ಲೇಖಕ: admin

ಮಡಿಕೇರಿ ಮೇ 25 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಪರವಾಗಿ ಶಿವಮೊಗ್ಗ ನಗರದ ವಿವಿಧ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ, ಉಪನ್ಯಾಸವರ್ಗ ಮತ್ತು ಸಿಬ್ಬಂದಿ ವರ್ಗದವರಲ್ಲಿ ತಮ್ಮನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು. ಈ ಸಂದರ್ಭ ನಾಗವೇಣಿ ಸರ್ಜಿ, ಡಾ.ರಜತ್, ಡಾ.ಪ್ರಾಣೇಶ್, ಡಾ.ರಾಘವಾಂಕ, ಮೋಹನ್ ಸೇರಿದಂತೆ ಹಲವರು ಹಾಜರಿದ್ದರು.

Read More

ಮಡಿಕೇರಿ ಮೇ 25 NEWS DESK : ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಮೇ 30 ರೊಳಗೆ ಪ್ರದರ್ಶಿಸಬೇಕೆಂದು ನೀಡಿರುವ ಗಡುವನ್ನು ಡಿ.31 ರವರೆಗೆ ವಿಸ್ತರಿಸಬೇಕೆಂದು ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಜಿಲ್ಲಾಡಳಿತದ ಬಳಿ ಮನವಿ ಮಾಡಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ನಾಮಫಲಕವನ್ನು ಬದಲಾಯಿಸಲು ಅಡಚಣೆಯಾಗಿದೆ. ಅಲ್ಲದೆ ಆರ್ಥಿಕ ಪರಿಸ್ಥಿತಿಯೂ ಹಿನ್ನಡೆಯನ್ನುಂಟು ಮಾಡುತ್ತಿದೆ ಎಂದರು. ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿರುವಂತೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕದಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ, ವ್ಯವಹಾರ ಉದ್ಯಮಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‍ಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಬೇಕೆಂದು ಸರಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೊಡಗು ಜಿಲ್ಲಾ ವಾಣಿಜ್ಯ ಮತ್ತು…

Read More

ಕುಶಾಲನಗರ ಮೇ 25 NEWS DESK : ನೃತ್ಯ ಮೂಲಕ ಚಲನೆಯ ವ್ಯಾಪ್ತಿ, ದೈಹಿಕ ಶಕ್ತಿ ಮತ್ತು ದೇಹದ ತ್ರಾಣವನ್ನು ಅಧಿಕಗೊಳಿಸುತ್ತದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ನಡೆದ ಟೀಮ್ ಡ್ರೀಮ್ ಸ್ಟಾರ್ ನೃತ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನೃತ್ಯ ವ್ಯಾಯಾಮದ ಒಂದು ಭಾಗವಾಗಿದೆ ಮತ್ತು ಚಿಕ್ಕ ವಯಸ್ಸಿನಿಂದಲೇ ನೃತ್ಯದ ಹಿಡಿತ ಜೀವನದಲ್ಲಿ ಸಕ್ರಿಯವಾಗಿರಲು ಪ್ರೇರಪಣೆ ನೀಡುತ್ತದೆ ಎಂದರು. ಜಿ.ಪಂ ಮಾಜಿ ಸದಸ್ಯರಾದ ವಿ.ಪಿ.ಶಶಿಧರ್, ನಗರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಮ್ ಮತ್ತಿತರರು ಮಾತನಾಡಿದರು. ಪಟ್ಟಣದ ಕೊಡವ ಸಮಾಜ ಸಭಾಂಗಣದಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಕ್ಕೂ ಅಧಿಕ ಕಲಾವಿದರು ಪಾಲ್ಗೊಂಡಿದ್ದರು. ಜೂನಿಯರ್ ವಿಭಾಗದಲ್ಲಿ ಕೂಡಿಗೆಯ ಎ ಕ್ರಿಯೇಟಿವ್ ನೃತ್ಯ ಸಂಸ್ಥೆ ಪ್ರಥಮ, ಮಡಿಕೇರಿಯ ನಾಟ್ಯಕಲ ದ್ವಿತೀಯ, ಕಿಂಗ್ಸ್ ಆಫ್ ಕೂರ್ಗ್ ತೃತೀಯ ಬಹುಮಾನ ಪಡೆಯಿತು. ಸೀನಿಯರ್ ವಿಭಾಗದಲ್ಲಿ ಸೋಮವಾರಪೇಟೆಯ ಟೀಮ್ ಅಡ್ವೆಂಚರ್…

