ಲೇಖಕ: admin

ಸೋಮವಾರಪೇಟೆ ಮೇ 14 NEWS DESK : ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಹೆರಿಗೆಗಾಗಿ ಕರೆದೊಯ್ಯುವ ಸಂದರ್ಭ ಮಹಿಳೆಯೊಬ್ಬರು ಮಾರ್ಗ ಮಧ್ಯೆ 108 ಆಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣ ಮಂಗಳವಾರ ಬೆಳಿಗ್ಗೆ ನಡೆದಿದೆ. ಬಳಗುಂದ ಗ್ರಾಮದ ಕಾಫಿ ತೋಟದ ಲೈನ್‌ನಲ್ಲಿ ವಾಸವಾಗಿರುವ ಅಸ್ಸಾಂ ಮೂಲದ ಕಾರ್ಮಿಕ ಶಹಜಾನ್ ಅವರ ಪತ್ನಿ ಹಿರಾದನ್(37) ನಾಲ್ಕನೆ ಮಗುವಿಗೆ ಜನ್ಮ ನೀಡಿದ್ದಾರೆ. ರಕ್ತದೊತ್ತಡ ಹೆಚ್ಚಾಗಿದ್ದ ಕಾರಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಸಂದರ್ಭ, ಹೊಸತೋಟದ ಬಳಿ ಹೆರಿಗೆ ನೋವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಿಬ್ಬಂದಿಗಳು ಆಂಬುಲೆನ್ಸ್ ನಲ್ಲೇ ಹೆರಿಗೆ ಮಾಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ.

Read More

ಮಡಿಕೇರಿ ಮೇ 14 NEWS DESK : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹಾರಂಗಿ ನಾಲೆ ಸಮೀಪ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ವಾಸವಾಗಿರುವ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಬೆಳ್ಯಪ್ಪ (28) ಎಂಬುವವರೇ ಮೃತರು ಎಂದು ತಿಳಿದು ಬಂದಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಅವಿವಾಹಿತರಾಗಿದ್ದಾರೆ.

Read More

ಬೆಂಗಳೂರು ಮೇ 14 NEWS DESK : ಹತ್ತನೇ ತರಗತಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಸರಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತಾಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 5 ಲಕ್ಷ ರೂ. ನೀಡಿ ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂದರ್ಭ 3ನೇ ಸ್ಥಾನ ಪಡೆದ ಮಂಡ್ಯದ ಸರಕಾರಿ ಶಾಲೆಯ ವಿದ್ಯಾರ್ಥಿ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದರು. ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು, ಶಾಲೆಯವರು ಹಾಗೂ ನವನೀತ್, ಅವರ ಕುಟುಂಬದ ಸದಸ್ಯರು ಸದಾಶಿವನಗರದ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದರು. ಡಿಕೆಶಿ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್‌ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು. ಈ ಸಂದರ್ಭ ಮಾತನಾಡಿದ ಉಪಮುಖ್ಯಮಂತ್ರಿಗಳು ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ…

