ಲೇಖಕ: admin

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರ ಮಾನವೀಯ ಕಳಕಳಿಯಲ್ಲಿ ಅತೀ ಪ್ರಮುಖ ಸ್ಥಾನ ಪಡೆಯುವುದು ಸರ್ಜಿ ಫೌಂಡೇಶನ್ ನ ವಿಶೇಷಚೇತನ ಮಕ್ಕಳ ಶಾಲೆ. ಸಾಮಾಜಿಕ ಕಳಕಳಿ ಹೊಂದಿರುವ ಡಾ.ಧನಂಜಯ ಸರ್ಜಿ ಅವರು 2016 ರಲ್ಲಿಮಕ್ಕಳ ದಿನಾಚರಣೆ ಸಂದರ್ಭ 160 ವಿಶೇಷಚೇತನ ಹಾಗೂ ಅನಾಥ ಮಕ್ಕಳನ್ನು ಆರೋಗ್ಯಕ್ಕೆ ಸಂಬಂಧಿಸಿದಂತೆ ದತ್ತು ಪಡೆದಿದ್ದಾರೆ. ಇತ್ತೀಚೆಗೆ ಸರ್ಜಿ ಫೌಂಡೇಷನ್ ಅಡಿಯಲ್ಲಿ ಆ ಎಲ್ಲಾ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವುದು ಸರ್ಜಿ ಅವರ ಮಾನವೀಯ ಮೌಲ್ಯಕ್ಕೆ ನಿದರ್ಶನವಾಗಿದೆ. ವಿಶೇಷಚೇತನ ಮಕ್ಕಳ ಬಾಳಿಗೆ ಹಾಗೂ ಆ ಕುಟುಂಬದ ಪಾಲಿಗೆ ಬೆಳಕಾಗಿದ್ದು ಸರ್ಜಿ ಇನ್‌ಸ್ಟಿಟೂಟ್. ಇದು ವಿಶೇಷ ಚೇತನ ಮಕ್ಕಳ ತರಬೇತಿ ಕೇಂದ್ರ. ಡಾ.ಧನಂಜಯ ಸರ್ಜಿಯವರ ಈ ಮಾನವೀಯ ಕಳಕಳಿಯಿಂದ ಅಲ್ಲಿ ಸೇರ್ಪಡೆಗೊಂಡ ಮಕ್ಕಳು ಎಲ್ಲರಂತೆ ತಿರುಗಾಡಬಲ್ಲ, ಓಡಾಡಬಲ್ಲ ಹಾಗೆ ಮಾತೂ ಆಡಬಲ್ಲ ಶಕ್ತಿಯನ್ನು ಪಡೆದಿದ್ದಾರೆ. ಈ ಸಂಸ್ಥೆ  ನನ್ನಂತಹ ನೂರಾರು ಕುಟಂಬಗಳ ಬಾಳಿನ ಹೊಸ ಆಶಾಕಿರಣ ಎಂದರೆ ತಪ್ಪಿಲ್ಲ ಎನ್ನುತ್ತಾರೆ ಆ ಮಕ್ಕಳ ಹೆತ್ತವರು. ಶಿವಮೊಗ್ಗದ…

