ಲೇಖಕ: admin

ಸುಂಟಿಕೊಪ್ಪ ಮೇ 10 NEWS DESK : ಹತ್ತನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಸುಂಟಿಕೊಪ್ಪ ಹೋಬಳಿ ಪ್ರೌಢಶಾಲೆಯ ವಿದ್ಯಾರ್ಧಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕೊಡಗರಹಳ್ಳಿಯ ಶಾಂತಿನೀಕೇತನ ಪ್ರೌಢಶಾಲೆ ಮತ್ತು ಸುಂಟಿಕೊಪ್ಪದ ಸಂತಮೇರಿ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದಿವೆ. ಶಾಂತಿನಿಕೇತನ ಶಾಲೆಯ 84 ವಿದ್ಯಾರ್ಥಿಗಳಲ್ಲಿ ಅತ್ಯುನ್ನತ್ತ ಶ್ರೇಣಿಯಲ್ಲಿ 21 ಮಕ್ಕಳು ಮತ್ತು ಪ್ರಥಮ ದರ್ಜೆಯಲ್ಲಿ 57 ಹಾಗೂ ದ್ವಿತೀಯ ಶ್ರೇಣಿಯಲ್ಲಿ 6 ಮಕ್ಕಳು ಉತ್ತೀರ್ಣರಾಗಿದ್ದಾರೆ. ಶಾಲೆಯ ವಿದ್ಯಾರ್ಥಿನಿ ಪಿ.ಡಿ.ಡಿಲಿಶಾ ಮುತ್ತಮ್ಮ 608 ಅಂಕಗಳಿಸಿ ಶೇ. 97.28 ಅಂಕಗಳನ್ನು ಗಳಿಸಿದ್ದು, ದ್ವಿತೀಯ ಸ್ಥಾನದಲ್ಲಿ ನಿಶ್ಮಿತಾ 597 ಅಂಕಗಳಿಸಿ ಶೇ. 95.52 ಅಂಕಗಳನ್ನು ಗಳಿಸಿದ್ದಾರೆ, ಆಯುಶ್ ಗೌಡ ಶೇ.93.28 ಅಂಕಗಳೊಂದಿಗೆ 3ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಸಂತಮೇರಿ 92 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾರೂ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಅತ್ಯುನ್ನತ್ತ ಶ್ರೇಣಿಯಲ್ಲಿ ಓರ್ವ ಬಾಲಕ, 5 ಮಂದಿ ಬಾಲಕಿಯರು ಒಟ್ಟು 6 ಮಂದಿ ತೇರ್ಗಡೆಗೊಂಡರೇ, ಪ್ರಥಮ ಶ್ರೇಣಿಯಲ್ಲಿ 27 ಮಂದಿ ಬಾಲಕರು, 25 ಮಂದಿ…

Read More

ಮಡಿಕೇರಿ ಮೇ 10 NEWS DESK : ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಭೇಟಿ ನೀಡಿ ಮಾಹಿತಿ ಪಡೆದಿದ್ದು, ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿಯಲ್ಲಿದ್ದ ಏಕೈಕ ವಿದ್ಯಾರ್ಥಿನಿ ಯು.ಎಸ್.ಮೀನ ಈ ಬಾರಿಯ ಪರೀಕ್ಷೆಯಲ್ಲಿ 314 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಳು. ಇದರ ಸಂತೋಷದ ನಡುವೆಯೇ ಮನೆಯವರು ಈಕೆಯ ವಿವಾಹಕ್ಕೆಂದು ಅದೇ ಹಮ್ಮಿಯಾಲ ಗ್ರಾಮದ ಪ್ರಕಾಶ್ (32) ಎಂಬಾತನೊಂದಿಗೆ ನಿಶ್ಚಿತಾರ್ಥ ಮಾಡಲು ಮುಂದಾಗಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ 18 ವರ್ಷದ ನಂತರ ವಿವಾಹ ಮಾಡುವಂತೆ ಕಾನೂನಿನ ಅರಿವು ಮೂಡಿಸಿದ್ದರು. ನಂತರ ಎರಡೂ ಮನೆಯವರು ಮೀನಾಳಿಗೆ 18 ವರ್ಷ ತುಂಬಿದ ಮೇಲೆ…

