ಪುತ್ತೂರು ಮೇ 11 NEWS DESK : ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಏಪ್ರಿಲ್ 21 ರಂದು ನಡೆಸಿದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್.ವಿ.ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿಗಳು ತೆರ್ಗಡೆ ಹೊಂದಿರುವುದು ವಿಶೇಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಕಾಲೇಜಿನ ಪ್ರಾಶುಂಪಾಲರಾದ ವಿದ್ವಾನ್ ಗಣಪತಿ ಭಟ್, ಆಡಳಿತ ಮಂಡಳಿಯವರು, ಉಪನ್ಯಾಸಕ ವರ್ಗ, ಎನ್.ಡಿ.ಎ/ಎನ್.ಎ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಲೇಖಕ: admin
ಮಡಿಕೇರಿ ಮೇ 11 NEWS DESK : ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೂರ್ನಾಡು ಪಟ್ಟಣದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೂರ್ನಾಡಿನ ಆರಿಫ್ (33) ಎಂಬುವವರೇ ಮೃತ ದುರ್ದೈವಿ. ಮೂರ್ನಾಡಿನಲ್ಲಿ ನಡೆಯುತ್ತಿರುವ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆರಿಫ್ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಯುವಕರು ಅಪಾಯದಿಂದ ಪಾರಾಗಿದ್ದಾರೆ. ಮೂರ್ನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಮೇ 11 NEWS DESK : ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಸಂಜೆ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ಮಾಡಿದ ಪ್ರಕಾಶ್ ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ಪರಾರಿಯಾಗಿದ್ದ. ಪೊಲೀಸರು ಆರೋಪಿಯ ಶೋಧ ಕಾರ್ಯ ತೀವ್ರಗೊಳಿಸಿದ ಹಂತದಲ್ಲೇ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವ್ಯಾಪಕ ಊಹಾಪೋಹಗಳು ಹಬ್ಬಿತ್ತು. ಆದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಈ ಸುದ್ದಿಯನ್ನು ಅಲ್ಲಗಳೆದಿದ್ದರು. ಇದೀಗ ಆರೋಪಿಯ ಬಂಧನವಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಎಸ್ಪಿ ಇಂದು ಬೆಳಗ್ಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಯನ್ನು ಮಧ್ಯಾಹ್ನದ ವೇಳೆಗೆ ನೀಡುವುದಾಗಿ ತಿಳಿಸಿದ್ದಾರೆ.
ಗುಂಡ್ಲುಪೇಟೆ ಮೇ 10 NEWS DESK : ಮೇಯಲು ಬಿಟ್ಟಿದ್ದ ಕುರಿಗಳು ವಿಷಕಾರಿ ಸೊಪ್ಪು ಸೇವಿಸಿ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಮಹದೇವಮ್ಮ ಹಾಗೂ ದೇವಮ್ಮ ಎಂಬುವವರಿಗೆ ಸೇರಿದ ತಲಾ ಐದು ಸೇರಿದಂತೆ ಒಟ್ಟು 10 ಕುರಿಗಳು ಸಾವನ್ನಪ್ಪಿವೆ. ಮೂರು ಕುರಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪಶು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುರಿಗಳ ಸಾವಿನಿಂದ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಮಾಲೀಕರು ಒತ್ತಾಯಿಸಿದ್ದಾರೆ.
