ನವದೆಹಲಿ ಮೇ 26 NEWS DESK : ಮೇ 31 ರಂದು ಸೇವೆಯಿಂದ ನಿವೃತ್ತಿಯಾಗಬೇಕಿದ್ದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರ ಭಾನುವಾರ ಒಂದು ತಿಂಗಳ ಅವಧಿಗೆ ವಿಸ್ತರಿಸಿದೆ. ಸೇನಾ ನಿಯಮಗಳು 1954ರ ನಿಯಮ 16 (ಎ) 4 ಅಡಿಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಪಾಂಡೆ ಅವರ ನಿವೃತ್ತಿ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲು ನೇಮಕಾತಿ ಸಂಪುಟ ಸಮಿತಿ ಮೇ 26 ರಂದು ಅನುಮೋದನೆ ನೀಡಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಲೇಖಕ: admin
ಕ್ವಾಲಾಲಂಪುರ ಮೇ 26 NEWS DESK : ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್ ನಲ್ಲಿ ಭಾರತದ ಆಟಗಾರ್ತಿ ಪಿ.ವಿ.ಸಿಂಧು ಸೋಲು ಅನುಭವಿಸಿದ್ದಾರೆ. ಅವರು ಚೀನಾದ ವಾಂಗ್ ಝಿಯಿ ವಿರುದ್ಧ 21-16, 5-21 ಮತ್ತು 21-16 ಸೆಟ್ ಗಳಿಂದ ಸೋತು ನಿರ್ಗಮಿಸಿದರು. ಆ ಮೂಲಕ ಸಿಂಧು 2022 ಸಿಂಗಾಪುರ ಓಪನ್ ನಂತರ ತಮ್ಮ ಮೊದಲ BWF ಪ್ರಶಸ್ತಿ ಗೆಲ್ಲುವ ಪ್ರಯತ್ನದಲ್ಲಿ ವಿಫಲರಾದರು.
ಮೈಸೂರು ಮೇ 26 NEWS DESK : ಹುಲಯೊಂದು ಮಹಿಳೆಯೊಬ್ಬರನ್ನು ಕೊಂದು ಮೃತದೇಹವನ್ನು ಕಾಡಿನೊಳಗೆ ಎಳೆದೊಯ್ದ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಭಾನುವಾರ ನಸುಕಿನಲ್ಲಿ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಎನ್ ಬೇಗೂರಿನ ಮಲದವಾಡಿ ಹಾಡಿಯ ಚಿಕ್ಕಿ (48) ಎಂಬುವವರೇ ಮೃತ ಮಹಿಳೆ. ಶನಿವಾರ ಕುರಿಗಳನ್ನು ಮೇಯಿಸಲು ಹೋಗಿದ್ದ ಚಿಕ್ಕಿಯವರು ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡಿದ್ದರು. ಗ್ರಾಮಸ್ಥರು ಹಾಗೂ ಅರಣ್ಯ ಸಿಬ್ಬಂದಿಗಳು ಹುಡುಕಾಟ ನಡೆಸಿದಾಗ ಇಂದು ನಸುಕಿನಲ್ಲಿ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ.
