ಲೇಖಕ: admin

ಪಲ್ನಾಡು ಮೇ 15 NEWS DESK : ಲಾರಿ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಸಂಪೂರ್ಣ ಅಗ್ನಿಗಾಹುತಿಯಾಗಿ ಆರು ಮಂದಿ ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ. ಈ ಭೀಕರ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಲಕಲುರಿಪೆಟ್ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ. ಪ್ರಜ್ವಲ್​ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು. ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು. ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು. ಎಸ್​ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು. ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು. ಕಾರು ಚಾಲಕ ಕಾರ್ತಿಕ್​ನನ್ನು ಕೂಡಲೇ ಬಂಧಿಸಬೇಕು. ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ​ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು. ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ…

Read More

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೂರ್ವ ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. `ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 42 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ನಾಯಿ ಕಡಿತಕ್ಕೆ 3,144, ಹಾವು ಕಡಿತಕ್ಕೆ 89 ಮಂದಿ, ಬೇಧಿ(ಡಯೇರಿಯಾ) ಪ್ರಕರಣಗಳು 1,486, ಕಾಲರಾ 2 ಪ್ರಕರಣ,…

Read More

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಮತ್ತು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ 21ನೇ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭವು ಮೇ 21 ರಂದು ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ(ಕುಶಾಲನಗರ ಹಾರಂಗಿ ರಸ್ತೆ) ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಎಂ.ಪ್ರವೀಣ್‍ಕುಮಾರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಅಧ್ಯಾಪಕರು, ಸಾಹಿತಿ ಮಾರುತಿ ದಾಸಣ್ಣವರ್, ಕುಶಾಲನಗರ ಸಾಹಿತಿ ಮತ್ತು ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಸುನಿತಾ ಲೋಕೇಶ್, ಕುಶಾಲನಗರ ಸರ್ಕಾರ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಸುನೀಲ್ ಕುಮಾರ್, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ…

Read More

ಮಡಿಕೇರಿ ಮೇ 15 NEWS DESK : ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮೇ, 16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More

ಮಡಿಕೇರಿ ಮೇ 15 NEWS DESK : ಶ್ರೀಮಂಗಲದ ಕುರ್ಚಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಚೋಕಿರ ಕಲ್ಪನ ತಿಮ್ಮಯ್ಯ ನೇತೃತ್ವದಲ್ಲಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ವಲಯ ಅಧ್ಯಕ್ಷ ಪೆಲ್ವಿನ್ ಪೂಣಚ್ಚ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಭ ಮಾತನಾಡಿದ ಕಾರ್ಯಕರ್ತರು ಶಾಸಕ ಪೊನ್ನಣ್ಣ ಅವರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗ್ರಾ.ಪಂ ಸದಸ್ಯ ಸುದಿ ಪೊನ್ನಪ್ಪ, ಪ್ರಮುಖರಾದ ಚೋಕಿರ ತಿಮ್ಮಯ್ಯ, ಪ್ರಶಾಂತ್ ಕಾಳಿಮಾಡ, ಮುಕ್ಕಾಟ್ಟಿರ ಅಯ್ಯಪ್ಪ, ಬೋಸ್ ಮಾದಪ್ಪ, ಮಚ್ಚಮಾಡ ಉದಯ ಹಾಜರಿದ್ದರು.

Read More

ಪೊನ್ನಂಪೇಟೆ ಮೇ 15 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ನೂತನವಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಸಂಸ್ಥೆಯ ನಾಲ್ವರು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ವಿರಾಜಪೇಟೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಟ್ಟಮುಡಿ ಹಳೇ ಜುಮಾ ಮಸೀದಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಗೊಂಡಿರುವ ಕೆ.ಎಂ.ಎ. ಕೋಶಾಧಿಕಾರಿ ಹರಿಶ್ಚಂದ್ರ ಎ. ಹಂಸ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಎಂ.ಎ ಸಂಘಟನಾ ಕಾರ್ಯದರ್ಶಿ ಮೀತಲತಂಡ ಇಸ್ಮಾಯಿಲ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ 3ನೇ ಬಾರಿಗೆ ಆಯ್ಕೆಗೊಂಡಿರುವ ಮತ್ತು ಐಮಂಗಲ (ಕೊಮ್ಮೆತೋಡು) ಬದ್ರಿಯ ಜುಮಾ ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುವ ಕೋಳುಮಂಡ ರಫೀಕ್ ಮತ್ತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕೆ.ಎಂ.ಎ ನಿರ್ದೇಶಕ  ಕುಂಡಂಡ ಎ. ರಜಾಕ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ…

Read More

ಪೊನ್ನಂಪೇಟೆ, ಮೇ 15 NEWS DESK : ಎಮ್ಮೆಮಾಡಿನ ಸೂಫಿ ಶಹೀದ್ ವಲಿಯುಲ್ಲಾರವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಯುವ ಇತಿಹಾಸ ಪ್ರಸಿದ್ಧ ಕುತ್ತುನಾಡ್ ಉರೂಸ್  ಮೇ 20ರಂದು  ಜರುಗಲಿದೆ. ಹಿಂದೂ ಮತ್ತು ಮುಸ್ಲಿಂ ಮತ ಸೌಹಾರ್ದತೆಯ ಪ್ರತೀಕವಾಗಿ ಶತಮಾನಗಳಿಂದ ನಡೆದು ಬರುತ್ತಿರುವ ಈ ಸಾಮರಸ್ಯದ ಕುತ್ತುನಾಡ್ ಉರೂಸ್ ಸಮಾರಂಭವು ಬಿ.ಶೆಟ್ಟಿಗೇರಿ ಸಮೀಪದ ಕೊಂಗಣ ಗ್ರಾಮದಲ್ಲಿರುವ ಸೂಫಿ ಶಹೀದ್ ಅವರ  ಬಿಡಾರದ ಆವರಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8.30 ಗಂಟೆಗೆ ಕೊಂಗಣ ಗ್ರಾಮದ ಕರ್ತೂರ ಕುಟುಂಬದ ತಕ್ಕ ಮುಖ್ಯಸ್ಥ ಕೆ.ಕೆ.ದೇವಯ್ಯ ಮತ್ತು ಬೇಗೂರು-ಮಾಪಿಳ್ಳೆತೋಡು ಗ್ರಾಮದ ತಕ್ಕ ಮುಖ್ಯಸ್ಥ ಆಲೀರ ಎ.ಕುಟ್ಟಿಯಾಲಿ ಅವರು ಜಂಟಿಯಾಗಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ನಡೆಯುವ ಸಾಮೂಹಿಕ ಪ್ರಾರ್ಥನೆಗೆ ಬೇಗೂರು-ಮಾಪಿಳ್ಳೆತೋಡು ಕಲ್ಲಾಯಿ ಜುಮಾ ಮಸೀದಿಯ ಖತೀಬರಾದ ಅಬ್ದುಲ್ ರಜಾಕ್ ಸಖಾಫಿ ನೇತೃತ್ವ ನೀಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಭಂಡಾರ ಜಮಾಯಿಸುವ ಕಾರ್ಯಕ್ರಮ ಆರಂಭಗೊಳ್ಳಲಿದೆ. ಇದಾದ ನಂತರ ಬೆಳಿಗ್ಗೆ 10 ಗಂಟೆಗೆ ಹಾಲು-ಅನ್ನ ಪ್ರಸಾದ ವಿತರಣೆ…

