ಮಡಿಕೇರಿ ಮೇ 12 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಅಂತಿಮ ಪಂದ್ಯಾಟದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ 28 ರನ್ಗಳ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಕೂರ್ಗ್ ಯುನೈಟೆಡ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಟಾಸ್ ಗೆದ್ದ ಕೂರ್ಗ್ ಯುನೈಟೆಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೂರ್ಗ್ ಬ್ಲಾಸ್ಟರ್ಸ್ ತಂಡ 10 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 117 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಯುನೈಟೆಡ್ ತಂಡ 10 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಗಳಿಸಿ ಸೋಲು ಒಪ್ಪಿಕೊಂಡಿತು. ಕೂರ್ಗ್ ಬ್ಲಾಸ್ಟರ್ಸ್ ತಂಡದ ಆಟಗಾರ ಸಿ.ಎ.ಕಾರ್ತಿಕ್ 35 ಬಾಲ್ ಗಳಲ್ಲಿ 95 ರನ್ ಗಳನ್ನು ಸಿಡಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.…
ಲೇಖಕ: admin
ಮಡಿಕೇರಿ ಮೇ 12 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿ ಫಾರಂ ನೀಡಿ ಶುಭ ಹಾರೈಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಜರಿದ್ದರು. ಈ ಬಾರಿ ನನ್ನ ಗೆಲುವು ಖಚಿತವೆಂದು ಇದೇ ಸಂದರ್ಭ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದರು.
ಮಡಿಕೇರಿ ಮೇ 12 NEWS DESK : ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯ ವಿವಿಧೆಡೆ ನಸುಕಿನಲ್ಲಿ ಅಥವಾ ರಾತ್ರಿ ವೇಳೆ ಗಾಳಿ, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಿಡಿಲಬ್ಬರ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಕಾಲೂರು ಗ್ರಾಮದ ಬಾರಿಕೆ ಮೊಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಜೋರಾಗಿ ಮಳೆ ಸುರಿದು ಸಿಡಿಲು ಬಡಿದ ಪರಿಣಾಮ ಮನೆಯೊಂದಕ್ಕೆ ಹಾನಿಯಾಗಿದೆ. ಸಿಡಿಲಬ್ಬರಕ್ಕೆ ಮನೆಯ ಒಂದು ಭಾಗ ಬಿದ್ದು ಹೋಗಿದೆ. ಮನೆಯಲ್ಲಿದ್ದ ಲಿಂಗಮ್ಮ ಹಾಗೂ ಅವರ ಪುತ್ರ ಕಿರಣ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಬಿದ್ದು ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮನೆಯವರು ಹೇಳಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗಾಳಿಬೀಡು ಗ್ರಾಮ ಪಂಚಾಯ್ತಿ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಲಿಂಗಮ್ಮ ಅವರಿಗೆ ಧೈರ್ಯ ತುಂಬಿದರು. ಸರಕಾರದ ಮೂಲಕ ಅಗತ್ಯ ಸಹಕಾರ…
