ನಾಪೋಕ್ಲು ಮೇ 24 NEWS DESK : ಬಲ್ಲಮಾವಟಿ ಗ್ರಾಮದ ರಾಟೆ ಶ್ರೀ ಭಗವತಿ ದೇವರ ಉತ್ಸವವು ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆ ಎಡಿಕೇರಿ ದೊಡ್ಡ ಮನೆಯಿಂದ ಭಂಡಾರ ತಂದು ದೇವಾಲಯದಲ್ಲಿ ಇರಿಸಿ ತಂಡ್ರ ಹೊಳೆಯಲ್ಲಿ ಜಳಕ ನೆರವೇರಿಸಿದ ಬಳಿಕ ದೇವಾಲಯದಲ್ಲಿ ವಿಶೇಷ ಪೂಜೆ ಜರುಗಿತು. ಪೀಲಿಯಾಟ್ ಹಾಗೂ ಬೋಡ್ ನಮ್ಮೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ವಿಶೇಷ ವೇಷಧರಿಸಿ ದೇವರ ಉತ್ಸವದಲ್ಲಿ ಕುಣಿದು ಸಾಂಪ್ರದಾಯಿಕ ಆಚರಣೆ ನೆರವೇರಿಸಿದರು. ಬೊಡ್ ನಮ್ಮೆ ಉತ್ಸವದಲ್ಲಿ ತಕ್ಕ ಮುಖ್ಯಸ್ಥರು, ನಾಡಿನ ಭಕ್ತರು, ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಉತ್ಸವದ ಅಂಗವಾಗಿ ಆರಾಟ್ ಬೊಳಕಾಟ್ ನಡೆಯಿತು. ಮಹಾಪೂಜೆ ಬಳಿಕ ದೇವರನ್ನು ರಾಟೆಯಲ್ಲಿ ಕೂರಿಸಿ ಸಂಪ್ರದಾಯಿಕವಾಗಿ ತೂಗಲಾಯಿತು. ಸಂಜೆ ಕ್ಷೇತ್ರಪಾಲ, ಶಾಸ್ತಾವು ಹಾಗೂ ಭದ್ರಕಾಳಿ ತೆರೆಗಳು ನಡೆಯಲಿವೆ. ವರದಿ : ದುಗ್ಗಳ ಸದಾನಂದ.
ಲೇಖಕ: admin
ಸೋಮವಾರಪೇಟೆ ಮೇ 24 NEWS DESK : ಡಿಜಿ ವಿಕಸನ ಕಾರ್ಯಕ್ರಮದಡಿ ಸೋಮವಾರಪೇಟೆ ತಾಲ್ಲೂಕಿನ ಗ್ರಂಥಾಲಯ ಪ್ರಗತಿ ಪರಿಶೀಲನಾಸಭೆ ಮತ್ತು ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉದ್ಘಾಟಿಸಿದರು. ಗ್ರಾ.ಪಂ ಗ್ರಂಥಾಲಯವು ಜ್ಞಾನ ಮೂಡಿಸುವ ಕೇಂದ್ರಗಳಾಗಿವೆ. ಪ್ರತಿಯೊಂದು ಮಾಹಿತಿಯೂ ಇಲ್ಲಿ ಸಿಗುವಂತಾಗಬೇಕು. ಡಿಜಿಟಲ್ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಶಿಕ್ಷಣ ಫೌಂಡೇಶನ್ ಸಹಯೋಗದ ಗ್ರಾಮ ಡಿಜಿ ವಿಕಸನದಡಿ ನೀಡಿರುವಂತಹ ಮಾನಿಟರ್, ಟಿ.ವಿ, ಮೊಬೈಲ್ಗಳಲ್ಲಿ ಪಠ್ಯ ಪುಸ್ತಕಕ್ಕೆ ಸಂಬಂಧಿಸಿದ ವಿಷಯಗಳು, ಡಿಜಿಟಲ್ ಸಂಬಂಧಿಸಿದ ವಿಷಯಗಳನ್ನು ಅಳವಡಿಸಲಾಗಿದೆ. ಹೆಚ್ಚಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಕಲಿಕೆಗೆ ಸ್ಥಳೀಯ ಗ್ರಾ.ಪಂ ಗಳ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು. ಕಳೆದ ಎರಡು ವರ್ಷದಲ್ಲಿ ಗ್ರಂಥಾಲಯ ನಿರ್ವಹಣೆ, ಅತ್ಯುತ್ತಮ ಅನುಷ್ಠಾನಕ್ಕೆ ಸಂಬಂಧಪಟ್ಟ ಪ್ರಶಸ್ತಿಯನ್ನು ದುಂಡಳ್ಳಿ, 7ನೇ ಹೊಸಕೋಟೆ, ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಪಡೆಯಿತು. ಗ್ರಂಥಾಲಯ ಮೇಲ್ವಿಚಾರಕರಾದ ಎಸ್.ಪಿ.ದಿವ್ಯ, ಸರಿತಾ, ವಾಸಂತಿ ಪ್ರಶಸ್ತಿ ಸ್ವೀಕರಿಸಿದರು. ಇದೇ ಸಂದರ್ಭ ಲ್ಯಾಪ್ ಟ್ಯಾಪ್ ವಿತರಿಸಲಾಯಿತು.…
