ಲೇಖಕ: admin

ಮಡಿಕೇರಿ ಡಿ.17 NEWS DESK : ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾದ ಕೇಂದ್ರಕಾಯ೯ಕಾರಿ ಸಮಿತಿ ಸದಸ್ಯರಾಗಿ ಮಡಿಕೇರಿಯ ಎಸ್ ಎಸ್ ಸಂಪತ್ ಕುಮಾರ್ ನೇಮಕಗೊಂಡಿದ್ದಾರೆ. ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿಯ ನಿದೇ೯ಶಕರಾಗಿಯೂ ಕಾಯ೯ನಿವ೯ಹಿಸಿದ್ದ ಸಂಪತ್ ಕುಮಾರ್ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಜಾನಪದ ಪರಿಷತ್ ನ ಖಜಾಂಜಿಗಳೂ ಆಗಿದ್ದಾರೆ. ಸಂಪತ್ ಕುಮಾರ್ ಅವರನ್ನು ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾದ ಕೇಂದ್ರಕಾಯ೯ಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಿ ಮಹಾಸಭಾದ ಅಧ್ಯಕ್ಷರಾದ ಎಸ್ ರಘುನಾಥ್ ಆದೇಷ ಹೊರಡಿಸಿದ್ದಾರೆ.

Read More

ಮಡಿಕೇರಿ ಡಿ.17 NEWS DESK : ಕೊಡಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮುಕೋಡ್ಲು ಹಾಗೂ ಹಮ್ಮಿಯಾಲ ಗ್ರಾಮಸ್ಥರಿಗೆ ಅರಿವು ಕಾರ್ಯಕ್ರಮ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ, ಪ್ರತಿ ಗ್ರಾಮ ದಿಂದ ಹೆಣ್ಣುಮಕ್ಕಳ ರಕ್ಷಣೆಯಾಗಬೇಕು ಹಾಗೂ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣವಂತರಾಗಬೇಕು, ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗೆ ಸಹಕರಿಸಲು ಇಲಾಖೆ ಮತ್ತು ಸಮುದಾಯ ಒಂದಾಗಿ ಶ್ರಮಿಸಬೇಕು ಎಂದು ತಿಳಿಸಿದರು. ಸಖಿ ಓನ್ ಸ್ಟಾಫ್ ಸೆಂಟರ್ ಕುರಿತು ಮಾಹಿತಿ ನೀಡಿ, ಸಖಿ ಕೇಂದ್ರವು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ನೆರವು, ಕಾನೂನು ನೆರವು, ಆಪ್ತ ಸಮಾಲೋಚನೆ, ತಾತ್ಕಾಲಿಕ ಆಶ್ರಯ ಹಾಗೂ ಪೊಲೀಸ್ ನೆರವು ನೀಡುತ್ತದೆ , ಮಕ್ಕಳ ಸಹಾಯವಾಣಿ 1098, ಮಹಿಳಾ ಸಹಾಯವಾಣಿ 181 ರ ಸಹಕಾರದೊಂದಿಗೆ ಇಲಾಖೆಯನ್ನು ಮಹಿಳೆಯರು ಮತ್ತು ಮಕ್ಕಳು ದಿನದ 24 ಗಂಟೆಗಳು ವಾರದ ಏಳು ದಿನಗಳು ಉಚಿತವಾಗಿ ಸಂಪರ್ಕಿಸಬಹುದಾಗಿ ತಿಳಿಸಿದರು. ಕರ್ನಾಟಕ…