Read More

ಕುಶಾಲನಗರ ಮೇ 15 NEWS DESK : ಅವಕಾಶಗಳನ್ನು ಬಳಸಿಕೊಂಡು ಗುರಿ ತಲುಪಲು ಪ್ರಯತ್ನಿಸುವುದರೊಂದಿಗೆ ಇತರರ ಬೆಳವಣಿಗೆಯಲ್ಲಿ ಕೂಡ ಪಾತ್ರ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಎಸ್.ಎಲ್.ಎನ್ ಕಾಫಿ ಸಂಸ್ಥೆಯ ಮುಖ್ಯಸ್ಥ ವಿಶ್ವನಾಥನ್ ಕರೆ ನೀಡಿದರು. ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಆಶ್ರಯದಲ್ಲಿ ನಡೆದ ವರ್ತಕರ ಸ್ನೇಹ ಮಿಲನ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವರ್ಷವಿಡಿ ವ್ಯಾಪಾರ ಉದ್ಯಮದ ನಡುವೆ ಜಂಜಾಟದಲ್ಲಿ ತೊಡಗಿರುವ ವರ್ತಕ ವೃಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತಮ್ಮ ನೋವು ನಲಿವನ್ನು ಹಂಚಿಕೊಂಡಿರುವುದು ಶ್ಲಾಘನೀಯ ಅಂಶವಾಗಿದೆ ಎಂದರು. ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಸನ್ಮಾನಕ್ಕೆ ಭಾಜನರಾದ ಕುಶಾಲನಗರದ ಸಹಕಾರಿ ಧುರೀಣರಾದ ಟಿ.ಆರ್.ಶರವಣಕುಮಾರ್ ಮಾತನಾಡಿ, ಪ್ರತಿಯೊಬ್ಬ ಸದಸ್ಯರು ಕೂಡ ಸಂಘಟನೆಯಲ್ಲಿ ತನ್ನ ಜವಾಬ್ದಾರಿಯನ್ನು ನಿಭಾಯಿಸಬೇಕು. ಒಗ್ಗಟ್ಟಿನ ಮೂಲಕ ಎಲ್ಲಾ ಸಮಸ್ಯೆಗಳಿಗೂ ಶಾಶ್ವತ ಪರಿಹಾರ ಸಾಧ್ಯ ಎಂದರು. ಸಂಸ್ಥೆಯ ಮೂಲಕ ನೂತನವಾಗಿ ನಿರ್ಮಾಣವಾಗಲಿರುವ ಸ್ವಂತ ಭವನ ಕಟ್ಟಲು ಎಲ್ಲರೂ ಕೈಜೋಡಿಸುವಂತೆ ಅವರು ಕೋರಿದರು. ಕುಶಾಲನಗರ ಚೇಂಬರ್ ಆಫ್ ಕಾಮರ್ಸ್…

Read More

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಎನ್.ಎಸ್.ಯು.ಐ ಘಟಕದಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಮಾತನಾಡಿ, ಎಲ್ಲಾ ದಾನಕ್ಕಿಂತಲೂ ಅಮೂಲ್ಯವಾದ ರಕ್ತದಾನ. ಪ್ರತೀಯೋವ೯ರೂ ರಕ್ತದಾನ ಮಾಡುವ ಮೂಲಕ ರಕ್ತ ಅಗತ್ಯ ಇರುವವರಿಗೆ ನೆರವಾಗಬೇಕು ಎಂದು ಹೇಳಿದರು. ಪ್ರಸ್ತುತ ರಕ್ತನಿಧಿ ಕೇಂದ್ರದಲ್ಲಿ ರಕ್ತ ಲಭ್ಯವಿದೆಯಾದರೂ ತುತು೯ ಸಂದಭ೯ದಲ್ಲಿ ರೋಗಿಗಳಿಗೆ ನೀಡಲು ರಕ್ತದ ಸಂಗ್ರಹ ಮತ್ತಷ್ಟು ಪ್ರಮಾಣದಲ್ಲಿ ಅಗತ್ಯವಿದೆ ಎಂದು ಡಾ.ಕರುಂಬಯ್ಯ ಹೇಳಿದರು. ವಾಹನ ಅಪಘಾತ ಪ್ರಮಾಣ ಕೂಡ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಅಪಘಾತಕ್ಕೀಡಾದ ವ್ಯಕ್ತಿಗಳಿಗೂ ರಕ್ತದ ತೀವ್ರ ಅಗತ್ಯ ಕಂಡು ಬರುತ್ತಿದೆ. ಈ ಎಲ್ಲಾ ಹಿನ್ನಲೆಯಲ್ಲಿ ದಾನಿಗಳು ಹೆಚ್ಚಿನ ಪ್ರಮಾಣದಲ್ಲಿ ರಕ್ತ ನೀಡಲು ಮುಂದಾಗುವಂತೆ  ಮನವಿ ಮಾಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಎನ್ ಎಸ್ ಯು ಐ ಘಟಕದ ಜಿಲ್ಲಾಧ್ಯಕ್ಷ ರಾಶಿದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ನ ಜಿಲ್ಲಾಧ್ಯಕ್ಷ  ತೇನ್ನಿರಾ ಮೈನಾ,  ಕಾಲೇಜಿನ…

Read More