ಲೇಖಕ: admin

ಮಡಿಕೇರಿ ಮೇ 11 NEWS DESK : ಅಧಿಕ ತಾಪಮಾನದಿಂದ ಕಂಗಾಲಾಗಿದ್ದ ಕೊಡಗು ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗಿಯಾಗಿದ್ದು, ಮಳೆಯ ನಿರೀಕ್ಷೆಯಲ್ಲಿದ್ದ ಜನರು ಹಾಗೂ ಕೃಷಿಕ ವರ್ಗ ನಿಟ್ಟುಸಿರು ಬಿಡುವಂತಾಗಿದೆ. ಬರಗಾಲದಿಂದ ತತ್ತರಿಸಿ ಹೋಗಿದ್ದ ರೈತ ಸಮುದಾಯ ಹಾಗೂ ಜಾನುವಾರುಗಳಿಗೆ ಮಳೆರಾಯನ ಆಗಮನ ಸಂತಸ ಮೂಡಿಸಿದೆ. ಕೂಡಿಗೆಯ ವ್ಯಾಪ್ತಿಯಲ್ಲಿ ಮುಂಜಾನೆ ಕೆಲಹೊತ್ತು ಬಿಸಿಲಿನ ವಾತಾವರಣ ಇತ್ತಾದರೂ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡುಬಂದಿತು. ಸಂಜೆ ಆರು ಗಂಟೆಯ ನಂತರ ಬಿರುಗಾಳಿ ಸಹಿತ ಆರಂಭವಾದ ಮಳೆಗೆ ಕೂಡಿಗೆಯಲ್ಲಿ ನಡೆಯುವ ಸಂತೆ ಮಾರುಕಟ್ಟೆಯ ಬೀದಿ ಬದಿಯ ವ್ಯಾಪಾರಸ್ಥರು ಹಾಗೂ ವಾಹನ ಸವಾರರು ಕೆಲಕಾಲ ಪರದಾಡುವಂತಾಯಿತು. ನಿರಂತರವಾದ ಮಳೆಯಿಂದಾಗಿ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಮನೆಒಳಗೆ ನೀರು ನುಗ್ಗುವ ಆತಂಕ ಎದುರಾಗಿತ್ತು. ವರದಿ : ಕೆ.ಆರ್.ಗಣೇಶ್-ಕೂಡಿಗೆ 

Read More

ಮಡಿಕೇರಿ ಮೇ 11 NEWS DESK : ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಛಾಯಾಗ್ರಾಹಕರಿಗೆ “ಪ್ರಜಾಪ್ರಭುತ್ವದ ಮಹದಾದ ಹಬ್ಬವಾದ ಮತದಾನ” ಎಂಬ ವಿಷಯದ ಕುರಿತು ಡೆಮಾಕ್ರಸಿ ಇನ್ ಆಕ್ಷನ್ ಛಾಯಾಗ್ರಹಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

Read More

ಮಡಿಕೇರಿ ಮೇ 11 NEWS DESK : ಅಂಗಡಿಯೊಂದಕ್ಕೆ ನುಗ್ಗಿದ ಚೋರರು ನಗದು ದೋಚಿರುವ ಪ್ರಕರಣ ನಗರದ ಶಾಂತಿನಿಕೇತನ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸರಕಾರಿ ಬಸ್ ಡಿಪೋ ಸಮೀಪದ ಬಡಾವಣೆಯಲ್ಲಿರುವ ಲೋಬೋ ಎಂಬುವವರ ಅಂಗಡಿಯ ಮುಂಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಸುಮಾರು 1.25 ಲಕ್ಷ ರೂ. ನಗದು ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಕ್ಕಳ ಶಾಲಾ ಶುಲ್ಕ ಪಾವತಿಸಲು ಹಣವನ್ನು ಸಂಗ್ರಹಿಸಿಡಲಾಗಿತ್ತು ಎಂದು ಹೇಳಲಾಗಿದೆ. ಶನಿವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ ಪಡಿತರ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಮನೆಗಳಿರುವ ಬಡಾವಣೆಯಲ್ಲೇ ಕಳ್ಳತನ ನಡೆದಿರುವ ಬಗ್ಗೆ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಮೇ 11 NEWS DESK : ಹುದಿಕೇರಿ ಟೀ ಎಸ್ಟೇಟ್ ಮತ್ತು ಕೆ ಕೆ ಆರ್ ಟೀ ಎಸ್ಟೇಟ್ ನಲ್ಲಿರುವ ಮಾರಿಯಮ್ಮ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