ಮಡಿಕೇರಿ ಮೇ 24 NEWS DESK : ಪತ್ರಕರ್ತೆ ಹಾಗೂ ಸಾಹಿತಿ ರಜಿತ ಕಾರ್ಯಪ್ಪ ಅವರ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿನ ಸೇವೆಯನ್ನು ಪರಿಗಣಿಸಿ ಸಾಧನಾ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಗತಿ ಸೇವಾ ಟ್ರಸ್ಟ್ (ರಿ) ಪಾಂಡವಪುರ ಹಾಗೂ ಅಮ್ಮನ ಆಸರೆ ಚಾರಿಟೇಬಲ್ ಟ್ರಸ್ಟ್ನ ಸಂಯುಕ್ತ ಆಶ್ರಯದಲ್ಲಿ ಡಾ. ನಾಗೇಶ್ ರಾಗಿಮುದ್ದನಹಳ್ಳಿ ಅವರ ಜನ್ಮದಿನದ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಾಗನಹಳ್ಳಿ ಗ್ರಾಮದ ಅಮ್ಮನ ಆಸರೆ ಚಾರಿಟೇಬಲ್ ಟ್ರಸ್ಟ್ ಉಚಿತ ವೃದ್ಧಾಶ್ರಮದಲ್ಲಿ ಗಣ್ಯರು ರಜಿತ ಕಾರ್ಯಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಸರಕಾರಿ ಉಪವಿಭಾಗೀಯ ವೈದ್ಯಾಧಿಕಾರಿ ಡಾ. ಅರವಿಂದ್, ಪ್ರಗತಿ ಸೇವಾ ಟ್ರಸ್ಟ್ನ ಅಧ್ಯಕ್ಷ ಡಾ. ನಾಗೇಶ್ ರಾಗಿಮುದ್ದನಹಳ್ಳಿ, ನಿರ್ದೆಶಕರಾದ ಎಂ.ಎಚ್. ವಿಜಯಕುಮಾರ್ ಮಲ್ಲಿಗೆರೆ, ಡಾ, ವಿಜಯಕುಮಾರ್ ಬಲ್ಲೇನಹಳ್ಳಿ, ಅಮ್ಮನ ಆಸರೆ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಪ್ರಭುಸ್ವಾಮಿ, ಕಾರ್ಯದರ್ಶಿಗಳಾದ ಪುಷ್ಪಾವತಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಪುತ್ತೂರು ಮೇ 24 NEWS DESK : ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಮೂಡಿಸಿ ಅವರನ್ನು ಶೈಕ್ಷಣಿಕವಾಗಿ ಮತ್ತು ವೈಯಕ್ತಿಕವಾಗಿ ಆ ಕ್ಷೇತ್ರಗಳಿಗೆ ಆಕರ್ಷಿಸುವಂತೆ ಮಾಡುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ ನಡೆಯಿತು. ಮೈಕ್ರೋಸಾಫ್ಟ್ ಆಫೀಸ್ನ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾವೀಣ್ಯತೆಯನ್ನು ಹೆಚ್ಚಿಸುವುದು, ಎಚ್ಟಿಎಂಎಲ್ ಬಳಸಿಕೊಂಡು ವೆಬ್ ಪೇಜ್ಗಳ ವಿನ್ಯಾಸ, ಗೂಗಲ್ ಸೈಟ್ಗಳಲ್ಲಿ ವಿವಿಧ ವೆಬ್ಸೈಟ್ಗಳನ್ನು ನಿರ್ಮಿಸುವ ಬಗ್ಗೆ ಮಾರ್ಗದರ್ಶನ, ವಿಜ್ಞಾನ, ತಂತಜ್ಞಾನ. ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳಲ್ಲಿನ ಹೊಸತನಗಳನ್ನು ತಿಳಿದುಕೊಳ್ಳುವುದು ಮುಂತಾದವುಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಯಿತು. ನುರಿತ ಸಂಪನ್ಮೂಲ ವ್ಯಕ್ತಿಗಳು ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಮಾಹಿತಿಯ ಜತೆಗೆ ಅದಕ್ಕೆ ಪೂರಕವಾದ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು. ನಿರ್ಧಿಷ್ಟ ಗುರಿಗಳ ಕಡೆಗೆ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸುವ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಇದರ…
ಮಡಿಕೇರಿ ಮೇ 24 NEWS DESK : ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಂಸ್ಥೆ ವತಿಯಿಂದ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮೇ 26 ರವರೆಗೆ ನಡೆಯುವ `ಮಾವು ಮತ್ತು ಹಲಸು ಮೇಳವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಿದರು. ಮಾವು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಲ್ಲಿಕಾ, ಸಿಂಧೂರ, ಬಾದಾಮಿ, ರಸಪುರಿ, ತೋತಾಪುರಿ ಸೇರಿದಂತೆ ವಿವಿಧ ರೀತಿಯ ಮಾವು ಮತ್ತು ಹಲಸು ಮಾರಾಟಕ್ಕೆ ಇವೆ ಎಂದರು. ಮಾವು ಮತ್ತು ಹಲಸು ಪ್ರಿಯರಿಗೆ ಆರೋಗ್ಯದಾಯಕ ಹಣ್ಣುಗಳನ್ನು ಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಮಾವು ಮೇಳದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಮಾವು ಮತ್ತು ಹಲಸು ಬೆಳೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಾವು ಮತ್ತು ಹಲಸು ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮಾವು ಮೇಳದಲ್ಲಿ ರಾಮನಗರ, ಕೋಲಾರ ಮತ್ತಿತರ ಜಿಲ್ಲೆಗಳಿಂದ ಮಾವು ಮತ್ತು ಹಲಸು ಹಣ್ಣು ಮಾರಾಟಗಾರರು…
ಸೋಮವಾರಪೇಟೆ ಮೇ 23 NEWS DESK : ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಜಕ್ಕನಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಚ್.ಸಿ.ಮನೋಹರ್ (38) ಪಿರಿಯಾಪಟ್ಟಣ ಹಿಟ್ನಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಮೃತರಾಗಿದ್ದಾರೆ. ಗುರುವಾರ ಸಂಜೆ ಕೆಲಸ ಮುಗಿಸಿ ತಮ್ಮ ಬೈಕ್ ನಲ್ಲಿ ಪಿರಿಯಾಪಟ್ಟಣದ ತಮ್ಮ ಮನೆಗೆ ತೆರಳುವ ಸಂದರ್ಭ ತಿರುವಿನಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮೂರು ವರ್ಷದ ಪುತ್ರನನ್ನು ಅಗಲಿದ್ದಾರೆ.
ಗುಂಡ್ಲುಪೇಟೆ ಮೇ 23 NEWS DESK : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂದಿನಿಂದ ಕಾಡಾನೆಗಳ ಲೆಕ್ಕ ಆರಂಭಗೊಂಡಿದೆ. ಒಟ್ಟು 13 ವಲಯದ 113 ಬೀಟ್ ಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆದುಕೊಂಡು ಆನೆಗಳ ಲೆಕ್ಕ ಹಾಕಿದ್ದಾರೆ. ಅಭಯಾರಣ್ಯದಲ್ಲಿ ಆನೆ ಗಣತಿ ಮೂರು ದಿನಗಳ ಕಾಲ ನಡೆಯಲಿದ್ದು, ಮೊದಲ ದಿನ ಅರಣ್ಯದಲ್ಲಿ ನಡೆದುಕೊಂಡು ಗಣತಿ ಆರಂಭಿಸಿದ್ದಾರೆ. ಎರಡನೇ ದಿನ ಆನೆ ಲದ್ದಿಯನ್ನು ಪತ್ತೆಹಚ್ಚಿ ಒಂಟಿ ಆನೆಯೋ, ಗುಂಪುಗಳ ಆನೆಯೋ ಎಂದು ಅಂದಾಜು ಲೆಕ್ಕ ಹಾಕಲಾಗುತ್ತದೆ. ಮೂರನೇ ದಿನ ಕೆರೆಗಳ ಬಳಿ ಸಿಬ್ಬಂದಿ ಬೆಳಗ್ಗೆಯಿಂದ ಸಂಜೆವರೆಗೆ ಕಾದು ಆನೆಗಳು ನೀರು ಕುಡಿಯುವಾಗ ಬರುವ ಆನೆಗಳ ಲೆಕ್ಕವನ್ನು ಹಾಕಲಿದ್ದಾರೆ.
ಮೈಸೂರು ಮೇ 23 NEWS DESK : ಜನಸ್ಪಂದನ ಟ್ರಸ್ಟ್ ಮತ್ತು ಮಾನವಮಂಟಪ ಇವರ ವತಿಯಿಂದ ಕುವೆಂಪು ನಗರದ ಚಿಕ್ಕಮ್ಮನಿಕೇತನ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ “ಅಂತರ್ಜಾತಿ ವಿವಾಹಿತರ ಸಭೆ ಹಾಗೂ ಲಕ್ಷಾಂತರ ಅಂತರ್ಜಾತಿ ದಂಪತಿಗಳ ನೋಂದಣಿ ಮಾಡುವ ವೆಬ್ ಸೈಟ್” ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಮೈಸೂರು ಮೇ 23 NEWS DESK : ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹೇಶ್ ಕಾಳೇಗೌಡ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭ ಕಲುಷಿತ ನೀರು ಕುಡಿದು ