ಮಡಿಕೇರಿ ಮೇ 13 NEWS DESK : ವಿರಾಜಪೇಟೆ ತಾಲ್ಲೂಕು ಗೇಟಾಡಿ ಮಾಲ್ದಾರೆ ಗ್ರಾಮದಲ್ಲಿ “ಜೇನು ಕುರುಬ ಕಪ್” ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ತಂಡಗಳಿಗೆ ಶುಭಹಾರೈಸಿದರು.
ಲೇಖಕ: admin
ಮಡಿಕೇರಿ ಮೇ 13 NEWS DESK : ವಿರಾಜಪೇಟೆ ರೋಟರಿ ಸಂಸ್ಥೆಯ ವತಿಯಿಂದ ಮೇ 18 ರಂದು ವಿರಾಜಪೇಟೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಯಲಿದೆ. ವಿರಾಜಪೇಟೆ ರೋಟರಿ ಶಾಲೆಯಲ್ಲಿ ( ವಿರಾಜಪೇಟೆ ತಾಲೂಕು ಕಚೇರಿ ಬಳಿ) ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶಿಬಿರ ನಡೆಯಲಿದೆ, ಪರಿಣಿತ ವೈದ್ಯರಾದ ಡಾ. ರಘುನಾಥ್ , ಎಂ.ಎಸ್.ಬೆಳ್ಯಪ್ಪ, ಡಾ.ರವಿ, ಡಾ.ಸುನಿತಾ, ಡಾ.ಸಾಗರಿಕ, ಡಾ.ನಿತ್ಯಾನಂದ ತಪಾಸಣೆ ಮತ್ತು ಚಿಕಿತ್ಸಾ ಸಲಹೆ ನೀಡಲಿದ್ದಾರೆ ಎಂದು ವಿರಾಜಪೇಟೆ ರೋಟರಿ ಅಧ್ಯಕ್ಷರಾದ ಎಂ.ಎಂ. ಬನ್ಸಿ ಪೂವಣ್ಣ, ಬೆಂಗಳೂರು ಗ್ಲೋಬಲ್ ಫೌಂಡೇಶನ್ ಟ್ರಸ್ಟಿ ಕನ೯ಲ್ ಸಿ.ಎ. ಅಯ್ಯಪ್ಪ ತಿಳಿಸಿದ್ದಾರೆ ಕ್ಯಾನ್ಸರ್ ತಪಾಸಣೆ ಅಥವಾ ಚಿಕಿತ್ಸೆಗಾಗಿ ಶಿಬಿರಕ್ಕೆ ಬರುವವರು ಅವರಿಗೆ ಸಂಬಂಧಿಸಿದ ವೈದ್ಯಕೀಯ ಮಾಹಿತಿ ಕಡತ ತರುವಂತೆ ಕೋರಲಾಗಿದೆ, ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ 7022924860, 9448448780 ಸಂಪರ್ಕಿಸಬಹುದಾಗಿದೆ.
ಪಾಟ್ನಾ ಮೇ 13 NEWS DESK : ಬಿಹಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ಪಾಟ್ನಾ ನಗರದಲ್ಲಿನ ತಾಖತ್ ಶ್ರೀ ಹರಿಮಂದಿರ್ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಸೋಮವಾರ ಭೇಟಿ ನೀಡಿದರು. ಬೆಳಿಗ್ಗೆ ಅವರು ಗುರುದ್ವಾರದಲ್ಲಿದ್ದ ಸಿಖ್ ಸಮುದಾಯದ ಜನರಿಗೆ ಆಹಾರ ಬಡಿಸುವ ಸೇವಾ ಕಾರ್ಯ ನಡೆಸಿದರು. ಗುರುದ್ವಾರದ ಸಿಖ್ ಸಮುದಾಯದ ಅಡುಗೆ ಹಾಲ್ಗೆ ತೆರಳಿದ ಅವರು ಸ್ಟೀಲ್ ಬಕೆಟ್ನಲ್ಲಿದ್ದ ಆಹಾರವನ್ನು ಸಾಲಿನಲ್ಲಿ ಕುಳಿತಿದ್ದ ಜನರಿಗೆ ಬಡಿಸಿದರು. ಅಲ್ಲದೆ ಅಡುಗೆ ಕೋಣೆಯಲ್ಲಿ ದಾಲ್ ಹಾಗೂ ಇತರೆ ಖಾದ್ಯ ತಯಾರಿಸುವ ಕಾರ್ಯದಲ್ಲಿಯೂ ನೆರವಾದರು. ಚಪಾತಿ ಕೂಡ ಲಟ್ಟಿಸಿ ಗಮನ ಸೆಳೆದರು.
