ಲೇಖಕ: admin

ಮಡಿಕೇರಿ NEWS DESK ಜೂ.8 : ವಿರಾಜಪೇಟೆ ಕ್ಷೇತ್ರದ ಜನಸ್ನೇಹಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ಸಚಿವ ಸ್ಥಾನ ಸಿಗಲಿದೆ ಎಂದು ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ವಿಶ್ವಾಸ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್ ಅಧ್ಯಕ್ಷ ಎ.ಜೆ.ಬಾಬು ಅವರು ಮೊದಲ ಸಂಪುಟ ರಚನೆಯ ಸಂದರ್ಭವೇ ಪೊನ್ನಣ್ಣ ಅವರು ಸಚಿವರಾಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದರೆ ಸಚಿವ ಸ್ಥಾನ ಘೋಷಣೆಯಾಗಿಲ್ಲ, ಇದರಿಂದ ನಾವು ನಿರಾಶೆಗೊಂಡಿಲ್ಲ. ಬದಲಿಗೆ ಅತ್ಯಂತ ತಾಳ್ಮೆ ಮತ್ತು ವಿಶ್ವಾಸದೊಂದಿಗೆ ಸಚಿವ ಸಂಪುಟ ವಿಸ್ತರಣೆಯನ್ನು ಎದುರು ನೋಡುತ್ತಿದ್ದೇವೆ. ಕರ್ನಾಟಕದ ಆರ್ಥಿಕತೆ, ಪರಿಸರ ವ್ಯವಸ್ಥೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿರುವ ಕೊಡಗು ಜಿಲ್ಲೆಯ ಬೇಡಿಕೆಗೆ ಸೂಕ್ತ ಮನ್ನಣೆ ದೊರೆಯುತ್ತದೆ ಎನ್ನುವ ವಿಶ್ವಾಸ ನಮ್ಮಲ್ಲಿದೆ ಎಂದು ತಿಳಿಸಿದ್ದಾರೆ. ಸಚಿವ ಸಂಪುಟ ರಚನೆಗೆ ಮೊದಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್…

Read More

ಮಡಿಕೇರಿ ಜೂ.6 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂದಿಸುವ ಬಗ್ಗೆ ತೀರ್ಮಾನಿಸಲಾಗಿರುತ್ತದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ಆದ್ದರಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ…

Read More

ಮಡಿಕೇರಿ ಜೂ.6 NEWS DESK : ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12-ಪಾಲಿಬೆಟ್ಟ, ಎಪ್13- ಹೊಸೂರು, ಫೀಡರ್‍ನಲ್ಲಿ ಜೂನ್, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊಸೂರು, ಜಾಗರಿ, ಗದ್ದೆಮನೆ, ಬೆಟ್ಟಗೇರಿ, ಲೋಪಮುದ್ರ ಆಸ್ಪತ್ರೆ ವ್ಯಾಪ್ತಿ, ಅತ್ತೂರು, ಪಾಲಿಬೆಟ್ಟ, ಹುಂಡಿ, ಚೆನ್ನಯ್ಯನಕೋಟೆ, ಅಬ್ಬೂರು, ಅಂಚಿಕಾಡು, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಜೂ.6 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲೆಯ ನಡಿಗೆ ಜನರ ಬಳಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಪರಿಚಯಿಸುತ್ತಿರುವುದು ಅದ್ಭುತ ಕಲ್ಪನೆ ಎಂದು ತೆನ್ನಿರ ಮೈನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನವೀನ ಕಾರ್ಯಕ್ರಮದ ಆರಂಭಿಕ ಕಾರ್ಯಕ್ರಮವನ್ನು ಮಡಿಕೇರಿ ನಗರದ ರಿಲೆಯನ್ಸ್ ಮಾಲ್ ನಲ್ಲಿ ಏರ್ಪಡಿಸಿದ್ದು, ಕಾರ್ಯಕ್ರಮದಲ್ಲಿ ಸ್ಯಾಕ್ಸೋ ಪೋನ್ ವಾದ್ಯವನ್ನು ಅಸ್ವಾದಿಸಿ ಮಾತನಾಡಿದ ತೆನ್ನಿರ ಮೈನಾ ಇಂತಹ ಕಾರ್ಯಕ್ರಮಗಳಿಗೆ ಪ್ರಚಾರ ಪಡಿಸಿದರೆ ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಆನಂದಿಸುತ್ತಾರೆ ಎಂದು ಹೇಳಿದರು. ಮೊದಲು ರಾಜಾಶ್ರಯ ,ನಂತರ ಕಲಾ ಮಂದಿರ,ದೈವಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಾತ್ರ ವೀಕ್ಷಿಸಲು ಮತ್ತು ಆಲಿಸಲು ಸಾಧ್ಯವಾಗಿದ್ದ ಕಲಾ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ಎಲ್ಲರಿಗೂ ಅನುಭವಿಸಲು ಅವಕಾಶ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗೆ ಅಭಿನಂದನೆಗಳನ್ನು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ರವರು ಪ್ರತಿ ತಿಂಗಳ ಮೊದಲನೆ ಶನಿವಾರ ಜಿಲ್ಲೆಯ ಜನನಿಬಿಡ ಪ್ರದೇಶಗಳಲ್ಲಿ ಈ…

