ಮಡಿಕೇರಿ ಏ.6 NEWS DESK : ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಸೋಮವಾರಪೇಟೆಯ ಆಶ್ರೋ ಟರ್ಫ್ ಮೈದಾನದಲ್ಲಿ ಮೇ 7 ರಿಂದ 10ರ ವರೆಗೆ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ ನಡೆಯಲಿದೆಯೆಂದು ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀನಿಧಿ ಲಿಂಗಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗಳು ಆಯೋಜನೆಯಾಗದೆ ಸುಮಾರು ಇಪ್ಪತ್ತೈದು ವರ್ಷಗಳೆ ಕಳೆದಿದೆ. ಜಿಲ್ಲೆಯ ಯುವ ಹಾಕಿ ಪ್ರತಿಭೆಗಳ ಉತ್ತೇಜನಕ್ಕೆ ಪೂರಕವಾಗಿ ರಾಜ್ಯ ಮಟ್ಟದ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು. ಪಂದ್ಯಾವಳಿಯಲ್ಲಿ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ತಂಡದೊಂದಿಗೆ, ಆಗ್ರೋಸ್, ಕೆನರಾ ಬ್ಯಾಂಕ್, ಕರ್ನಾಟಕ ಸ್ಟೇಟ್ ಪೊಲೀಸ್, ಸದರ್ನ್ ವೆಸ್ಟರ್ನ್ ರೈಲ್ವೇಸ್, ಕಸ್ಟಮ್ಸ್ ಅಂಡ್ ಸೆಂಟ್ರಲ್ ಎಕ್ಸೈಸ್, ಡೈಸ್ ಸ್ಟೋರ್ಟ್ಸ್ ಹಾಸ್ಟೆಲ್, ಸದರ್ನ್ ಕಮಾಂಡ್ ತಂಡಗಳು ಪಾಲ್ಗೊಳ್ಳಲಿವೆ. ಈ ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿ, ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡಗಳ ನಡುವೆ…
ಲೇಖಕ: admin
ಮಡಿಕೇರಿ ಏ.6 NEWS DESK : ನಗರದ ಕಲಾ ಕಾವ್ಯ ನಾಟ್ಯ ಶಾಲೆಯ ವತಿಯಿಂದ ಏ.8 ರಂದು ನಗರದ ಮೈತ್ರಿ ಸಭಾಂಗಣದಲ್ಲಿ ಆರು ತಿಂಗಳ ಕಾಲ ತರಬೇತು ಪಡೆದ ವಿದ್ಯಾರ್ಥಿಗಳಿಂದ ಎರಡು ಯಕ್ಷಗಾನ ಪ್ರಸಂಗಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆಯೆಂದು ನಾಟ್ಯ ಶಾಲೆಯ ಪ್ರಮುಖರಾದ ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿಯನ್ನಿತ್ತ ಅವರು, ಕರಾವಳಿ ಭಾಗದ ಗಂಡು ಕಲೆ ಯಕ್ಷಗಾನದ ಮೂಲ ಪಾಠಗಳತ್ತ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ಚಿಂತನೆಯ ಹಿನ್ನೆಲೆಯಲ್ಲಿ 38 ಮಂದಿ ಹೆಣ್ಣು ಮಕ್ಕಳು ಮತ್ತು ಇಬ್ಬರು ಬಾಲಕರನ್ನು ಒಳಗೊಂಡಂತೆ 40 ಮಂದಿಗೆ ಯಕ್ಷಗಾನದ ಹಿರಿಯ ಕಲಾವಿದರಾದ ಬಾಲಕೃಷ್ಣ ನಾಯರ್ ಅವರ ಮೂಲಕ ಆರು ತಿಂಗಳ ಕಾಲ ಯಕ್ಷಗಾನದ ಪ್ರಾಥಮಿಕ ಪಾಠದೊಂದಿಗೆ, ಎರಡು ಯಕ್ಷಗಾನ ಪ್ರಸಂಗಗಳನ್ನು ಕಲಿಸಿರುವುದಾಗಿ ಮಾಹಿತಿಯನ್ನಿತ್ತರು. ಏ.8 ರಂದು ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಳಿಕ 8 ವಿದ್ಯಾರ್ಥಿಗಳು ಗಣಪತಿ ಸ್ತುತಿಯನ್ನು ಪ್ರಸ್ತುತಪಡಿಸಲಿದ್ದಾರೆ. ನಂತರ 2.30 ಗಂಟೆ ಅವಧಿಯ “ಶ್ರೀ…
