ಮಡಿಕೇರಿ ಮೇ 29 NEWS DESK : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂ.1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಲೇಖಕ: admin
ಸೋಮವಾರಪೇಟೆ ಮೇ 29 NEWS DESK : ಮಂಡಲ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಕೊಡವ ಸಮಾಜ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು, ಕೊಡಗಿನ ಪದವೀಧರರ ಧ್ವನಿಯಾಗಿ ವಿಧಾನ ಪರಿಷತ್ನಲ್ಲಿ ಕಾರ್ಯನಿರ್ವಹಿಸುವೆ ಎಂದು ಹೇಳಿದರು. ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿಯಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಎನ್ಡಿಓ ಮೂಲಕ ಚುನಾವಣೆಗೆ ಸ್ಪರ್ಧಿಸಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರ ಸಂಖ್ಯೆ ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ನ ಭೋಜೇಗೌಡ ಹಾಗೂ ಪದವೀಧರರ ಕ್ಷೇತ್ರದಿಂದ ಬಿಜೆಪಿಯ ಧನಂಜಯ ಸರ್ಜಿ ಅವರನ್ನು ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ಮತ್ತೋರ್ವ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರವನ್ನು…
ಶಿಕಾರಿಪುರ ಮೇ 29 NEWS DESK : ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದೆ. ಇಬ್ಬರ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿಕಾರಿಪುರ ತಾಲ್ಲೂಕು ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡ ಅವರು, ಜೆಡಿಎಸ್ ಮೈತ್ರಿಯೊಂದಿಗೆ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಇನ್ನೆರಡು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿದೆ, ಕಳೆದ ಲೀಕಸಭಾ ಚುನಾವಣೆಯಲ್ಲಿ ಹೊಂದಾಣಿಕೆಯಂತೆ ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಚುನಾವಣೆ ಮಾಡಲಾಗುತ್ತಿದೆ. ಈ ಚುನಾವಣೆಯನ್ನು ಎರಡೂ ಪಕ್ಷಗಳೂ ಬಹಳ ಗಂಭೀರವಾಗಿ ಪರಿಗಣಿಸಿವೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 15 ರಿಂದ 20 ಸ್ಥಾನ ಗೆಲ್ಲುತ್ತೇವೆಂಬ ಭ್ರಮೆಯಲ್ಲಿತ್ತು, ಇದೀಗ ಅವರ ನಿರೀಕ್ದೆ, ಉತ್ಸಾಹ ಕಡಿಮೆಯಾಗುತ್ತಿದೆ, ಜೂನ್ 4 ರಂದು ಹೆಚ್ಚಿನ ಸೀಟು ಗೆಲ್ಲುವ ಮೂಲಕ ಬಿಜೆಪಿ ವಿಜಯೋತ್ಸವ ಆಚರಿಸಲಿದೆ, ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರು ಮತ್ತೊಮ್ಮೆ ಪ್ರಧಾನ…