Read More

ಮಡಿಕೇರಿ ಡಿ.17 NEWS DESK : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2024-25 ನೇ ಸಾಲಿನ ಬೇಸಿಗೆ ಋತುವಿನ ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬೆಳೆ ಸಮೀಕ್ಷೆ ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ನೀಡುವುದು, 11 ನೇ ಕೃಷಿ ಗಣತಿಯ ಮೂರನೇ ಹಂತದ ಬಗ್ಗೆ ಮಾಹಿತಿ ಒದಗಿಸುವುದು ಹಾಗೆಯೇ ಪ್ರಸಕ್ತ ಸಾಲಿನ ಬೆಳೆ ಕಟಾವು ಸಂಬಂಧಿಸಿದಂತೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಿ.ನಾರಾಯಣ ಅವರು 2024-25ನೇ ಸಾಲಿನ ಬೇಸಿಗೆ ಋತುವಿನ ಸಿಎಸ್‍ಎಸ್‍ಟಿ ವರದಿಯಂತೆ ಗ್ರಾಮಾವಾರು, ಹೋಬಳಿವಾರು ಪರಿಶೀಲಿಸಿ ವೆಬ್ ತಂತ್ರಾಂಶದಲ್ಲಿ ಮರು…

Read More

ಮಡಿಕೇರಿ ಡಿ.17 NEWS DESK : ಭಾರತದ ‘ಮೇಕಿಂಗ್ ಇಂಡಿಯಾ’ ಎನ್ನುವ ವಿಶಾಲ ಚಿಂತನೆಯ ಪ್ರಯತ್ನಗಳನ್ನು ಮುರಿಯುವ ಮೂಲಕ ರಾಷ್ಟ್ರದ ಏಕತೆ ಮತ್ತು ಅಖಂಡತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಎಸ್. ಅವರು ಆರೋಪಿಸಿದ್ದಾರೆ. ನಗರದ ಕೊಡಗು ಗೌಡ ಸಮಾಜದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತದ 45ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ‘ರಾಷ್ಟ್ರ’ ಪ್ರಥಮ ಎನ್ನುವ ಉದಾತ್ತ ಚಿಂತನೆಯನ್ನು ಮೈಗೂಡಿಸಿಕೊಂಡ ಯುವ ಸಮೂಹವು, ಪಾಶ್ಚಿಮಾತ್ಯ ಶಕ್ತಿಗಳ ಒತ್ತಡಗಳನ್ನು ಮೀರಿ ಭಾರತದ ಅಭ್ಯುದಯಕ್ಕೆ ಶ್ರಮಿಸುತ್ತಿದೆ. ಇಂದಿನ ಯುವ ಸಮೂಹ ಸನಾತನ ಸಂಸ್ಕøತಿಯ ಮಹತ್ವವನ್ನು ಅರಿತು, ಅದರ ತಳಹದಿಯ ಮೇಲೆ ರಾಷ್ಟ್ರದ ಪುನರ್ ನಿರ್ಮಾಣಕ್ಕೆ ತÀನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಇದಕ್ಕೆ ಬೆನ್ನೆಲುಬಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯನಿರ್ವಹಿಸುತ್ತಿದೆ ಎಂದರು. ವಿಶ್ವದ ಬಲಾಢ್ಯ ದೇಶಗಳೆಂದು…