ಮಡಿಕೇರಿ ಏ.6 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್ನಲ್ಲಿ ಏ.8 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲದ ಮುಂಜಾಗೃತಾ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಏ.6 NEWS DESK : ಕೇರಳ ರಾಜ್ಯದ ಚುನಾವಣೆಯ ಮಾನಂದವಾಡಿ ವಿಧಾನಸಭಾ ಕ್ಷೇತ್ರದ ತೂಂಡರ್ ನಾಡ್ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚುನಾವಣೆ ರೂಪುರೇಷೆ ಬಗ್ಗೆ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭ ಕೊಡಗಿನಿಂದ ಬಂದ ಮಹಿಳಾ ಘಟದ ಅಧ್ಯಕ್ಷರು, ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಏ.6 NEWS DESK : ಟೀಂ ಕೆ.ಆರ್.ಟಿ (ಟೀಮ್ ಕೋದಂಡರಾಮ ಟೆಂಪಲ್) ಆಯೋಜಿತ 2ನೇ ವರ್ಷದ ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಏ.10 ರಂದು ಚಾಲನೆ ದೊರಕಲಿದೆ. ಕಳೆದ ವರ್ಷ ನೂತನ ಪರಿಕಲ್ಪನೆಯಲ್ಲಿ ಐತಿಹಾಸಿಕ ಮಡಿಕೇರಿ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ದಶ ದೇವಾಲಯಗಳ ಮಂಟಪ ಸಮಿತಿಗಳನ್ನೊಳಗೊಂಡ ಕ್ರಿಕೆಟ್ ಪಂದ್ಯಾಟವನ್ನು ಟೀಂ ಕೆ.ಆರ್.ಟಿ ತಂಡ ಪ್ರಾರಂಭಿಸಿತ್ತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಟೂರ್ನಿ ಯಶಸ್ವಿಯಾಗಿ ಜರುಗಿತ್ತು. ಈ ಬಾರಿ 3 ದಿನಗಳ ಕಾಲ 10 ಮಂಟಪ ತಂಡಗಳನ್ನೊಳಗೊಂಡ ಟೂರ್ನಿ ತಾ.10, 11 ಹಾಗೂ 12 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಗೆದ್ದ ತಂಡಕ್ಕೆ ಆಕರ್ಷಕ ಹನುಮ ಗದೆ ಆಕಾರದ ರೋಲಿಂಗ್ ಟ್ರೋಫಿಯೊಂದಿಗೆ ವಿನ್ನರ್ರ್ಸ್ ಟ್ರೋಫಿ ಹಾಗೂ ನಗದು ಬಹುಮಾನವಿರಲಿದೆ. ಮೊದಲ ಹಾಗೂ ಎರಡನೆಯ ರನ್ನರ್ಸ್ ಟ್ರೋಫಿಯನ್ನೂ ತಂಡಗಳಿಗೆ ನೀಡಲಾಗುವುದೆಂದು ಟೀಂ ಕೆ.ಆರ್.ಟಿ ತಂಡ ತಿಳಿಸಿದೆ. :: ಟ್ರೋಫಿ ಅನಾವರಣ :: ದಶಮಂಟಪ ಪ್ರೀಮಿಯರ್…
ಸೋಮವಾರಪೇಟೆ ಏ.6 NEWS DESK : ಕನ್ನಡ ಚಿತ್ರಗಳು ಹೆಚ್ಚು ಹೆಚ್ಚು ನಿರ್ಮಾಣವಾಗಬೇಕು, ಚಿತ್ರರಂಗ ಬೆಳೆಯಬೇಕು. ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಚಿತ್ರನೋಡಬೇಕೆಂದು ಮಾಜಿ ಕ್ರೀಡಾಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕೊಡಗಿನ ರೂಪಾಮೋಹನ್ ಸೃಷ್ಟಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಿಸಿ, ನಿರ್ದೇಶಿಸುತ್ತಿರುವ ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಪಟ್ಟಣದ ಸೋಮೇಶ್ವರ ದೇವಾಲಯದಲ್ಲಿ ಚಾಲನೆ ನೀಡಿ ಮಾತನಾಡಿದರು. ಕರ್ನಾಟಕದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ ಇಲ್ಲಿ ಸಾಕಷ್ಟು ಚಿತ್ರಗಳು ನಿರ್ಮಾಣ ವಾಗುತ್ತಿದೆ, ಆಗಬೇಕುಕೂಡ. ಆದರೆ ಕನ್ನಡಿಗರು ಚಿತ್ರಮಂದಿರಗಳಿಗೆ ತೆರಳಿ ಚಿತ್ರನೋಡಿದರೆ ಚಿತ್ರರಂಗ ಉಳಿಯುತ್ತದೆ, ಬೆಳೆಯುತ್ತದೆ ಎಂದರು. ಕೊಡಗು ಜಿಲ್ಲೆಯ ಮೂಲದವರಾದ ರೂಪ ಮೋಹನ್ ಉತ್ತಮ ಕಥೆಯನ್ನು ಆಯ್ಕೆಮಾಡಿಕೊಂಡು ಸಿನಿಮಾ ಮಾಡಲು ಹೊರಟಿರುವುದು ಶ್ಲಾಘನೀಯವೆಂದರು. ಚಿತ್ರದ ನಿರ್ಮಾಪಕಿ, ನಿರ್ದೇಶಕಿ ರೂಪಮೋಹನ್ ಮಾತನಾಡಿ, ಜೇನು ಕುರುಬರ ಜೀವನಶೈಲಿ ಮತ್ತು ಅವರ ನೋವು ನಲಿವುಗಳ ಕಥೆಯನ್ನು ಕಲಾತ್ಮಕ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ ಈ ಚಿತ್ರವನ್ನು ಬಹುತೇಕ ಕೊಡಗಿನಲ್ಲಿಯೇ ಚಿತ್ರಿಕರಿಸಲಾಗುವುದು ಎಂದು ತಿಳಿಸಿದರು. ಗಿರಿಜನರ ಬದುಕಿನ ಬಗ್ಗೆ ಬೆಳಕು ಚೆಲ್ಲುವ ಪೂರ್ಣ ಪ್ರಮಾಣದ ಎರಡು ಗಂಟೆಯ…
ಮಡಿಕೇರಿ NEWS DESK ಏ.6 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.6ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಕಾಂಚೇರಿರ ಮತ್ತು ಕಲಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಕಲಿಯಂಡ ತಂಡಕ್ಕೆ 6 ವಿಕೆಟ್ಗಳ ಜಯ ಲಭಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕಾಂಚೇರಿರ 6 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 44 ರನ್ ಗಳನ್ನು ಗಳಿಸಿತು. ಕಲಿಯಂಡ ತಂಡ 5.5 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಗೆಲುವು ದಾಖಲಿಸಿತು. ಮೇದುರ ಮತ್ತು ಬಾಳೆಯಡ ನಡುವಿನ ಪಂದ್ಯದಲ್ಲಿ ಮೇದುರ ತಂಡ 8 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಳೆಯಡ ತಂಡ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಗಳಿಸಿತು. ಮೇದುರ 5.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 55…
ಮಡಿಕೇರಿ ಏ.6 : *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಅಮ್ಮಣಿಚಂಡ ಮತ್ತು ಕಂಬೆಯಂಡ, 10ಕ್ಕೆ ಅಜ್ಜೆಟ್ಟಿರ ಮತ್ತು ಕೊಲ್ಲಿರ, 11ಕ್ಕೆ ಅಪ್ಪನೆರವಂಡ ಮತ್ತು ತಾತಂಡ (ಕುಕ್ಲೂರು), 12ಕ್ಕೆ ಮುಕ್ಕಾಟಿರ (ಮೂವತ್ತೊಕ್ಲು) ಮತ್ತು ಅಲ್ಮಚಂಡ, 1ಕ್ಕೆ ಮಣವಟ್ಟಿರ ಮತ್ತು ಪಾಸುರ, 2ಕ್ಕೆ ಮಲ್ಲೇಂಗಡ ಮತ್ತು ಕುಂಡ್ಯೋಳಂಡ ಹಾಗೂ 3 ಗಂಟೆಗೆ ಓಡಿಯಂಡ ಮತ್ತು ಮಾಳೇಟಿರ (ಕುಕ್ಲೂರು) *ಮೈದಾನ 2* 9 ಗಂಟೆಗೆ ಚೆರುವಾಳಂಡ (ಪುಲ್ಲಿಮಕ್ಕಿ) ಮತ್ತು ಜಮ್ಮಡ, 10ಕ್ಕೆ ಮಂಡೇಪಂಡ ಮತ್ತು ಅಲ್ಲುಮಾಡ, 11ಕ್ಕೆ ಕಾಂಡೇರ ಮತ್ತು ಮಂದನೆರವಂಡ, 12ಕ್ಕೆ ಪುಗ್ಗೇರ ಮತ್ತು ಕಳಕಂಡ, 1ಕ್ಕೆ ಕೇಳೇಟಿರ ಮತ್ತು ಅಯ್ಯಮಾಡ, 2ಕ್ಕೆ ಮಲಚ್ಚಿರ ಮತ್ತು ಉಳುವಂಗಡ, 3ಕ್ಕೆ ಅಣ್ಣೀರ ಮತ್ತು ಚೆಯ್ಯಂಡ (ಬಲಮುರಿ)
