ಮಡಿಕೇರಿ ಮೇ 16 NEWS DESK : 24ನೇ ಕೊಡವ ಕೌಟುಂಬಿಕ ಹಾಕಿ ಉತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸುವುದರ ಮೂಲಕ ಕುಂಡ್ಯೋಳಂಡ ಕುಟುಂಬಸ್ಥರು ಗಮನಾರ್ಹ ಸಾಧನೆ ಮಾಡಿದ್ದಾರೆ. ದೇಶದ ಯಾವುದೇ ಮೂಲೆಗೆ ತೆರಳಿದರೂ ಹಾಕಿ ಉತ್ಸವದ ಮಾತು ಕೇಳಿ ಬರುತ್ತಿದೆ. ಹಾಕಿ ಉತ್ಸವದ ಮೂಲಕ ಗಿನ್ನಿಸ್ ದಾಖಲೆಗೆ ಸೇರ್ಪಡೆ ಮಾಡಲು ಕಾರಣಕರ್ತರಾದ ಕುಂಡ್ಯೋಳಂಡ ಕುಟುಂಬಸ್ಥರ ಕಾರ್ಯ ಶ್ಲಾಘನೀಯ ಎಂದು ಒಲಂಪಿಯನ್, ಲೆಫ್ಟಿನಲ್ ಕರ್ನಲ್ ಬಾಳೆಯಡ ಸುಬ್ರಮಣಿ ಹೇಳಿದರು. ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಕುಟುಂಬಸ್ಥರ ಐನ್ ಮನೆಯಲ್ಲಿ ಆಯೋಜಿಸಲಾಗಿದ್ದ ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಗೆ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಂಡ್ಯೋಳಂಡ ಕುಟುಂಬ ಸಣ್ಣ ಕುಟುಂಬವಾದರೂ ಅವರ ಸಾಧನೆ ದೊಡ್ಡದು. ದೇಶ ವಿದೇಶಗಳಲ್ಲಿ ಕೌಟುಂಬಿಕ ಹಾಕಿಯ ಖ್ಯಾತಿ ಹಬ್ಬಿರುವುದು ಶ್ಲಾಘನೀಯ ಎಂದರು. ರಾಷ್ಟ್ರೀಯ ವೀಕ್ಷಕ ವಿವರಣೆಗಾರ ಚೆಪ್ಪುಡಿರ ಕಾರ್ಯಪ್ಪ ಮಾತನಾಡಿ ಪುಟ್ಟ ಜಿಲ್ಲೆ ಕೊಡಗಿನಲ್ಲಿ ಎಲ್ಲಾ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಹಾಕಿ ಕೂರ್ಗ್, ಹಾಕಿ ಕರ್ನಾಟಕ, ಹಾಕಿ ಇಂಡಿಯಾ ಸೇರಿದಂತೆ…
ಲೇಖಕ: admin
ಮಡಿಕೇರಿ ಮೇ 6 NEWS DESK : ಪ್ರಾಶರ್ ಸೆನ್ಸರ್ ಟೆಕ್ನಾಲಜಿ ಮತ್ತು ಹಾಕಿ ಕರ್ನಾಟಕದ ಸಹಯೋಗದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಹಾಕಿ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡುವ ಸಲುವಾಗಿ ಹಾಕಿ ಕಿಟ್ ವಿತರಿಸಲಾಯಿತು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಮುಖರು ಮತ್ತು ಅಂತಾರಾಷ್ಟ್ರೀಯ ಹಾಕಿ ಆಟಗಾರರಾದ ಕರಿನೆರವಂಡ ಸೋಮಣ್ಣ ಮತ್ತು ವಿ.ಆರ್.ರಘುನಾಥ್ ಹಾಕಿ ಸ್ಟಿಕ್ಸ್, ಬಾಲ್ಸ್, ಬಿಪ್ಸ್, ಶಿನ್ ಗಾರ್ಡ್ ಒಳಗೊಂಡ ಕಿಟನ್ನು ವಿತರಿಸಿದರು. ಈ ಸಂದರ್ಭ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ರಾಖಿ ಪೂವಣ್ಣ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ಮೇ 16 NEWS DESK : ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೋಂತಿ ಗಣೇಶ್ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಪೊನ್ನಿಮಾಡ ಎಸ್.ಸುರೇಶ್, ಉಪಾಧ್ಯಕ್ಷರುಗಳಾಗಿ ನವೀನ್ ಅಂಬೆಕಲ್, ಎ.ಎನ್.ರವಿ ಉತ್ತಪ್ಪ ಸುನಿಲ್ ಮಾದಪ್ಪ ಕೆ.ಕೆ, ಬಿ.ಟಿ.ತಿಮ್ಮ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಬಿ.ಅರ್.ಪ್ರಮೋದ್, ಟಿ.ಅರ್.ಶರವಣ ಕುಮಾರ್, ಪ್ರಭಾಕರ ನೆಲ್ಲಿತ್ತಾಯ, ಶ್ರೀನಿವಾಸ ಕೆ.ಕೆ ಹಾಗೂ ಮಹೇಶ್ ಪೈ ಎನ್.ಎಂ ಅವರುಗಳು ನೇಮಕಗೊಂಡರು. ನಗರದ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಬಿ.ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ವಾಣಿಜ್ಯೋದ್ಯಮಿಗಳು, ವರ್ತಕರು ಹಾಗೂ ಗ್ರಾಹಕರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ. ಕೊಡಗು ಜಿಲ್ಲೆಯ ಹಿತದೃಷ್ಟಿಯಿಂದ ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದ್ದೇವೆ ಎಂದರು.