Read More

ಮಡಿಕೇರಿ ಮೇ 11 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಬೇವಿನ ಸೊಪ್ಪಿನ ಕರಗೋತ್ಸವ ಮೇ 12 ರಂದು ಆರಂಭವಾಗಲಿದೆ. ಅನಾದಿ ಕಾಲದಿಂದಲೂ ಶಕ್ತಿ ದೇವಿಯ ಬೇವಿನ ಸೊಪ್ಪಿನ ಕರಗೋತ್ಸವ ನಡೆಸಿಕೊಂಡು ಬರುತ್ತಿದ್ದು, ಭೀಕರ ಸಾಂಕ್ರಾಮಿಕ ರೋಗಗಳು ನಾಡಿಗೆ ಬರಬಾರದೆಂಬ ನಂಬಿಕೆಯಿಂದ ನಾಡಿನ ಸುಭಿಕ್ಷೆಗಾಗಿ ಈ ಕರಗೋತ್ಸವವನ್ನು ಆಚರಿಸಲಾಗುತ್ತಿದೆ. ಮೇ 12 ರಂದು ಮಧ್ಯಾಹ್ನ 2 ಗಂಟೆಗೆ ದೇವಿಯ ಕರಗಗಳ ಶೃಂಗಾರಕ್ಕೆ ದೇವಾಲಯದಿಂದ ಪಂಪಿನ ಕೆರೆಗೆ ತೆರಳಲ್ಲಿದ್ದು, ಸಂಜೆ 6.30ಕ್ಕೆ ಪಂಪಿನ ಕೆರೆಯಲ್ಲಿ ಕರಗಗಳಿಗೆ ವಿಶೇಷ ಪೂಜೆಯ ನಂತರ ವಾದ್ಯಗೋಷ್ಠಿಯೊಂದಿಗೆ ದೇವಿಯ ಕರಗಗಳ ಮೆರವಣಿಗೆ ಆರಂಭವಾಗಲಿದೆ. ಮೇ 13 ರಂದು ದೇವಾಲಯದಲ್ಲಿ ಕರಗಗಳಿಗೆ ವಿಶೇಷ ಪೂಜೆ, ಮೇ 14 ರಂದು ರಾತ್ರಿ 10 ಗಂಟೆಗೆ ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ಮಾರಿಯಮ್ಮ ಸನ್ನಿಧಿಯಲ್ಲಿ ಸಾಂಪ್ರದಾಯಿಕ ದೇವಿಯ ಪೂಜೆಗಳು ಜರುಗಲಿದ್ದು, ನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಮೇ 15 ರಂದು…

Read More

ಮಡಿಕೇರಿ ಮೇ 11 NEWS DESK : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಮೇ 18ರಂದು ರೋಟರಿ ಜಿಲ್ಲೆಯ ವತಿಯಿಂದ ಒಂದು ದಿನದ ಜಿ-20 ಯೋಗ ಶೃಂಗಸಭೆ ನಡೆಯಲಿದೆ ಎಂದು ರೋಟರಿ ಜಿಲ್ಲಾ ಯೋಗ ಹಾಗೂ ಧ್ಯಾನ ಸಮಿತಿ ಸದಸ್ಯ ಬಿ.ಜಿ.ಅನಂತಶಯನ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಗ ಪ್ರಚಾರವು ವಿಶ್ವದ ಎಲ್ಲೆಡೆ ಹಾಗೂ ಎಲ್ಲ ವರ್ಗದಲ್ಲೂ ನಡೆಯುವ ಅವಶ್ಯಕತೆ ಇರುವದರಿಂದ ಯೋಗ ಶಾಲಾ ಶಿಕ್ಷಕರು ಯೋಗಪಟುಗಳು ಹಾಗೂ ಆಸಕ್ತರೂ ಭಾಗವಹಿಸುವಂತೆ ಕೋರಿದರು. ಶೃಂಗ ಸಭೆಯಲ್ಲಿ ಪದ್ಮಶ್ರೀ ಡಾ.ನಾಗೇಂದ್ರ, ದೇಶಿ ಕೇಂದ್ರ ಮಹಾಸ್ವಾಮಿಗಳು, ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಅರಳುಮಲ್ಲಿಗೆ ಪಾರ್ಥಸಾರತಿ, ಆಯುಷ್ ಆಯುಕ್ತರು ಜಿ-20 ದೇಶಗಳ ಶೆರ್ಪಾ- (ಬ್ರೆಜಿಲ್) ಹಾಗೂ ಇತರರು ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದು, ಸಭಿಕರೊಡನೆ ಮಾತುಕತೆ ನಡೆಸಲಿದ್ದಾರೆ ಎಂದರು. ಶೃಂಗ ಸಭೆಯ ಉದ್ದೇಶ ವಿಶ್ವದಲ್ಲಿ ಯೋಗವನ್ನು ಜನಪ್ರಿಯಗೊಳಿಸುವುದು, ಯೋಗ ಕೇಂದ್ರಗಳನ್ನು ಆರಂಭಿಸುವುದು, ಆರೋಗ್ಯ ಪ್ರವಾಸೋದ್ಯಮ ಉತ್ತೇಜಿಸುವುದು ಆಗಿದೆ. ರೋಟರಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ, ಪ್ರತಿ ಜಿಲ್ಲೆಗಳಲ್ಲೂ ಯೋಗ…

Read More

ಮಡಿಕೇರಿ ಮೇ 11 NEWS DESK : ನಾಪೋಕ್ಲು ಇಂದಿರಾ ನಗರದ ನಿವಾಸಿಯಾದ ಗುತ್ತಿಗೆದಾರ ರಾಜಪ್ಪ ಅವರ ತಾಯಿ ಮಹಾಕಾಳಿಯಮ್ಮ (85)  ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 3 ಗಂಟೆಗೆ ಹಿಂದೂ ರುದ್ರಭೂಮಿಯಲ್ಲಿ  ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.