ಮಡಿಕೇರಿ ಮೇ 12 NEWS DESK : ಪ್ರತಿ ಮಳೆಗಾಲದಲ್ಲಿ ಪ್ರವಾಹದಿಂದ ದ್ವೀಪದಂತ್ತಾಗುತ್ತಿದ್ದ ಭಾಗಮಂಡಲದಲ್ಲಿ ಮೇಲುಸೇತುವೆ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಇದೀಗ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಸೇತುವೆಯನ್ನು ಮುಕ್ತಗೊಳಿಸಲಾಗಿದೆ. ಕಾವೇರಿ ನೀರಾವರಿ ನಿಗಮದ ಮೂಲಕ ಕಾಮಗಾರಿ ಅನುಷ್ಠಾನಗೊಂಡಿದ್ದು, ಒಟ್ಟು 28 ಕೋಟಿ ರೂ.ಗಳಲ್ಲಿ ಸೇತುವೆ ನಿರ್ಮಾಣಗೊಂಡಿದೆೆ. ಈ ಮೇಲ್ಸೇತುವೆ ಭಾಗಮಂಡಲ ಪ್ರವೇಶ ದ್ವಾರದ ಮುಂದಿನಿಂದ ಪ್ರಾರಂಭವಾಗಿ ತಲಕಾವೇರಿ ರಸ್ತೆಯನ್ನು ಸಂಪರ್ಕಿಸುತ್ತದೆ. ಮಾತ್ರವಲ್ಲದೇ ಭಾಗಮಂಡಲ ಹೃದಯ ಭಾಗದಿಂದ ಮೇಲ್ಭಾಗವಾಗಿ ಮತ್ತೊಂದು ಸಂಪರ್ಕ ರಸ್ತೆ ನಾಪೋಕ್ಲು ಕಡೆಗೆ ತೆರಳುವ ಸೇತುವೆ ಬಳಿ ಕೊನೆಗೊಳ್ಳುತ್ತದೆ. ಒಟ್ಟು 880 ಮೀಟರ್ ಉದ್ದವಿದ್ದು, ಮಡಿಕೇರಿ-ಭಾಗಮಂಡಲ, ಭಾಗಮಂಡಲ-ತಲಕಾವೇರಿ, ಭಾಗಮಂಡಲ-ಅಯ್ಯಂಗೇರಿ ಎಂಬಂತೆ ಒಟ್ಟು 3 ಭಾಗಗಳಾಗಿ ವಿಂಗಡಿಸಲಾಗಿದೆ. ಸೇತುವೆಯಲ್ಲಿ 60 ಟನ್ ಗೂ ಮೇಲ್ಪಟ್ಟ ಭಾರದ ವಾಹನಗಳು ಸಂಚರಿಸಬಹುದಾಗಿದ್ದು, 40 ಕಿ.ಮೀ ವೇಗದ ಮಿತಿ ನಿಗಧಿ ಮಾಡಲಾಗಿದೆ. ವಿದ್ಯುತ್ ದೀಪಗಳು, ಕೇಬಲ್, ಮಳೆ ನೀರು ಹರಿಯಲು ಪೈಪ್ ಗಳನ್ನು ಅಳವಡಿಸಲಾಗಿದ್ದು, ಸುಣ್ಣಬಣ್ಣ ಬಳಿಯುವ ಕಾರ್ಯ ಪೂರ್ಣಗೊಂಡಿದೆ. ಭಾಗಮಂಡಲ ಹಾಗೂ ತಲಕಾವೇರಿ…
ಮಡಿಕೇರಿ ಮೇ 12 NEWS DESK : ಕೇರಳದ ಕ್ಯಾಲಿಕಟ್ ನಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮಾದಾಪುರದ ಇಗ್ಗೋಡ್ಲು ಗ್ರಾಮದ ರಾಘವೇಂದ್ರ ಎಚ್.ಎಸ್ ಅವರ ಪುತ್ರಿ ಬೃಂದಾ ಎಚ್.ಆರ್ ಬೆಳ್ಳಿಯ ಪದಕ ಹಾಗೂ ಸತೀಶ್ ಕುಮಾರ್ ಅವರ ಪುತ್ರಿ ಸಾತ್ವಿಕ ಬಿ.ಎಸ್ ಕಂಚಿನ ಪದಕ ಗೆದ್ದಿದ್ದಾರೆ. ಈ ಇಬ್ಬರು ವಿದ್ಯಾರ್ಥಿನಿಯರಿಗೆ ಸುದರ್ಶನ್ ಮಕ್ಕಂದೂರು ಅವರು ತರಬೇತಿ ನೀಡಿದ್ದಾರೆ.
ACCIDENT ಪಾವಗಡ ಮೇ 12 NEWS DESK : ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮುಖ್ಯ ಶಿಕ್ಷಕರು ಮೃತಪಟ್ಟಿರುವ ಘಟನೆ ಪಾವಗಡ ತುಮಕೂರು ಮಾರ್ಗದ ಕಣಿವೆನಹಳ್ಳಿ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾದ ಓ.ಧನಂಜಯ ಹಾಗೂ ಗೌಡೇಟಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಮೃತ ದುರ್ದೈವಿಗಳು. ಇದೇ ವಾಹನದಲ್ಲಿದ್ದ ಶಿಕ್ಷಕರಗಳಾದ ಆರ್.