Read More

ಮಡಿಕೇರಿ ಮೇ 30 NEWS DESK : ಹಾಡಹಗಲೇ ಪೊಲೀಸ್ ಸಿಬ್ಬಂದಿಯ ಮನೆಗೇ ಕಳ್ಳರು ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಪ್ರಕರಣ ಕುಶಾಲನಗರ ಸಮೀಪದ ಮಾದಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪಿ.ಸಿ.ಸುನಿಲ್ ಎಂಬುವವರ ಮನೆಯ ಹಿಂಬಾಗಿಲು ಒಡೆದು ನುಗ್ಗಿದ ಚೋರರು 15 ಸಾವಿರ ರೂ. ನಗದು ಮತ್ತು 40 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ. ಸಮೀಪದ ಮನೆಯಲ್ಲಿ ಕೂಡ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸೋಮವಾರಪೇಟೆ ಮೇ 30 NEWS DESK : ಕೊಡಗಿನ ಮಹಿಳೆಯೊಬ್ಬರು ಎವರೆಸ್ಟ್ ಬೇಸ್ ಕ್ಯಾಂಪ್ ಮೂಲಕ ಸಾಹಸ ಮಾಡಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಸಮೀಪದ ಬಡುಬನ ಹಳ್ಳಿಯ ನಿವಾಸಿ ದಿವಂಗತ ಮಲ್ಲಪ್ಪನವರ ಪುತ್ರಿ ಡಾ.ಬಿ.ಎಂ.ಲತಾ ಅವರೇ ಎವರೆಸ್ಟ್ ಸಾಧಕಿ. ಬೆಂಗಳೂರಿನಲ್ಲಿ ಸ್ತ್ರೀರೋಗ ತಜ್ಞೆಯಾಗಿರುವ ಇವರು ಕ್ರೀಡೆಯಲ್ಲಿ ಹಾಗೂ ಟ್ರಕ್ಕಿಂಗ್ ನಲ್ಲಿ ಆಸಕ್ತಿ ಹೊಂದಿದವರು. ಇತ್ತೀಚೆಗೆ ಇವರಿಗೆ ಎವರೆಸ್ಟ್ ಶಿಖರ ಏರಬೇಕೆಂಬ ಹಂಬಲ ಶುರುವಾಯಿತು. ಅದಕ್ಕಾಗಿ ನೇಪಾಳ ಮೂಲದ ಕಂಪೆನಿಯೊಂದರ ಮಾರ್ಗದರ್ಶನದಲ್ಲಿ 6 ತಿಂಗಳ ತರಬೇತಿ ಪಡೆದುಕೊಂಡರು. ಪ್ರತಿ ನಿತ್ಯ 10ಕಿ.ಮೀ ಓಡುವುದು, ನಡೆಯುವುದು ಮತ್ತು ಚಿಕ್ಕ ಪುಟ್ಟ ಬೆಟ್ಟಗಳನ್ನು ಹತ್ತುವುದು ಈ ಅಭ್ಯಾಸ ಯಶಸ್ವಿಯಾಗಿ ಮುಗಿಸಿದ ನಂತರ ಏಪ್ರಿಲ್ 28 ರಿಂದ ಮೇ 11ರೊಳಗೆ ಪರ್ವತಾರೋಹಣಕ್ಕೆ ಸಿದ್ಧರಾದರು. ಭಾರತದ ವಿವಿಧೆಡೆಗಳಿಂದ ತಂಡಗಳು ಬಂದಿದ್ದವು. 57 ವರ್ಷದ ಲತಾ ಅವರ ತಂಡದಲ್ಲಿ 30, 40ವರ್ಷದ ಒಟ್ಟು ಎಂಟು ಮಂದಿ ಇದ್ದರು. ಪ್ರತಿನಿತ್ಯ ಹತ್ತರಿಂದ ಹದಿನೈದು ಕಿಲೋಮೀಟರ್ ಏರುವುದು, ನಂತರ ವಿಶಾಂತಿ ಪಡೆಯುವುದು…

Read More

ವಿರಾಜಪೇಟೆ ಮೇ 30 NEWS DESK : ಹೆಗ್ಗಳ ಗ್ರಾಮದಲ್ಲಿರುವ ಶ್ರೀ ಭದ್ರಕಾಳಿ ಮತ್ತು ನಾಗ ದೇವಾಲಯದ ವಾರ್ಷಿಕ ಪೂಜಾ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿರುವ ಶ್ರೀ ನಾಗ ದೇವರಿಗೆ ಹಾಲು ಮತ್ತು ಸೀಯಾಳ ದ ಅಭಿಷೇಕ ಹಾಗೂ ನಾಗ ತಂಬಿಲ ಸೇವೆಯು ನಡೆಯಿತು. ನಂತರ ಮಂಗಳಾರತಿ ಸೇವೆಗಳು ನೆರವೇರಿತು. ಶ್ರೀ ಭದ್ರಕಾಳಿ ದೇವರಿಗೆ ವಿಶೇಷ ಅಲಂಕಾರ ಪೂಜೆ, ಉಷಾ ಪೂಜೆ ಸಲ್ಲಿಸಿ ಅರ್ಚನೆ ಮಾಡಲಾಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ, ಅನ್ನ ಸಂತರ್ಪಣಾ ಕಾರ್ಯಕ್ರಮ ಜರುಗಿತು. ಸಂಜೆ ದೀಪಾರಾಧನೆ, ಕುರ್ದಿ ಪೂಜೆ, ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ಮಡಿಕೇರಿ ಮೇ 30 NEWS DESK : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂ.3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದೆ. ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಸ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ…

