ಲೇಖಕ: admin

ಮಡಿಕೇರಿ ಸೆ.4 NEWS DESK : ಹೆರವಾನಾಡು ಗ್ರಾಮದ ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಹಗ್ಗ ಜಗ್ಗಾಟ, ಓಟ, ಸಂಗೀತ ಕುರ್ಚಿ, ಮಡಿಕೆ ಒಡೆಯುವುದು ಸೇರಿದಂತೆ ಸಾಂಪ್ರದಾಯಿಕ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಮಕ್ಕಳು, ಮಹಿಳೆಯರು, ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಮೆರುಗು ತಂದರು. ಸಾಂಪ್ರದಾಯಿಕ ಆಚರಣೆಗಳೊಂದಿಗೆ ಕ್ರೀಡಾ ಚಟುವಟಿಕೆಗಳನ್ನು ಸಂಯೋಜಿಸುವ ಮೂಲಕ ಯುವ ಪೀಳಿಗೆಗೆ ಕೊಡವ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಪ್ರಯತ್ನ ಮಾಡಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿಯ ಅಧ್ಯಕ್ಷರಾದ ಚಂದ್ರ ಉಡೋತ್, ಕಾರ್ಯದರ್ಶಿ ನವೀನ್, ಖಜಾಂಚಿ ಶಬರಿ, ಸಹ ಖಜಾಂಚಿ ದಿನೇಶ್, ಪದಾಧಿಕಾರಿಗಳಾದ ರಘು, ಜಗನ್ನಾಥ್, ರಾಜು, ಕಿಶು, ಮಾಜಿ ಕಾರ್ಯದರ್ಶಿ ಕೇಶಿನಿ ಹಾಗೂ ಊರಿನ ಹಿರಿಯರು, ಯುವಕರು ಹಾಗೂ ಮಕ್ಕಳು ಭಾಗವಹಿಸಿ ಕೈಲ್ ಪೊಳ್ದ್ ಆಚರಣೆಯನ್ನು ಯಶಸ್ವಿಗೊಳಿಸಿದರು.

Read More

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಮಾಜಿ ಶಾಸಕಿ ವೀಣಾ ಅಚ್ಚಯ್ಯ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ. ಬೋಪಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣ್ಯ ಸೇರಿದಂತೆ ಕಸ್ತೂರಿರಂಗನ್ ಹೋರಾಟ ಸಮಿತಿಯ ಸದಸ್ಯರು, ನಾಡಿನ ಪ್ರಮುಖರು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು. ಸಭೆಯಲ್ಲಿ ಸಾರ್ವಜನಿಕರು ತಮ್ಮ ಆತಂಕ, ಅಭಿಪ್ರಾಯ ಹಾಗೂ ಸಲಹೆಗಳನ್ನು ವ್ಯಕ್ತಪಡಿಸಿದರು. ಕಸ್ತೂರಿರಂಗನ್ ವರದಿ ಜಾರಿಯಿಂದ ಕೊಡಗು ಜಿಲ್ಲೆಯ ಜನಸಾಮಾನ್ಯರು ಹಾಗೂ ರೈತರಿಗೆ ಉಂಟಾಗಬಹುದಾದ ಸಮಸ್ಯೆಗಳ ಕುರಿತು  ಚರ್ಚೆ ನಡೆಯಿತು. ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಮಾತನಾಡಿದ ಶಾಸಕರು, ಕಸ್ತೂರಿರಂಗನ್ ವರದಿಯನ್ನು ವಿರೋಧಿಸಬೇಕೆಂಬ ಅಭಿಪ್ರಾಯವನ್ನು ಸಭೆಯಲ್ಲಿ ಬಹುತೇಕರು ವ್ಯಕ್ತಪಡಿಸಿದ್ದು,…