Read More

ಮಡಿಕೇರಿ, ಡಿ.17 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ಆಯೋಜಿಸಲಾಗುತ್ತಿರುವ ‘ವಿಪ್ರ ಕ್ರೀಡೋತ್ಸವ’ದ ಭಾಗವಾಗಿ ಡಿ.21 ರಂದು ನಗರದಲ್ಲಿ ಮಡಿಕೇರಿ ತಾಲ್ಲೂಕು ಮಟ್ಟದ ಒಳಾಂಗಣ ಕ್ರೀಡಾ ಸ್ಪರ್ಧೆಗಳು ನಡೆಯಲಿದೆಯೆಂದು ನಿಧಿಯ ಅಧ್ಯಕ್ಷರಾದ ರಾಮಚಂದ್ರ ಮೂಗೂರು ಮತ್ತು ಕಾರ್ಯದರ್ಶಿ ಬಿ.ಕೆ. ಜಗದೀಶ್ ತಿಳಿಸಿದ್ದಾರೆ. ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಡಿ.21 ರಂದು ಮಧ್ಯಾಹ್ನ 2 ಗಂಟೆಗೆ ತಾಲ್ಲೂಕು ವ್ಯಾಪ್ತಿಯ ವಿಪ್ರ ಬಾಂಧವರಿಗಾಗಿ ಚೆಸ್, ಕೇರಂ ಹಾಗೂ ಪುರುಷರಿಗೆ, ಮಹಿಳೆಯರಿಗೆ, ಬಾಲಕ, ಬಾಲಕಿಯರಿಗೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆಯೆಂದು ತಿಳಿಸಿದ್ದಾರೆ. ಚೆಸ್ ಹಾಗೂ ಕೇರಂ ಸಿಂಗಲ್ಸ್‍ನಲ್ಲಿ ಗೆದ್ದಂತಹ ಸ್ಪರ್ಧಿಗಳು ಜನವರಿ ತಿಂಗಳಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಳ್ಳಲಿದ್ದಾರೆ. ಸ್ಪರ್ಧೆಯಲ್ಲಿ ವಿಪ್ರಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ.

Read More

ಕುಶಾಲನಗರ ಡಿ.17 NEWS DESK : ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಮತ್ತು ದೇಶಭಕ್ತಿಯ ಮನೋಭಾವವನ್ನು ಉತ್ತೇಜಿಸುವ ನಿಮಿತ್ತ ಕೊಡಗು ಸೈನಿಕ ಶಾಲೆಯಲ್ಲಿ 2025-26ನೇ ಸಾಲಿನ ಬ್ರಹ್ಮಗಿರಿ ಸಹೋದಯ ಕ್ಲಸ್ಟರ್ ಮಟ್ಟದ ಅಂತರ ಶಾಲಾ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಶಾಲೆಯ ಕುವೆಂಪು ವಿವಿದೊದ್ಧೇಶ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜಿತ್‍ಸಿಂಗ್ ಅವರು ಉದ್ಘಾಟಿಸಿದರು. ಈ ಸಂದರ್ಭ ಶಾಲೆಯ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪ್ರಕಾಶ್ ರಾವ್, ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕರಾದ ದಿವ್ಯಾಸಿಂಗ್ ಸೇರಿದಂತೆ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಒಟ್ಟು 58 ವಿದ್ಯಾರ್ಥಿಗಳು ಭಾರತದ ವಿವಿಧ ಭಾಗಗಳ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಮನಮೋಹಕ ಜನಪದ ನೃತ್ಯ ಹಾಗೂ ಸಮೂಹ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮಕ್ಕೆ ಏಕತೆ ಮತ್ತು ರಾಷ್ಟ್ರಭಕ್ತಿಯ ಭಾವನೆಯನ್ನು ತುಂಬುವ ಉದ್ದೇಶದಿಂದ ಎಲ್ಲಾ ತಂಡಗಳು ಒಟ್ಟಾಗಿ ಒಂದು ಕನ್ನಡ ದೇಶಭಕ್ತಿ…