ಎಂ.ನರಸಿಂಹ ಹಾಗೂ ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ತುಮಕೂರಿನಲ್ಲಿ ಶಿಕ್ಷಕಿ ಶೋಭಾ ಎನ್ನುವವರ ಪುತ್ರಿಯ ವಿವಾಹದ ಆರಕ್ಷತೆಯನ್ನು ಮುಗಿಸಿ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮೇ 12 NEWS DESK : ವಿಶಿಷ್ಠ ಆಚರಣೆಯ ಹಳ್ಳಿಗಟ್ಟು ಬೋಡ್ ನಮ್ಮೆಗೆ ಇಂದು ಮೇ-11ನೇ ಶನಿವಾರ ಮೂಕಳೇರ ಬಲ್ಯಮನೆ ಸಮೀಪದ ಊರಿನ ಅಂಬಲದಲ್ಲಿ ದೇವಕಟ್ಟ್ ಬೀಳುವ ಮೂಲಕ ಹಳ್ಳಿಗಟ್ಟು ಊರಿನಲ್ಲಿ ವಿವಿಧ ಕಟ್ಟುಪಾಡುಗಳಿಗೆ ಚಾಲನೆ ನೀಡಲಾಯಿತು. ಮೇ 18 ರಂದು ದೇವಕಟ್ಟನ್ನು ಸಡಿಲಿಸುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಅಲ್ಲಿಯತನಕ ಹಳ್ಳಿಗಟ್ಟು ಊರಿನಲ್ಲಿ ಹಸಿರು ಮರಗಿಡಗಳನ್ನು ಕುಡಿಯುವಂತಿಲ್ಲ, ಪ್ರಾಣಿ ವಧೆ ಮಾಡುವಂತಿಲ್ಲ, ಮಾಂಸಕ್ಕಾಗಿ ಬಳಸುವ ಪ್ರಾಣಿಗಳು ಮಾತ್ರವಲ್ಲ, ಯಾವುದೇ ರೀತಿಯ ಹಿಂಸೆ ಮಾಡುವಂತಿಲ್ಲ, ಹಸಿ ಮೊಟ್ಟೆಯನ್ನು ಒಡೆಯುವಂತಿಲ್ಲ, ಪ್ರಾಣಿ ಬೇಟೆ ನಿಷೇಧ, ಗುಂಡಿನ ಶಬ್ದ ಹಾಗೂ ಊರಿನೊಳಗೆ ವಾಲಗದ ಶದ್ದು ನಿಷೇಧ, ರೊಟ್ಟಿ-ದೋಸೆ ಮಾಡುವಂತಿಲ್ಲ, ಸಾಂಬಾರು ಮಾಡುವಾಗ ಅದಕ್ಕೆ ಒಗ್ಗರಣೆ ಹಾಕಬಾರದು ಹೀಗೆ ನಾನಾರೀತಿಯ ಕಟ್ಟುಪಾಡುಗಳನ್ನು ಊರಿನೊಳಗೆ ಪಾಲಿಸಬೇಕು ಎಂಬ ಕಟ್ಟುಪಾಡುಗಳನ್ನು ವಿಧಿಸಲಾಯಿತು. ಈ ಬಗ್ಗೆ ತಿಳಿಯದೆ ತಪ್ಪು ನಡೆದು ಹೋದರೆ ಅದಕ್ಕೆ ಪರಿಹಾರವಾಗಿ ಹಬ್ಬದ ದಿವಸ ತಪ್ಪೊಪ್ಪಿಕೊಂಡು ತಪ್ಪು ಹಣ ಹಾಕಬೇಕು, ತಿಳಿದು ತಿಳಿದು ತಪ್ಪು…
ಮಡಿಕೇರಿ ಮೇ 11 NEWS DESK : ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಕುಂಬಾರಗಡಿಗೆಯಲ್ಲಿ ನಡೆದ ಅಪ್ರಾಪ್ತೆಯ ಹತ್ಯೆ ಪ್ರಕರಣದ ಆರೋಪಿಯನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಬಾಲಕಿಯೊಂದಿಗೆ ವಿವಾಹ ಸಾಧ್ಯವಾಗದ ಹಿನ್ನೆಲೆ ಹತಾಶೆಯಿಂದ ಆರೋಪಿ ಪ್ರಕಾಶ್ ದುಷ್ಕö್ಯತ್ಯ ಎಸಗಿದ್ದಾನೆ ಎಂದು ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಂಜೆ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಎಸ್ಪಿ, ಬಂಧಿತ ಆರೋಪಿ ಪ್ರಕಾಶ್ (ಓಂಕಾರಪ್ಪ)ನನ್ನು ವಿಚಾರಣೆಗೆ ಒಳಪಡಿಸಿ, ಹತ್ಯೆಗೊಳಗಾದ ಮೀನಾಳ ರುಂಡವನ್ನು ಕುಂಬಾರಗಡಿಗೆಯ ಆಕೆಯ ಮನೆಯಿಂದ ಸುಮಾರು 50 ರಿಂದ 100 ಮೀಟರ್ ದೂರದ ಮರಕಾಡುಗಳ ನಡುವೆ ಪತ್ತೆ ಮಾಡಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಲಾದ ಕತ್ತಿ ಮತ್ತು ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. 