ಹುಣುಸೂರು ಮೇ 31 NEWS DESK : ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲು ಯತ್ನಿಸುತ್ತಿದ್ದ ಪ್ರಕರಣವನ್ನು ಹುಣುಸೂರು ಪೊಲೀಸರು ಬೇಧಿಸಿದ್ದಾರೆ. ಸುಮಾರು 40 ಗೋವುಗಳನ್ನು ರಕ್ಷಿಸಿರುವ ಪೊಲೀಸರು ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಹುಣಸೂರು ತಾಲ್ಲೂಕಿನ ರತ್ನಪುರಿಯ ಮನೆಯೊಂದರ ಪಕ್ಕದ ಗೋದಾಮಿನಲ್ಲಿ ಜಾನುವಾರುಗಳು ಪತ್ತೆಯಾಗಿವೆ. ಜಾನುವಾರುಗಳನ್ನು ತುಂಬಿದ್ದ ಹಾಲಿನ ವಾಹನ ಸೇರಿದಂತೆ ಮೂರು ಗೋಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ನಂದಿನಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣರ ಮಾರ್ಗದರ್ಶನದಲ್ಲಿ ಹುಣಸೂರು ನಗರ ಠಾಣಾಧಿಕಾರಿಗಳಾದ ಸಂತೋಷ್ ಕಶ್ಯಪ್, ರಾಮಚಂದ್ರನಾಯ್ಕ, ಅಚ್ಚುತ್ತನ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದರು.
ಲೇಖಕ: admin
ಮಡಿಕೇರಿ ಮೇ 31 NEWS DESK : ಕೊಡಗು ಪ್ರೆಸ್ ಕ್ಲಬ್ 2023-24 ನೇ ಸಾಲಿನ ಮಹಾಸಭೆ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಜೂ.2 ರಂದು ನಡೆಯಲಿದೆ. ಜೂ.2 ರಂದು ಬೆಳಗ್ಗೆ 10.30 ಗಂಟೆಗೆ ಪ್ರೆಸ್ ಕ್ಲಬ್ ವಾರ್ಷಿಕ ಮಹಾಸಭೆ ನಡೆಯಲಿದೆ. 12 ಗಂಟೆಗೆ ವಾರ್ಷಿಕ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಸ್ಮರಣಸಂಚಿಕೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ಶಾಸಕರಾದ ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ನಾಪಂಡ ಮುದ್ದಪ್ಪ, ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷರಾದ ಡಾ.ಉಳ್ಳಿಯಡ ಎಂ.ಪೂವಯ್ಯ, ಮಹಾಪೋಷಕರಾದ ಜಿ.ರಾಜೇಂದ್ರ, ಗೌರವ ಅಧ್ಯಕ್ಷರಾದ ಬಿ.ಆರ್ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮೇ 31 NEWS DESK : ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ ಬರಮಾಡಿಕೊಂಡರು. ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತಳಿರು ತೋರಣ ಹಾಗೂ ಹೂವುಗಳಿಂದ ಶೃಂಗರಿಸಲಾಗಿತ್ತು. ನಗರದ ಸಂತ ಮೈಕಲರ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂವು ನೀಡುವುದರ ಮೂಲಕ ಸ್ವಾಗತಿಸಿ, ಸಿಹಿ ಹಂಚಿದರು.
ಮಡಿಕೇರಿ ಮೇ 31 NEWS DESK : ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾ ರೈತ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಕೃಷಿ ಅಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ರೈತ ಮೋರ್ಚಾದ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರೈತರ ಸಂಕಷ್ಟದ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆರೋಪಿಸಿದರು. ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಬಿಜೆಪಿ ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್, ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ತಳೂರು ಕಿಶೋರ್ ಕುಮಾರ್, ರಾಬೀನ್ ದೇವಯ್ಯ, ಜಗದೀಶ್, ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.
ನಾಪೋಕ್ಲು ಮೇ 31 NEWS DESK : ಸ್ಕೂಟಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಕಾರುಗುಂದದಲ್ಲಿ ನಡೆದಿದೆ. ಕಕ್ಕಬೆ ಯವಕಪಾಡಿಯ ನಿವಾಸಿ ಸಂತೋಷ್ (29 ) ಮೃತ ವ್ಯಕ್ತಿ. ಗಾಂಭೀರ ಗಾಯಗೊಂಡಿದ್ದ ಸಂತೋಷ್ ನನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸಾವನ್ನಪ್ಪಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಮೇ 31 NEWS DESK : ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಗಳಿಗೆ ದಾಳಿ ಮಾಡಿ ಅಪಾರ ನಷ್ಟ ಸಂಭವಿಸಿದ್ದು, ಬೆಳೆಗಾರರು ಆತಂಕಕ್ಕೆ ಈಡಾಗಿದ್ದಾರೆ. ಬಲ್ಲಮಾವಟ್ಟಿ ಗ್ರಾ.ಪಂ ವ್ಯಾಪ್ತಿಯ ನೆಲಜಿ ಗ್ರಾಮದ ಮೊಣ್ಣಂಡ ಸೀತಮ್ಮ ಮತ್ತು ಅಪ್ಪಯ್ಯ ಅವರ ತೋಟದಲ್ಲಿ ರಾತ್ರಿ ಅಡ್ಡಾಡಿರುವ ಕಾಡಾನೆಗಳು ಬಾಳೆ, ತೆಂಗು, ಅಡಿಕೆ ಸೇರಿದಂತೆ ವಿವಿಧ ಕೃಷಿ ಗಿಡಗಳನ್ನು ನಾಶಪಡಿಸಿವೆ. ಸುತ್ತಮುತ್ತಲ ಕಾಫಿ ಬೆಳೆಗಾರರ ತೋಟಗಳಿಗೂ ಹಾನಿಯಾಗಿದೆ. 3-4 ಕಾಡಾನೆಗಳ ಹಿಂಡು ನಿರಂತರ ತೋಟಗಳಲ್ಲಿ ಹಾನಿ ಉಂಟುಮಾಡುತ್ತಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದರು. ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. – ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮೇ 30 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕಾ ಕಾರ್ಯ ಜೂ.4 ರಂದು ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆ ಬಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳಲಾಗಿದೆ. ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಡಗಿನ ಮಡಿಕೇರಿ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ, ಮೈಸೂರು ಜಿಲ್ಲೆಯ ಹುಣಸೂರು, ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ, ಪಿರಿಯಾಪಟ್ಟಣ, ನರಸಿಂಹರಾಜ ಸೇರಿದಮತೆ ಒಟ್ಟು ಎಂಟು ಕ್ಷೇತ್ರಗಳ ಮತಗಳ ಎಣಿಕೆಗೆ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಡಿಕೇರಿ ಕ್ಷೇತ್ರದ ಮತಗಳ ಎಣಿಕೆಗೆ ಕಾಲೆೆÃಜಿನ ಎರಡನೇ ಮಹಡಿಯ ಕೊಠಡಿ ಸಂಖ್ಯೆ 211 ರಲ್ಲಿ ಮತ್ತು ವಿರಾಜಪೇಟೆ ಕ್ಷೇತ್ರದ ಮತ ಎಣಿಕೆಗೆ ಎರಡನೇ ಮಹಡಿಯ ಕೊಠಡಿ ಸಂಖ್ಯೆ 203 ರಲ್ಲಿ ವ್ಯವಸ್ಥೆ ಮಾಡಲಾಗಿದ. ಮತ ಎಣಿಕೆಯ ದಿನದಂದು ಬೆಳಗ್ಗೆ 7.30 ಗಂಟೆಗೆ ಮೊಹರಾದ ಮತಯಂತ್ರಗಳನ್ನಿಟ್ಟಿರುವ ಭದ್ರತಾ ಕೊಠಡಿಯನ್ನು ತೆರೆಯಲಾಗುತ್ತದೆ. ಬಳಿಕ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭಗೊಳ್ಳಲಿದೆ. ::: 20 ಸುತ್ತಿನ…
ಕುಶಾಲನಗರ ಮೇ 30 NEWS DESK : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಲಕ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ ಎರಡು ಗ್ರಾಮಗಳನ್ನು ಪಾನಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಫಾಯಸ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ವೇದಿಕೆಯ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಮದ್ಯ ಮತ್ತಿತರ ಚಟಗಳಿಂದ ವ್ಯಕ್ತಿಗಳನ್ನು ಮುಕ್ತರನ್ನಾಗಿಸುವಲ್ಲಿ ವೇದಿಕೆ ಯಶಸ್ವಿಯಾಗಿದೆ. ಇದೀಗ ಗ್ರಾಮಗಳನ್ನು ಪರಿವರ್ತನೆ ಮಾಡುವ ಮೂಲಕ ಪಾನಮುಕ್ತ ಗ್ರಾಮ ನಿರ್ಮಾಣ ಮಾಡುವುದು ವೇದಿಕೆಯ ಚಿಂತನೆಯಾಗಿದೆ ಎಂದರು. ಸರಕಾರ ನೂತನ ಮದ್ಯದ ಅಂಗಡಿಗಳಿಗೆ ಅನುಮತಿ ನೀಡಬಾರದು, ಮನೆ ಮನೆಯಲ್ಲಿ ಮಾರಾಟ ಮಾಡುವ ಪ್ರಕರಣಗಳ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ವೇದಿಕೆ ಜಿಲ್ಲಾಧಿಕಾರಿಗಳು, ಅಬಕಾರಿ ಇಲಾಖೆ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳಿಗೆ ಹಕ್ಕೊತ್ತಾಯ ಮಂಡನೆ ಮಾಡಲಿದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಾಲ ಕೊಡುತ್ತಿಲ್ಲ. ಬ್ಯಾಂಕ್ ಮೂಲಕ ಸಾಲ ನೀಡುತ್ತಾರೆ.…
ಮಡಿಕೇರಿ ಮೇ 30 NEWS DESK : ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಸಂದರ್ಭ ಬೆಳೆಗಾರರೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿ, ಆ ವ್ಯಕ್ತಿಯನ್ನು ಪಾರು ಮಾಡಿದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಪಾಲಿಬೆಟ್ಟದಿಂದ ಲೂರ್ಡ್ಸ್ ಶಾಲೆ ಬಳಿ ಇರುವ ಮನೆಗೆ ತೆರಳುತ್ತಿದ್ದ ವಾಹನ ಚಾಲಕ ಚಂದ್ರ ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿರುವ ಚಂದ್ರ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದ್ರ ಅವರು ರಾತ್ರಿ ಮನೆಗೆ ತೆರಳುತ್ತಿದ್ದ ಸಂದರ್ಭ ಕಾಫಿ ತೋಟದಿಂದ ಹಠಾತ್ತನೆ ಬಂದ ಕಾಡಾನೆಯೊಂದು ದಾಳಿ ಮಾಡಿತು. ತಪ್ಪಿಸಿಕೊಳ್ಳಲು ತೋಟದ ಗೇಟ್ನೊಳಗೆ ನುಸಳಿದಾಗ ಕಾಡಾನೆ ಗೇಟ್ ಮುರಿದು ಮತ್ತೆ ದಾಳಿ ಮಾಡಿದೆ. ಚಂದ್ರ ಅವರ ಕಿರುಚಾಟದ ಶಬ್ಧ ಕೇಳಿ ಸಮೀಪದಲ್ಲೇ ಇದ್ದ ಬೆಳೆಗಾರ ಕುಟ್ಟಂಡ ಶ್ಯಾಂ ಸೋಮಣ್ಣ ಅವರು ತಕ್ಷಣ ಕೋವಿಯೊಂದಿಗೆ ಸ್ಥಳಕ್ಕೆ ಆಗಮಿಸಿದರು. ವ್ಯಕ್ತಿಯ ಮೇಲೆ ದಾಳಿ ಮಾಡುತ್ತಿದ್ದ ಕಾಡಾನೆಗೆ ಕಲ್ಲು ಬೀಸಿದರು. ಆದರೂ ಕಾಡಾನೆ ದಾಳಿ ನಿಲ್ಲಿಸದೆ ಇದ್ದಾಗ ಅವರು…
ಮಡಿಕೇರಿ ಮೇ 30 NEWS DESK : ಚೆನ್ನಂಗಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಸಕ್ತ ಸಾಲಿನ ಶೈಕ್ಷಣಿಕ ಬಲವರ್ಧನೆಗೆ ಪೂರಕವಾದ ‘ವಿದ್ಯಾ ಪ್ರವೇಶ’ ಮತ್ತು ‘ಸೇತು ಬಂಧ’ ಕಾರ್ಯಕ್ರಮಕ್ಕೆ ಅಲಂಕೃತ ನೂತನ ಶಾಲಾ ಕೊಠಡಿಯಲ್ಲಿ ಗಣ್ಯರು ಚಾಲನೆ ನೀಡಿದರು. ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿವೆ. ಇದರ ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳು ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಕಲಿಕೆಯ ಗುರಿಯೊಂದಿಗೆ ಮುನ್ನಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಪಾಲಿಬೆಟ್ಟದ ಸಮಾಜ ಸೇವಕ ಡಾ.ಎ.ಸಿ.ಗಣಪತಿ ಮಾತನಾಡಿ, ಈ ಹಿಂದೆ ಮೂಲ ಸಂಕಷ್ಟಗಳ ನಡುವೆಯೂ ಶಿಕ್ಷಣ ಪಡೆದ ಅದೆಷ್ಟೋ ಮಂದಿ ಉನ್ನತ ಹುದ್ದೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಸರ್ಕಾರ ಹಾಗೂ ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿದ್ದು ಇದರ ಸದುಪಯೋಗಪಡಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು. ಶಾಲಾ ಸುತ್ತಮುತ್ತಲ ವ್ಯಾಪ್ತಿಯಲ್ಲಿ…






