ಲೇಖಕ: admin

ಸೋಮವಾರಪೇಟೆ ಮೇ 13 NEWS DESK : ಸೋಮವಾರಪೇಟೆ ತಾಲ್ಲೂಕಿನ ಸರ್ವೆ ಇಲಾಖೆ ಮತ್ತು ಕಂದಾಯ ಇಲಾಖೆಯಲ್ಲಿ ರೈತರ ಶೋಷಣೆ ನಡೆಯುತ್ತಿದೆ. ಲಂಚಕ್ಕಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಡಿ.ಕೆ.ಅರುಣ್ ಕುಮಾರ್ ಆರೋಪಿಸಿದ್ದಾರೆ. ಹೋರಾಟ ಸಮಿತಿಯ ಪದಾಧಿಕಾರಿಗಳು ಕಂದಾಯ ಇಲಾಖೆಗೆ ತೆರಳಿ ಶಿರಸ್ತೇದಾರ್ ರಮೇಶ್ ಅವರನ್ನು ಭೇಟಿಯಾಗಿ ರೈತರಿಗೆ ಆಗುತ್ತಿರುವ ಕಿರುಕುಳದ ವಿವರಿಸಿ ಮನವಿ ಸಲ್ಲಿಸಿದರು. ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದರು. ತಾಲ್ಲೂಕಿನ ಕಂದಾಯ ಗ್ರಾಮಗಳ ವಿಸ್ತೀರ್ಣ, ಗ್ರ್ಯಾಂಟ್, ದುರಸ್ತಿಯಾಗಿರುವ ಜಾಗ, ಖಾಲಿಯಿರುವ ಜಾಗದ ವಿಸ್ತೀರ್ಣವನ್ನು ಏಕರೆಯಲ್ಲಿ ನೀಡಬೇಕೆಂದು 2 ತಿಂಗಳ ಹಿಂದೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ನಿಯಮದಂತೆ ತಾಲ್ಲೂಕು ವ್ಯಾಪ್ತಿಯಲ್ಲಿ ಸಿಗಬೇಕು. ಬೇರೆ ಜಿಲ್ಲೆಯಿಂದ ಬಂದು ಹೋಗುವುದು ಸರಿಯಲ್ಲ. ನಿಗದಿತ ಸಮಯದಲ್ಲಿ ಕೆಲಸ ಮಾಡಿಕೊಡಬೇಕು. ಸಿ.ಸಿ.ಕ್ಯಾಮೆರಾ ಕಣ್ಗಾವಲಿನಲ್ಲಿ ಕೆಲಸ ಕಾರ್ಯಗಳು ನಡೆಯಬೇಕು. ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯವಾಗಬೇಕು ಎಂದು…

Read More

ಮಡಿಕೇರಿ ಮೇ 13 NEWS DESK : ಜಿಲ್ಲೆಯಲ್ಲಿ ಇದೀಗ ಪೂರ್ವ ಮುಂಗಾರು ಮಳೆ ಪ್ರಾರಂಭವಾದ ಹಿನ್ನೆಲೆ ಕಲುಷಿತ ಕುಡಿಯುವ ನೀರಿನ ಸೇವನೆಯಿಂದ ಕಾಲರಾ, ಶೀತ-ಜ್ವರ, ಕೆಮ್ಮು, ವಾಂತಿ, ಬೇದಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯ ಎಲ್ಲಾ ರಸ್ತೆ ಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ, ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್‍ಗೆಸ್ಟ್, ಹೋಮ್-ಸ್ಟೇ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿ ನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ/ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರು ನೀಡುವಂತೆ ಸೂಚಿಸಿದೆ. ಸೊಳ್ಳೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ, ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಮತ್ತು ತಯಾರಿಸಿರುವ ಎಲ್ಲಾ ಆಹಾರ ಪದಾರ್ಥಗಳನ್ನು ಸೂಕ್ತ ರಿತಿಯಲ್ಲಿ ಮುಚ್ಚಿಟ್ಟು ಸ್ವಚ್ಚವಾದ ವಿಧಾನದ ಮೂಲಕ ತಯಾರಿಕೆ ಮತ್ತು ವಿತರಣೆ ಮಾಡುವಂತೆ ತಿಳಿಸಿದೆ. ಆಹಾರ…