ಮಡಿಕೇರಿ ಮೇ 13 NEWS DESK : ಕರಿಕೆಯ ಆಡ್ಕ ಗ್ರಾಮದ ಪುರಾತನ ದೈವಸ್ಥಾನದಲ್ಲಿ ಪ್ರತಿ ವರ್ಷದಲ್ಲಿ ಈ ಬಾರಿಯೂ ಶ್ರದ್ಧಾಭಕ್ತಿಯಿಂದ ದೈವ ಕೋಲಗಳು ನಡೆಯಿತು. ಗ್ರಾಮದ ವನದೇವತಾರಾಧನ ಸಮಿತಿ ಮತ್ತು ಗ್ರಾಮಸ್ಥರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ನಂತರ ಚಾಮುಂಡಿ, ವಿಷ್ಣುಮೂರ್ತಿ ಮತ್ತು ಉಪದೈವಗಳ ಕೋಲಗಳು ನೆರೆವೇರಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ನಾಪೋಕ್ಲು ಮೇ 13 NEWS DESK : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಮೇ 22 ರಿಂದ 27 ರವರೆಗೆ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ನಾಲ್ನಾಡು ಹಾಕಿ ಪಂದ್ಯಾವಳಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹೇಳಿದರು. ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ 2000 ದಿಂದ 2012 ರವರೆಗೆ ನಾಲ್ನಾಡ್ ಕಪ್ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಬಳಿಕ ಕಾರಣಾಂತರಗಳಿಂದ ಸ್ಥಗಿತಗೊಂಡಿತು. 10 ವರ್ಷಗಳ ಬಳಿಕ ಸಾರ್ವಜನಿಕರ ಒತ್ತಾಯದ ಮೇರೆಗೆ ಹೊಸ ಸಮಿತಿಯನ್ನು ರಚಿಸಿ ಪಂದ್ಯಾವಳಿಯನ್ನು ಆರಂಭಿಸಲಾಗಿದೆ ಎಂದರು. ನಾಲ್ನಾಡು ಕಪ್ ಹಾಕಿ ಪಂದ್ಯಾವಳಿಯ ಮೊತ್ತ ಮೊದಲು ಗ್ರಾಮೀಣ ಮಟ್ಟದಲ್ಲಿ ಯಾವುದೇ ಜಾತಿ ಭೇದಗಲಿಲ್ಲದೆ ಮನೋರಂಜನೆಯ ಜೊತೆಗೆ ಹಾಕಿ ಕ್ರೀಡೆಯ ಹೇಳಿಕೆಗಾಗಿ ಅಯೋಜಿಸಿದ ಹೆಗ್ಗಳಿಕೆ ಈ ಸಮಿತಿಯದಾಗಿದ್ದು ಬಳಿಕ ವಿವಿಧಡೆ ಹಾಕಿ ಪಂದ್ಯಾಟಗಳು ಆರಂಭಗೊಂಡವು. ಈ ವ್ಯಾಪ್ತಿಯಲ್ಲಿ ಬಹಳಷ್ಟು ಕ್ರೀಡಾ ಪ್ರತಿಭೆಗಳಿದ್ದು ಮನೋರಂಜನೆಯ ಜೊತೆಗೆ ಹಾಕಿ…
ಮಡಿಕೇರಿ ಮೇ 13 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಬೇವಿನ ಸೊಪ್ಪಿನ ಕರಗೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಪಂಪಿನ ಕೆರೆಯಲ್ಲಿ ಕರಗಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ವಾದ್ಯಗೋಷ್ಠಿಯೊಂದಿಗೆ ದೇವಿಯ ಕರಗಗಳ ಮೆರವಣಿಗೆ ನಡೆಯಿತು. ಅನಾದಿ ಕಾಲದಿಂದಲೂ ಶಕ್ತಿ ದೇವಿಯ ಬೇವಿನ ಸೊಪ್ಪಿನ ಕರಗೋತ್ಸವ ನಡೆಸಿಕೊಂಡು ಬರುತ್ತಿದ್ದು, ಭೀಕರ ಸಾಂಕ್ರಾಮಿಕ ರೋಗಗಳು ನಾಡಿಗೆ ಬರಬಾರದೆಂಬ ನಂಬಿಕೆಯಿಂದ ನಾಡಿನ ಸುಭಿಕ್ಷೆಗಾಗಿ ಈ ಕರಗೋತ್ಸವವನ್ನು ಆಚರಿಸಲಾಗುತ್ತಿದೆ. ಇಂದು ಕರಗಗಳಿಗೆ ವಿಶೇಷ ಪೂಜೆ, ನಡೆಯಲಿದೆ. ಮೇ 14 ರಂದು ರಾತ್ರಿ 10 ಗಂಟೆಗೆ ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ಮಾರಿಯಮ್ಮ ಸನ್ನಿಧಿಯಲ್ಲಿ ಸಾಂಪ್ರದಾಯಿಕ ದೇವಿಯ ಪೂಜೆಗಳು ಜರುಗಲಿದ್ದು, ನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಮೇ 15 ರಂದು ಸಂಜೆ 7 ಗಂಟೆಗೆ ದೇವಿಯ ಕರಗಗಳಿಗೆ ದೀಪಗಳ ಆರಾಧನೆಯೊಂದಿಗೆ ಸಾಂಪ್ರದಾಯಿಕ ಕರಗಗಳ ವಿಸರ್ಜನೋತ್ಸವ ಜರುಗಲಿದ್ದು, ಶ್ರೀ ಮಾರಿಯಮ್ಮ ಕರಗೋತ್ಸವಕ್ಕೆ ಭಕ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ…
ಮಡಿಕೇರಿ ಮೇ 12 NEWS DESK : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು ಸಮೀಪ ಬಲ್ಲಮಾವಟಿಯಲ್ಲಿ ನಡೆದಿದೆ. ಅಯ್ಯಂಗೇರಿ ನಿವಾಸಿಗಳು ಗಾಯಗೊಂಡವರು ಎಂದು ತಿಳಿದು ಬಂದಿದೆ. (ವರದಿ : ದುಗ್ಗಳ ಸದಾನಂದ)