Read More

ಮಡಿಕೇರಿ ಜೂ.6 NEWS DESK : ಭಾರತ ಚುನಾವಣಾ ಆಯೋಗವು ದಿನಾಂಕ:14-05-2026ರ ಪತ್ರಿಕಾ ಪ್ರಕಟಣೆಯ ಮೂಲಕ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ಕೈಗೊಳ್ಳಲು ಕಾರ್ಯಕ್ರಮ ವೇಳಾಪಟ್ಟಿ ಹೊರಡಿಸಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ 2026 ಅಕ್ಟೋಬರ್ 1 ನ್ನು ಘೋಷಿಸಿದ್ದು, ಜೂ.20 ರಿಂದ 29ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂ.30 ರಿಂದ ಜು.29ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ, ಆಗಸ್ಟ್, 5 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ.5 ರಿಂದ ಸೆ.4ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.5 ರಿಂದ ಅಕ್ಟೋಬರ್, 3 ರವರೆಗೆ ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ…

Read More

ಮಡಿಕೇರಿ ಜೂ.6 NEWS DESK  : ಕರ್ನಾಟಕ ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಗೌರವಯುತವಾಗಿ ಬಾಳ್ವೆ ನಡೆಸಲು ಬೇಕಾದ ಎಲ್ಲಾ ಸವಲತ್ತುಗಳನ್ನು ಆದ್ಯತೆ ಮೇರೆಗೆ ಒದಗಿಸುತ್ತಾ ಬಂದಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕು 18 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಆಯ್ಕೆ ಆಗಿರುವ ಅರ್ಹ ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 400 ಕ್ಕೂ ಅಧಿಕ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದರು. ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ. ಹಲವು ವರ್ಷಗಳಿಂದ ಸರ್ಕಾರದಿಂದ ಮನೆ ನಿರ್ಮಿಸಬೇಕು, ನಿವೇಶನ ರಹಿತರು, ವಸತಿ ರಹಿತರಿಗೆ ಆದ್ಯತೆ ಮೇರೆಗೆ ಸ್ವಂತ ಸೂರು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಹಲವಾರು ಜನಪರ…

Read More

ಮಡಿಕೇರಿ NEWS DESK ಜೂ.6 : ಸಹಕಾರ ಕ್ಷೇತ್ರ ರೈತರ ಬೆನ್ನುಲುಬಾಗಿದ್ದು, ಇಂತಹ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ಕೆಲಸವನ್ನು ದೇಶ ಸೇವೆ ಎಂದು ಅರಿತುಕೊಂಡು ತೃಪ್ತಿದಾಯಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಕರೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾಹಾ ಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಿಕಾರ್ಡ್ ಬ್ಯಾಂಕ್, ಎಪಿಸಿಎಂಎಸ್, ಜೇನು ಸಹಕಾರ ಸಂಘ, ಪತ್ತಿನ ಹಾಗೂ ಮಾರಾಟ ಸಹಕಾರ ಸಂಘಗಳ ಲೆಕ್ಕಿಗರು, ಸಹಾಯಕ ಸಿಬ್ಬಂದಿಗಳಿಗೆ ಜಿಎಸ್‌ಟಿ ಮತ್ತು ಆದಾಯ ತೆರಿಗೆ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶಿಕ್ಷಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿಯು.ರಾಬಿನ್ ದೇವಯ್ಯ, ಮೊಟ್ಟ ಮೊದಲು ಗದಗ ಜಿಲ್ಲೆಯಲ್ಲಿ ಆರಂಭ ಕಂಡ ಸಹಕಾರ ಕ್ಷೇತ್ರ ಇಂದು ಬೃಹತ್ತಾಗಿ ಬೆಳೆದಿದ್ದು, ದೇಶ ವ್ಯಾಪಿ…