ಮಡಿಕೇರಿ ಮೇ 29 NEWS DESK : ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ತಿಲಕ್ನಗರ ಮೈಸೂರು ಇಲ್ಲಿ 2 ವರ್ಷಗಳ ವಿಶೇಷ ಡಿ.ಎಡ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಶೇಷ ಡಿ.ಎಡ್ ಕಾರ್ಯಕ್ರಮಗಳು ಸಾಮಾನ್ಯ ಡಿ.ಎಡ್ಗೆ ಸಮಾನವಾಗಿವೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.50(ಎಸ್.ಸಿ/ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಜೂನ್, 10 ರೊಳಗೆ ಅರ್ಜಿ ಸಲ್ಲಿಸಬಹುದು. ಈ ತರಬೇತಿಗೆ ಸಂಬಂಧಿಸಿದ ವಿವರವಾದ ಮಾಹಿತಿ ಹಾಗೂ ಅರ್ಜಿ ನಮೂನೆ ಮೈಸೂರು ಜಿಲ್ಲಾ ವೆಬ್ಸೈಟ್ನಲ್ಲಿ ಲಭ್ಯವಿರುತ್ತದೆ. ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಿಸುವ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು, ಅಂಧ ಮಕ್ಕಳ ಬೋಧಕರ ತರಬೇತಿ ಕಾರ್ಯಕ್ರಮದಲ್ಲಿ ಎಸ್.ಸಿ/ ಎಸ್.ಟಿ ಮತ್ತು ವಿಕಲಚೇತನ ವ್ಯಕ್ತಿಗಳಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಎಸ್.ಎಸ್ಎಲ್ಸಿ, ದ್ವಿತೀಯ ಪಿಯುಸಿ ಅಂಕಪಟ್ಟಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ವಿಕಲಚೇತನ ವ್ಯಕ್ತಿಯಾಗಿದ್ದಲ್ಲಿ ಯುಡಿಐಡಿ ಗುರುತಿನ ಪತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪ…
ಮಡಿಕೇರಿ ಮೇ 29 NEWS DESK : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್…
ಪುತ್ತೂರು ಮೇ 29 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಐಇಇಇ ಮಂಗಳೂರು ಉಪ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಐಎಸ್ಟಿಇ ನವದೆಹಲಿ, ವಿವೇಕಾನಂದ ಸೆಂಟರ್ ಫಾರ್ ರೀಸರ್ಚ್ ಸ್ಟಡೀಸ್, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಹಭಾಗಿತ್ವದಲ್ಲಿ ಮೇ 31 ರಂದು ರಾಜ್ಯಮಟ್ಟದ ಐ2 ಕನೆಕ್ಟ್-2024 (I2CONECCT-2024) ಪ್ರಾಜೆಕ್ಟ್ಗಳ ಪ್ರದರ್ಶನ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಐಇಇಇ ಮಂಗಳೂರು ಉಪ ವಿಭಾಗದ ಪ್ರಮುಖ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ನವ-ನವೀನ ಯೋಜನೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಅಲ್ಲದೆ ಅತ್ಯುತ್ತಮ ಸಾಧನೆಗಳನ್ನು ಗುರುತಿಸುವ ಸ್ಪರ್ಧೆಯೂ ಇರುತ್ತದೆ. ರಾಜ್ಯಾದ್ಯಂತ ವಿವಿಧ ಇಂಜಿನಿಯರಿಂಗ್, ಎಂಬಿಎ ಮತ್ತು ಎಂಸಿಎ ವಿಭಾಗದ 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರಿನ ಯುನಿಕೋರ್ಟ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಆಂಟೋನಿಯೋ ಧರ್ಮದಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಟಿ.ಎಸ್.ಭಟ್…
ಮಡಿಕೇರಿ ಮೇ 29 NEWS DESK : ಕರ್ನಾಟಕ ವಿಧಾನ ಪರಿಷತ್ ನ 11 ಸದಸ್ಯರುಗಳ ಅಧಿಕಾರವಧಿ ಜೂನ್ 17 ರಂದು ಕೊನೆಗೊಳ್ಳಲಿದೆ. ಈ ಬಾರಿ ಕೊಡಗು ಜಿಲ್ಲೆಯ ಓರ್ವ ಅಲ್ಪಸಂಖ್ಯಾತ ಅಭ್ಯರ್ಥಿಗೆ ವಿಧಾನ ಪರಿಷತ್ ಪ್ರವೇಶಿಸಲು ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಋಣ ತೀರಿಸಲಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಕಸರತ್ತು ಆರಂಭಗೊಂಡಿದೆ. ಶೇಕಡಾ 20 ರಷ್ಟಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದಲ್ಲಿಂದ ಇಲ್ಲಿಯವರೆಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿದೆ. ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಕೂಡ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಶೇ.99 ರಷ್ಟು ಮತಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಿರುವುದು ಗಮನಾರ್ಹ.…
ಮಡಿಕೇರಿ ಮೇ 29 NEWS DESK : ಖಾಲಿ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಪದವೀಧರರ ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ.ಶೇಖ್ ಬಾವ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರಭಾವದಿಂದ ಲೋಕಸಭೆ ಮತ್ತು ವಿಧಾನಸಭೆಗೆ ಚಿಂತನಾಶೀಲರು ಆಯ್ಕೆಯಾಗಿ ಬರುವ ಅವಕಾಶ ಕಡಿಮೆ ಎಂದು ಸಂವಿಧಾನಕರ್ತರು ಮೇಲ್ಮನೆಯ ವ್ಯವಸ್ಥೆಯನ್ನು ಮಾಡಿದರು. ಮೇಲ್ಮನೆಗೆ ಪರೋಕ್ಷ ಚುನಾವಣೆ ಇರುವುದರಿಂದ ಸಮರ್ಥರು ಹಾಗೂ ಯೋಗ್ಯರು ಆಯ್ಕೆಯಾಗುವ ಅಗತ್ಯವಿದೆ. ಆದರೆ ಅವಕಾಶವಾದಿಗಳಿಗೆ, ಪಕ್ಷಾಂತರಿಗಳಿಗೆ, ಅನರ್ಹರಿಗೂ ಅವಕಾಶ ಕಲ್ಪಿಸುವ ಮೂಲಕ ಸಂವಿಧಾನದ ಆಶಯಗಳ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ವಿಧಾನ ಪರಿಷತ್ತನ್ನು ತಮ್ಮ ರಾಜಕೀಯ ಮೇಲಾಟಕ್ಕೆ ಒಳಸಿಕೊಳ್ಳುತ್ತಿರುವುದು ವಿಷಾದಕರ ಎಂದರು. ನಾನು ಉನ್ನತ ಶಿಕ್ಷಣವನ್ನು ಪಡೆದು ಕೊಲ್ಲಿ ದೇಶದ ಹೆಸರಾಂತ ಕಂಪನಿಗಳಲ್ಲಿ ಹುದ್ದೆಗಳನ್ನು ನಿರ್ವಹಿಸಿ ಅಪಾರ ಅನುಭವಗಳಿಸಿದ್ದೇನೆ. ನನ್ನ ಸೇವಾವಧಿಯಲ್ಲಿ ಮತ್ತು ಸ್ವದೇಶಕ್ಕೆ ಮರಳಿದ ನಂತರವೂ ಹಲವು ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ…
