ಮಡಿಕೇರಿ ಮೇ 16 NEWS DESK : ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಆಡಿಟೋರಿಯಂನಲ್ಲಿ ನಡೆದ ವರ್ಲ್ಡ್ ರೆಕಾರ್ಡ್ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳು ಕೊಡವ ನೃತ್ಯ ಮಾಡುವುದರ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಚೈತನ್ಯ, ಲಾವಣ್ಯ, ಲಕ್ಷ, ತೇಜಸ್ವಿನಿ, ಚೈತ್ರ, ಅಪೇಕ್ಷಿತ, ಅನು ಶ್ರೀ, ಕಾವ್ಯ ಶ್ರೀ, ಶ್ರೇಯಾ ಸೋಮಣ್ಣ, ಸಾನ್ವಿ ಹಾಗೂ ನೃತ್ಯ ಶಾಲೆಯ ಸಂಸ್ಥಾಪಕರಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ಭಾಗವಹಿಸಿದ್ದರು.
ಲೇಖಕ: admin
ಹುಣುಸೂರು ಮೇ 16 NEWS DESK : ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹುಣುಸೂರು ತಾಲ್ಲೂಕಿನ ಹಿರಿಕ್ಯಾತನಹಳ್ಳಿ ರಸ್ತೆಯಲ್ಲಿ ನಡೆದಿದೆ. ಮರೂರು ಕಾವಲ್ ಗ್ರಾಮದ ನಿವಾಸಿ ಸಾಗರ್(35) ಮೃತ ದುರ್ದೈವಿ. ಸ್ನೇಹಿತ ಹರೀಶ್ರೊಂದಿಗೆ ಬೈಕ್ ನಲ್ಲಿ ಕೆ.ಆರ್.ನಗರದ ಹೆಬ್ಬಾಳು ಗ್ರಾಮದಿಂದ ಸ್ವಗ್ರಾಮ ಮರೂರು ಕಾವಲ್ಗೆ ಹಿಂದಿರುಗುತ್ತಿದ್ದ ವೇಳೆ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತೀವ್ರಗಾಯಗೊಂಡ ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಎರಡೂ ಬೈಕ್ ಗಳ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮೇ 16 NEWS DESK : ರಾಷ್ಟ್ರೀಯ ಡೆಂಗ್ಯು ಕುರಿತು ಜಾಗೃತಿ ದಿನಾಚರಣೆ ಮತ್ತು ನಿಯಂತ್ರಣ ಸಂಬಂಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಗುರುವಾರ ಮಾನವ ಸರಪಳಿ ಕಾರ್ಯಕ್ರಮ ಜರುಗಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್, ಡಾ.ಶ್ರೀನಿವಾಸ ಬಿ ಎಲ್ ಜಿಲ್ಲಾ ಸರ್ವೇಕ್ಷಣಾಧಿಕಾರಿ ,(ಸಮಗ್ರ ರೋಗಗಳ ಕಣ್ಗಾವಲು ಮತ್ತು ನಿಯಂತ್ರಣ ಘಟಕ,) ಡಾ.ಮಧುಸೂದನ್ ,ಜಿಲ್ಲಾ ಆರ್ ಸಿ ಎಚ್ ಅಧಿಕಾರಿ,ಡಾ.ಚೇತನ್ ಮಡಿಕೇರಿ ತಾಲ್ಲೂಕು ಅಧಿಕಾರಿ ಮತ್ತು ಇತರರು ಪಾಲ್ಗೊಂಡಿದ್ದರು.
