ವಿರಾಜಪೇಟೆ ಫೆ.23 NEWS DESK : ವಿರಾಜಪೇಟೆ ತಾಲ್ಲೂಕಿನ ಕರ್ನಾಟಕ ಕೇರಳ ಗಡಿಭಾಗದ ಮಾಕುಟ್ಟದಲ್ಲಿರುವ ಶ್ರೀ ಕಾಕತೋಡು ದೇವಿ ಕ್ಷೇತ್ರದ ಮಹೋತ್ಸವ ಮಾ.15 ಮತ್ತು 16 ರಂದು ಎರಡು ದಿನಗಳ ಕಾಲ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಉಪಾಧ್ಯಕ್ಷ ವಿಜಯಕುಮಾರ್ ತಿಳಿಸಿದರು. ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಶ್ರೀ ಕಾಕತೋಡು ದೇವಿಯ ಮಹೋತ್ಸವವನ್ನು ಸಂಭ್ರದಮಿಂದ ಆಚರಿಸಲಾಗುವುದು. ಕೊಡಗು ಜಿಲ್ಲೆಯ ಅಸಂಖ್ಯಾತ ಭಕ್ತಾಧಿಗಳನ್ನು ಅನುಗ್ರಹಿಸುತ್ತಿರುವ ದೇವಿ ಇದಾಗಿದೆ. ಕಾನನದ ನಡುವೆ ಇರುವ ದೇವಾಲಯದಲ್ಲಿ ದೇವಿ ಕಂಗೊಳಿಸುತ್ತಿದ್ದು, ರಸ್ತೆಯಲ್ಲಿ ವಾಹನ ಚಲಾಯಿಸುವ ಅಸಂಖ್ಯ ಭಕ್ತರನ್ನು ದೇವಿ ಸಲಹುತ್ತಿದ್ದಾಳೆ. ವರ್ಷಂಪ್ರತಿಯಂತೆ ವಾರ್ಷಿಕ ಹಬ್ಬ ನಡೆಸಲಾಗುತ್ತಿದ್ದು ಮೀನಾ ಮಾಸದ 2,2 ರಂದು ಅಂದರೆ ಮಾ.15, 16 ರಂದು ಹಬ್ಬದ ನಿಗಧಿಯಾಗಿದೆ ಎಂದರು. ಮಾ.15 ರಂದು ಬೆಳಿಗ್ಗೆ 6.30 ಗಂಟೆಗೆ ಗರ್ಭಗುಡಿಯ ಬಾಗಿಲು ತೆಗೆಯುವುದು, ದೇವಿಗೆ ಅಭಿಷೇಕ, ಗಣಪತಿ ಹೋಮ, ಮಧ್ಯಾಹ್ನದ ಪೂಜೆ, ಸಂಜೆ 5 ಗಂಟೆಗೆ ಗರ್ಭಗುಡಿಯ ಬಾಗಿಲು ತೆಗೆಯುವುದು ನಂತರ ಭಗವತಿ ಸೇವೆ, 6 ಗಂಟೆಗೆ…
ಲೇಖಕ: admin
ನಾಪೋಕ್ಲು ಫೆ.23 NEWS DESK : ಭಗವಂತ ಸುಂದರವಾದ ಭೂಮಿಯಲ್ಲಿ ಸ್ವರ್ಗವನ್ನು ನೀಡಿದ್ದಾನೆ. ಆದರೆ ಅದನ್ನು ನರಕ ಮಾಡಿಕೊಳ್ಳಬಾರದು ಎಂದು ಗೋಣಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಕೃಷ್ಣ ಚೈತನ್ಯ ಅವರು ಹೇಳಿದರು. ಇಕೋ ಕ್ಲಬ್ ಸಂಘದ ಚಟುವಟಿಕೆಯ ಅಂಗವಾಗಿ, ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪಕ್ಷಿ ಸಂಕುಲದ ಬಗ್ಗೆ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆಯನ್ನು ನೀಡಿ ಅವರು ಮಾತನಾಡಿದರು. ಪರಿಸರ ಸುರಕ್ಷಿತವಾಗಿ ನಮಗೆ ಮತ್ತು ನಮ್ಮ ಪೀಳಿಗೆಗೆ ಉಳಿಯಬೇಕಾದರೆ ಪಕ್ಷಿ ಸಂಕುಲವನ್ನು ಸುಸ್ಥಿತಿಯಲ್ಲಿ ಉಳಿಸಿ -ಬೆಳೆಸಬೇಕು ಎಂಬ ಕಿವಿಮಾತುಗಳ ಮೂಲಕ ಪಕ್ಷಿಗಳ ವೀಡಿಯೋಗಳನ್ನು ಪ್ರದರ್ಶಿಸುವ ಮೂಲಕ ಪಕ್ಷಿಗಳ ಆಹಾರ, ವಿಹಾರ, ಗೂಡು ಕಟ್ಟುವಿಕೆ, ಮೊಟ್ಟೆ ಇಡುವಿಕೆ, ಅವುಗಳ ಬದುಕು, ಕಾರ್ಯವೈಖರಿ, ಪರಿಸರಕ್ಕೆ ಅವುಗಳಿಂದ ಆಗುವ ಪ್ರಯೋಜನ, ಜೀವಿತಾವಧಿ… ಹೀಗೆ ಇನ್ನಿತರ ಉಪಯುಕ್ತ ವಿಷಯಗಳನ್ನು ವಿವರಿಸಿದರು. ಪಕ್ಷಿಗಳ ಜೀವನ ಶೈಲಿ, ಅವುಗಳ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಿದರು. ಕಾಡು ಬೆಳೆಸುವಲ್ಲಿ ಪಕ್ಷಿಗಳ ಪಾತ್ರ, ಮಾನವನಿಗೆ ಅವುಗಳಿಂದ ಆಗುವ ಪ್ರಯೋಜನಗಳನ್ನು ವಿವರಿಸಿ…
