ಲೇಖಕ: admin

ಉಡುಪಿ ಮೇ 24 NEWS DESK : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ  ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್.ಬೋಜೆಗೌಡ ಅವರು ಉಡುಪಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಡಾ ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕ್ಕೆ ಭೇಟಿ ನೀಡಿ ಅಲ್ಲಿನ ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ವಿಧಾನ  ಪರಿಷತ್ ಚುನಾವಣೆಯಲ್ಲಿ  ಗೆಲ್ಲಿಸುವಂತೆ ಮತಯಾಚನೆ ಮಾಡಲಾಯಿತು. ಈ ವೇಳೆ, ಕಾಲೇಜು ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ ,  ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ,  ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Read More

ಕುಶಾಲನಗರ ಮೇ 24 NEWS DESK : ಶಿಕ್ಷಣದ ಮೂಲಕ ಮಾತ್ರ ಸ್ವಾವಲಂಬಿಗಳಾಗಬಹುದು ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ಸಿ.ಕೆ.ಸುಬ್ಬರಾಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು, ಆರ್ಥಿಕ ಕೊರತೆ ಹೆಸರಿನಲ್ಲಿ ಶಿಕ್ಷಣವನ್ನು ಮೊಟಕುಗೊಳಿಸಬಾರದು ಎಂದು ಹೇಳಿದರು. ಶಿಸ್ತು ಮತ್ತು ಗುರು ಹಿರಿಯರಿಗೆ ವಿಧೇಯತೆ ಮೂಲಕ ಸಾಧನೆ ಸಾಧ್ಯ, ಗುಣಮಟ್ಟ ಸೃಷ್ಟಿಸಲು ಅತ್ಯಂತ ಶ್ರಮದ ಅಗತ್ಯತೆ ಇದೆ ಎಂದರು. ಪ್ರಕೃತಿ ಮತ್ತು ವಿಜ್ಞಾನ ಎಲ್ಲರ ಧ್ವನಿಗಿಂತ ಮಿಗಿಲಾಗಿದ್ದು, ಅದರ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ ಎಂದರು. ಸರಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ಸತೀಶ್ ಎನ್.ಎಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಬೆಂಗಳೂರಿನ ಕ್ಯೂ ಸ್ಪೈಡರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿರೀಶ್ ಶಿವಣ್ಣ, ಶನಿವಾರಸಂತೆ ವಿಘ್ನೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಜಯಕುಮಾರ್  ಮಾತನಾಡಿದರು. ಪ್ರಾಂಶುಪಾಲರಾದ ಡಾ ಸತೀಶ್ ಎನ್ ಎಸ್ ಅವರು…

Read More

ಮಡಿಕೇರಿ ಮೇ 24 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವ ದಿ. ಶ್ರೀ ಡಾ ವಿ.ಎಸ್.ಆಚಾರ್ಯ ಅವರ ಉಡುಪಿಯ ಮಣಿಪಾಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಡಾ. ಶಾಂತಾ ಆಚಾರ್ಯ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಕುಶಲೋಪಚರಿ ವಿಚಾರಿಸಿದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

Read More

ಮಡಿಕೇರಿ ಮೇ 24 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ ದಿ. ಡಾ ವಿ.ಎಸ್.ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ  ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

Read More

ಮಡಿಕೇರಿ ಮೇ 24 NEWS DESK :  ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25 ರ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಎನ್‍ಒಎಸ್)ಗೆ ಸ್ನಾತಕೋತ್ತರ ಪದವಿ, ಪಿಎಚ್‍ಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆನ್‍ಲೈನ್ https://overseas.tribal.gov.in ನಲ್ಲಿ ವೆಬ್‍ಸೈಟ್ ಮೂಲಕ ಅರ್ಜಿಯನ್ನು ಮೇ, 31 ರೊಳಗೆ ಸಲ್ಲಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ  ತಿಳಿಸಿದ್ದಾರೆ.