ಕುಶಾಲನಗರ ಮೇ 16 NEWS DESK : ವಿಧಾನಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ಜರುಗಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆ.ಕೆ.ಮಂಜುನಾಥ್ ಕುಮಾರ್ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಶಿಕ್ಷಣ ಸಚಿವ ಮಧುಬಂಗಾರಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಹೊನ್ನಾಳಿ ಶಾಸಕ ಶಾಂತನಗೌಡ, ಎಂಎಲ್ ಸಿ ಮಂಜುನಾಥ ಭಂಡಾರಿ, ಮಾಜಿ ಎಂಎಲ್ಸಿ ಪ್ರಸನ್ನಕುಮಾರ್, ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ ಕುಮಾರ್, ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾಗುವ ಮೂಲಕ ಶಿಕ್ಷಕರ ಬವಣೆಗಳನ್ನು ಬಗೆಹರಿಸಬೇಕಿದೆ. ಕಳೆದ ಅವಧಿಗಳಲ್ಲಿ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜನಪ್ರತಿನಿಧಿಗಳು ಶಿಕ್ಷಕರ ಹಿತ ಕಾಯದೇ ಸ್ವಹಿತ ಮೆರೆದಿದ್ದು ಈ ಬಾರಿ ಕ್ಷೇತ್ರದ ಶಿಕ್ಷಕರು ನನ್ನನ್ನು ಚುನಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿ ಮೇ 16 NEWS DESK : ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೀನಾಳ ಪೋಷಕರಿಗೆ ವೈಯಕ್ತಿಕ ಪರಿಹಾರ ನೀಡಿದ ಸಚಿವರು, ನೀತಿ ಸಂಹಿತೆ ಸಡಿಲವಾದ ಬಳಿಕ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಪ್ರಮುಕರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಮೇ 16 NEWS DESK : ಗಾಂಧಿ ಯುವಕ ಸಂಘ ಕಂಡಕರೆ ವತಿಯಿಂದ ನೀಡಲಾಗುವ “ಮಾದರಿ ಸಮಾಜ ಸೇವಕ” ಪ್ರಶಸ್ತಿಗೆ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಹಿರಿಯ ಸಲಹೆಗಾರ ಮತ್ತು ಎಸ್.ಎನ್.ಡಿ.ಪಿ ಮಡಿಕೇರಿ ಶಾಖಾ ಅಧ್ಯಕ್ಷ ಟಿ.ಆರ್ ವಾಸುದೇವ್ ಹಾಗೂ ಕೊಡಗು ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್ ಆಯ್ಕೆಯಾಗಿದ್ದಾರೆ. ಟಿ.ಆರ್ ವಾಸುದೇವ್ ಮತ್ತು ಪಿ.ಎಂ ಲತೀಫ್ ಸುಂಟ್ಟಿಕೊಪ್ಪ ಅವರ ಸಮಾಜ ಸೇವೆಯನ್ನು ಗುರುತಿಸಿ ಮಾದರಿ ಸಮಾಜ ಸೇವಕ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಜೂ.9 ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಮತ್ತು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ.