Read More

ಮಡಿಕೇರಿ ಮೇ 9 NEWS DESK : ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು, ಆದರೆ ಇಲ್ಲೊಂದು ಸರಕಾರಿ ಶಾಲೆಯ 10ನೇ ತರಗತಿಯಲ್ಲಿ ಒಬ್ಬಳೇ ವಿದ್ಯಾರ್ಥಿನಿ ಇದ್ದರೂ ಶಿಕ್ಷಕರು ಮನಮುಟ್ಟುವಂತೆ ಪಾಠ ಮಾಡಿ ಆಕೆ ತೇರ್ಗಡೆಯಾಗುವಂತೆ ಮಾಡಿದ್ದಾರೆ. ಕೊಡಗಿನ ಕುಗ್ರಾಮಗಳಲ್ಲಿ ಒಂದಾದ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಸರಕಾರಿ ಪ್ರೌಢ ಶಾಲೆಯ ಏಕೈಕ ವಿದ್ಯಾರ್ಥಿನಿ ತೇರ್ಗಡೆಯಾಗುವುದರೊಂದಿಗೆ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಗ್ರಾಮೀಣ ಭಾಗದ ಶಾಲೆಗಳಲ್ಲಿ ದಿನದಿಂದ ದಿನಕ್ಕೆ ದಾಖಲಾತಿ ಕುಸಿಯುತ್ತಿದೆ. ಇದೇ ಪರಿಸ್ಥಿತಿ ಸೂರ್ಲಬ್ಬಿ ಸರಕಾರಿ ಶಾಲೆಯಲ್ಲೂ ಇದ್ದು, 8, 9 ಮತ್ತು 10 ನೇ ತರಗತಿಗಳಲ್ಲಿ ಒಟ್ಟು 7 ವಿದ್ಯಾರ್ಥಿಗಳು ಮಾತ್ರ ಅಭ್ಯಾಸ ಮಾಡುತ್ತಿದ್ದರು. 10ನೇ ತರಗತಿಯಲ್ಲಿದ್ದ ಏಕೈಕ ವಿದ್ಯಾರ್ಥಿನಿ ಯು.ಎಸ್.ಮೀನ ಈ ಬಾರಿಯ ಪರೀಕ್ಷೆಯಲ್ಲಿ 314 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾಳೆ. ಮಡಿಕೇರಿ ತಾಲ್ಲೂಕಿನ ಮುಟ್ಲು ಗ್ರಾಮದಿಂದ 5 ಕಿ.ಮೀ ದೂರದ ಶಾಲೆಗೆ ನಡೆದುಕೊಂಡು ಬರುತ್ತಿದ್ದ ಮೀನಾಳಿಗೆ ಶಿಕ್ಷಕ ವೃಂದ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು. ಅಭಿಪ್ರಾಯ ಹಂಚಿಕೊAಡ ಶಾಲೆಯ…

Read More

ಮಡಿಕೇರಿ ಮೇ 9 NEWS DESK : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ 5,905 ವಿದ್ಯಾರ್ಥಿಗಳಲ್ಲಿ, 5,393 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶೇ.91.24 ರಷ್ಟು ಫಲಿತಾಂಶ ಬಂದಿದೆ. ಇವರಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾದ 2,859 ಬಾಲಕರಲ್ಲಿ, 2,531 ಬಾಲಕರು ಉತ್ತೀರ್ಣರಾಗಿದ್ದು, ಶೇ.88.53 ರಷ್ಟು ಫಲಿತಾಂಶ ಪಡೆದಿದ್ದಾರೆ. ಹಾಗೆಯೇ ಪರೀಕ್ಷೆಗೆ ಹಾಜರಾದ 3,046 ಬಾಲಕಿಯರಲ್ಲಿ 2,862 ಬಾಲಕಿಯರು ಉತ್ತೀರ್ಣರಾಗಿ ಶೇ.93.96 ರಷ್ಟು ಫಲಿತಾಂಶ ಪಡೆದಿದ್ದಾರೆ. ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿದ್ದು, ಈ ಬಾರಿ ವೆಬ್‍ಕಾಸ್ಟಿಂಗ್ ಮೂಲಕ ಪರೀಕ್ಷೆ ನಡೆದಿರುವುದು ವಿಶೇಷವಾಗಿದೆ. ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ತಾಲ್ಲೂಕುವಾರು ವಿವರ: ಮಡಿಕೇರಿ ಶೈಕ್ಷಿಣಿಕ ತಾಲ್ಲೂಕಿನಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ವಿವರ : ಮಡಿಕೇರಿಯ ಬ್ಲಾಸಂ ಪ್ರೌಢ ಶಾಲೆ, ಚೆಟ್ಟಳ್ಳಿ ಪ್ರೌಢಶಾಲೆ, ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಗಾಳಿಬೀಡು ಸರ್ಕಾರಿ ಪ್ರೌಢ ಶಾಲೆ, ಕಡಗದಾಳು ಸರ್ಕಾರಿ ಪ್ರೌಢ ಶಾಲೆ, ಮಕ್ಕಂದೂರು ಸರ್ಕಾರಿ ಪ್ರೌಢ ಶಾಲೆ,…