ಕಡೂರು ಮೇ 26 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುರುಚಿ ಹೋಟೆಲ್ ಸಭಾಂಗಣದಲ್ಲಿ ಮತದಾರರ ಮತ್ತು ಪಕ್ಷದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು. ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಮತದಾರರನ್ನು ಭೇಟಿ ಮಾಡಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಮನವಿ ಮಾಡಿ ಎಂದು ಸೂಚನೆ ನೀಡಿದರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್.…
ಮಡಿಕೇರಿ ಮೇ 26 NEWS DESK : ಶ್ರೀರಂಗಪಟ್ಟಣ- ಕುಶಾಲನಗರ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸರಕಾರ ಈಗಾಗಲೆ 3,500 ಕೋಟಿ ರೂ. ಬಿಡುಗಡೆಗೊಳಿಸಿದ್ದು, ಖಾಸಗಿ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದು ಗುತ್ತಿಗೆದಾರರು ಕಾಮಗಾರಿ ಆರಂಭಿಸಲು ಈಗಾಗಲೇ ಸಾಮಾಗ್ರಿ ದಾಸ್ತಾನು ಮಾಡಿದ್ದಾರೆ. ಹುಣಸೂರು ಮತ್ತು ಪಿರಿಯಾಪಟ್ಟಣ ತಾಲ್ಲೂಕಿನ ಬಹುತೇಕ ರೈತರು ಭೂಮಿಯನ್ನು ಬಿಟ್ಟುಕೊಟ್ಟು ಸೂಕ್ತ ಪರಿಹಾರವನ್ನೂ ಪಡೆದುಕೊಂಡಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ಭೂಸ್ವಾಧೀನ ಆಗಬೇಕಾಗಿದೆ. ಈ ಉದ್ದೇಶಿತ 4130 ಕೋಟಿ ರೂ. ಮೊತ್ತದ ಯೋಜನೆಯ 92 ಕಿಲೋಮೀಟರ್ ಉದ್ದದ ಹೆದ್ದಾರಿಯ ಕಾಮಗಾರಿ 2026 ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ. ಅಗ್ರಹಾರ ಗ್ರಾಮದಲ್ಲಿ ಹೆದ್ದಾರಿಯು ಸುಮಾರು 4.9 ಕಿಲೋಮೀಟರ್ ಗಳಷ್ಟು ಉದ್ದಕ್ಕೆ ಹಾದು ಹೋಗಲಿದ್ದು, 60 ಮೀಟರ್ ಅಗಲದವರೆಗೆ ಭೂಸ್ವಾಧೀನ ಮಾಡಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಿಗಮ ಉದ್ದೇಶಿಸಿದೆ. ಹೆದ್ದಾರಿ ನಿಗಮ ಪರಿಹಾರ ನೀಡುವಾಗ ಸಬ್ ರಿಜಿಸ್ಟಾçರ್ ಕಚೇರಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಜಮೀನಿನ ಮಾರಾಟ…
ಮಡಿಕೇರಿ ಮೇ 26 NEWS DESK : ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಮತದಾನದ ಹಕ್ಕನ್ನು ಕಲ್ಪಿಸುವುದರ ಮೂಲಕ ಶಿಕ್ಷಕರ ಬಲವನ್ನು ಹೆಚ್ಚಿಸುವುದು ಮತ್ತು ಶಿಕ್ಷಕರ ಕ್ಷೇತ್ರ ಮಲೀನವಾಗದಂತೆ ತಡೆಯುವುದು ನನ್ನ ಆಧ್ಯತೆಯಾಗಿದೆ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಟಿ.ಭಾಸ್ಕರ ಶೆಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರವನ್ನು ಶಿಕ್ಷಕರಲ್ಲದವರು ಆವರಿಸಿಕೊಳ್ಳಬಾರದು. ಅವರಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿರುವುದಿಲ್ಲ. ನಾನು ಶಿಕ್ಷಣ ಇಲಾಖೆಯಲ್ಲಿ ಮೂರುವರೆ ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತನಾಗಿದ್ದು, ಶಿಕ್ಷಕರ ಸಮಸ್ಯೆಗಳು, ಈ ಕ್ಷೇತ್ರದ ಅಭಿವೃದ್ಧಿಯ ಚಿಂತನೆ ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಎಲ್ಲವೂ ತಿಳಿದಿದೆ. ಆದ್ದರಿಂದ ಶಿಕ್ಷಕರು ಯಾವುದೇ ಆಮಿಷಗಳಿಗೆ ಒಳಗಾಗದೆ ಕೆಲಸ ಮಾಡುವ ವ್ಯಕ್ತಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ನನಗೆ ಅವಕಾಶ ಕಲ್ಪಿಸಿದ್ದಲ್ಲಿ ಶಿಕ್ಷಕರ ಕ್ಷೇತ್ರದ ಸಮಸ್ಯೆಗೆ ಪರಿಹಾರದೊರಕುವ ಅವಕಾಶಗಳಿವೆ ಹಾಗೂ ಪರಿಷತ್ತಿನ ಒಳಗೆ ಶಿಕ್ಷಕರ ಪರ ಧ್ವನಿ ಗಟ್ಟಿಯಾಗಿ ಮೊಳಗಳಿದೆ. 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು…