Read More

ನಾಪೋಕ್ಲು ಮೇ 11 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮಡಿಕೇರಿ ತನಲ್ ವೃದ್ಧಶ್ರಮದಲ್ಲಿ ಶ್ರಮದಾನ ನಡೆಯಿತು. ಮಳೆಗಾಲ ಸಮೀಪಿಸುತ್ತಿರುವ ನಿಟ್ಟಿನಲ್ಲಿ ಶೌರ್ಯ ತಂಡದ ಸದಸ್ಯರು ವೃದ್ಧಶ್ರಮಕ್ಕೆ ಅಗತ್ಯವಾದ ಸೌದೆಯನ್ನು ಸಂಗ್ರಹಿಸಿ, ಸುತ್ತಲ ಪರಿಸರವನ್ನು ಸ್ವಚ್ಛಗೊಳಿಸಿದರು. ತಂಡ ವಿವಿಧ ಸಾರ್ವಜನಿಕ ಸೇವೆಯನ್ನು ಆಶ್ರಮದ ಪ್ರಮುಖರು ಶ್ಲಾಘೀಸಿದರು. ಈ ಸಂದರ್ಭ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಂಯೋಜಕಿ ಬಾಳೆಯಡ ದಿವ್ಯ ಮಂದಪ್ಪ, ಶಂಕರ, ದಿಲಿಶ್, ಮಾಯಿಲಪ್ಪ, ಶರವಣ ,ಶ್ಯಾಮಲಾ, ಆಶಾ, ಸುನೀತಾ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಮೇ 11 NEWS DESK : ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವಿರಾಜಪೇಟೆ ಶಿವಕೇರಿಯ ಶ್ರೀ ಆದಿ ದಂಡಿನ ಮಾರಿಯಮ್ಮ ಮತ್ತು ಶ್ರೀ ಚಾಮುಂಡಿ (ಚೌಂಡಿ) ದೇವರ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದ ಗಣಪತಿ ಹೋಮ, ಕಳಸ ಪೂಜೆ, ದೇವಿಗೆ ಹೂವಿನ ಅಲಂಕಾರ ನೆರವೇರಿತು. ನಂತರ ಮಹಾಪೂಜೆ ಮತ್ತು ಮಂಗಳಾರತಿ ಜರುಗಿತು. ಅಪರಾಹ್ನ ವಿರಾಜಪೇಟೆಯ ಮುಖ್ಯಬೀದಿಯಲ್ಲಿ ಅಲಂಕೃತ ಮಂಟಪದೊಂದಿಗೆ ದೇವರ ಪಲ್ಲಕ್ಕಿಯ ಮೆರವಣಿಗೆ ನಡೆಯಿತು. ನಂತರ ತಳಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ಬಳಿಕ ದೇವಿಗೆ ಆರತಿ ಪೂಜೆ, ಮಹಾಪೂಜೆ ಹಾಗೂ ಮಂಗಳಾರತಿ ನೆರವೇರಿತು. ಗುಳಿಗನ ಪೂಜೆ :: ಮೇ 12 ರಂದು ಮಧ್ಯಾಹ್ನ 3 ಗಂಟೆಗೆ ಗುಳಿಗನ ಪೂಜೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಕೋರಿದೆ.

Read More

ಮಡಿಕೇರಿ ಮೇ 11 NEWS DESK : ಕೊಡಗು ಜಿಲ್ಲೆಯ ಪ್ರಸಿದ್ಧ ಝಿಯಾರತ್ ಕೇಂದ್ರ ಮೇಕೇರಿ ಮಸೀದಿಯ ಮಖಾಂ ಉರೂಸ್  ಶ್ರದ್ಧಾಭಕ್ತಿಯಿಂದ ನಡೆಯಿತು. ಜನಾಬ್ ಸಯ್ಯದ್ ಜಂಬ್ರುದ್ದೀನ್ ನೇತೃತ್ವದಲ್ಲಿ ಜುಮಾ ನಮಾಜಿನ ನಂತರ ಧ್ವಜಾರೋಹಣ ನೆರವೇರಿಸುವ ಮೂಲಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಮಧ್ಯಾಹ್ನ ಮಖಾಂ ಝಿಯಾರತ್, ರಾತ್ರಿ ಧಾರ್ಮಿಕ ಉಪನ್ಯಾಸ ನಡೆಯಿತು. ಐದು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ, ಮಗ್ರಿಬ್ ನಮಾಜಿನ ನಂತರ ಮಖಾಂ ಅಲಂಕಾರ, ಜೊಹರ್ ನಮಾಜಿನ ನಂತರ ಮೌಲೂದ್ ಪಾರಾಯಣ, ಸಂದಲ್ ಮೆರವಣಿಗೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಕಾರ್ಯಕ್ರಮದಲ್ಲಿ ಧಾರ್ಮಿಕ ನೇತರರು, ರಾಜಕೀಯ ನಾಯಕರು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದರು.

Read More