Read More

ಮಡಿಕೇರಿ ಮೇ 13 NEWS DESK : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಹಾರ ಪರವಾನಗಿ (ಎಫ್‍ಎಸ್‍ಎಸ್‍ಎಐ ಲೈಸನ್ಸ್) ಪಡೆದಿರುವ ತಯಾರಕರು/ ರೀ-ಪ್ಯಾಕರ್/ ರೀ-ಲೇಬರ್ ಪ್ರತಿ ವರ್ಷ ವಾರ್ಷಿಕ ವಹಿವಾಟಿನ ವಿವರವನ್ನು ಆಯಾಯ ಆರ್ಥಿಕ ವರ್ಷದ ಮೇ 31 ರ ಕಾಲಮಿತಿಯೊಳಗೆ https:\\foscos.fssai.gov.in  ವೆಬ್‍ಸೈಟ್‍ನಲ್ಲಿ ತಪ್ಪದೇ ಸಲ್ಲಿಸುವುದು. ತಪ್ಪಿದ್ದಲ್ಲಿ ವಾರ್ಷಿಕವಾಗಿ ಕಾಯ್ದೆಯಡಿ ನಿಗಧಿಯಾಗುವ ದಂಡವನ್ನು ಕಡ್ಡಾಯವಾಗಿ ಪಾವತಿಸಿದ ನಂತರವೇ ಪರವಾನಗಿ ನವೀಕರಿಸಲು ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿ ಡಾ.ಇ.ಅನಿಲ್ ಧಾವನ್ ಅವರು ತಿಳಿಸಿದ್ದಾರೆ. ತಯಾರಕರು/ರೀ-ಪ್ಯಾಕರ್/ರೀ-ಲೇಬಲ್‍ದಾರರು ತಮ್ಮ ಆಹಾರ ಪದಾರ್ಥಗಳ ವಿಶ್ಲೇಷಣಾ ವರದಿಯನ್ನು ಪ್ರತಿ 06 ತಿಂಗಳಿಗೊಮ್ಮ ಎನ್‍ಎಬಿಎಲ್ ಅಕ್ರಿಡಿಯೇಟೆಡ್/ಎಫ್‍ಎಸ್‍ಎಸ್‍ಎಐ ನೋಂದಾಯಿತ ಪ್ರಯೋಗಾಲಯದಲ್ಲಿ ವಿಶ್ಲೇಷಿಸಿ ವರದಿಯನ್ನು ಅಧಿಕೃತ ಅಂರ್ತಜಾಲ ತಾಣದಲ್ಲಿ ತಮ್ಮ ತಮ್ಮ ಲಾಗಿನ್‍ನಲ್ಲಿ ನಮೂದಿಸುವುದು ಕಡ್ಡಾಯವಾಗಿದೆ. ಈ ರೀತಿಯಲ್ಲಿ ವಾರ್ಷಿಕ ವಹಿವಾಟಿನ ವಿವರವನ್ನು ಹಾಗೂ ಪ್ರಯೋಗಾಲಯದ ವಿಶ್ಲೇಷಣಾ ವರದಿಯನ್ನು ಸಲ್ಲಿಸಲು ವಿಫಲವಾದಲ್ಲಿ ಮುಂದಿನ ಆಗುಹೋಗುಗಳಿಗೆ ಸಂಬಂಧಿಸಿದ ತಯಾರಕರು/ರೀ-ಪ್ಯಾಕರ್/ರೀ-ಲೇಬಲ್…

Read More

ಮಡಿಕೇರಿ ಮೇ 13 NEWS DESK : ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜು ವತಿಯಿಂದ ಪ್ರಥಮ ಪಿಯುಸಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಚಿತ ಊಟ, ವಸತಿ, ಸಿಇಟಿ, ನೀಟ್ ಕೋಚಿಂಗ್ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಹತ್ತಿರದ ಕೊಡಗು ಜಿಲ್ಲೆಯ ಯಾವುದೇ ಮೊರಾರ್ಜಿ ವಸತಿ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ, 22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಅಟಲ್ ಬಿಹಾರಿ ವಾಜಪೇಯಿ ಕಾಲೇಜು, ಭಾಗಮಂಡಲ ಲೋಕೇಶ್ ದೂ.ಸಂ. 9611307646 ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 13 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮೇ 17 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 13 NEWS DESK : ಪ್ರಸಕ್ತ(2024-25) ಸಾಲಿನ ಮೈಸೂರು ವಿಭಾಗ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವು ಮೇ 17 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಅವರ ಕಾರ್ಯಾಲಯದ ವಿ.ಸಿ.(ವಿಡಿಯೊ ಸಂವಾದ) ಸಭಾಂಗಣದಲ್ಲಿ ವೆಬಿನಾರ್ ಮೂಲಕ ನಡೆಯಲಿದೆ. ಈ ಸಂಬಂಧ ಕುಂದುಕೊರೆಗಳು ಇದ್ದಲ್ಲಿ, ನಿವೃತ್ತ ರಾಜ್ಯ ಸರ್ಕಾರಿ ನೌಕರರು ತಮ್ಮ ಅಹವಾಲುಗಳನ್ನು ಸೂಕ್ತ ದಾಖಲೆಗಳೊಂದಿಗೆ ಮೇ, 15 ರೊಳಗೆ ಕೊಡಗು ಜಿಲ್ಲೆಯ ಉಪ ನಿರ್ದೇಶಕರು, ಜಿಲ್ಲಾ ಖಜಾನೆ ಕೊಠಡಿ ಸಂಖ್ಯೆ 10, (ದೂ.ಸಂ.08272-225654) ಜಿಲ್ಲಾಡಳಿತ ಭವನ, ಮಡಿಕೇರಿ ಇವರಿಗೆ ಸಲ್ಲಿಸಲು ಹಾಗೂ ಅದಾಲತ್‍ನಲ್ಲಿ ಭಾಗವಹಿಸುವಂತೆ ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ರಘುನಾಥ್ ತಿಳಿಸಿದ್ದಾರೆ. 