Read More

ಮಡಿಕೇರಿ ಮೇ 30 NEWS DESK : ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರು ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿದ್ದು, ಈ ಬಾರಿ ವಿಧಾನ ಪರಿಷತ್ ಸ್ಥಾನವನ್ನು ಅಲ್ಪಸಂಖ್ಯಾತರೊಬ್ಬರಿಗೆ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಕೊಡಗಿನಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಬೇಧಿಸುವಲ್ಲಿ ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ಗೆಲುವಿನಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿದ್ದವು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಅಲ್ಪಸಂಖ್ಯಾತರ ಮತಗಳಿದ್ದು, ಇದರಲ್ಲಿ ಶೇ.99 ರಷ್ಟು ಮತಗಳು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊರಕಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದರು. ಕರ್ನಾಟಕ ವಿಧಾನ ಪರಿಷತ್ ನ 11 ಸದಸ್ಯರುಗಳ ಅಧಿಕಾರಾವಧಿ ಜೂ.17 ರಂದು ಕೊನೆಗೊಳ್ಳಲಿದೆ. ಅಲ್ಪಸಂಖ್ಯಾತ ಆಕಾಂಕ್ಷಿಗಳಲ್ಲಿ ಜಿಲ್ಲೆಯ ಓರ್ವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಇಬ್ಬರು ಶಾಸಕರ…

Read More

ವಿರಾಜಪೇಟೆ ಮೇ 30 NEWS DESK : ಕೊಡವ ಪೊಮ್ಮಕ್ಕಡ ಒಕ್ಕೂಟದ ಮಹಾಸಭೆಯು ವಿರಾಜಪೇಟೆ ಕೊಡವ ಸಮಾಜದ ಆವರಣದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಯವಂಡ ಇಂದಿರಾ ತಪ್ಪಡಕ ಕಟ್ಟಿ, ಚಪ್ಪಂಡ ಲಲಿತ ಪ್ರಾರ್ಥಿಸಿದರು. ಗೌರವ ಕಾರ್ಯದರ್ಶಿ ಬಯವಂಡ ಇಂದಿರಾ ಬೆಳ್ಳಿಯಪ್ಪ ಸ್ವಾಗತಿಸಿ, ವಾರ್ಷಿಕ ವರದಿಯನ್ನು ಮಂಡಿಸಿದರು. ಖಜಾಂಚಿ ತಾತಂಡ ಯಶು ಕಭೀರ್ ವಾರ್ಷಿಕ ಲೆಕ್ಕ ಪತ್ರ ವರದಿಯನ್ನು ಮಂಡಿಸಿದರು. ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಒಕ್ಕೂಟ ನಡೆದು ಬಂದ ಹಾದಿಯನ್ನು ಮೆಲಕು ಹಾಕಿದರು. ಹಾಗೂ ಎಲ್ಲರಿಗೂ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಸ್ವ ಇಚ್ಛೆಯಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಯವರಿಗೆ ನೀಡಿದರು. ಆದರೆ ಮಹಾಸಭೆ ಅವರ ರಾಜೀನಾಮೆಯನ್ನು ಸ್ವೀಕರಿಸದೆ, ಅಧ್ಯಕ್ಷಸ್ಥಾನದಲ್ಲಿ ಮುಂದುವರಿಯುವಂತೆ ಒಕ್ಕೊರಲಿನಿಂದ ಮನವಿ ಮಾಡಿದರು. ಅಲ್ಲದೇ ಸರ್ವನು ಮತದಿಂದ ಅವರೇ ಮುಂದುವರಿಯುವಂತೆ ತೀರ್ಮಾನಿಸಲಾಯಿತು. ವೇದಿಕೆಯಲ್ಲಿ ಸಲಹಾ ಸಮಿತಿ ಸದಸ್ಯರಾದ ಬಿದ್ದಂಡ ರಾಣಿ ಉತ್ತಯ್ಯ, ಹಾಗೂ…