Read More

ಮಡಿಕೇರಿ ಡಿ.17 NEWS DESK : ವಿಧಾನಸಭೆಯ ಅಧಿವೇಶನದಲ್ಲಿ ಭೂಕಂದಾಯ ತಿದ್ದುಪಡಿ ವಿಧೇಯಕವನ್ನು ಮಂಡಿಸುವ ಸಂದರ್ಭ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ‘ಕೊಡವ ಪಟ್ಟೆದಾರರನ್ನು ಏಜೆಂಟರು’ ಎಂದು ಸಂಭೋಧಿಸುವ ಮೂಲಕ ಕೊಡವರನ್ನು ಅವಮಾನಿಸಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಚಿವರು ತಕ್ಷಣ ಕೊಡವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕೊಡವರ ಒಂದು ಕುಟುಂಬದ (ಒಕ್ಕ) ಹಿರಿಯ ಸದಸ್ಯರನ್ನು ಕೊಡವರು ‘ಪಟ್ಟೆದಾರ’ ಎಂದು ಕರೆಯುತ್ತಾರೆ. ಇದರ ಅರಿವಿಲ್ಲದಿದ್ದರೆ ಸಚಿವರು ಇತಿಹಾಸವನ್ನು ಓದಿ ತಿಳಿದುಕೊಳ್ಳುವುದು ಉತ್ತಮ. ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ‘ಏಜೆಂಟರು’ ಪದ ಬಳಕೆ ಮಾಡುವ ಸಂದರ್ಭ ಕೊಡಗಿನ ಶಾಸಕರು ಯಾವುದೇ ಆಕ್ಷೇಪ ವ್ಯಕ್ತಪಡಿಸದೇ ಇರುವುದು ಮತ್ತು ಸರಿಯಾದ ಮಾಹಿತಿಯನ್ನು ಒದಗಿಸದೇ ಇರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಮಂಗಳೂರು ಡಿ.17 NEWS DESK : ಕ್ರಿಯೆಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟನೆ, ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ- ಮಾಯದ ನಡೆ ಜೋಗದ ನುಡಿ’ ಲೋಕಾರ್ಪಣೆ ಕಾರ್ಯಕ್ರಮವು ಡಿ.20 ರಂದು ನಡೆಯಲಿದೆ. ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್‍ಎಫ್ ರಸ್ಕಿನ್ಹ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಪ್ರೊ.ಬಿ.ಎ.ವಿವೇಕ್ ರೈ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ಸಾಹಿತಿ ಡಾ.ರಾಜಶೇಖರ್ ಹಳೆಮನೆ ಕೃತಿಯ ಕುರಿತು ಅವಲೋಕನ ಮಾಡಲಿದ್ದಾರೆ. ಅಲೋಶಿಯಸ್ ಪರಿಗಣಿತ ವಿವಿಯ ಕುಲಪತಿ ಡಾ.ಪ್ರವೀಣ್ ಮಾರ್ಟಿಸ್ ಎಸ್‍ಜೆ, ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ.ನಾಗಪ್ಪ ಗೌಡ, ಲೇಖಕರು, ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾರ್ಕಳಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ವಹಿಸಲಿದ್ದಾರೆ. ಇದೇ…

Read More

ಮೂರ್ನಾಡು ಡಿ.17 NEWS DESK : ಶ್ರೀ ಯೋಗಿ ನಾರೇಯಣ ಕೊಡಗು ಜಿಲ್ಲಾ ಬಲಿಜ ಸಂಘದ ವತಿಯಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಮೂರ್ನಾಡು ಶ್ರೀ ಅಯ್ಯಪ್ಪ ದೇವಾಲಯದಲ್ಲಿ ನಡೆಯಿತು. ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮದ ಮೂಲಕ ಕ್ಯಾಲೆಂಡರ್ ಅನ್ನು ಬಲಿಜ ಸಮಾಜದ ಹಿರಿಯರಾದ ಟಿ.ಎಲ್.ಲೋಕನಾಥ್ ಅವರು ಬಿಡುಗಡೆ ಮಾಡಿ ಮಾತನಾಡಿ, ಮುಂಬರುವ ದಿನಗಳಲ್ಲಿ ಸರ್ವರಿಗೂ ಅನುಕೂಲವಾಗುವಂತೆ ದೇವರು ಅನುಗ್ರಹಿಸಲಿ. ಬಲಿಜ ಸಮಾಜ ಇನ್ನಷ್ಟು ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳಲಿ ಎಂದು ಆಶಿಸಿದರು. ಕೊಡಗು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ಗಣೇಶ್ ನಾಯ್ಡು ಅವರು ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಬಲಿಜ ಸಮೂಹದ ಅಭ್ಯುದಾಯಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಆರ್.ಸುಬ್ರಮಣಿ, ಖಜಾಂಚಿ ಟಿ. ಎ.ಪ್ರಕಾಶ್, ನಿರ್ದೇಶಕರಾದ ಟಿ.ಎಸ್.ರಮಿತಾ, ಯಶ್ವಂತ್ ಕುಮಾರ್ ನಾಯ್ಡು, ಟಿ.ಜಿ.ಹರ್ಷ, ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Read More