ಕುಶಾಲನಗರ ಮೇ 12 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಂಗ ಸಂಸ್ಥೆಯಾದ ಕದಳಿ ವೇದಿಕೆಗೆ ಕೊಡಗು ಜಿಲ್ಲಾಧ್ಯಕ್ಷರಾಗಿ ಸೋಮವಾರಪೇಟೆಯ ಜಲಜಾ ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಕದಳಿ ವೇದಿಕೆಗೆ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಶರಣ ಸಾಹಿತ್ಯ ಹಾಗೂ ಸಂಸ್ಕ್ರತಿಯನ್ನು ಬೆಳೆಸಬೇಕೆಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾದ ಸುಶೀಲಾ ಸೋಮಶೇಖರ್ ನೇಮಕ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ ಮೇ 12 NEWS DESK : ಕೊಡಗು ಜಿಲ್ಲೆಯ ವಾತಾವರಣ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ನ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಚೇಂಬರ್ ಅಪ್ ಕಾಮರ್ಸ್ ವತಿಯಿಂದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವರ್ತಕರ ಸ್ನೇಹ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಸೇವೆಗಳನ್ನು ಒದಗಿಸಿದಲ್ಲಿ ಜಿಲ್ಲೆಯ ಉದ್ಯಮಗಳ ಬೆಳವಣಿಗೆ ಸಾಧ್ಯ ಎಂದರು. ಕುಶಾಲನಗರದಲ್ಲಿ ಮೂರು ದಶಕಗಳಿಂದ ಚೇಂಬರ್ ಅಪ್ ಕಾಮರ್ಸ್ ತನ್ನ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಹಿಂದಿನ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳು ವರ್ತಕರಿಗೆ ಅನಾವಶ್ಯಕ ಕಿರುಕುಳ ನೀಡಿ ವರ್ತಕರಿಗೆ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದರು. ಅಂತಹ ಸಂದರ್ಭದಲ್ಲಿ ಚೇಂಬರ್ ಮೂಲಕ ವರ್ತಕರ ಪರವಾಗಿ ನಿಂತು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದಿದೆ ಎಂದು ನೆನಪಿಸಿದರು. ಕೊಡಗು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ನ ನಿರ್ದೇಶಕ ಎಸ್.ಕೆ.ಸತೀಶ್ ಮಾತನಾಡಿ, ನಿರಂತರ ಕೆಲಸಗಳ ಒತ್ತಡದ ಜಂಜಾಟದಲ್ಲಿರುವ ಉದ್ಯಮಿಗಳು ವರ್ತಕರ ದಿನಾಚರಣೆಯನ್ನು ಆಚರಿಸುವಂತಾಗಬೇಕು. ಕುಶಾಲನಗರ ಸ್ಥಾನಿಯ…
ಮಡಿಕೇರಿ ಮೇ 12 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ನಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಅಂತಿಮ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕ್ರೀಡಾಕೂಟಗಳಲ್ಲಿ ಕಾಣುವ ಸಾಮರಸ್ಯ ಸಮಾಜದಲ್ಲೂ ಕಾಣಬೇಕು, ಸಾಮರಸ್ಯವನ್ನು ಬೆಳೆಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಕೊಡಗು ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹದಾಯಕವಾಗಿ ಹೆಚ್ಚು ಹೆಚ್ಚು ಕ್ರೀಡಾಕೂಟಗಳು ನಡೆಯುತ್ತಿರುವುದು ಶ್ಲಾಘನೀಯವೆಂದ ಶಾಸಕರು ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬಹುಮಾನ ವಿತರಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಪ್ರೋತ್ಸಾಹ ಅಗತ್ಯವೆಂದರು. ತಾವು ಕೂಡ ಒಳ್ಳೆಯ ಕ್ರಿಕೆಟ್ ಆಟಗಾರನಾಗಿದ್ದು, ಲೆದರ್ ಬಾಲ್ ಪಂದ್ಯವನ್ನು ಹೆಚ್ಚು ಇಷ್ಟ ಪಡುತ್ತಿದೆ. ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉತ್ತೇಜಿಸುತ್ತಿರುವ…