Read More

ಬೆಂಗಳೂರು, ಸೆ.4 NEWS DESK : ರಾಜ್ಯದ ಯುವಶಕ್ತಿಯನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ​‘ಭಾರತ್ ಜೋಡೋ’ ಕುರಿತು ಕಲಾವಿದರಿಂದ ರೂಪಗೊಂಡ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಪ್ಪಿರುವ ಲೋಗೊವನ್ನು ಉಪ ಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರು ಇಂದು ಬಿಡುಗಡೆ ಮಾಡಿದರು. ರಾಜ್ಯದ ಯುವಜನರನ್ನು ಒಂದೆಡೆ ಸೇರಿಸಿ, ಒಗ್ಗಟ್ಟು, ಸಾಮಾಜಿಕ ಸೌಹಾರ್ದತೆ, ಜವಾಬ್ದಾರಿಯುತ ಪೌರತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ರೂಪುಗೊಂಡ ಒಂದು ಪ್ರಮುಖ ಯೋಜನೆ ಇದಾಗಿದೆ. ​ಈ ಪ್ರಮುಖ ಯೋಜನೆಗೆ ಒಂದು ವಿಶಿಷ್ಟ ಗುರುತನ್ನು ನೀಡುವ ನಿಟ್ಟಿನಲ್ಲಿ, ‘ಭಾರತ್ ಜೋಡೋ’ ಲಾಂಛನವನ್ನು (Logo) ವಿನ್ಯಾಸಗೊಳಿಸಲು ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕರ್ನಾಟಕದಾದ್ಯಂತ ಒಟ್ಟು 255 ಲಾಂಛನ ವಿನ್ಯಾಸಗಳು ಸ್ವೀಕೃತವಾಗಿದ್ದವು. ​ಸಲ್ಲಿಕೆಯಾದ ವಿನ್ಯಾಸಗಳನ್ನು ಪರಿಶೀಲಿಸಿ, ಆಯ್ಕೆ ಪ್ರಕ್ರಿಯೆಯು ನಿಷ್ಪಕ್ಷಪಾತವಾಗಿ ಹಾಗೂ ವೃತ್ತಿಪರವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ‘ಕರ್ನಾಟಕ ಚಿತ್ರಕಲಾ ಪರಿಷತ್’ಗೆ ಈ ಜವಾಬ್ದಾರಿಯನ್ನು ವಹಿಸಲಾಗಿತ್ತು. ವಿವರವಾದ ಮೌಲ್ಯಮಾಪನದ ನಂತರ, ಎರಡು ಲಾಂಛನಗಳನ್ನು…

Read More

ಮಡಿಕೇರಿ ಸೆ.4 NEWS DESK : 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಕೆ.ಬಾಡಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸರಸ್ವತಿ ಬಿ.ಕೆ, ಅಯ್ಯಂಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಎಸ್.ಶಾಂತಿ ಮತ್ತು ಮೂರ್ನಾಡು ಪ್ರೌಢ ಶಾಲೆಯ ಪ್ರಶಾಂತ್ ಎಸ್.ಡಿ. ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಉಮೇಶ್ ಕುಮಾರ್ ಕೆ.ಪಿ., ನೆಲ್ಲಿಹುದಿಕೇರಿ ಕೆಪಿಎಸ್ ಪ್ರಾಥಮಿಕ ಶಾಲೆಯ ರೆಮ್ಮಿ ಪಿ.ಸಿ., ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ರತ್ನ ಕುಮಾರ್ ಕೆ.ಆರ್. ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಬಾಳುಗೋಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇರಿ ಲೋಬೋ, ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಲಿಮ ಪಿ.ಹೆಚ್. ಹಾಗೂ ಪೊನ್ನಂಪೇಟೆ ಕೆಪಿಎಸ್ ಪ್ರೌಢಶಾಲೆಯ ಅನ್ರಿತಾ ಫುಟಾರ್ಡೊ ಅವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ…