Read More

ಮಡಿಕೇರಿ ಮೇ 24 NEWS DESK : ಕೊಡಗು ಜಿಲ್ಲೆಯಲ್ಲಿ `ಪೂರ್ವ ಮುಂಗಾರು’ ಉತ್ತಮವಾಗಿದ್ದು, ಮುಂದಿನ `ಮುಂಗಾರು’ ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಈಗಿನಿಂದಲೇ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ಮುಂಗಾರು ಸಂದರ್ಭದಲ್ಲಿ ಅಗತ್ಯ ಕಾರ್ಯ ನಿರ್ವಹಣೆ, ಶುದ್ಧ ಕುಡಿಯುವ ನೀರು ಪೂರೈಕೆ ಮತ್ತಿತರ ಸಂಬಂಧ ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಅವರು ಮಾತನಾಡಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಇಒಗಳು ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ಪ್ರಾಕೃತಿಕ ವಿಕೋಪ ಎದುರಿಸಲು ಸದಾ ಎಚ್ಚರವಹಿಸಬೇಕು ಎಂದರು. ಹೆಚ್ಚಿನ ಮಳೆಯಾಗಿ ಪ್ರವಾಹ ಉಂಟಾದಲ್ಲಿ, ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಹತ್ತಿರದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಮುಂದಾಗಬೇಕು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು ಎಂದು…

Read More

ಮಡಿಕೇರಿ ಮೇ 24 NEWS DESK : ಕೊಡಗು ಧಮ ವಿಜಯ ಸಂಘಟನೆ ವತಿಯಿಂದ ವೈಶಾಖ ಬುದ್ಧ ಪೂರ್ಣಿಮೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ್, ತಿಶರಣ ಹಾಗೂ ಪಂಚಶೀಲ ತತ್ವಗಳನ್ನು ಹೇಗೆ ಮತ್ತು ಏಕೆ ಪಾಲಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ನಮ್ಮ ಎಲ,್ಲ ಸುಖ ಹಾಗೂ ದುಃಖಗಳಿಗೆ ಕಾರಣವಾದ ನಮ್ಮ ಮನಸ್ಸನ್ನು ಯಾವ ರೀತಿಯಲ್ಲಿ ತರಬೇತಿಗೊಳಿಸಬೇಕು ಎಂದು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಶೋಕ್‍ಪುರ ಅನ್ನಪೂರ್ಣ ಸಮಿತಿಯ ಅಧ್ಯಕ್ಷ ಜಯರಾಮ್ ನಗರದ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್, ನಗರಸಭಾ ಸದಸ್ಯರಾದ ಶಾರದಾ ನಾಗರಾಜು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ.ಜಾತಿ ನೌಕರರ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ, ವೈದ್ಯರಾದ ಡಾ.ಪ್ರಕಾಶ್, ಡಾ.ಆನಂದ್, ಧಮ್ಮ ವಿಜಯ ಸಂಘಟನೆಯ ಹಿರಿಯ ಸದಸ್ಯ ಶಾಮ್, ನಗರ ಸಭೆಯ ಮಾಜಿ ಸದಸ್ಯರಾದ ಚಿತ್ರ ದೇವರಾಜು ಮೆಣದ ಬತ್ತಿಹಚ್ಚಿ ಬುದ್ಧ ಪ್ರತಿಮೆ…