ನಾಪೋಕ್ಲು ಫೆ.23 NEWS DESK : ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಗ್ಗಾಲು ಗ್ರಾಮದ ವರ್ಷಿಣಿ ಪೂಜಾರಿ ಭಾಗವಹಿಸಿ, ಜಿಲ್ಲೆಗೆ ಕೀರ್ತಿ ತಂದ ಹಿನ್ನೆಲೆಯಲ್ಲಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಲಾಯಿತು. ಪಂಚಾಯತಿ ಮಾಜಿ ಅಧ್ಯಕ್ಷರಾದ ಕುಶನ್ ರೈ ಮಾತನಾಡಿ, ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗಿಯಾಗುವುದು ಅಷ್ಟು ಸಾಧಾರಣ ವಿಷಯವಲ್ಲ ಅದಕ್ಕೆ ತುಂಬಾ ಶ್ರಮ ಪಡಬೇಕು. ಎಲ್ಲರಿಗೆ ಈ ಸಾಧನೆ ಮಾಡಲು ಅವಕಾಶ ಸಿಗುವುದಿಲ್ಲ. ಬೆರಳಣಿಕೆಯಷ್ಟು ಜನ ಮಾತ್ರ ಇಂತಹ ಸಾಧನೆಯನ್ನು ಮಾಡಬಹುದು. ಅದರಲ್ಲಿ ನಮ್ಮ ಊರಿನವರೇ ಇದ್ದಾರೆ ಅದು ತುಂಬಾ ಹೆಮ್ಮೆಯ ವಿಷಯ ಎಂದರು. ಪಿಡಿಓ ಚಂದ್ರಮೌಳಿ ಮಾತನಾಡಿ, ಸಾಧನೆಗೆ ಕಠಿಣ ಪರಿಶ್ರಮ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಇದನ್ನೆಲ್ಲ ಗೆದ್ದು ಮುಂದೆ ಬಂದರೆ ಇಂಥ ಸಾಧನೆ ಮಾಡಲು ಸಾಧ್ಯ ಎಂದರು. ಅಲ್ಲದೆ ಒಂದು ಹೆಣ್ಣು ಮಗಳು ಸಾಧನೆ ಮಾಡಿದ್ದು ಎಲ್ಲರಿಗೆ ಹೆಮ್ಮೆಯ ವಿಷಯ ಎಂದರು. ವೈಯಕ್ತಿಕವಾಗಿ ಕಿರು ಕಾಣಿಕೆ ನೀಡಿ ಗೌರವಿಸಿದರು. ಪುದಿಯೋಕ್ಕಡ ರಮೇಶ್…
ನಾಪೋಕ್ಲು ಫೆ.23 NEWS DESK : ಹಿಂದೂ ಸಂಘಟನೆಯ ಮೂಲಕ ರಾಷ್ಟ್ರವನ್ನು ಕಟ್ಟುವ ಕೆಲಸವನ್ನು ಮಾಡುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಸಹ ಕಾರ್ಯವಾಹಕ ಮಿರನ್ ಕುಟ್ಟಪ್ಪ ಹೇಳಿದರು. ಮದೆನಾಡಿನಲ್ಲಿ ಆಯೋಜಿಸಲಾಗಿದ್ದ ಹಿಂದೂ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರದ ಅನೇಕ ಸವಾಲು ಮತ್ತು ಸಮಸ್ಯೆಗಳಿಗೆ ಉತ್ತರವನ್ನು ನೀಡುತ್ತಾ ನೂರು ವರ್ಷಗಳು ತುಂಬುವ ಸಂದರ್ಭದಲ್ಲಿ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಬಲಾಢ್ಯ ಭಾರತವನ್ನು ಕಟ್ಟಿದೆ. ಭವಿಷ್ಯದಲ್ಲಿ ವಸುದೈವ ಕುಟುಂಬ ಎನ್ನುವ ಕಲ್ಪನೆಯನ್ನು ಸಾಕಾರಗೊಳಿಸುವ ಸಲುವಾಗಿ ಜಗತ್ತೇ ಒಂದು ಕುಟುಂಬ ಇದು ಹಿಂದುತ್ವದ ಪರಿಕಲ್ಪನೆ ಕೇವಲ ಒಂದು ಸಂಘಟನೆ ಒಂದು ರಾಷ್ಟ್ರವನ್ನು ಕಟ್ಟಲು ಸಾಧ್ಯವಿಲ್ಲ ಎಂದರು. ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಭಾರತವನ್ನು ಪ್ರೀತಿಸಬೇಕು ಆ ಮೂಲಕ ರಾಷ್ಟ್ರಕಟ್ಟುವ ಕಾರ್ಯದಲ್ಲಿ ತಮ್ಮಿಂದಾಗುವ ಕೆಲಸವನ್ನು ಕೈಗೊಳ್ಳಬೇಕು ಸಂಘಕ್ಕೆ ನೂರು ವರ್ಷ ತುಂಬಿರುವ ಈ ಸಂದರ್ಭದಲ್ಲಿ ಪಂಚ ವಿಷಯಗಳಲ್ಲಿ ಪರಿವರ್ತನೆಯನ್ನು ಸಂಗ್ರಹಿಸಿದೆ ಕುಟುಂಬ ಪ್ರಬೋಧನ, ಸಾಮಾಜಿಕ ಪರಿವರ್ತನೆ, ಸ್ವದೇಶಿ ಭಾವನೆ, ಪರಿಸರ ಕಾಳಜಿ,…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯ ಆರಂಭದಲ್ಲೇ ಬಿಸಿಲಿನ ಪ್ರತಾಪ ಮಿತಿಮೀರಿದ್ದು, ಜನರು ಬೆವರುವಂತಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಗಳ ಪ್ರಕಾರ, ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ತಾಪಮಾನವು ವಾಡಿಕೆಗಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು, ರಾಜ್ಯಾದ್ಯಂತ ಬಿಸಿಲ ಬೇಗೆ ಮತ್ತಷ್ಟು ಕಠಿಣವಾಗಲಿದೆ. ಜಿಲ್ಲಾವಾರು ತಾಪಮಾನದ ಸ್ಥಿತಿಗತಿ ಪ್ರಸ್ತುತ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶವು ಈಗಾಗಲೇ ಏರಿಕೆ ಕಂಡಿದೆ. ಹಾವೇರಿ, ಬಾಗಲಕೋಟೆ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35°C ಆಸುಪಾಸಿನಲ್ಲಿದ್ದರೆ, ಕಲಬುರಗಿಯಲ್ಲಿ 36°C ದಾಟಿದೆ. ಉತ್ತರ ಒಳನಾಡು: ಮಾರ್ಚ್-ಏಪ್ರಿಲ್ ಅವಧಿಯಲ್ಲಿ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಉಷ್ಣಾಂಶವು 42°C ನಿಂದ 45°C ವರೆಗೆ ತಲುಪುವ ಭೀತಿ ಇದೆ. ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲೂ ಈ ಬಾರಿ ಧಗೆ ಹೆಚ್ಚಿರಲಿದ್ದು, ಗರಿಷ್ಠ ತಾಪಮಾನ 39°C ತಲುಪುವ ಸಂಭವವಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ ತಿಳಿಸಿದ್ದಾರೆ. ಅಂತರ್ಜಲ ಕುಸಿತದ ಭೀತಿ ತಾಪಮಾನ ಏರಿಕೆಯ ಬೆನ್ನಲ್ಲೇ…
ಕುಶಾಲನಗರ, NEWS DESK ಫೆ.23: ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ವ್ಯಸನಮುಕ್ತರಾಗಿ ಆರೋಗ್ಯದ ಕಡೆ ಹೆಚ್ಚು ನಿಗಾ ವಹಿಸುವ ಮೂಲಕ ಸದೃಢ, ಸಮರ್ಥ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಬೇಕೆಂದು ಕೂಡಿಗೆ ಸರ್ಕಾರಿ ಅಸ್ಪತ್ರೆಯ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ ಕರೆಕೊಟ್ಟರು. ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮದಲಾಪುರ ಗ್ರಾಮದಲ್ಲಿ ಯುವಕರಿಗಾಗಿ ನನ್ನ ಭಾರತ – ಡಿಜಿಟಲ್ ಸಾಕ್ಷರತೆ ಎಂಬ ಧ್ಯೇಯಘೋಷದೊಂದಿಗೆ ಒಂದು ವಾರ ಕಾಲ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ಶಿಬಿರಾರ್ಥಿಗಳ ಆರೋಗ್ಯ ಪರಿಶೀಲಿಸಿ ಮಾತನಾಡಿದ ಅವರು, ತಂತ್ರಜ್ಞಾನ ಹಾಗೂ ವಿಜ್ಞಾನದ ಈ ಯುಗದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ಶಿಕ್ಷಣದ ಅರಿವು ಪಡೆಯುವ ಮೂಲಕ ಹೆಚ್ಚು ಜ್ಞಾನವಂತರಾಗಿ ಶಿಕ್ಷಣದ ಗುರಿ ಸಾಧಿಸಲು ಕರೆಕೊಟ್ಟ ಅವರು, ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ತರ ಪಾತ್ರ ವಹಿಸುತ್ತದೆ ಎಂದರು. ಶಿಬಿರಾಧಿಕಾರಿಗಳಾದ ಕೆ.ಪಿ.ವಿನಯ್, ಜಿ.ಜಯಣ್ಣ, ಮದಲಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಂ. ರೇಣುಕಾ,…
ಮಡಿಕೇರಿ NEWS DESK ಫೆ.23 : ಇಂದಿನ ಆಧುನಿಕ ನಾಗಲೋಟದಿಂದ ಯುವಜನರು ಪುಸ್ತಕ ಸಂಸ್ಕೃತಿಯಿಂದ ದೂರ ಸರಿಯುತ್ತಿದ್ದು, ಯುವಜನರನ್ನು ಪುಸ್ತಕ ಓದುವಂತಾಗಲು ಹತ್ತಿರಕ್ಕೆ ತರುವಲ್ಲಿ ‘ಅಂಗಳದಲ್ಲಿ ತಿಂಗಳ ಪುಸ್ತಕ ಹಾಗೂ ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ಅವರು ತಿಳಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಕನ್ನಡ ಪುಸ್ತಕ ಪ್ರಾಧಿಕಾರದ ಯೋಜನೆ “ಮನೆಗೊಂದು ಗ್ರಂಥಾಲಯ” ಕರಪತ್ರ ಬಿಡುಗಡೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು. ಯುವಜನರಲ್ಲಿ ಪುಸ್ತಕ ಸಂಸ್ಕೃತಿ ಭಿತ್ತಬೇಕು ಎಂಬ ಉದ್ದೇಶದಿಂದ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 30 ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಬಾಕಿ ಇದೆ ಎಂದು ಹೇಳಿದರು. ಜ್ಞಾನಪೀಠ ಪ್ರಶಸ್ತಿ ಪಡೆದವರು ಸೇರಿದಂತೆ ಹಲವು ಸಾಹಿತಿ ಹಾಗೂ ಕವಿಗಳ ಹೆಸರಿನಲ್ಲಿ ವಿಶೇಷ…
ಸೋಮವಾರಪೇಟೆ NEWS DESK ಫೆ.23 : ವಿಶ್ವಕ್ಕೆ ಹಿಂದುತ್ವ ಸಾರಿದ ರಾಷ್ಟ್ರ ಭಾರತ ಎಂದು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪುತ್ತೂರು ರವೀಂದ್ರ ಹೆಮ್ಮ ವ್ಯಕ್ತಪಡಿಸಿದರು. ಪಟ್ಟಣದ ಬೇಳೂರು ಮಂಡಲದ ವತಿಯಿಂದ ಏರ್ಪಡಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಅತಿಥಿಯಾಗಿ ದಿಕ್ಸೂಚಿ ಭಾಷಣ ಮಾಡಿದರು. ಹಿಂದುತ್ವದ ಹರಿಕಾರ, ಪ್ರತಿಪಾದಕ ಸ್ವಾಮೀವಿವೇಕಾನಂದರು ಅಂದು ಚಿಕಾಗೋ ನಗರದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಮಾತನಾಡಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದರು. ಸನಾತನ ಹಿಂದೂ ಧರ್ಮ ಉಳಿದರೆ ಭಾರತ ಉಳಿಯುತ್ತದೆ ಎಂಬುದನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕೆಂದರು .ವಿಶ್ವದ ಇತರೆ ರಾಷ್ಟ್ರಗಳು ವ್ಯವಹಾರಿಕ ದೇಶಗಳಾದರೆ ಭಾರತ ಮಾತೃತ್ವ ಹಾಗೂ ಭಾತೃತ್ವದ ದೇಶವಾಗಿದೆ, ಬೇರೆ ರಾಷ್ಟ್ರಗಳು ತಮ್ಮ ಬದುಕಿಗಾಗಿ ಪರರನ್ನು ಕೊಲ್ಲುತ್ತಿವೆ. ಕೋವಿಡ್ ಸಂದರ್ಭದಲ್ಲಿ ಭಾರತ ಕಂಡುಹಿಡಿದ ಲಸಿಕೆಯನ್ನು ಇತರೆ ರಾಷ್ಟ್ರಗಳಿಗೂ ನೀಡುವ ಮೂಲಕ ಭಾರತ ಮಾತ್ರ ತಮ್ಮೊಡನೆ ಇತರರನ್ನು ಬದುಕಿಸುತ್ತಿದೆ ಎಂದ ಅವರು ಅದಕ್ಕಾಗಿಯೇ ಹಿಂದುತ್ವ ಉಳಿಯಬೇಕೆಂದರು. ಕಾರ್ಯಕ್ರಮದ ಸಾನಿಧ್ಯ ವಹಿಸಿದ…
ಮಡಿಕೇರಿ NEWS DESK ಫೆ.23 : ಮಡಿಕೇರಿ ತಾಲ್ಲೂಕು ನೋಟರಿಗಳಾಗಿ ಮಡಿಕೇರಿ ವಕೀಲರ ಸಂಘದ ಅಚ್ಚಾಂಡಿರ ಪವನ್ ಪೆಮ್ಮಯ್ಯ ಹಾಗೂ ಸುನಿಲ್ ಕುಮಾರ್ ಜೆ. ನೇಮಕಗೊಂಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ಕಂದಾಯ ತಾಲ್ಲೂಕಿಗೆ ಹೆಚ್ಚುವರಿಯಾಗಿ ಸೃಷ್ಟಿಸಿರುವ ಎರಡು ನೋಟರಿ ಹುದ್ದೆಗಳಿಗೆ ಸರಕಾರ ಇವರನ್ನು ನೇಮಕ ಮಾಡಿದೆ. ಅಚ್ಚಾಂಡಿರ ಪವನ್ ಪೆಮ್ಮಯ್ಯ ಅವರು ಮಡಿಕೇರಿ ವಕೀಲರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಮಾಜ ಸೇವೆಯಲ್ಲೂ ಸಕ್ರಿಯರಾಗಿದ್ದಾರೆ.
ಮಡಿಕೇರಿ NEWS DESK ಫೆ.23 : ರಾಜ್ಯದಲ್ಲಿ ದಲಿತರ ಒಳ ಮೀಸಲಾತಿ ಮತ್ತು ಹಕ್ಕುಗಳ ಕುರಿತು ದಲಿತ ಸಮುದಾಯಗಳು ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಡಿಕೇರಿಯಲ್ಲಿ ಹಮ್ಮಿಕೊಂಡಿದ್ದ ಕೊಡಗು ಜಿಲ್ಲಾ ದಲಿತ ಸಮುದಾಯದ ಸ್ವಾಭಿಮಾನ ಸಮಾವೇಶ, ‘ಕರ್ನಾಟಕ ದಲಿತ ರತ್ನ’ ಮತ್ತು ‘ಕೊಡಗು ರತ್ನ’ ಪ್ರಶಸ್ತಿ ಪ್ರದಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರಕಾರ ಒಳ ಮೀಸಲಾತಿ ಜಾರಿಗೆ ಮುಂದಾಗಿದೆ. ಆದರೆ ಅದರ ರೂಪು-ರೇಷೆ, ನೀತಿ-ನಿಯಮಗಳು ಇನ್ನೂ ಜಾರಿಗೆ ಬಂದಿಲ್ಲ. ಹೀಗಿದ್ದರೂ ಬಿಜೆಪಿ, ಆರ್ಎಸ್ಎಸ್ ಮತ್ತದರ ಅಂಗ ಸಂಘಟನೆಗಳು ಅಪಪ್ರಚಾರ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಮಾತನಾಡಿ, ಪ್ರಪಂಚದ ಶ್ರೇಷ್ಠ ದಾಖಲೆ ಎಂದೇ ಕರೆಯಲಾಗುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್…