Read More

ಮಡಿಕೇರಿ ಸೆ.5 NEWS DESK : ಉತ್ತರ ಪ್ರದೇಶದ ಅಯೋಧ್ಯ ಸಮೀಪದ ಡಾ. ಬಿ.ಆರ್.ಅಂಬೇಡ್ಕರ್ ಇಂಟರ್‌ನ್ಯಾಷನಲ್ ಹಾಕಿ ಟರ್ಫ್ ಮೈದಾನದಲ್ಲಿ ನಡೆದ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯಗಳ 19 ವರ್ಷದೊಳಗಿನ ಬಾಲಕಿಯರ ರಾಷ್ಟ್ರೀಯ ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಆಟಗಾರ್ತಿಯರನ್ನು ಒಳಗೊಂಡ ಹೈದರಾಬಾದ್ ವಲಯ ತಂಡವು ರನ್ನರ್ ಅಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.  ದೇಶದ ಒಂಬತ್ತು ವಲಯಗಳ ತಂಡಗಳ ನಡುವೆ ರಾಷ್ಟ್ರೀಯ ಪ್ರಶಸ್ತಿಗಾಗಿ ನಡೆದ ಈ ಪಂದ್ಯಾವಳಿಯಲ್ಲಿ ಕೊಡಗಿನ ಗಾಳಿಬೀಡು ನವೋದಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತೃಪ್ತ ಅವರ ನಾಯಕತ್ವದಲ್ಲಿ ಹೈದರಾಬಾದ್ ವಲಯ ತಂಡವು ಅತ್ಯುತ್ತಮ ಪ್ರದರ್ಶನ ನೀಡಿತು. ಲೀಗ್ ಹಂತದಲ್ಲಿ ತಾನಾಡಿದ ಎಲ್ಲಾ ಪಂದ್ಯಗಳಲ್ಲಿ ಅಮೋಘ ಆಟವಾಡಿದ ಹೈದರಾಬಾದ್ ವಲಯ ತಂಡವು ಸೆಮಿಫೈನಲ್‌ನಲ್ಲಿ ಚಂಡೀಗಢ ವಲಯ ತಂಡವನ್ನು 3-0 ಗೋಲುಗಳಿಂದ ಮಣಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿತು. ಫೈನಲ್ ಪಂದ್ಯದಲ್ಲಿಯೂ ಹೈದರಾಬಾದ್ ವಲಯ ತಂಡವು ಕರಾರುವಕ್ಕಾದ ಆಟ ಪ್ರದರ್ಶಿಸಿತು. ಆರಂಭದಲ್ಲಿ ಮುನ್ನಡೆ…

Read More

ಕುಶಾಲನಗರ, NEWS DESK ಸೆ. 4: ಮಹಿಳೆಯರು ಸರ್ಕಾರದ ಹಾಗೂ ಸಂಘ-ಸಂಸ್ಥೆಗಳ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು. ಅವರು ಕುಶಾಲನಗರ ಸಮೀಪದ ಗೊಂದಿ ಬಸವನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶನೈಶ್ವರ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ನಡೆದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಆದ್ಯ ಕರ್ತವ್ಯ. ಶಿಕ್ಷಣ ಶಾಶ್ವತ ಆಸ್ತಿಯಾಗಿದ್ದು, ಅದರ ಮೂಲಕ ಜೀವನದ ಗುರಿಯನ್ನು ತಲುಪಲು ಸಾಧ್ಯ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜದ ತಳಮಟ್ಟದ ಜನರಿಗೆ ಅಗತ್ಯವಿರುವ ಆರ್ಥಿಕ ಹಾಗೂ ಸಾಮಾಜಿಕ ಯೋಜನೆಗಳನ್ನು ತಲುಪಿಸುತ್ತಿರುವ ಬಗ್ಗೆ ಶಾಸಕರು ಹೆಮ್ಮೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು…

Read More

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ ಸಲಗ ದಾಳಿ ನಡೆಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಗಾಯಾಳುವನ್ನು ಅಭಿ (35) ಎಂದು ಗುರುತಿಸಲಾಗಿದ್ದು, ಮೂಲತಃ ನಾಪೋಕ್ಲು ಸಮೀಪದ ಗ್ರಾಮದವರಾಗಿದ್ದಾರೆ. ತಮ್ಮ ಅಣ್ಣನನ್ನು ನೋಡಲು ಒಂಟಿ ಅಂಗಡಿ ಗ್ರಾಮಕ್ಕೆ ಬಂದಿದ್ದ ಸಂದರ್ಭದಲ್ಲಿ ಕಾಫಿ ತೋಟದ ಮಾರ್ಗವಾಗಿ ಬಂದ ಕಾಡಾನೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ. ಆನೆ ದಾಳಿಯ ಪರಿಣಾಮ ಅಭಿ ಅವರ ಸೊಂಟದ ಭಾಗಕ್ಕೆ ತೀವ್ರ ಗಾಯವಾಗಿದೆ. ಇದೇ ವೇಳೆ ರಸ್ತೆಯ ಮಾರ್ಗವಾಗಿ ಬರುತ್ತಿದ್ದ ಆಟೋದಲ್ಲಿದ್ದವರು ಘಟನೆಯನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗಾಯಾಳುವನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.…