ಮಡಿಕೇರಿ, NEWS DESK ಏ.6 : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್, 17 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬoಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಲೈನ್ಮನೆಗಳಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ ಹಕ್ಕುಪತ್ರ ವಿತರಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಲೈನ್ಮನೆಗಳಲ್ಲಿ ವಾಸಿಸುವ ನಿವೇಶನ ರಹಿತ ಕುಟುಂಬದವರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಆದರೂ ಸಹ ಕೆಲವು ಕುಟುಂಬದವರ ಸಮರ್ಪಕ ಮಾಹಿತಿ ಲಭ್ಯ ಇಲ್ಲದಿರುವ ಹಿನ್ನೆಲೆ ಸಂಬAಧಪಟ್ಟ ಗ್ರಾಮಕ್ಕೆ ತೆರಳಿ ಆಧಾರ್ ಕಾರ್ಡ್ ಮಾಡಿಸುವುದು ಹಾಗೆಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ…
ಮಡಿಕೇರಿ, NEWS DESK ಏ 6- ಬೆಂಗಳೂರಿನಲ್ಲಿ ನೆಲಸಿರುವ ಬೊಪ್ಪಂಡ ರಶ್ಮಿ ಅಯ್ಯಪ್ಪ ಅವರಿಗೆ ಜೀವಮಾನ ಸಾಧನೆಗಾಗಿ ಪ್ರತಿಷ್ಟಿತ ಉದ್ಯೋಗ್ ಯೋಗ್ ಧಾನ್ – 2026 ಪ್ರಶಸ್ತಿ ಲಭಿಸಿದ್ದು, ಬೆಂಗಳೂರಿನಲ್ಲಿ ಆಯೋಜಿತ ಸಮಾರಂಭದಲ್ಲಿ ಖ್ಯಾತ ಚಿತ್ರ ನಟಿ ಶಿಲ್ಪಾ ಶೆಟ್ಟಿ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಯೋಗ ಕ್ಷೇಮ, ಆರೋಗ್ಯ ಸ್ವಾಸ್ತ್ಯ, ಜೀವನೋಲ್ಲಾಸ ಕ್ಷೇತ್ರದಲ್ಲಿ ಹೆಸರಾಗಿರುವ ಆಶ್ವಾಸನ್ ಸಂಸ್ಥೆಯ ಸಂಸ್ಥಾಪಕಿಯಾಗಿ ಮತ್ತು ಕಾಯ೯ನಿವಾ೯ಹಕಿ ಅಧ್ಯಕ್ಷೆಯಾಗಿರುವ ರಶ್ಮಿ ಅಯ್ಯಪ್ಪ ಎರಡು ದಶಕಗಳಿಂದ 30 ದೇಶಗಳಲ್ಲಿ ಆರೋಗ್ಯ ಸ್ವಾಸ್ತ್ಯ ಸಂಬಂಧಿತ 100 ಕ್ಕೂ ಹೆಚ್ಚು ಅಭೂತಪೂರ್ವ ಫಲಿತಾಂಶಗಳು ತಂದಿದ್ದು, ಆರೋಗ್ಯ ಸ್ವಾಸ್ತ್ಯ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಯೋಗ ಕ್ಷೇಮ, ಆಧ್ಯಾತ್ಮದ ಮೂಲಕ ಜೀವನೊಲ್ಲಾಸ ಕುರಿತಾದ ರಶ್ಮಿ ಅಯ್ಯಪ್ಪ ಅವರ ಕಾಯ೯ಕ್ರಮಗಳು ಜಗತ್ತಿನಾದ್ಯಂತ ಮನ್ನಣೆ ಪಡೆದಿದೆ. 2005 ರ ಮೇ 23 ರಂದು ಆರೋಗ್ಯ ಸುರಕ್ಷತೆ ಮತ್ತು ಯೋಗ ಕ್ಷೇಮ ವಿಚಾರವನ್ನೇ ಆದ್ಯತೆಯಾಗಿರಿಸಿಕೊಂಡು ಆಶ್ವಾಸನ್ ಎಂಬ ಸಂಸ್ಥೆಯನ್ನು ರಶ್ಮಿ ಅಯ್ಯಪ್ಪ ಪ್ರಾರಂಭಿಸಿದ್ದರು.…






