ಕಡಂಗ ಮೇ 14 NEWS DESK : ಬಪ್ಪನಾಡು ಕಡಂಗಮರೂರು ಗ್ರಾಮದ ಶ್ರೀ ಭಗವತಿ, ಈಶ್ವರ, ಅಯ್ಯಪ್ಪ ಹಾಗೂ ಪರಿವಾರ ದೇವರ ಜಾತ್ರಾ ಮಹೋತ್ಸವವು ಮೇ 16 ರಿಂದ 21ರ ವರೆಗೆ ನಡೆಯಲಿದೆ. ವೇದಮೂರ್ತಿ ಶ್ರೀ ಎ.ಜೆ.ಪಂಡರೀಶ ಅರಳಿತ್ತಾಯ ತಂತ್ರಿಗಳು ಹಾಗೂ ಸಂಗಡಿಗರ ನೇತೃತ್ವದಲ್ಲಿ ಆರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮೇ 16 ರಂದು ಬೆಳಿಗ್ಗೆ 9 ಗಂಟೆಗೆ ಪುಣ್ಯಹ, ಗಣ ಹೋಮ, ತೋರಣ ಹಾಕುವುದು, ಮಹಾಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6 ಗಂಟೆಗೆ ಸಾಮೂಹಿಕ ಪ್ರಾರ್ಥನೆ ಭ0ಡಾರ ತರುವುದು, ದೇವರ ಬಲಿ, ಮಹಾಪೂಜೆ, ಪ್ರಸಾದ ವಿನಿಯೋಗ ನೆರವೇರಲಿದ್ದು, ಉಳಿದ ದಿನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. ಮೇ 16 ರಿಂದ 19ರವರೆಗೆ ದೇವರ ಕಟ್ಟು ಇರುವುದರಿಂದ ಗ್ರಾಮಸ್ಥರು ಸಹಕರಿಸುವಂತೆ ಮನವಿ ಮಾಡಿದರು. ವರದಿ : ನೌಫಲ್ ಕಡಂಗ
ಲೇಖಕ: admin
ನಾಪೋಕ್ಲು ಮೇ 14 NEWS DESK : ಜಿಲ್ಲೆಯ ವಿಶಿಷ್ಟ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಂದು ಜನಾಂಗದ ಪಾತ್ರ ಪ್ರಮುಖ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕಕ್ಕಬೆಯ ಪ್ರೌಢಶಾಲಾ ಆಟದ ಮೈದಾನದಲ್ಲಿ ಕೊಡಗು ಕಣಿಯ ವಿದ್ಯಾ ಅಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಣಿಯ ಜನಾಂಗದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದವಾದ ವಿವಿಧ ಸಾಮೂದಾಯಗಳ ಸಂಖ್ಯೆಯು ಕಡಿಮೆ ಇದ್ದರೂ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಸಮುದಾಯವನ್ನು ಒಗ್ಗೂಡಿಸುವುದು ಹೆಮ್ಮೆಯ ವಿಷಯ. ಜಿಲ್ಲೆಯ ಪ್ರತಿಯೊಂದು ಜನಾಂಗವು ತನ್ನದೇ ಆದ ಆಚಾರ-ವಿಚಾರ ಪದ್ಧತಿ ಪರಂಪರೆಯನ್ನು ಹೊಂದಿದೆ. ಒಂದು ಜನಾಂಗವನ್ನು ಬಿಟ್ಟು ಜಿಲ್ಲೆ ಒಂದಾಗಲು ಸಾಧ್ಯವಿಲ್ಲ ಎಲ್ಲರೂ ಒಟ್ಟಾದರೆ ಮಾತ್ರ ಜಿಲ್ಲೆಯ ಸಂಸ್ಕೃತಿ ಆಚಾರ ವಿಚಾರ ಬೆಳೆಯಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಡಾ.ಮೇಚಿರ ಸುಭಾಷ್ ನಾಣಯ್ಯ , ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ನಪ್ಪ, ಬುಡಕಟ್ಟು ಜನಾಂಗದ ಅಧ್ಯಕ್ಷ ಕುಡಿಯರ ಮುತ್ತಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕಣಿಯ ವಿದ್ಯಾ…
ವಾರಣಾಸಿ ಮೇ 14 NEWS DESK : 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ ಪಕ್ಷದ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಂಸತ್ತಿನ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಮುಂದಿನ ತಿಂಗಳು ಜಿ -7 ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.