Read More

ಮಡಿಕೇರಿ ಮೇ 14 NEWS DESK : ಜಾನಪದ ಬ್ರಹ್ಮ ನಡಿಕೇರಿಯಂಡ ಚಿಣ್ಣಪ್ಪ ಅವರ 150ನೇ ಜನ್ಮದಿನದ ಅಂಗವಾಗಿ ಮುಂದಿನ ವರ್ಷ ಏಪ್ರಿಲ್‍ನಲ್ಲಿ ನಡೆಯುವ ಕೊಡವ ಜಾನಪದ ನಮ್ಮೆಗೆ ನಡಿಕೇರಿಯಂಡ ಬಲ್ಯಮನೆಯಲ್ಲಿ ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಚಾಲನೆ ನೀಡಿದರು. ಕೊಡವಾಮೆರ ಕೊಂಡಾಟ ಸಂಘಟನೆಯ ನೇತೃತ್ವದಲ್ಲಿ ಕರಡ ಗ್ರಾಮದ ನಡಿಕೇರಿಯಂಡ ಬಲ್ಯಮನೆಯಲ್ಲಿ ನೆಲ್ಲಕ್ಕಿ ನಡುಬಾಡೆಯಲ್ಲಿ ಒಕ್ಕಣೆ ಕಟ್ಟಿ ಅಕ್ಕಿ ಹಾಕುವ ಮೂಲಕ ಚಾಲನೆ ನೀಡಿದರು. ನಡಿಕೇರಿಯಂಡ ಒಕ್ಕ ಬಲ್ಯಮನೆಗೆ ಸೇರಿದ ಕೊಡವಾಮೆರ ಕೊಂಡಾಟ ಸಂಘಟನೆಯ ಪದಾಧಿಕಾರಿಗಳನ್ನ ನಡಿಕೇರಿಯಂಡ ಒಕ್ಕ ಪ್ರಮುಖರು ಕೊಡವ ಸಂಪ್ರದಾಯಿಕವಾಗಿ ಸ್ವಾಗತಿಸಿದರು. ನಂತರ ನಡಿಕೇರಿಯಂಡ ಒಕ್ಕ ಕೈಮಡಕ್ಕೆ ತೆರಳಿ ಕೊಡವಾಮೆರ ಕೊಂಡಾಟ ಸಂಘಟನೆ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಹಾಗೂ ಒಕ್ಕ ಸದಸ್ಯರು, ನಡಿಕೇರಿಯಂಡ ಗುರು ಕಾರೋಣರು, ಕೊಡಗಿನ ಎಲ್ಲಾ ಒಕ್ಕಕಾರೋಣರು, ಇಗ್ಗುತಪ್ಪ ಕಾವೇರಮ್ಮೆ ಮತ್ತು ಕೊಡವು ನಾಡಿನ ಎಲ್ಲಾ ದೇವಾನು ದೇವತೆಯರನ್ನ ಪ್ರಾರ್ಥಿಸಿ, ಕೊಡವ ಜಾನಪದ ನಮ್ಮೆಯ ಯಶಸ್ಸಿಗೆ ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ…

Read More

ಮಡಿಕೇರಿ ಮೇ 14 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2024-25 ರ ಸಾಲಿನ ಪ್ರಥಮ ವರ್ಷದ ಬಿ.ಎ(ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಕನ್ನಡ ಐಚ್ಛಿಕ), ಬಿ.ಕಾಂ ಮತ್ತು ಬಿ ಬಿ ಎ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಕಾಲೇಜು ಸುಸಜ್ಜಿತವಾದ ತರಗತಿ ಕೊಠಡಿಗಳನ್ನು ಮತ್ತು ನುರಿತ ಬೋಧಕರನ್ನು ಒಳಗೊಂಡಿದೆ. ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅವಶ್ಯಕತವಿರುವ 14,000 ಪುಸ್ತಕಗಳನ್ನು ಹೊಂದಿರುವ ವಿಶಾಲವಾದ ಗ್ರಂಥಾಲಯ, ಇ-ಗ್ರಂಥಾಲಯ, ಸ್ಮಾರ್ಟ್ ಕ್ಲಾಸ್ ಸೌಲಭ್ಯ, ವೈಫೈ ಸೌಲಭ್ಯ, ಸಿ.ಸಿ.ಕ್ಯಾಮರಾ ಕಣ್ಗಾವಲಿನಲ್ಲಿರುವ ಸುಸಜ್ಜಿತ ಕಟ್ಟಡ, ಮಹಿಳಾ ದೌರ್ಜನ್ಯ ನಿರ್ಮೂಲನಾ ಸಮಿತಿ, ಮಾದಕ ವಸ್ತು ನಿರ್ಮೂಲನಾ ಸಮಿತಿ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಆಧುನಿಕ ರೀತಿಯ ಬೋಧನಾ ಕ್ರಮ, ಉದ್ಯೋಗ ಮಾರ್ಗ ದರ್ಶನ ಕೇಂದ್ರ, ವಿದ್ಯಾರ್ಥಿ ನಿಲಯ, ಕ್ಯಾಂಟೀನ್ ವ್ಯವಸ್ಥೆ, ಇಕೋಕ್ಲಬ್,ವಿದ್ಯಾರ್ಥಿ ಭ್ರಾತೃತ್ವ ವೇದಿಕೆ, ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ಸಂಘ, ಅಂತರಕಾಲೇಜು ವಿದ್ಯಾರ್ಥಿಗಳ ಕಲಿಕಾ ವಿನಿಮಯ ಕಾರ್ಯಕ್ರಮಗಳು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ, ಎನ್‍ಎಸ್‍ಎಸ್, ರೋವರ್ಸ್, ರೇಂಜರ್ಸ್,…