ಮಡಿಕೇರಿ ಮೇ 26 NEWS DESK : ನಿರುದ್ಯೋಗದಿಂದಾಗಿ ಸಮಾಜದಲ್ಲಿ ಅನೇಕ ಸಮಸ್ಯೆಗಳು ಕಾಡುತ್ತಿದ್ದು, ತಾವು ಗೆದ್ದು ಬಂದರೆ ನಿರುದ್ಯೋಗದ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡುವುದಾಗಿ ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಿ.ಮಹಮ್ಮದ್ ತುಂಬೆ ಭರವಸೆ ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗು ಜಿಲ್ಲೆಯ ಪ್ರಜ್ಞಾವಂತ ಮತದಾರರು ನನಗೆ ಹೆಚ್ಚಿನ ಮತಗಳನ್ನು ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಇಂದು ಅಸಂಖ್ಯಾತ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅತಂತ್ರತೆಯ ಬದುಕನ್ನು ಸಾಗಿಸುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಅನೇಕ ಸಮಸ್ಯೆಗಳು ತಲೆದೋರುತ್ತಿವೆ. ಸರಕಾರಗಳು ಈ ಕುರಿತು ಯಾವುದೇ ಯೋಜನೆಗಳನ್ನು ರೂಪಿಸುವಂತೆ ಕಂಡು ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಾನು ಗೆದ್ದು ಬಂದರೆ ನಿರುದ್ಯೋಗಿ ಪದವೀಧರರ ಬೇಡಿಕೆಗಳ ಪರ ಧ್ವನಿಯಾಗುತ್ತೇನೆ. ನಿರುದ್ಯೋಗಿ ಪದವೀಧರರಿಗೆ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳನ್ನು ಆರಂಭಿಸುವಂತೆ ಸರಕಾರದ ಗಮನ ಸೆಳೆಯುತ್ತೇನೆ. ಕರ್ನಾಟಕದಲ್ಲಿರುವ ವಿವಿಧ ವಿಶ್ವವಿದ್ಯಾನಿಲಯಗಳ ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕಪಟ್ಟಿ ಸಕಾಲದಲ್ಲಿ ಒದಗಿಸಲು ಪ್ರಾಮಾಣಿಕ…
ಗೋಣಿಕೊಪ್ಪ ಮೇ 26 NEWS DESK : ಮೇ 30, 31 ಹಾಗೂ ಜೂನ್ 1 ಮತ್ತು 2 ರಂದು ನಡೆಯಬೇಕಾಗಿದ್ದ ಜಿಪಿಎಲ್ ಕ್ರೀಡಾಕೂಟವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ ಎಂದು ಜಿಪಿಎಲ್ ಕ್ರೀಡಾ ಸಮಿತಿ ತಿಳಿಸಿದೆ. ಕ್ರೀಡಾಕೂಟದ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಪಿಎಲ್ ಸ್ಥಾಪಕ ಅಧ್ಯಕ್ಷ ಶರಫುದ್ದೀನ್ ತಿಳಿಸಿದ್ದಾರೆ.
ಗಾಂಧಿನಗರ ಮೇ 26 NEWS DESK : ಗುಜರಾತ್ನ ರಾಜ್ಕೋಟ್ನಲ್ಲಿರು ಗೇಮ್ ಝೋನ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಗೇಮ್ ಝೋನ್ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಲು ಸಾಕಷ್ಟು ಕಸರತ್ತು ನಡೆಸಿದವು. ಬೆಂಕಿಯ ತೀವ್ರತೆ ಎಷ್ಟಿತ್ತು ಎಂದರೆ ಅದರ ಹೊಗೆ 3 ಕಿಲೋಮೀಟರ್ ದೂರಕ್ಕೆ ಗೋಚರಿಸುತ್ತಿತ್ತು, ಗೇಮಿಂಗ್ ವಲಯದಲ್ಲಿ ಮಹಿಳೆಯರು, ಮಕ್ಕಳು ಸಿಕ್ಕಿ ಹಾಕಿಕೊಂಡಿದ್ದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡ ಕುಸಿದಿರುವುದರಿಂದ ಪರಿಹಾರ ಕಾರ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಲಖನೌ ಮೇ 26 NEWS DESK : ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದು 11 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾ. ಮೃತರು ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಹೋಗುತ್ತಿದ್ದರು. ಶನಿವಾರ ರಾತ್ರಿ 12.15ರ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.