ಮಡಿಕೇರಿ ಮೇ 14 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡವ ಅಡುಗೆ ಸ್ಪರ್ಧೆ ನಡೆಯಿತು. ಮಹಿಳೆಯರು ವಿವಿಧ ಭಾಗಗಳಲ್ಲಿ ಪಾಲ್ಗೊಂಡು ಕೊಡವ ಸಾಂಪ್ರದಾಯಿಕ ಅಡುಗೆ ತಯಾರಿಸಿ ಸಂಭ್ರಮಿಸಿದರು. ಕೋಳಿಕರಿ-ಪುಟ್ಟ್ : ಕನ್ನಂಡ ಸುನಿತ ಸಂಪತ್ ಪ್ರಥಮ, ಪೊನ್ನಚೆಟ್ಟಿರ ಡಾಟಿ ದ್ವಿತೀಯ ಪಂದಿಕರಿ-ಪುಟ್ಟ್/ಒಟ್ಟಿ : ಕಲಿಯಂಡ ಜೀಜಾ ಅಚ್ಚಪ್ಪ ಪ್ರಥಮ, ಪಾಲಚಂಡ ಸುಮಿ ಉತ್ತಪ್ಪ ದ್ವಿತೀಯ ಕೂಟ್ಕರಿ-ಪುಟ್ಟ್ : ಕನ್ನಂಡ ಸುನಿತ ಸಂಪತ್ ಪ್ರಥಮ, ಅಕ್ಕಪಂಡ ನಮಿತ ತಮ್ಮಯ್ಯ ದ್ವಿತೀಯ ಪಜ್ಜಿ : ಚೆಟ್ರಂಡ ಭಾರತಿ ಪ್ರಥಮ, ಕಲಿಯಂಡ ಜೀಜಾ ಅಚ್ಚಪ್ಪ ದ್ವಿತೀಯ ತೊಪ್ಪು ಬರ್ತದ್ : ಅಕ್ಕಪಂಡ ಕಾವೇರಿ ಚೆಂಗಪ್ಪ ಪ್ರಥಮ, ಚೆಟ್ರಂಡ ವಸಂತಿ ದ್ವಿತೀಯ ಬರ್ತ ಪುಟ್ಟ್ : ಚೆಟ್ರಂಡ ಭಾರತಿ ಪ್ರಥಮ, ಕಲಿಯಂಡ ಜೀಜಾ ಅಚ್ಚಪ್ಪ ದ್ವಿತೀಯ ಕರಿ : ಚೆಟ್ರಂಡ ಭಾರತಿ ಪ್ರಥಮ, ಪಾಲಚಂಡ ಸುಮಿ ಉತ್ತಪ್ಪ ದ್ವಿತೀಯ ಜ್ಯೂಸ್ : ಪಾಲಚಂಡ ಸುಮಿ ಉತ್ತಪ್ಪ…
ಮಡಿಕೇರಿ ಮೇ 14 NEWS DESK : ವಿದ್ಯಾರ್ಥಿಗಳ ಬೇಸಿಗೆ ರಜೆ ಮುಗಿಯುತ್ತಾ ಬಂದಿದೆ. ಇದೇ ಮೇ 29 ರಿಂದ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನರಾರಂಭಗೊಳ್ಳಲಿವೆ. 2024- 25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ 244 ದಿನ ತರಗತಿಗಳು ನಡೆಯಲಿವೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ 121 ದಿನ ರಜೆ ಸಿಗಲಿದೆ. 18 ದಿನ ದಸರಾ ರಜೆ ಮತ್ತು 48 ದಿನ ಬೇಸಿಗೆ ರಜೆ ಇರುತ್ತದೆ.
ಸೋಮವಾರಪೇಟೆ ಮೇ 14 NEWS DESK : ಪಿಕ್ ಅಪ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿರುವ ಘಟನೆ ತಣ್ಣೀರುಹಳ್ಳ ಗ್ರಾಮದಲ್ಲಿ ನಡೆದಿದೆ. ಬೈಕ್ ಸವಾರ ಮೋರಿಕಲ್ಲು ಬಸವನಹಳ್ಳಿ ಗ್ರಾಮದ ವಿಷ್ಣು ಗಾಯಾಳು. ತಲೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಸೋಮವಾರಪೇಟೆ ಹಾಗೂ ಮಡಿಕೇರಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ. ಗಾಯಾಳುವಿನ ಸಂಬಂಧಿ ಸಿ.ಎಚ್.ರದೀಶ್ ಎಂಬವರು ನೀಡಿದ ದೂರಿನ ಮೇಲೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
HEAVY RAIN ಮುಂಬೈ ಮೇ 14 NEWS DESK : ಸುಮಾರು 100 ಅಡಿ ಎತ್ತರದ ಹೋರ್ಡಿಂಗ್ ಕುಸಿದು ಬಿದ್ದು 12 ಮಂದಿ ಮೃತಪಟ್ಟಿರುವ ಘಟನೆ ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ನಡೆದಿದೆ. ಬಿರುಗಾಳಿ ಮತ್ತು ಅಕಾಲಿಕ ಮಳೆಗೆ ಜಾಹೀರಾತು ಫಲಕ ಹೋರ್ಡಿಂಗ್ ಕುಸಿದು ಬಿದ್ದಿದ್ದು, 12 ಮಂದಿ ಸಾವನ್ನಪ್ಪಿ, 74 ಜನರು ಗಾಯಗೊಂಡಿದ್ದಾರೆ.