10ನೇ ತರಗತಿ ಪರೀಕ್ಷಾ ಫಲಿತಾಂಶದ ದಿನವಾದ ಮೇ 9 ರಂದೇ ಕುಂಬಾರಗಡಿಗೆಯ ಸುಬ್ರಹ್ಮಣ್ಯ ಹಾಗೂ ಜಾನಕಿ ದಂಪತಿಯ ಕಿರಿಯ ಪುತ್ರಿ ಮೀನಾ ಹಾಗೂ ಪ್ರಕಾಶ್ ನ ವಿವಾಹ ನಿಶ್ಚಿತಾರ್ಥವಿತ್ತು. ಮಗಳಿಗೆ ಇನ್ನೂ 16 ವರ್ಷವಾಗಿದ್ದು,…
ಮಡಿಕೇರಿ ಮೇ 11 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶನಿವಾರದ ಮೊದಲ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ತಂಡ ಕೂರ್ಗ್ ಬ್ಲಾಸ್ಟರ್ಸ್ ವಿರುದ್ಧ 89 ರನ್ಗಳ ಗೆಲುವು ದಾಖಲಿಸಿತು. ಆ ಮೂಲಕ ಕೂರ್ಗ್ ಯುನೈಟೆಡ್ ಫೈನಲ್ ಪ್ರವೇಶಿಸಿತು. ಟಾಸ್ ಗೆದ್ದ ಕೂರ್ಗ್ ಬ್ಲಾಸ್ಟರ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕೂರ್ಗ್ ಯುನೈಟೆಡ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಬ್ಲಾಸ್ಟರ್ಸ್ ತಂಡ 12.3 ಓವರ್ ಗಳಲ್ಲಿ ತನ್ನೆಲ್ಲ ವಿಕೆಟ್ ಗಳನ್ನು ಕಳೆದುಕೊಂಡು 90 ರನ್ ಗಳನ್ನಷ್ಟೇ ಗಳಿಸಿ ಸೋಲು ಒಪ್ಪಿಕೊಂಡಿತು. ಕೂರ್ಗ್ ಯುನೈಟೆಡ್ ತಂಡದ ಅಯ್ಯಪ್ಪ ಸಿ.ಆರ್ 52 ಬಾಲ್ ಗಳಲ್ಲಿ ಭರ್ಜರಿ 93 ರನ್ ಗಳನ್ನು ದಾಖಲಿಸಿ, 12 ಬಾಲ್ ಗಳಲ್ಲಿ 4 ವಿಕೆಟ್ ಗಳನ್ನು…
ಮಡಿಕೇರಿ ಮೇ 11 NEWS DESK : ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾಳ ಹತ್ಯೆ ಖಂಡನೀಯ ಮತ್ತು ಇದೊಂದು ಹೇಯ ಕೃತ್ಯವೆಂದು ಹಿಂದೂ ಜಾಗರಣಾ ವೇದಿಕೆಯ ಕೊಡಗು ಜಿಲ್ಲಾ ಸಂಯೋಜಕ್ ಕುಕ್ಕೇರ ಅಜಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾರತೀಯ ಕಾನೂನಿನಡಿ ಮದುವೆ ಮಾಡಿಕೊಳ್ಳಲು ಪುರುಷರಿಗೆ ಕನಿಷ್ಠ 21 ವರ್ಷ ಹಾಗೂ ಯುವತಿಯರಿಗೆ ಕನಿಷ್ಠ 18ವರ್ಷ ಪೂರ್ಣಗೊಂಡಿರಬೇಕು. ಆದರೆ ಎರಡು ವರ್ಷ ಕಾಯುವ ತಾಳ್ಮೆಯಿಲ್ಲದ 32 ವರ್ಷದ ಆರೋಪಿ 16 ವರ್ಷದ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ದೇಶಕ್ಕೆ ಅಪಾರ ಕೊಡುಗೆ ನೀಡಿರುವ ಖ್ಯಾತಿಯ ಪುಟ್ಟ ಜಿಲ್ಲೆ ಕೊಡಗಿನಲ್ಲಿ ಈ ರೀತಿಯ ಘಟನೆ ನಡೆದಿರುವುದು ಸಜ್ಜನ ನಾಗರೀಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ದುಷ್ಕೃತ್ಯ ಎಸಗಿರುವ ಆರೋಪಿಗೆ ಕಾನೂನಿನಡಿ ಶಿಕ್ಷೆ ವಿಧಿಸಬೇಕು ಮತ್ತು ಪೊಲೀಸ್ ಇಲಾಖೆ ನಾಗರೀಕ ಸಮಾಜಕ್ಕೆ ಅಭಯ ನೀಡಬೇಕೆಂದು ಅಜಿತ್ ಒತ್ತಾಯಿಸಿದ್ದಾರೆ.