Read More

ಮಡಿಕೇರಿ ಮೇ 13 NEWS DESK : ಮೂರ್ನಾಡುವಿನಲ್ಲಿ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ವೇಳೆ ವಿದ್ಯುತ್ ತಗುಲಿ ಮೃತಪಟ್ಟ ಆಸಿಫ್ ಎಂಬ ಯುವಕನ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Read More

ಕೂಡಿಗೆ ಮೇ 13 NEWS DESK : ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಬಸವನತೂರು ಗ್ರಾಮದಲ್ಲಿ ನೆಲೆಸಿರುವ ಶ್ರೀ ಚೌಡಮ್ಮ ದೇವಿಯ ವಾರ್ಷಿಕ ಪೂಜೋತ್ಸವವು ಮೇ 17 ರಂದು ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಯಿಂದ ದೇವರಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದ್ದು, ಮಧ್ಯಾಹ್ನ 12.30 ಕ್ಕೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. ಹೆಚ್ಚಿನ ಮಾಹಿತಿಗೆ ಪ್ರವೀಣ್ -9845667906, ಸುಮಂತ್ -9535043956, ಸತೀಶ್ -8105314959, ಕಿರಣ್ 7795553752 ಸಂಪರ್ಕಿಸಬಹದಾಗಿದೆ. ವರದಿ : ಕೆ.ಆರ್.ಗಣೇಶ್ ಕೂಡಿಗೆ 

Read More

ಕೂಡಿಗೆ ಮೇ 13 NEWS DESK : ಕೂಡಿಗೆ, ಕೊಪ್ಪಲು, ಹೆಗ್ಗಡಳ್ಳಿ, ಕೋಟೆ ಗ್ರಾಮ ದೇವತೆ ಶ್ರೀ ದಂಡಿನಮ್ಮ, ಶ್ರೀ ಬಸವೇಶ್ವರ ಹಾಗೂ ಶ್ರೀ ಮುತ್ತತ್ ರಾಯ ದೇವಾಲಯದ ಜಾತ್ರ ಮಹೋತ್ಸವವು ಮೇ 20 ರಿಂದ ಆರಂಭವಾಗಲಿದೆ. ಮೇ 20 ರಂದು ಸಂಜೆ 6 ಗಂಟೆಗೆ ಶ್ರೀ ಬಸವೇಶ್ವರ ದೇವರ ವಾನ್ಯ ಹಾಗೂ ಮೆರವಣಿಗೆ ನಡೆಯಲಿದೆ.  ಮೇ 24 ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ದಂಡಿನಮ್ಮ ದೇವಿಯ ವಾರ್ಷಿಕ ಪೂಜಾ ಮಹೋತ್ಸವದ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ,  ಸಂಜೆ 8 ಗಂಟೆಯಿಂದ ಅಗ್ನಿ ಸ್ಥಾಪನೆ ನೆರವೇರಲಿದೆ. ನಂತರ ಶ್ರೀ ಬಸವೇಶ್ವರ ದೇವಸ್ಥಾನದಿಂದ ಗ್ರಾಮಸ್ಥರುಗಳು ಹಾಗೂ ಭಕ್ತಾದಿಗಳು ಕಾವೇರಿ ನದಿಗೆ ತೆರಳಿ ಕಳಸ ಪೂಜೆ ನಡೆಯಲಿದೆ.  ಬಳಿಕ ಹಣ್ಣೆಡಗೆ ಉತ್ಸವ ಮತ್ತು ಕೊಂಡೋತ್ಸವ ನಡೆಯಲಿದ್ದು, ಮರುದಿನ ಮುಂಜಾನೆ ದೇವಾಲಯದ ಮುಂಭಾಗ ಉಯ್ಯಾಲೋತ್ಸವ ಜರುಗಲಿದೆ. ಹನ್ನೆಡೆಗೆ ಹಾಗೂ ಕಳಸ ಹೊತ್ತ ಮಹಿಳೆಯರು ಹಾಗೂ ಪುರುಷರು…

Read More

ಮಡಿಕೇರಿ ಮೇ 13 NEWS DESK : ರಾಜ್ಯ ವ್ಯಾಪಿ ಮೇ 13 ರಿಂದ 21 ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 19 ಮತ್ತು 20 ರಂದು, ದಕ್ಷಿಣ ಒಳನಾಡಿನ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Read More