ಮಡಿಕೇರಿ ಮೇ 14 NEWS DESK : ಸೋಮವಾರಪೇಟೆ ರೇಂಜರ್ ಬ್ಲಾಕ್ ನಿವಾಸಿ ದಿ ಎಂ.ಎಸ್.ಶಾಂತಪ್ಪ ಐದನೇ ಪುತ್ರ ಹಾಗೂ ಕಾಫಿ ಬೆಳೆಗಾರ ಎಂ.ಎಸ್.ಉಮೇಶ್ (61) ಇಂದು ಬೆಳಿಗ್ಗೆ ನಿಧನರಾದರು. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 4 ಗಂಟೆ ಸಮಾಜದ ವೀರಶೈವ ರುದ್ರ ಭೂಮಿಯಲ್ಲಿ ನಡೆಯಲಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಮಡಿಕೇರಿ ಏ.14 NEWS DESK : ಗಾಂಧಿ ಯುವಕ ಸಂಘ ಕಂಡಕರೆ ಮತ್ತು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿಯಿಂದ ಕೊಡಲಾಗುತ್ತಿರುವ “ಬಡವರ ಬೆಳಕು” ಪ್ರಶಸ್ತಿಗೆ ಸೇವ್ ದಿ ಡ್ರೀಮ್ಸ್ ಮುಖ್ಯಸ್ಥ ಜಾಬಿರ್ ನಿಝಾಮಿ ಆಯ್ಕೆಯಾಗಿದ್ದಾರೆ. ಜಾಬಿರ್ ನಿಝಾಮಿ ಅವರು ಸೇವ್ ದಿ ಡ್ರೀಮ್ಸ್ ಮೂಲಕ ಸಾವಿರಾರು ಬಡಜೀವಗಳನ್ನು ರಕ್ಷಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅನಾರೋಗ್ಯ ಪೀಡಿತರ ಆಸ್ಪತ್ರೆ ವೆಚ್ಚವನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುವುದರ ಮೂಲಕ ಹಣ ಸಂಗ್ರಹಮಾಡಿ ಜಾಬಿರ್ ನಿಝಾಮಿ ಬಡವರ ಬೆಳಕಾಗಿದ್ದಾರೆ. ಈ ಎಲ್ಲಾ ಸಮಾಜ ಸೇವೆಯನ್ನು ಗುರುತಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷರಾದ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ವಿತರಣೆಯು ಜೂ.9 ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಬಡಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ ಎಂದು ಇಸ್ಮಾಯಿಲ್ ತಿಳಿಸಿದ್ದಾರೆ.
ಮಡಿಕೇರಿ ಮೇ 13 NEWS DESK : ವಿರಾಜಪೇಟೆ ತಾಲ್ಲೂಕಿನ ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ನಿರಂತರ ಉಪಟಳ ನೀಡುತ್ತಿರುವ ಮೂರು ಪುಂಡಾನೆಗಳನ್ನು ಸೆರೆಹಿಡಿದು ‘ರೇಡಿಯೋ ಕಾಲರ್’ ಅಳವಡಿಕೆಗೆ ಅರಣ್ಯ ಇಲಾಖೆ ಮುಂದಾಗಿದ್ದು, ಕಾರ್ಯಾಚರಣೆ ಮೇ 14 ರಿಂದ ಆರಂಭಗೊಳ್ಳಲಿದೆ. ವಿರಾಜಪೇಟೆ ವಿಭಾಗದ ತಿತಿಮತಿ ವಲಯ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ಬಿಬಿಸಿಟಿ ಎಲಿಕಲ್ ಕಾಫಿ ತೋಟ ಸೇರಿದಂತೆ ಸುತ್ತಮುತ್ತಲ ತೋಟಗಳಲ್ಲಿ ನೆಲೆ ನಿಂತಿರುವ ಈ ಪುಂಡಾನೆಗಳು, ಕಳೆದ ಹಲ ಸಮಯಗಳಿಂದ ಕೃಷಿ ಫಸಲನ್ನು ಹಾಳು ಗೆಡಹಿ, ಜನ ಜಾನುವಾರುಗಗಳ ಮೇಲೆ ದಾಳಿ ನಡೆಸುತ್ತ ಆತಂಕ ಸೃಷ್ಟಿಸುತ್ತಿವೆ. ಗ್ರಾಮೀಣ ಜನರ ಆತಂಕಕ್ಕೆ ಕಾರಣವಾಗಿರುವ ಈ ಪುಂಡಾನೆಗಳನ್ನು ಸೆರೆಹಿಡಿದು, ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸಂದರ್ಭ ಯಾವುದೇ ಅವಘಡಗಳು ಆಗದಂತೆ ಬಾಡಗ ಬಾಣಂಗಾಲ ಒಳಗೊಂಡಂತೆ ಮೇಕೂರು, ಹೊಸ್ಕೇರಿ, ಮಾಲ್ದಾರೆ, ಚೆನ್ನಯ್ಯನಕೋಟೆ, ಕರಡಿಗೋಡು, ಪುಲಿಯೇರಿ, ಹೊಸೂರು, ಇಂಜಿಲಗೆರೆ ವ್ಯಾಪ್ತಿಯ ಗ್ರಾಮಸ್ಥರು, ಸಾರ್ವಜನಿಕರು, ತೋಟ ಮಾಲೀಕರು, ಕಾರ್ಮಿಕರು, ಶಾಲಾ ಮಕ್ಕಳು ಎಚ್ಚರಿಕೆಯಿಂದ…