ಗುಂಡ್ಲುಪೇಟೆ ಮೇ 16 NEWS DESK : ಸುಮಾರು 4 ವರ್ಷದ ಹುಲಿಯ ಮೃತ ದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದಲ್ಲಿ ಹುಲಿ ಮೃತದೇಹ ಪತ್ತೆಯಾಗಿದ್ದು, ಲಿಂಗ ಗುರುತಿಸಲು ಸಾಧ್ಯವಾಗಿಲ್ಲ. ವನ್ಯಜೀವಿಯ ಜೊತೆಗಿನ ಕಾದಾಟದಿಂದ ಹುಲಿ ಮೃತಪಟ್ಟಿರುವ ಸಂಶಯವಿದ್ದು, ಸುಮಾರು 12ರಿಂದ 15 ದಿನಗಳಾಗಿರಬಹುದೆಂದು ಅರಣ್ಯ ಇಲಾಖಾ ಪಶು ವೈದ್ಯಾಧಿಕಾರಿ ಡಾ.ವಾಸಿಂ ಮಿರ್ಜಾ ತಿಳಿಸಿದ್ದಾರೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಎನ್.ಬೇಗೂರು ವಲಯ ವಲಯ ಅರಣ್ಯಾಧಿಕಾರಿ ಮಂಜುನಾಥ ಡಿ ಬಾಗೇವಾಡಿ, ಗುಂಡ್ರೆ ವಲಯದ ವಲಯ ಅರಣ್ಯಾಧಿಕಾರಿ ಅಮೃತೇಶ್ ಬಿ.ಬಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರಪೇಟೆ ಮೇ 16 NEWS DESK : ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ನಡೆದ ಅಪ್ರಾಪ್ತೆ ಮೀನಾ (16) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮೃತೆಯ ಕುಟಂಬದವರನ್ನು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದರು. ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ, ಹತ್ಯೆ ಆರೋಪಿ ಪ್ರಕಾಶನಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗದುಕೊಳ್ಳಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಸರ್ಕಾರದಿಂದ ವಿಶೇಷ ಅಭಿಯೋಜಕರನ್ನು ನೇಮಿಸಿ, ವಿಶೇಷ ನ್ಯಾಯಾಲಯದಲ್ಲಿ ತ್ವರಿತ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು. ಇಂತಹ ಘೋರ ಕೃತ್ಯ ನಡೆಸುವವರಿಗೆ ಕಠಿಣ ಶಿಕ್ಷೆಯಾಗಲೇಬೇಕು. ಬಡ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು. ಪ್ಲಾಸ್ಟಿಕ್ ಹೊದಿಕೆಯ ಗುಡಿಸಿನ ಒಳಗೆ ಮೃತಳ ತಂದೆ, ತಾಯಿ, ಸಹೋದರ, ಸಹೋದರಿಯೊಂದಿಗೆ ಮಾತಾನಾಡಿದ ಗೃಹಸಚಿವರು ಸಂಕಷ್ಟವನ್ನು ಕೇಳಿ ಮರುಗಿದರು. ವೈಯುಕ್ತಿಕವಾಗಿ ಧನ ಸಹಾಯ ಮಾಡಿದರು. ಚುನಾವಣಾ ನೀತಿ ಸಂಹಿತೆಯಿರುವ ಕಾರಣ ಸಧ್ಯಕ್ಕೆ ಏನನ್ನು ಹೇಳಲು ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ…
ಸುಂಟಿಕೊಪ್ಪ ಮೇ 16 NEWS DESK : ಸ್ಯಾಂಡಲ್ ತೋಟದ ನಿವಾಸಿ ಬಾಲಕೃಷ್ಣ (ಮೆಕಾನಿಕ್ ಬಾಲೇಟ) (62) ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಸುಂಟಿಕೊಪ್ಪದ ಹಿಂದೂ ರುದ್ರಭೂಮಿಯಲ್ಲಿ ನೇರವೇರಿತು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರಿಗೆ ಸುಂಟಿಕೊಪ್ಪ ವರ್ಕ್ಶಾಫ್ ಮಾಲೀಕರ ಸಂಘದ ಅಧ್ಯಕ್ಷ ಹಾಗೂ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ ಮೇ 16 NEWS DESK : ಇದೇ ಜೂನ್ ಮೊದಲ ವಾರದಲ್ಲಿ `ಮುಂಗಾರು’ ಆರಂಭವಾಗುವ ಸಾಧ್ಯತೆ ಇದ್ದು, ಕೊಡಗು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಹೆಚ್ಚಿನ ಮಳೆಯಾದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ `ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹವಾಮಾನ ಇಲಾಖೆಯಿಂದ ಕಾಲ ಕಾಲಕ್ಕೆ ಮಳೆ ಮುನ್ಸೂಚನೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ. ಆ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದರು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಹಶೀಲ್ದಾರರು, ತಾ.ಪಂ.ಇಒಗಳು ಇತರರು ಜಂಟಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು. ಶಾಲಾ-ಕಾಲೇಜುಗಳು, ಅಂಗನವಾಡಿ ಕಟ್ಟಡಗಳು ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಪರಿಹಾರ/ ಕಾಳಜಿ ಕೇಂದ್ರವನ್ನು ತೆರೆಯುವುದು ಮತ್ತಿತರ ಕೆಲಸವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹೇಳಿದರು. ಕೃಷಿ ಸಂಬಂಧಿಸಿದಂತೆ ಜಿಲ್ಲೆಗೆ…
ಮಡಿಕೇರಿ ಮೇ 16 NEWS DESK : ಸಿ.ಬಿ.ಎಸ್.ಇ. ಬೋರ್ಡ್ ಇತ್ತೀಚೆಗೆ ಹತ್ತು ಮತ್ತು ಹನ್ನೆರಡನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯವು ಅತ್ಯುತ್ತಮ ಫಲಿತಾಂಶ ಗಳಿಸಿದೆ. ಹತ್ತು ಮತ್ತು ಹನ್ನೆರಡನೆಯ ತರಗತಿಗಳಲ್ಲಿ ಶೇ.100 ಮಕ್ಕಳು ಉತ್ತೀರ್ಣರಾಗಿದ್ದಾರೆ. ಹತ್ತನೆಯ ತರಗತಿಯಲ್ಲಿ ಎ.ಕೀರ್ತನಾ ಶೇ.95 ಮತ್ತು ಎಂ.ಎಂ.ತನುಷಾ ಶೇ.95(ಪ್ರಥಮ), ಎಂ.ಅಮೋಘರಾಜ್ ಶೇ.94.4(ದ್ವಿತೀಯ) ಹಾಗೂ ಎಚ್. ಐಸಿರಿ ಶೇ.93.6 (ತೃತೀಯ) ಸ್ಥಾನ ಪಡೆದಿದ್ದಾರೆ. ಹನ್ನೆರಡನೇ ತರಗತಿ ವಿಜ್ಞಾನ- ಜಿ.ಎ.ಅಂಕಿತಾ ಶೇ.94.4(ಒರಥಮ), ಸಮನ್ವಿತಾ ಶೇ.92(ದ್ವಿತೀಯ) ಹಾಗೂ ಭೂಮಿ ಮಂಜುನಾಥ ಶೇ.90.4(ತೃತೀಯ) ಸ್ಥಾನ ಪಡೆದಿದ್ದಾರೆ. ಹನ್ನೆರಡನೇ ತರಗತಿ ವಾಣಿಜ್ಯ ವಿಭಾಗದಲ್ಲಿ ರಚನಾ ಶೇ.92.2(ಪ್ರಥಮ), ಪ್ರಥಮ್ ಹೆಬ್ಬಾರ್ ಶೇ.90.4(ದ್ವಿತೀಯ) ಹಾಗೂ ಕೆ.ಎಸ್.ರೋಹಿತ್ ಶೇ.87.2(ತೃತೀಯ) ಸ್ಥಾನ ಪಡೆದಿದ್ದಾರೆ ಎಂದು ಪ್ರಾಂಶುಪಾಲರಾದ ಒ.ಎಂ.ಪಂಕಜಾಕ್ಷನ್ ಅಭಿನಂದಿಸಿದ್ದಾರೆ.
ಮಡಿಕೇರಿ ಮೇ 16 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಡಾ. ಧನಂಜಯ್ ಸರ್ಜಿ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು.
ಮಡಿಕೇರಿ ಮೇ.16 NEWS DESK : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ವಿರಾಜಪೇಟೆ :: ವಿರಾಜಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ವಿಎಫ್ 7 ಹೆಗ್ಗಳ, ಫೀಡರ್ನ ಎಚ್ಟಿ/ಎಲ್ಟಿ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ವಿರಾಜಪೇಟೆ ಪಟ್ಟಣ, ಮಲಬಾರ್ ರಸ್ತೆ, ಆರ್ಜಿ ಬೇಟೋಳಿ, ಹೆಗ್ಗಳ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ…