Read More

ಮಡಿಕೇರಿ ಮೇ 14 NEWS DESK : ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಇತ್ತೀಚೆಗೆ ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ ಇಪ್ಪತ್ತನೇ ಬ್ಯಾಚ್ ನ ಒಟ್ಟು 20 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ 10 ಹಂತಗಳಿರುವ ಅಬಾಕಸ್ ಕೋರ್ಸ್ ಅನ್ನು ಈ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಹ್ಮಣ್ಯಂ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ ಇಲ್ಲಿಯವರೆಗೆ ಮಡಿಕೇರಿ ಕೇಂದ್ರದಿಂದ ಒಟ್ಟು 540 ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಿದ್ದಾರೆ. ಇದು ರಾಜ್ಯದ ಇತರ ಬ್ರೈನೋಬ್ರೈನ್ ಕೇಂದ್ರಗಳಲ್ಲೆ ಅತ್ಯಧಿಕ ಮತ್ತು ಎಲ್ಲಾ ಕೇಂದ್ರಗಳಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ಮುಖ್ಯಸ್ಥೆ ಹಾಗೂ ತರಬೇತುದಾರರಾದ ಮಾಪಂಗಡ ಕವಿತಾ ಕರಂಬಯ್ಯ ಅವರ ಕಾರ್ಯ ವೈಖರಿ ಮತ್ತು ಬದ್ಧತೆಯನ್ನು ಕೊಂಡಾಡಿದರು. ಮಕ್ಕಳ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ನೋಡಿ ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ…

Read More

ಮಡಿಕೇರಿ ಮೇ.14 NEWS DESK  : ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮೇ 15 ರಂದು ಸೂರ್ಲಬ್ಬಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:.30 ಗಂಟೆಗೆ  ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಇತ್ತೀಚೆಗೆ ದಾರುಣವಾಗಿ ಹತ್ಯೆಯಾದ ಬಾಲಕಿ ಮೀನಾ ಮನೆಗೆ ಭೇಟಿ ನೀಡಲಿದ್ದಾರೆ.

Read More

ಮಡಿಕೇರಿ ಮೇ.14 NEWS DESK  : ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ತಾಕೀತು ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಸಂಬಂಧ ಈಗಾಗಲೇ ಅಧಿನಿಯಮ ಜಾರಿಯಾಗಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ಗಡಿಭಾಗ ಸೇರಿದಂತೆ ನಗರ, ಪಟ್ಟಣ ಹಾಗೂ ಎಲ್ಲೆಡೆ ಅಳವಡಿಸಿರುವ/ ಅಳವಡಿಸುವ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ‘ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿನ ನಾಮಫಲಕದಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ…