Read More

ಮಡಿಕೇರಿ ಮೇ 25 NEWS DESK : ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮೊಗೇರ ಸೇವಾ ಸಮಾಜದ ಜಿಲ್ಲಾ ಗೌರವ ಸಲಹೆಗಾರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಪಿ.ಎಂ. ರವಿ ಹೇಳಿದರು. ಸೋಮವಾರಪೇಟೆಯ, ಬಜೆಗುಂಡಿ ಮೊಗೇರ ಸೇವಾ ಸಮಾಜ ಮತ್ತು ಕುಸುಬೂರು ಮೊಗೇರ ಗ್ರಾಮ ಸಮಿತಿಯ ವತಿಯಿಂದ ಕುಸುಬೂರಿನಲ್ಲಿ ಮೊಗೇರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜವು ಬಲಿಷ್ಠವಾಗಬೇಕಾದರೆ ಶಿಕ್ಷಣವು ಪ್ರಮುಖವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ನೀಡುವಲ್ಲಿ ಶ್ರಮವಹಿಸಬೇಕೆಂದರು. ಪ್ರಸ್ತುತ ದಿನಗಳಲ್ಲಿ ಮೊಗೇರ ಸಮುದಾಯದವರು ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರುತ್ತಿದ್ದು, ಸಮಾಜದ ಅಭಿವೃದ್ಧಿಗೆ ಎಲ್ಲರ ಕೊಡುಗೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಕೈಜೋಡಿಸುವಂತೆ ಮನವಿ ಮಾಡಿದರು. ವಿದ್ಯಾರ್ಥಿಗಳಿಗೆ ಮಕ್ಕಳಿಗೆ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇವೆ ಎಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಸರಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ…

Read More

ಮಡಿಕೇರಿ ಮೇ 25 NEWS DESK : ಮುನ್ವರುಲ್ ಇಸ್ಲಾಂ ಮದರಸ ಸುಂಟಿಕೊಪ್ಪದಲ್ಲಿ ಎಸ್‌ವೈಎಸ್ ಸೋಮವಾರಪೇಟೆ ವಲಯದ ವಾರ್ಷಿಕ ಸಭೆ ನಡೆಯಿತು. ವಲಯದ ಅಧ್ಯಕ್ಷ  ಅಬ್ದುಲ್ ಸಮದ್ ನಿಸಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ಎಸ್‌ವೈಎಸ್ ಕರ್ನಾಟಕ ರಾಜ್ಯ ಸದಸ್ಯ ಹಸೈನಾರ್ ಮುಸ್ಲಿಯಾರ್ ಉದ್ಘಾಟಿಸಿದರು. ವಾರ್ಷಿಕ ವೀಕ್ಷಕರಾಗಿ ಜಿಲ್ಲಾ ಸಮೀತಿ ಸದಸ್ಯರಾದ ಮುನೀರ್ ಮಹ್ಳರಿ ಉಸ್ತಾದ್, ಎಸ್‌ವೈಎಸ್  ಜಿಲ್ಲಾಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಪಾಲ್ಗೊಂಡಿದ್ದರು. ವಲಯದ ಉಸ್ತುವಾರಿಗಳು ಮಾತನಾಡಿ ತಕ್ಷಣವೇ ವಲಯ ಸಮಿತಿಯಿಂದ ಯುನಿಟಿಗಳ ಸಂದರ್ಶನ ನಡೆಯಬೇಕಿದೆ ಎಂದು ಸಲಹೆ ನೀಡಿದರು.  ಕಾರ್ಯದರ್ಶಿ ನಿಜಾಮ್ ಕಂಡಕೆರೆ ಸ್ವಾಗತಿಸಿದರು. ಸಿದ್ದೀಕ್ ಜುಹ್ರಿ ಉಸ್ತಾದ್ ರ ಪ್ರಾರ್ಥನೆಯೊಂದಿಗೆ ಸಭೆ ಮುಕ್ತಾಯಗೊಂಡಿತು.