Read More

ಮಡಿಕೇರಿ ಮೇ 9 NEWS DESK : ಪ್ರಸಕ್ತ (2024-25) ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷಕ್ಕೆ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500 ರವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024 ರ ಜುಲೈ, 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷಗಳ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25…

Read More

ಮಡಿಕೇರಿ ಮೇ 9 NEWS DESK : ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ >> ಕುಶಾಲನಗರ ಫಾತಿಮಾ ಕಾನ್ವೆಂಟ್ ಪ್ರೌಢಶಾಲೆಯ ಸಿರಿ ಎಂ. 622(ಪ್ರಥಮ), ಎನ್.ಸಿ.ತೇಜಸ್ವಿನಿ 620(ದ್ವಿತೀಯ), ವಿರಾಜಪೇಟೆ ತಾಲ್ಲೂಕು ಕಳತ್ಮಾಡು ಲಯನ್ಸ್ ಪ್ರೌಢಶಾಲೆಯ ಕೆ.ಡಿ.ದಕ್ಷಿತಾ 619 (ತೃತೀಯ) ಸ್ಥಾನ ಪಡೆದಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಸೇಕ್ರೇಡ್ ಹಾರ್ಟ್ ಇಂಗ್ಲೀಷ್ ಮಾಧ್ಯಮ ಪ್ರೌಢ ಶಾಲೆಯ ಜ್ಞಾನೇಶ್ ಕುಮಾರ್ ಬಿ.ಎಸ್ 618, ಕುಶಾಲನಗರ ಫಾತಿಮಾ ಕಾನ್ವೆಂಟ್ ಪ್ರೌಢಶಾಲೆಯ ಸಿಂಧು ಎಂ. 618, ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಸೇಕ್ರೇಡ್ ಹಾರ್ಟ್ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ದೀಕ್ಷಾ ಸಿ.ಎಸ್. 616 ಮತ್ತು ತನಿಷ್ಕ ಎನ್. ಕೂಚಳ್ಳಿ 616, ವಿರಾಜಪೇಟೆ ಸೇಂಟ್ ಆನ್ಸ್ ಪ್ರೌಢಶಾಲೆಯ ಹರಿಕೃಷ್ಣನ್ ಎಂ. 615, ಬಳಗುಂದ ಸಂತ ಜೋಸೆಫರ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ವರ್ಷಿಣಿ ಎನ್.ಸಿ. 614, ಮಡಿಕೇರಿ ಸಂತ ಜೋಸೆಪರ ಕಾನ್ವೆಂಟ್ ಕಾಂಪೋಸಿಟ್ ಪ್ರೌಢಶಾಲೆಯ ಧೃತಿ ದೇಚಮ್ಮ ಸಿ.ಎಂ., 613 ಹಾಗೂ ಗೋಣಿಕೊಪ್ಪಲು ಕಳತ್ಮಾಡು…