Read More

ಫಿಲಡೆಲ್ಫಿಯಾ, ಅಮೆರಿಕ / ಮೈಸೂರು, NEWS DESK ಸೆ. 4, 2026: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ AKKA Silver Jubilee World Kannada Conference 2026ರಲ್ಲಿ ಅಧಿಕೃತವಾಗಿ ಭಾಗವಹಿಸಿ, ವಿವಿಧ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ತೊಡಗಿಸಿಕೊಂಡಿರುವ ನಡುವೆಯೂ, ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟಗಳ ಭವಿಷ್ಯಕ್ಕೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 4ರಂದು ಭಾರತದಲ್ಲಿ ನಡೆಯಲಿರುವ ಈ ಸಭೆಯು ಅಮೆರಿಕದ ಸಮಯದ ಪ್ರಕಾರ ಮುಂಜಾನೆ ಸುಮಾರು 4 ಗಂಟೆಗೆ ನಡೆಯಲಿದೆ. ಅಮೆರಿಕದಲ್ಲಿನ ತಮ್ಮ ಅಧಿಕೃತ ಕಾರ್ಯಕ್ರಮಗಳು ಹಾಗೂ ಅತ್ಯಂತ ಮುಂಜಾನೆಯ ಸಮಯದ ನಡುವೆಯೂ ಸಭೆಯಲ್ಲಿ ಭಾಗವಹಿಸಲು ಯದುವೀರ್ ಅವರು ಅಗತ್ಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದು ಕೊಡಗು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳ ಜನರ ಸಮಸ್ಯೆಗಳಿಗೆ ಅವರು ನೀಡುತ್ತಿರುವ ಮಹತ್ವವನ್ನು ಮತ್ತೊಮ್ಮೆ ತೋರಿಸುತ್ತದೆ. ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಏಳನೇ…

Read More

ಕುಶಾಲನಗರ, NEWS DESK ಸೆ.4: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಘಟಕ ಹಾಗೂ ಕುಶಾಲನಗರ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸೆ.8ರಂದು (ಮಂಗಳವಾರ) ಬೆಳಿಗ್ಗೆ 10.45 ಗಂಟೆಗೆ ಇಲ್ಲಿನ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಡಗಿನ ತ್ರಿಭಾಷಾ ಸಾಹಿತಿ ದಿವಂಗತ ವಿ.ಎಸ್. ರಾಮಕೃಷ್ಣ ಅವರ ದತ್ತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ರುದ್ರಪ್ಪ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್ ಅವರು “ಕೊಡಗಿನ ತ್ರಿಭಾಷಾ ಸಾಹಿತಿ ದಿವಂಗತ ವಿ.ಎಸ್. ರಾಮಕೃಷ್ಣ ಅವರ ಕೃತಿಗಳು” ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ತಾಲ್ಲೂಕು ಕಸಾಪ ಕೋಶಾಧಿಕಾರಿ…

Read More

ಸುಂಟಿಕೊಪ್ಪ, NEWS DESK ಸೆ. 4: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿದ್ದು, ಅದನ್ನು ತಡೆಹಿಡಿದಿರುವ ಹಾಗೂ ಪುನರ್‌ಪರಿಶೀಲನೆಗಾಗಿ ಉಪಸಮಿತಿ ರಚಿಸಿರುವುದನ್ನು ವಿರೋಧಿಸಿ ಸೆ. 8ರಂದು ‘ಬೆಂಗಳೂರು ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಹೇಳಿದರು. ಶುಕ್ರವಾರ ಬೆಳಿಗ್ಗೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿವಿಧ ಪಂಚಾಯಿತಿ ನೌಕರರು ನಡೆಸಿದ ಸಾಂಕೇತಿಕ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, “ನಮ್ಮ ಬೇಡಿಕೆಯನ್ನು ಮನಗಂಡ ರಾಜ್ಯ ಸರ್ಕಾರವು ದಿನಾಂಕ 22-05-2026ರ ಅಧಿಸೂಚನೆಯಂತೆ ರೂ. 21,600 ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಈ ವೇತನವನ್ನು ತಡೆಹಿಡಿದು, ಪುನರ್‌ಪರಿಶೀಲನೆಗಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಉಪಸಮಿತಿಯನ್ನು ರಚಿಸಿದೆ. ಈ ಉಪಸಮಿತಿಯನ್ನು ಕೂಡಲೇ ವಿಸರ್ಜಿಸಬೇಕು. ವೇತನ ಸೇರಿದಂತೆ ಇತರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ನಿಟ್ಟಿನಲ್ಲಿ ಸೆ. 8ರಂದು ವಿಧಾನಸೌಧ ಚಲೋ ಕಾರ್ಯಕ್ರಮ…

Read More