Read More

ಮಡಿಕೇರಿ ಮೇ 25 NEWS DESK :  ಸ್ವ ಉದ್ಯೋಗಗಳಲ್ಲಿ ಮಹಿಳೆಯರು ಆಸಕ್ತಿಯಿಂದ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬಿಗಳಾಗಿ ಶಾಂತಿ ನೆಮ್ಮದಿಯ ಬದುಕನ್ನು ಕಾಣುವಂತಾಗಬೇಕೆನ್ನುವ ಆಶಯವನ್ನು ನಬಾರ್ಡ್ ಜಿಲ್ಲಾ ಅಧಿಕಾರಿ ರಮೇಶ್ ಬಾಬು ವ್ಯಕ್ತಪಡಿಸಿದರು. ನಗರದ ಬಸಪ್ಪ ಶಿಶು ವಿಹಾರ ಸಭಾಂಗಣದಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ನಬಾರ್ಡ್) ಮತ್ತು ಮಹಿಳೋದಯ ಮಹಿಳಾ ಒಕ್ಕೂಟ(ಓಡಿಪಿ)ದ ಸಂಯಕ್ತಾಶ್ರಯದಲ್ಲಿ ಮಡಿಕೇರಿ ಮತ್ತು ಕುಶಾಲನಗರದ ಅರವತ್ತು ಮಹಿಳೆಯರಿಗೆ ಆಯೋಜಿಸಲಾಗಿದ್ದ ‘ಬ್ಯೂಟೀಷಿಯನ್ ಮತ್ತು ಬ್ರೈಡಲ್ ಮೇಕಪ್ ತರಬೇತಿ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಬಾರ್ಡ್ ಸಂಸ್ಥೆಯು ರಾಷ್ಟ್ರದ ಮಹಿಳೆಯರು ಮತ್ತು ರೈತರ ಅಭಿವೃದ್ಧಿಗೋಸ್ಕರ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಕೊಡಗು ಜಿಲ್ಲೆಗೆ ಸೀಮಿತವಾಗಿ ಮಹಿಳೆಯರಿಗೆ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈಗ ನಡೆಸಲಾಗುತ್ತಿರುವ ಬ್ಯೂಟೀಷಿಯನ್ ಮತ್ತು ಬ್ರೈಡಲ್ ಮೇಕಪ್ ತರಬೇತಿ ಪಡೆದ ಮಹಿಳೆಯರು ತಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಂಡು ಸ್ವ ಉದ್ಯೋಗವನ್ನು ಪ್ರಾರಂಭಿಸುವುದರ ಮೂಲಕ ತಮ್ಮ ಕಾಲ ಮೇಲೆ ತಾವು ನಿಲ್ಲಲು ಮುಂದಾಗಬೇಕೆಂದು ಕರೆ…

Read More

ಮಡಿಕೇರಿ ಮೇ 25 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ.ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭೇಟಿ ನೀಡಿ, ಅಲ್ಲಿನ ಆಡಳಿತವರ್ಗ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಿದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ, ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಹಾಜರಿದ್ದರು.  

Read More

ಮಡಿಕೇರಿ ಮೇ 25 NEWS DESK : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ಆಸ್ಪತ್ರೆ ಮಹೇಶ್ ಆಸ್ಪತ್ರೆ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರೊಂದಿಗೆ ಭೇಟಿ ನೀಡಿದರು. ಹೆಸರಾಂತ ಮಕ್ಕಳ ತಜ್ಞ ಮತ್ತು ಮಹೇಶ್ ಆಸ್ಪತ್ರೆಯ ವೈದಕೀಯ ನೀರ್ದೇಶಕರಾದ ಡಾ.ರಾಕೇಶ್ ಅಡಿಗ, ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಗೆಲ್ಲಿಸಲು ನಮ್ಮನ್ನು ಬೆಂಬಲಿಸುವಂತೆ ಮತಯಾಚಿಸಿದರು.

Read More

ಮಡಿಕೇರಿ ಮೇ 25 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಸೇಂಟ್ ಮೇರೀಸ್ ಸೈರನ್ ಪಿಯು ಕಾಲೇಜಿಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ  ಭೇಟಿ ನೀಡಿ ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮತಯಾಚಿಸಿದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್ ಉಡುಪ, ಡಾ.ವಿದ್ಯಾಲತಾ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.   

Read More

ನಾಪೋಕ್ಲು ಮೇ 25 NEWS DESK : ಪಾಲೂರು ಗ್ರಾಮ ದೇವತೆಯಾದ ಶ್ರೀ ಕಾಳಿಕಾಂಬ ಅಮನೂರು ತಾಯಿಯ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ತೆರಳಿ ದೇವರ ಜಳಕ ಕೈಗೊಂಡರು. ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆಯಿತು. ಪ್ರಸಾದ ವಿತರಣೆಯ ನಂತರ ಇನ್ನಿತರ ದೇವರ ಸೇವೆಗಳು ಜರುಗಿತು. ಈ ಸಂದರ್ಭ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ, ಕಾಣಿಕೆ ಒಪ್ಪಿಸಿದರು. ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ತಕ್ಕ ಮುಖ್ಯಸ್ಥರು ಊರ ಮತ್ತು ಪರವೂರಿನ ಕಾಲಿಕಾಂಬ ಭಕ್ತಾದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More