Read More

ಮಡಿಕೇರಿ NEWS DESK ಜೂ.6 : ನಗರದ ಐಟಿಐ ಸಮೀಪ ನಿರ್ಮಾಣಗೊಳ್ಳಲಿರುವ ಅಮ್ಮ ಕೊಡವ ಸಮಾಜದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ಎಲ್ಲಾ ಸಮುದಾಯಗಳ ಪ್ರಗತಿಗೆ ಸರಕಾರ ಬದ್ಧವಾಗಿದೆ. ಗುಣಮಟ್ಟದ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಶಾಸಕರು ತಿಳಿಸಿದರು. ಅಮ್ಮ ಕೊಡವ ಸಮಾಜದ ಮಾಚಮಂಡ ಬಿ.ಮಾದಮ್ಮಯ್ಯ, ಗೌರಮ್ಮ ಮಾದಮ್ಮಯ್ಯ, ನಾರಿಮಂಡ ಬಿ.ಪಾಲಾಕ್ಷ, ರೇವತಿ ಪಾಲಾಕ್ಷ, ಕೊಂಡಿಯಮ್ಮಂಡ ಕಿಶೋರ್ ಕುಮಾರ್, ಇಂದಿರಾ ಕಿಶೋರ್ ಕುಮಾರ್, ನೆರಿಯಂಡಮ್ಮನ ಜನಾರ್ಧನ ಹಾಗೂ ಸಮಿತಿಯ ಸದಸ್ಯರು, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಶಶಿಕಲಾ, ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಪ್ರಮುಖರಾದ ವಿ.ಜಿ.ಮೋಹನ್, ಹರಿಪ್ರಸಾದ್, ಯಶ್, ಪವಿತ್ರ, ಲೀಲಾ ಶೇಷಮ್ಮ, ಸೂರಿ, ಸುಬ್ರಮಣಿ, ವಸಂತ ಭಟ್, ಹಬೀಬ್, ಶರಣು, ಮಂಜುನಾಥ್, ಕೋಚನ ಚೇತನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಜೂ.5 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿರಾಜಪೇಟೆ ವಲಯದ ಹೆಗ್ಗಳ ಕಾರ್ಯಕ್ಷೇತ್ರದ ನಂದಾದೀಪ ಹಾಗೂ ಧರ್ಮಶಾಸ್ತ್ರ ಸಂಘದ 16ನೇ ವರ್ಷದ ವಾರ್ಷಿಕೋತ್ಸವವನ್ನು ಬೇಟೋಳಿಯಲ್ಲಿರುವ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಆಚರಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಕ್ತಿ ವೃದ್ಧಾಶ್ರಮದ 25 ವೃದ್ಧರಿಗೆ ಒಂದು ವಾರಕ್ಕೆ ಬೇಕಾದ ಅಕ್ಕಿ, ದಿನಸಿ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮುಖಾಂತರ ಒಕ್ಕೂಟದ ಸದಸ್ಯರು ಮಾನವೀಯ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟ ಉಪಾಧ್ಯಕ್ಷರಾದ ಮಲ್ಲಿಗೆ, ಹೆಗ್ಗಳ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶಿಲ್ಪಾ, ವಿರಾಜಪೇಟೆ ವಲಯದ ಮೇಲ್ವಿಚಾರಕರಾದ ಶಿವಕುಮಾರ್, ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು.

Read More

ಮಡಿಕೇರಿ ಜೂ.5 NEWS DESK : ಶ್ರೀಮಂಗಲ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2-ಕುಟ್ಟ, ಫೀಡರ್‍ನಲ್ಲಿ ಜೂನ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕುಟ್ಟ, ನಾತಂಗಾಲ, ಸಿಂಕೋನ, ನಲ್ಲೂರು, ಮಂಚಳ್ಳಿ, ಕಾಯಿಮನೆ, ಕೆ.ಎಂ.ಕೊಲ್ಲಿ, ನಾಣಾಚಿ, ನಾಗರಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More