ಮಡಿಕೇರಿ ಡಿ.17 NEWS DESK : ಮಂಜಿನ ನಗರಿ, ದಕ್ಷಿಣದ ಕಾಶ್ಮೀರ ಎಂದೆಲ್ಲ ಕರೆಯಲ್ಪಡುವ ಕೊಡಗಿನ ರಾಜಧಾನಿ ಮಡಿಕೇರಿ ನಗರವು ಶಕ್ತಿ ದೇವತೆಗಳ ನೆಲೆವೀಡು, ಅಂತೆಯೇ ಊರಿನ ರಾಜ ಬೀದಿಯಂತಿರುವ ಮಹದೇವಪೇಟೆಯಲ್ಲಿ ಸದ್ಭಕ್ತರ ಶ್ರದ್ಧಾ ಕೇಂದ್ರವಾಗಿ ಆರಾಧಿಸಲ್ಪಡುತ್ತಾ ಎಲ್ಲರ ಇಷ್ಟಾರ್ಥವನ್ನು ಸಿದ್ಧಿಸುತ್ತಾ ಅನುಗ್ರಹಿಸುತ್ತಿರುವ ಆರಾದ್ಯ ದೇವತೆಯೇ ಶ್ರೀ ಚೌಡೇಶ್ವರಿ ಅಮ್ಮನವರು. ಐತಿಹಾಸಿಕ ಹಿನ್ನೆಲೆ ಇರುವ ಶ್ರೀ ಚೌಡೇಶ್ವರಿ ದೇವಾಲಯವು ಮಹಾರಾಜರ ಆಳ್ವಿಕೆಯ ಕಾಲಘಟ್ಟದಲ್ಲಿ ಅಂದರೆ ಸುಮಾರು 250 ವರ್ಷಗಳ ಹಿಂದೆಯೇ ನಿರ್ಮಾಣವಾಗಿರುವ ದಾಖಲೆ ಇದ್ದು, ಅಲ್ಲಿಂದಲೂ ದೇವಿಯನ್ನು ನಂಬಿ ಒಳಿತನ್ನು ಕಂಡ ಭಕ್ತ ಸಮೂಹವೇ ಇದೆ. ಶಂಕರಿ ಗುಡಿ ಎಂದು ಪ್ರಸಿದ್ದಿಯಾಗಿದ್ದ ದೇವಾಲಯ ಕಾಲ ಕ್ರಮೇಣ ನವೀಕರಣಗೊಳ್ಳುತ್ತಾ ದಿನಾಂಕ 17-05-1968 ರಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ಆಗಮಿಕರಾದ, ಕ್ಷೇತ್ರದ ತಂತ್ರಿಗಳಾದ ಆಗಮಾಚಾರ್ಯ ಶ್ರೀ ನಾರಾಯಣ ದೀಕ್ಷಿತರ ನೇತೃತ್ವದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಶಿಲಾಬಿಂಬದ ಜೊತೆಗೆ ಪರಿವಾರದ ದೇವತಾ ಸಾನಿದ್ಯವನ್ನು ಪ್ರತಿಷ್ಠಾಪಿಸಲಾಯಿತು. ವಾರ್ಷಿಕವಾಗಿ ಹಬ್ಬ ಹರಿದಿನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ನವರಾತ್ರಿಯಲ್ಲಿ ನಡೆಯುವ…

Read More