Read More

ಮಡಿಕೇರಿ ಮೇ 24 NEWS DESK : ಸಮಯವನ್ನು ಹಾಳು ಮಾಡದೆ ಧನಾತ್ಮಕವಾಗಿ ಯೋಚಿಸುವ ಮೂಲಕ ವೈಯುಕ್ತಿಕ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವಂತೆ ಮಡಿಕೇರಿ ರೋಟರಿಯ ಪ್ರಮುಖ ಎನ್.ಡಿ.ಅಚ್ಚಯ್ಯ ಕರೆ ನೀಡಿದ್ದಾರೆ. ಮೈಸೂರು ಮಣಿಪಾಲ ಆಸ್ಪತ್ರೆ, ರೋಟರಿ ಮಡಿಕೇರಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ರೆಡ್ ಕ್ರಾಸ್, ಎನ್‍ಸಿಸಿ, ಎನ್‍ಎಸ್‍ಎಸ್ ಘಟಕಗಳ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕವಾಗಿ ಮಾತನಾಡುವ ಮೂಲಕ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ದೂರದೃಷ್ಟಿಯ ಚಿಂತನೆ ಮತ್ತು ಸಕಾರಾತ್ಮಕವಾಗಿ ಯೋಚಿಸುವ ಜನರ ಜೊತೆ ಒಡನಾಡಬೇಕು. ಅಂತರ್ಜಾಲ ಮಾಹಿತಿಯಷ್ಟೇ ಜ್ಞಾನ ಅಲ್ಲ, ಪುಸ್ತಕಗಳನ್ನು ಓದುವ ಮೂಲಕ, ಅಧ್ಯಯನಶೀಲರಾಗಬೇಕು. ಅದರೊಂದಿಗೆ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು. ಗೆಲುವಿನ ಸಂಭ್ರಮ ಸಣ್ಣದೇ ಇರಲಿ ಅಥವಾ ದೊಡ್ಡದೇ ಇರಲಿ ಅದನ್ನು ಆಚರಿಸಿ. ಮಾತ್ರವಲ್ಲ ನಮ್ಮ ತಪ್ಪಿನ ಬಗ್ಗೆ ತಿಳುವಳಿಕೆ ಹೊಂದುವ ಮೂಲಕ ಅದನ್ನು ಪರಿಹರಿಸಿಕೊಳ್ಳಬೇಕು. ಮತ್ತೆ ಆ ತಪ್ಪನ್ನು…

Read More

ಕುಶಾಲನಗರ ಮೇ 24 NEWS DESK :  ಗೌತಮ ಬುದ್ಧರ ಸಂದೇಶ ಸರ್ವಕಾಲಕ್ಕೂ ಮಾದರಿಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಪಿ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ 159ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ  ಮಾತನಾಡಿದರು. ಪ್ರತಿಯೊಬ್ಬರೂ ಪ್ರಭುದ್ಧರಾಗಿ ನೆಮ್ಮದಿ ಜೀವನ ಸಾಗಿಸಬೇಕಾಗಿದೆ ಎಂದರು. ಜೀವನದಿ ಕಾವೇರಿಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸ್ವಚ್ಛ ಕಾವೇರಿ ಕನಸು ನನಸಾಗಬೇಕು ಎಂದರು. ದಲಿತ ಸಂಘರ್ಷ ಸಮಿತಿ ಭೀಮಾವಾದ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು ಮಾತನಾಡಿ, ಕಳೆದ ಏಳು ದಶಕಗಳಿಂದ ಎಂದೂ ಕಾಣದ ಪರಿಸ್ಥಿತಿ ಈ ಬಾರಿ ಜೀವನದಿ ಕಾವೇರಿಯಲ್ಲಿ ಕಂಡು ಬಂದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರತಿಯೊಬ್ಬರೂ ಪ್ರಕೃತಿಯ ಸಂರಕ್ಷಣೆಗೆ ಪಣತೊಡಬೇಕಾಗಿದೆ.  ಕಾವೇರಿ ನದಿ ಸಂರಕ್ಷಣೆ ಬಗ್ಗೆ ನಿರಂತರ ಕಾಳಜಿ ಹೊಂದಿರುವ ಕಾವೇರಿ ಮಹಾ ಆರತಿ ಬಳಗದ ಬಗ್ಗೆ ಮೆಚ್ಚುಗೆ…

Read More

ಮಂಗಳೂರು ಮೇ 24 NEWS DESK : ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರಿನ ಕೆನರಾ ಸ್ಕೂಲ್ ಮತ್ತು ಶಾರದಾ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.

Read More