು ಭಾಗವಹಿಸಿದ್ದರು. ಇದೇ ವೇಳೆ ಗುರುಗಳ ಸ್ಮರಣೆ ಮೂಲಕ 16ನೇ ದಿನದ ಮಹೇಶ್ವರಿ ಪೂಜೆ ನೆರವೇರಿಸಲಾಯಿತು.
ಕುಶಾಲನಗರ ಮೇ 17 NEWS DESK : ಕುಶಾಲನಗರ ಬೈಚನಹಳ್ಳಿಯ ಶ್ರೀ ವನದುರ್ಗ ಆದಿಶಕ್ತಿ ಅಂತರಘಟ್ಟ ಅಮ್ಮನವರ 9ನೇ ವರ್ಷದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಆದಿಶಕ್ತಿ ಅಂತರ್ಗಟ್ಟೆ ಅಮ್ಮ ದೇವಸ್ಥಾನ ಸೇವಾ ಸಮಿತಿ ಆಶ್ರಯದಲ್ಲಿ ದೇವಾಲಯದಲ್ಲಿ ಮುಂಜಾನೆಯಿಂದಲೆ ಗಣಪತಿ ಪೂಜೆ, ಗಣಪತಿ ಹೋಮ, ದುರ್ಗಾ ಹೋಮ, ನವಕ ಪೂಜೆ ನಂತರ ಶ್ರೀದೇವಿಗೆ ಪಂಚಾಮೃತ ಅಭಿಷೇಕ ಮತ್ತಿತರ ಪೂಜಾ ಕಾರ್ಯಕ್ರಮಗಳು ನೆರವೇರಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್, ಉಮೇಶ್ ಭಟ್, ಗಿರೀಶ್ ಭಟ್ ಮತ್ತು ದೇವಾಲಯದ ಅರ್ಚಕರಾದ ಬಿ.ಸಿ.ಸ್ವಾಮಿ ಅವರುಗಳ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ಜರುಗಿದವು. ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ದೇವಾಲಯಕ್ಕೆ ಫಲ ತಾಂಬೂಲಗಳೊಂದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು. ದೇವಾಲಯ ಸಮಿತಿಯ ಗೌರವ ಅಧ್ಯಕ್ಷ ಬಿ.ಸಿ.ಗೋವಿಂದರಾಜ್, ಅಧ್ಯಕ್ಷ ವಿ.ಗಿರೀಶ್, ಉಪಾಧ್ಯಕ್ಷರಾದ ಬಿ.ಎಸ್.ಗಣೇಶ್, ಕಾರ್ಯದರ್ಶಿ ಬಿ.ವಿ.ಜಗದೀಶ್ , ಸಹಕಾರ್ಯದರ್ಶಿ ಬಿ.ಎಸ್.ರವಿಕುಮಾರ್, ಖಜಾಂಚಿ ವಿ.ಡಿ.ಜಗದೀಶ್ ಮತ್ತಿತರರು ಇದ್ದರು.
ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಮೇ 24 ರಿಂದ 26ರ ವರೆಗೆ ‘ಮಾವು ಮತ್ತು ಹಲಸಿನ ಮೇಳ’ ನಡೆಯಲಿದೆ ಎಂದು ಕೊಡಗು ಜಿಲ್ಲಾ ಹಾಪ್ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡಗು ಜಿಲ್ಲಾ ಹಾಪ್ ಕಾಮ್ಸ್ನ ಮುಖ್ಯ ಕಚೇರಿಯ ಆವರಣದಲ್ಲಿ ಅತ್ಯಪರೂಪದ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣಿನ ಮೇಳ ನಡೆಯಲಿದ್ದು, ಬೆಳೆಗಾರರಿಗೆ ತಾವು ಬೆಳೆದ ಹಣ್ಣುಗಳ ಮಾರಾಟಕ್ಕೆ ಅನುವು ಮಾಡಿಕೊಡುವ ಮತ್ತು ವಿವಿಧ ತಳಿಯ, ವಿಭಿನ್ನ ರುಚಿಯ ಮಾವು ಹಲಸನ್ನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಮೇ 24 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ್ ಮೇಳವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿ.ಪಂ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ತೋಟಗಾರಿಕೆ…
ಮಡಿಕೇರಿ ಮೇ 17 NEWS DESK : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 20.15 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 150.74 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 112.72 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 39.50 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 206.31 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 160.65 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 92.45 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 71.01 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ…
ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಮರಗಳ ಗಣತಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಅರಣ್ಯ ಭವನದ ಎದುರು ಅರಣ್ಯ ಇಲಾಖೆ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮರ ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಮತ್ತು ವಿನಾಕಾರಣ ಬೆಳೆಗಾರರಿಗೆ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮರಗಳ ಗಣತಿ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ, ಬಿ.ಕೆ.ಅರುಣ್…
ಮಡಿಕೇರಿ ಮೇ 17 NEWS DESK : ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್ ನಮ್ಮೆ (ಬೇಡು ಹಬ್ಬ) ಮೇ 18 ಹಾಗೂ 19ರಂದು ನಡೆಯಲಿದೆ ಎಂದು ತಕ್ಕಮುಖ್ಯಸ್ಥರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಹಬ್ಬ ಸಂಭ್ರಮದಿಂದ ನಡೆಯಲಿದ್ದು, ಮೇ 11ಕ್ಕೆ ದೇವ ಕಟ್ಟ್ ಬೀಳುವ ಮೂಲಕ ವಿವಿಧ ಕಟ್ಟುಪಾಡುಗಳು ಆಚರಣೆಯಲ್ಲಿದೆ. ಮೇ 18 ರಂದು ಜೋಡುಬೀಟಿಯಲ್ಲಿರುವ ಗುಂಡಿಯತ್ ಅಯ್ಯಪ್ಪ ದೇವರ ಅವುಲ್ ಎಂಬ ವಿಶೇಷ ಆಚರಣೆ ನಡೆಯಲಿದೆ. ಇಲ್ಲಿ ಕೊಡವ ಜನಾಂಗದವರೇ ಪೂಜಾರಿಗಳಾಗಿದ್ದಾರೆ (ಚಮ್ಮಟೀರ ಹಾಗೂ ಮೂಕಳೇರ). ಮಧ್ಯಾಹ್ನದ ನಂತರ ಊರುತಕ್ಕರಾದ ಚಮ್ಮಟೀರ ಕುಟುಂಬದ ಬಲ್ಯಮನೆಯಿಂದ ಪೊಲವಪ್ಪ ಹೊರಡುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಚಮ್ಮಟೀರ ಕುಟುಂಬದ ಬಲ್ಯಮನೆಯಿಂದ ಹೊರಟ ಪೊಲವಪ್ಪ ತೆರೆ…
ವಿರಾಜಪೇಟೆ ಮೇ 17 NEWS DESK : ವನದೇವರುಗಳ ಆರಾಧನೆ ಮತ್ತು ಕುಲ ಕುಟುಬಗಳ ಆರಾಧನಾ ಪದ್ಧತಿಗಳು ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಬಡಕಡ ಕುಟುಂಬದ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾ.ಪಂ ವ್ಯಾಪ್ತಿಯ ಕಲ್ಲುಬಾಣೆಯ ಬಡಕಡ ಕುಟುಂಬದ ಐನ್ಮನೆಯಲ್ಲಿ ಪಾಷಾಣ ಮೂರ್ತಿ, ಪಂಜುರ್ಲಿ, ಗುಳಿಗ, ಕೊರತಿ ದೈವಗಳ ತೆರೆ ಮಹೋತ್ಸವವು ನೆರವೇರಿತು. ಎರಡು ದಿನಗಳ ಕಾಲ ನಡೆದ ವಿವಿಧ ಧಾರ್ಮಿಕ ಕಾರ್ಯದಲ್ಲಿ ಕುಟುಂಬದ ಮುಖ್ಯಸ್ಥರು, ಬಂಧುಗಳು, ನೆರೆಯ ಗ್ರಾಮದ ಗ್ರಾಮಸ್ಥರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆಗಮಿಕ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ, ಪ್ರಸಾದ ವಿತರಣೆ ನಡೆಯಿತು.
ಪಾವಗಡ ಮೇ 17 NEWS DESK : ರಾಜ್ಯವ್ಯಾಪಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಸಿಡಿಲಬ್ಬರಕ್ಕೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಗುರುವಾರ ರಾತ್ರಿ ಸಿಡಿಲು ಬಡಿದು ದನದ ಕೊಟ್ಟಿಗೆ ಹೊತ್ತಿ ಉರಿದು ಹಸುವೊಂದು ಸಜೀವ ದಹನವಾದ ಘಟನೆ ಪಾವಗಡ ತಾಲ್ಲೂಕಿನ ವೈ.ಎನ್ ಹೊಸಕೋಟೆ ಹೋಬಳಿಯ ರಂಗಸಮುದ್ರ ಗ್ರಾಮದಲ್ಲಿ ನಡೆದಿದೆ. ಸಿಡಿಲಿನಿಂದ ಅಗ್ನಿ ತಕ್ಷಣ ವ್ಯಾಪಿಸಿ ಕರಿಯಪ್ಪ ಎಂಬುವವರಿಗೆ ಸೇರಿದ ಕೊಟ್ಟಿಗೆ ಸುಟ್ಟು ಭಸ್ಮವಾಗಿದೆ. ಒಂದು ಹಸು ಸಜೀವ ದಹನವಾದರೆ ಉಳಿದ ಮೂರು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಹಸುಗಳನ್ನು ರಕ್ಷಿಸಲು ಹೋದ ಕರಿಯಪ್ಪ ಹಾಗೂ ಅವರ ಮೊಮ್ಮಗ ಮಹಾಲಿಂಗನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಡಿಕೇರಿ ಮೇ 17 NEWS DESK : ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹಿರಿಯ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ಅವರನ್ನು ಕುಶಾಲನಗರದ ನಿವಾಸದಲ್ಲಿ ಭೇಟಿಯಾದರು. ಯೋಗಕ್ಷೇಮ ವಿಚಾರಿಸಿದ ಸಚಿವರು ಹಳೆಯ ನೆನಪುಗಳನ್ನು ಮೆಲುಕು ಹಾಕಿ, ಆರೋಗ್ಯ ಕಾಪಾಡಿಕೊಳ್ಳುವಂತೆ ಶುಭ ಹಾರೈಸಿ ಮರಳಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಕಾಂಗ್ರೆಸ್ ಯುವ ಮುಖಂಡ ನಂದಿನೆರವಂಡ ಮಧು ಮತ್ತಿತರ ಪ್ರಮುಖರು ಹಾಜರಿದ್ದರು.