ಮಡಿಕೇರಿ ಮೇ 10 NEWS DESK : ಸುಮಾರು 100 ವರ್ಷಗಳ ಇತಿಹಾಸ ಹೊಂದಿರುವ ಮೂರ್ನಾಡು ಪಟ್ಟಣದ ಶ್ರೀರಾಮಮಂದಿರವನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದೆ. ನೂತನ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು. ಮೊದಲ ಹಂತದಲ್ಲಿ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ರಾಮಮಂದಿರ ನಿರ್ಮಾಣಗೊಳ್ಳಲಿದೆ. 2ನೇ ಹಂತದಲ್ಲಿ ಸಭಾ ಭವನ ಹಾಗೂ 3ನೇ ಹಂತದಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗುತ್ತದೆ. ಒಟ್ಟು ಯೋಜನಾ ವೆಚ್ಚ 4 ಕೋಟಿ ರೂ. ಎಂದು ಶ್ರೀರಾಮಮಂದಿರ ಜೀರ್ಣೋದ್ಧಾರ ಸಮಿತಿ ತಿಳಿಸಿದೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ಅಯೋಧ್ಯೆ, ತಲಕಾವೇರಿ, ಇರ್ಪುವಿನ ಮೃತ್ತಿಕೆ (ಮಣ್ಣು), ಕಾವೇರಿ, ಗಂಗಾ ಮತ್ತು ಕಾಶಿ ತೀರ್ಥವನ್ನು ಶಿಲಾನ್ಯಾಸದ ಸಂದರ್ಭ ಸಮರ್ಪಿಸಲಾಯಿತು. ಭೂಮಿಪೂಜೆ ಸಂದರ್ಭ ಮೂರ್ನಾಡು ಶ್ರೀರಾಮಮಂದಿರ ಟ್ರಸ್ಟ್, ಶ್ರೀರಾಮಮಂದಿರ ಜೀರ್ಣೋದ್ಧಾರ ಸಮಿತಿ, ವಿಶ್ವ ಹಿಂದೂ ಪರಿಷತ್, ಮೂರ್ನಾಡುವಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಭಕ್ತರು ಹಾಜರಿದ್ದರು.
ಮಡಿಕೇರಿ ಮೇ 10 NEWS DESK : ವ್ಯಕ್ತಿಯೊಬ್ಬರು ಮಸೀದಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಬಳಿಯ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಪಡಿಯಾಣಿ ಬೈರಂಡಾಣೆ ಗ್ರಾಮದ ನಿವಾಸಿ ಬಿ.ಯು.ಶಾದುಲಿ (55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೂಲಿ ಕೆಲಸ ಮಾಡಿಕೊಂಡಿದ್ದ ಶಾದುಲಿ ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಮನೆಯಿಂದ ಹೋದ ಶಾದುಲಿ ಅವರು ಮನೆ ಸಮೀಪದ ಬೈರಂಡಾಣೆ ಮಸೀದಿಯ ಮೇಲ್ಭಾಗದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. (ವರದಿ : ಸಾಜಿದ್ ಪಯ್ಯಾಡಿ)
ಕಡಂಗ ಮೇ 10 NEWS DESK : ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ 20ನೇ ವರ್ಷದ ಮುಸ್ಲಿಂ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಆಟಗಾರರು ಶಿಸ್ತಿನಿಂದ ಪಂದ್ಯಾವಳಿಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದರು. ಇಂತಹ ಕ್ರೀಡಾಕೂಟದಿಂದ ಸಮುದಾಯ ಬಾಂಧವರಲ್ಲಿ ಸೌಹಾರ್ದತೆ ಹೆಚ್ಚಾಗಲಿದೆ ಎಂದು ನುಡಿದರು. ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫಾ ಚೋಕಂಡಳ್ಳಿ ಮಾತನಾಡಿ, ಯುವ ಪ್ರತಿಭೆಗಳು ಬೆಳೆಯಲು ಇಂತಹ ಕ್ರೀಡೆಗಳು ಅನಿವಾರ್ಯತೆ ಇದೆ ಎಂದು ನುಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಮಾತನಾಡಿ, 1996 ರಿಂದ ಕೊಡಗಿನ ಎಲ್ಲಾ ಭಾಗಗಳಲ್ಲಿ ಎಲ್ಲಾ ಸಮುದಾಯಗಳ ನಡುವೆ ಸೌಹಾರ್ದತೆ ಬೆಳೆಯಲು ಕ್ರೀಡೆ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ನಿವೃತ್ತ ಯೋಧ ಎ.ಎಂ.ಉಮ್ಮರ್ ಎಡಪಾಲ ಮಾತನಾಡಿ, ಯುವಕರು ಕ್ರೀಡೆಯ ಜೊತೆಗೆ ಶೈಕ್ಷಣಿಕ ಪ್ರಗತಿಗೂ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಕೊಡಗು…