ಮಡಿಕೇರಿ ಮೇ 16 NEWS DESK : ಕುಶಾಲನಗರ ಕೊಪ್ಪ ಗೇಟ್ ಬಳಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸಂದರ್ಭದಲ್ಲಿ ಶಾಸಕ ಡಾ. ಮಂತರ್ ಗೌಡ, ಕುಶಾಲನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮುಖಂಡರಾದ ಕೆ.ಪಿ.ಚಂದ್ರಕಲಾ, ಆರ್.ಪಿ.ಚಂದ್ರಶೇಖರ್ ಸೇರಿದಂತೆ ಇತರ ಕಾರ್ಯಕರ್ತರು ಡಾ. ಜಿ.ಪರಮೇಶ್ವರ್ ಅವರಿಗೆ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಪುರಸಭೆ ಸದಸ್ಯ ಶಿವಶಂಕರ್. ದಿನೇಶ್ ಪ್ರಕಾಶ್. ನವೀನ್. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್. ಕೆ.ಪಿ.ಸಿ.ಸಿ ಸದಸ್ಯರಾದ ಮಂಜುನಾಥ್, ಹೆಬ್ಬಾಲೆ ರಂಜು, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್, ಸಾಜಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು. ಇದಕ್ಕೂ ಮುನ್ನ ಮಾದಪುರ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಹಂಸ ಹಾಗೂ ಸಮರ್ಪಡೆ ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಟಿ.ಎಂ.ಅಯ್ಯಪ್ಪ, ಕೆ.ಎ.ಯಾಕೂಬ್ , ಸುರಯ್ಯ ಅಬ್ರಾರ್, ಜುಲೆಕಾಬಿ, ಶೀಲಾ ಡಿಸೋಜಾ, ಕೆ.ಎ.ಆದಮ್,…
ಬೆಂಗಳೂರು ಮೇ 15 NEWS DESK : ಪಶ್ಚಿಮ ಘಟ್ಟಗಳಂತಹ ಕಾಡುಗಳನ್ನು ನಾಶಪಡಿಸುವ ಯೋಜನೆಗಳ ಚಿತ್ರಣವಿರುವ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ಎಂಥಾ ಕಥೆ ಮಾರಾಯ’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಚೆನ್ನೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆಗೆ ಪಾತ್ರವಾಗಿದ್ದ ‘ಎಂಥಾ ಕಥೆ ಮಾರಾಯ’ ಸಿನಿಮಾ ಪ್ರಸ್ತುತ ಏರ್ಟೆಲ್ ಎಕ್ಸ್ಟ್ರೀಮ್, ಹಂಗಾಮಾ ಪ್ಲೇ, ಒಟಿಟಿ ಪ್ಲೇಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಸಿನಿಮಾ ಬೆಂಗಳೂರಿನ ಪ್ರಸಕ್ತ ನೀರಿನ ಬಿಕ್ಕಟ್ಟನ್ನು ಎತ್ತಿ ತೋರಿಸುತ್ತದೆ ಮತ್ತು ಜಾಗತಿಕ ತಾಪಮಾನದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದೆ. ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ಅವರು ತಾವೇ ಬರೆದಿರುವ ‘ಕಾಡಿನ ನೆಂಟರು‘ ಕಥಾಸಂಕಲನವನ್ನು ಆಧರಿಸಿ “ಎಂಥಾ ಕಥೆ ಮಾರಾಯ” ಸಿನಿಮಾವನ್ನು ತೆರೆಗೆ ತಂದಿದ್ದಾರೆ.
ಸಿಂಗಾಪುರ ಮೇ 15 NEWS DESK : ಸಿಂಗಾಪುರದ 4ನೇ ಪ್ರಧಾನಮಂತ್ರಿಯಾಗಿ ಅರ್ಥಶಾಸ್ತ್ರಜ್ಞ ಲಾರೆನ್ಸ್ ವಾಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 72 ವರ್ಷದ ಲೀ ಹ್ಸಿಯೆನ್ ಲೂಂಗ್ ಎರಡು ದಶಕಗಳ ನಂತರ ಅಧಿಕಾರ ತ್ಯಜಿಸಿದ ನಂತರ ಅವರ ಉತ್ತರಾಧಿಕಾರಿಯಾಗಿ 51ವರ್ಷದ ವಾಂಗ್ ಅಧಿಕಾರ ವಹಿಸಿಕೊಂಡರು. ಇಬ್ಬರೂ ಆಡಳಿತಾರೂಢ ಪೀಪಲ್ಸ್ ಆಕ್ಷನ್ ಪಾರ್ಟಿ (PAP) ಗೆ ಸೇರಿದವರು.
ನವದೆಹಲಿ ಮೇ 15 NEWS DESK : ಗುಜರಾತ್ ನ ಮಾಜಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕಮಲಾ ಬೆನಿವಾಲ್ (97) ಅವರು ಇಂದು ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘಾವಧಿಯ ಅನಾರೋಗ್ಯದ ಕಾರಣ ಬೆನಿವಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.