ಸುಂಟಿಕೊಪ್ಪ ಮೇ 29 NEWS DESK : ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದ 20ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ಪ್ರಧಾನ ಅರ್ಚಕ ಮಹಾಬಲಭಟ್ ಹಾಗೂ ಹಿರಿಯ ಅರ್ಚಕ ಹಾ.ಮಾ.ಗಣೇಶ್ ಶರ್ಮಾ ನೇತೃತ್ವದಲ್ಲಿ ನಾಗಮಂಡಲದ ಅರ್ಚಕರಾದ ಸಂತೋಷ್ ಹೆಬ್ಬಾರ್, ರಾಘವೇಂದ್ರ ಭಟ್, ರವಿ ಭಟ್ ಮುಂಜಾನೆಯಿಂದಲೇ ದೇವರಿಗೆ ಶುದ್ಧಪೂಜೆ, ಪ್ರಾರ್ಥನೆ, ಪುಣ್ಯಾಹವಾಚನ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಹರದೂರು ಹೊಳೆಯಿಂದ ಜಲಕುಂಭಗಳನ್ನು ತಂದು ದೇವರಿಗೆ ಅಭಿಷೇಕ ಮಾಡಲಾಯಿತು. ನಂತರ ನವಗ್ರಹ ಹೋಮ, ಪೂರ್ವಕ 9 ತೆಂಗಿನಕಾಯಿಗಳ ಗಣಹೋಮ, ಪೂರ್ಣಾಹುತಿಯ ನಂತರ ದೇವರಿಗೆ ಪಂಚಾಮೃತಾಭಿಷೇಕ, ಪೂರ್ವಕತವಕ, ಕಲಭಿಷೇಕ, ಪೂರ್ವಕ ಮಹಾಪೂಜೆಯ ನಂತರ ಅಲಂಕಾರ, ವಿವಿಧ ಹೂವುಗಳ ಪೂಜೆಗಳು ನಡೆದವು. ಮಧ್ಯಾಹ್ನ ಮಹಾಮಂಗಳಾರತಿ, ಅಷ್ಟವದನ ಸೇವೆ, ತೀರ್ಥಪ್ರಸಾದ ವಿನಿಯೋಗದ ನಂತರ ನೆರೆದಿದ್ದ ಭಕ್ತರಿಗೆ ಅನ್ನಸಂರ್ಪಣೆ ನೆರವೇರಿತು. ದೇವಾಲಯದ ಟ್ರಸ್ಟಿ ಎ.ಲೋಕೇಶ್ ಕುಮಾರ್, ಉತ್ಸವ ಸಮಿತಿಯ ಅಧ್ಯಕ್ಷ ಎಂ.ಮಂಜುನಾಥ್, ಕಾರ್ಯದರ್ಶಿ ಸುನಿಲ್ ಕುಮಾರ್, ಪದಾಧಿಕಾರಿಗಳಾದ ಸದಾಶಿವ ರೈ, ಚಂದುಸುರೇಶ್, ಅರುಣ್ ಪೂಜಾರಿ, ದಿವಾಕರ…
ಸುಂಟಿಕೊಪ್ಪ ಮೇ 29 NEWS DESK : ಸುಂಟಿಕೊಪ್ಪ ಗ್ರಾ.ಪಂ ಮತ್ತು ಕೊಡಗು ಜಿಲ್ಲಾ ಕಾರ್ಮಿಕರ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಮತ್ತು ಇತರೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸುಂಟಿಕೊಪ್ಪ ಗ್ರಾ.ಪಂ ಕಚೇರಿಯಲ್ಲಿ ನಡೆದ ಶಿಬಿರದಲ್ಲಿ ನುರಿತ ವೈದ್ಯರಿಂದ ಕಣ್ಣು, ಕಿವಿ, ಹೃದಯ, ಲಿವರ್, ಕಿಡ್ನಿಯ ಕಾರ್ಯ ಕ್ಷಮತೆಯನ್ನು ಮತ್ತು ಬಿ.ಪಿ, ಶುಗರ್ ಪರೀಕ್ಷಿಸಿ ಸೂಕ್ತ ಮಾರ್ಗದರ್ಶನ ನೀಡಲಾಯಿತು. ಅಲ್ಲದೆ ಅಗತ್ಯವಿರುವವರಿಗೆ ಔಷಧಿ ನೀಡಲಾಯಿತು. ಡಾ. ಜಿ.ಎಸ್.ಸಚಿನ್, ನೇತ್ರ ತ್ರಜ್ಞ ಪ್ರಕಾಶ್, ಶ್ರವಣ ತ್ರಜ್ಞರಾದ ಪಿ.ಎಚ್.ಮೋನಿಶಾ, ಲ್ಯಾನ್ಸಿ, ರೇಷ್ಮ ಪರ್ವೀನ್, ಟಿ.ಕೆ.ಮೋನಿಕಾ, ಟಿ.ಎಲ್.ಯಶ್ವಂತ್ ಶಿಬಿರವನ್ನು ನಡೆಸಿಕೊಟ್ಟರು. ಸುಂಟಿಕೊಪ್ಪ ವ್ಯಾಪ್ತಿಯ ನೊಂದಾಯಿತ 70ಕ್ಕೂ ಹೆಚ್ಚು ಮಂದಿ ಕಟ್ಟಡ ಕಾರ್ಮಿಕರು ಹಾಗೂ ಕುಟುಂಬಸ್ಥರು ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು.