ಕುಶಾಲನಗರ ಮೇ 10 NEWS DESK : 12ನೆಯ ಶತಮಾನದ ಭಕ್ತಿ ಪಂಥದ ಹರಿಕಾರರಾದ ಜಗಜ್ಯೋತಿ ಬಸವಣ್ಣನವರು ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿ ಕ್ರಾಂತಿಯ ಬೀಜವನ್ನು ಬಿತ್ತಿದ ಹರಿಕಾರ ಎಂದು ತೊರೆನೂರು ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಟಿ.ಬಿ.ಮಂಜುನಾಥ್ ತಿಳಿಸಿದರು. ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ, ಕುಶಾಲನಗರ ವೀರಶೈವ ಸಮಾಜ ಹಾಗೂ ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಸಂಘದ ವತಿಯಿಂದ ಕುಶಾಲನಗರ ಬಸವೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು. ಇವನಾರವ, ಇವನಾರವ ಎಂದೆನ್ನದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ” ಎಂದು, ಸಮಾಜದ ಎಲ್ಲ ವರ್ಗದ ಜನರನ್ನು ಒಂದು ಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು ಎಂದರು. ಬಸವಣ್ಣ ನಡೆದು ಬಂದ ದಾರಿ ಅವರ ವಚನಗಳ ಸಾರ ಅಂತರಂಗ ಬಹಿರಂಗ ಶುದ್ಧತೆಯ ಬಗ್ಗೆ ಧರ್ಮದ ಮಹತ್ವದ ಬಗ್ಗೆ ಬಸವಣ್ಣನವರಲ್ಲಿದ್ದ ಆಲೋಚನೆಗಳನ್ನು ವಚನಗಳ ಮೂಲಕ ಮಂಜುನಾಥ್ ತಿಳಿಸಿದರು. ಬಸವಣ್ಣನವರ ಭಾವಚಿತ್ರಕ್ಕೆ…
ಮಡಿಕೇರಿ ಮೇ 10 NEWS DESK : ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದ ಜಮೀನುಗಳನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತಿಸಬಾರದು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ಭೂಪರಿವರ್ತನೆಗೆ ಅವಕಾಶ ನೀಡುವ ಸರಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ವಾಣಿಜ್ಯೋದ್ಯಮ ಉದ್ದೇಶಕ್ಕಾಗಿ ಭೂಪರಿವರ್ತಿಸುವುದನ್ನು ಸಂಪೂರ್ಣವಾಗಿ ತಡೆಯಬೇಕು. ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ಭೂಪರಿವರ್ತನಾ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎನ್.ಯು.ನಾಚಪ್ಪ ಅವರು ಮಾತನಾಡಿ ಕೊಡಗಿನ ಕಾಫಿ ತೋಟಗಳನ್ನು ಭೂಪರಿವರ್ತಿಸುವ ಮೂಲಕ ಭೂಮಾಫಿಯಾ, ರೆಸಾರ್ಟ್ ದೊರೆಗಳು, ರಿಯಲ್ ಎಸ್ಟೇಟ್ ದಣಿಗಳು, ಅನಿವಾಸಿ ಭಾರತೀಯ ಉದ್ಯಮಪತಿಗಳು, ಬಹುರಾಷ್ಟ್ರೀಯ ಕಂಪನಿಗಳು ಮತ್ತು ಕಾರ್ಪೋರೇಟ್ ವಲಯಗಳಿಗೆ ವಿಲಾ, ಬೃಹತ್ ಬಂಗಲೆ ಹಾಗೂ ಟೌನ್ ಶಿಪ್ ಗಳನ್ನು ನಿರ್ಮಿಸಲು ಸರಕಾರ ಅವಕಾಶ ನೀಡಲು ಮುಂದಾಗಿದೆ. ಕಾವೇರಿ…
ನಾಪೋಕ್ಲು ಮೇ 10 NEWS DESK : ಮೈಸೂರಿನ ಡೀ ಪೌಲ್ ಇಂಟರ್ನ್ಯಾಷನಲ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಪಂದ್ಯಾಟದಲ್ಲಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಯುವಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.