Read More

ಮಡಿಕೇರಿ ಮೇ 30 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿಯ ವಿನೋದ್ ಮೆಡಿಕಲ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂದತ್ವ ನಿಯಂತ್ರಣ ವಿಭಾಗ ಹಾಗೂ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಸುವರ್ಣ ಭವನದಲ್ಲಿ ನಡೆದ ಶಿಬಿರದಲ್ಲಿ ನೇತ್ರ ತಜ್ಞ ಡಾ.ಸಿ.ಆರ್.ಪ್ರಶಾಂತ್ ಅವರು ಕಣ್ಣು ತಪಾಸಣೆ ನಡೆಸಿದರು. ಆರೋಗ್ಯ ಸಿಬ್ಬಂದಿಗಳಾದ ರವಿ ಆರ್ಯನ್, ರವಿಕುಮಾರ್ ಹಾಗೂ ಆದರ್ಶ್ ಕಣ್ಣಿನ ದೃಷ್ಟಿಯನ್ನು ಪರಿಶೀಲಿಸಿ ವರದಿ ನೀಡಿದರು. ಇದೇ ಸಂದರ್ಭ ಮಡಿಕೇರಿಯ ವಿನೋದ್ ಮೆಡಿಕಲ್ಸ್ ನಿಂದ ಉಚಿತ ಔಷಧಿ ವಿತರಿಸಲಾಯಿತು. ಅಗತ್ಯವಿದ್ದವರು ಉಚಿತ ಕನ್ನಡವನ್ನು ಜೂನ್ 18 ರಂದು ಕೊಡಗು ಗೌಡ ನಿವೃತ್ತ ನೌಕರರ ಸಂಘದ ಮೂಲಕ ಪಡೆಯಬಹುದು ಎಂದು ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದರು. ಮುಖ್ಯ…

Read More

ಮಡಿಕೇರಿ ಮೇ 29 NEWS DESK : ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಶಿಕ್ಷಕರು ಸಿಬ್ಬಂದಿಗಳೊಂದಿಗೆ ಮತಯಾಚಿಸಿದರು. ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶೀಲಾ ಡಿಸೋಜ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರುಗಳು ಹಾಜರಿದ್ದರು.  

Read More

ಮಡಿಕೇರಿ ಮೇ 29 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ ಸಂಬಂಧಿಸಿದಂತೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯು ಇದೇ ಜೂ.3 ರಂದು ನಡೆಯಲಿದೆ. ಜೂ.3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ನೈರುತ್ಯ ಪದವೀಧರರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಸಂಬಂಧ ಮತದಾನ ನಡೆಯುವ ಮತಗಟ್ಟೆ ವಿವರ ಇಂತಿದೆ. (ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ). ಜಿಲ್ಲೆಯ ಮತಗಟ್ಟೆ ಸಂಖ್ಯೆ 30-ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಚೇರಿ, ಮತಗಟ್ಟೆ ಸಂಖ್ಯೆ 31-ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮತಗಟ್ಟೆ ಸಂಖ್ಯೆ 32-ಮಡಿಕೇರಿ ನಗರಸಭೆ ಸಭಾಂಗಣ (ಬಲಭಾಗ), ಮತಗಟ್ಟೆ 32ಎ- ನಗರಸಭೆ ಸಭಾಂಗಣ(ಎಡಭಾಗ), ಮತಗಟ್ಟೆ 33-ವಿರಾಜಪೇಟೆ ಪುರಸಭೆ ಕಚೇರಿ, ಮತಗಟ್ಟೆ ಸಂಖ್ಯೆ 34- ಪೊನ್ನಂಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಮತದಾನ ನಡೆಯಲಿದೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಒಟ್ಟು 1578 ಮತದಾರರು ಇದ್ದು,…

Read More