Read More

ಮಡಿಕೇರಿ ಮೇ 9 NEWS DESK : ಪ್ರಸಕ್ತ(2024-25) ಸಾಲಿನ ಮೈಸೂರು ವಿಭಾಗ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮ `ಪಿಂಚಣಿ ಅದಾಲತ್’ ಮೇ, 17 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಜಿಲ್ಲಾಧಿಕಾರಿ ಅವರ ಕಾರ್ಯಾಲಯದ ವಿ.ಸಿ.ಸಭಾಂಗಣದಲ್ಲಿ (ವೆಬಿನಾರ್ ಮೂಲಕ) ನಡೆಯಲಿದೆ. ಈ ಸಂಬಂಧ ಕುಂದುಕೊರೆಗಳು ಇದ್ದಲ್ಲಿ, ನಿವೃತ್ತ ರಾಜ್ಯ ಸರ್ಕಾರಿ ನೌಕರರು ತಮ್ಮ ಅಹವಾಲುಗಳನ್ನು ಸೂಕ್ತ ದಾಖಲೆಗಳೊಂದಿಗೆ ಮೇ 15 ರೊಳಗೆ ಕೊಡಗು ಜಿಲ್ಲೆಯ ಉಪ ನಿರ್ದೇಶಕರು, ಜಿಲ್ಲಾ ಖಜಾನೆ ಕೊಠಡಿ ಸಂಖ್ಯೆ 10, (ದೂ.ಸಂ. 225654) ಜಿಲ್ಲಾಡಳಿತ ಭವನ, ಮಡಿಕೇರಿ ರವರಿಗೆ ಸಲ್ಲಿಸಲು ಹಾಗೂ ಅದಾಲತ್ ನಲ್ಲಿ ಭಾಗವಹಿಸುವಂತೆ ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 9 NEWS DESK : ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯನಿರ್ವಹಿಸಬೇಕಿರುವ ಹಿನ್ನೆಲೆ ಮೇ 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಳೂರು, ಕುಂಬೂರು ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ.

Read More

ಸೋಮವಾರಪೇಟೆ ಮೇ 9 NEWS DESK : ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಸೋಮವಾರಪೇಟೆ ತಾಲ್ಲೂಕಿಗೆ ಶೇ. 92.47 ರಷ್ಟು ಫಲಿತಾಂಶ ಲಭಿಸಿದೆ. 2,353 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2176 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 1227 ಬಾಲಕಿಯರು ಮತ್ತು 1126 ಬಾಲಕರು ಪರೀಕ್ಷೆ ಬರೆದಿದ್ದರು. ತಾಲ್ಲೂಕಿನ 33 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ. ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಣಿಮರೂರು ಸರ್ಕಾರಿ ಪ್ರೌಢಶಾಲೆ, ಕಾನ್‍ಬೈಲ್ ಸರ್ಕಾರಿ ಪ್ರೌಢಶಾಲೆ, ಅಂಕನಳ್ಳಿ ಸರ್ಕಾರಿ ಪ್ರೌಢಶಾಲೆ, ಸೋಮವಾರಪೇಟೆ ವಿಶ್ವಮಾನವ ಕುವೆಂಪು ಆಂಗ್ಲಮಾಧ್ಯಮ ಪ್ರೌಢಶಾಲೆ, ಸುಂಟಿಕೊಪ್ಪ ಸಂತಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶಾಂತಿನೀಕೇತನ ಪ್ರೌಢಶಾಲೆ, ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ, ಶನಿವಾರಸಂತೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ, ಚೌಡ್ಲು ಜ್ಞಾನವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಅಂಕನಳ್ಳಿ ಸೆಂಟ್‍ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ, ಕಿರಗಂದೂರು ಸರ್ಕಾರಿ ಪ್ರೌಢಶಾಲೆ, ನೆಲ್ಲಿಹುದಿಕೇರಿ ಆಂಗ್ಲೋ ವರ್ಣಾಕುಲರ್ ಆಂಗ್ಲಮಾಧ್ಯಮ ಪೌಢಶಾಲೆ, ನಿಡ್ತ ಸರ್ಕಾರಿ ಪ್ರೌಢಶಾಲೆ, ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆ, ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಆಲೂರು…

Read More

ಮಡಿಕೇರಿ ಮೇ 9 NEWS DESK : ಸುಮಾರು 25 ವರ್ಷಗಳಿಂದ ಗ್ರಾಹಕರ ವಿಶ್ವಾಸ ಗಳಿಸಿರುವ ಕುಶಾಲನಗರದ ಬೈಚೇನಹಳ್ಳಿಯ ವಿಲ್ಕೋ ಗೋಲ್ಡ್ ಚಿನ್ನಾಭರಣ ಮಳಿಗೆ ಸಮೃದ್ಧಿ ಮತ್ತು ಐಶ್ವರ್ಯದ ಮತ್ತೊಂದು ಅಕ್ಷಯ ತೃತೀಯಕ್ಕಾಗಿ ಮೇ 10 ರಂದು ಅಮೋಘ ಕೊಡುಗೆಯನ್ನು ನೀಡುತ್ತಿದೆ. ಪ್ರತಿ ಗ್ರಾಂ 916 ಚಿನ್ನಾಭರಣಗಳ ಖರೀದಿಯ ಮೇಲೆ ರೂ.200/ ರಿಯಾಯಿತಿ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 08276 271117, 94485 73179

Read More