Read More

ಮಡಿಕೇರಿ ಮೇ 14 NEWS DESK : ಹಾಕಿ ಕ್ರೀಡಾ ಮೈದಾನಕ್ಕೆ ಜಾಗ ಮಂಜೂರು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡವ ಭಾಷಿಕ ಸಮುದಾಯಗಳ ಕೂಟ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಕಕ್ಕಬ್ಬೆಯ ಪ್ರೌಢಶಾಲಾ ಮೈದಾನದಲ್ಲಿ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರ ನೇತೃತ್ವದಲ್ಲಿ ಎಲ್ಲಾ 21 ಮೂಲನಿವಾಸಿ ಭಾಷಿಕ ನಿರ್ದೇಶಕರುಗಳ ನಿಯೋಗ ಶಾಸಕರನ್ನು ಭೇಟಿಯಾಗಿ ಬೇಡಿಕೆಗಳ ಕುರಿತು ಚರ್ಚಿಸಿತು. ಸುಮಾರು ಒಂದು ಲಕ್ಷಕ್ಕೂ ಮೇಲ್ಪಟ್ಟು ಜನಸಂಖ್ಯೆ ಹೊಂದಿರುವ ವಿಶಿಷ್ಟ ಸಂಸ್ಕೃತಿಯ, ಕೊಡವ ಭಾಷೆ ಮಾತನಾಡುವ ಕೊಡಗಿನ ಮೂಲ ನಿವಾಸಿ 21 ಸಮುದಾಯಗಳ ಸಂವಿಧಾನಬದ್ಧ ಮೂಲಭೂತ ಹಕ್ಕುಗಳನ್ನು ಈಡೇರಿಸಬೇಕು. ಜನಾಂಗದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಬೇಕು, ಸುಸಜ್ಜಿತ ಮತ್ತು ಮೂಲಭೂತ ಸೌಲಭ್ಯಗಳಿರುವ ಕಲ್ಯಾಣ ಮಂಟಪ ನಿರ್ಮಾಣ, ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಹಾಕಿ ಕ್ರೀಡಾ ಮೈದಾನಕ್ಕೆ ಪೈಸಾರಿ ಜಾಗ ಮಂಜೂರು ಮಾಡುವುದು, ಮೂಲನಿವಾಸಿ ಜನಪದ ಅಧ್ಯಯನ ಕೇಂದ್ರ, ಪುರಾತನ…

Read More

ಮಡಿಕೇರಿ ಮೇ 14 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮದಲ್ಲಿ ನಟ್ ಕುಂದ್ ನದಿಗೆ ಎರಡು ಕಿಲೋಮೀಟರ್ ಅಂತರದಲ್ಲಿ ನಿರ್ಮಿಸಿರುವ 3 ಚೆಕ್ ಡ್ಯಾಮ್ ಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ವೈಫಲ್ಯ ಕಂಡಿರುವ ಯೋಜನೆಗಳನ್ನು ಮುಂಗಾರು ಮುನ್ನ ಸರಿಪಡಿಸಲು ಇಂಜಿನಿಯರ್,  ಅಧಿಕಾರಿ ವರ್ಗ ಹಾಗೂ ಕಾಮಗಾರಿ ನಿರ್ಮಾಣ ಮಾಡಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ಸಂದರ್ಭ ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಅಕ್ರಮ ಸಕ್ರಮೀಕರಣ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ, ಬಿರುನಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣಮಾಡ ಪ್ರೀತಮ್, ಗ್ರಾ.ಪಂ ಅಧ್ಯಕ್ಷ ಬುಟ್ಟಿಯಂಡ ನಾಣಯ್ಯ, ಬೊಳ್ಳೇರ ಪೊನ್ನಪ್ಪ, ಅಣ್ಣಳಮಾಡ ಚಿಣ್ಣಪ್ಪ, ಪ್ಯಾಕ್ಸ್ ನಿರ್ದೇಶಕ ಕರ್ತಮಾಡ ಮಿಲನ್, ಕಾಳಿಮಾಡ ರಶಿಕ್, ಕರ್ತಮಾಡ ನಂದ, ಕಳಕಂಡ ಜೀತು ಕುಶಾಲಪ್ಪ,ಬಲ್ಯಮೀದರೀರ ರನ್ನು ಮತ್ತಿತರರು ಹಾಜರಿದ್ದರು.

Read More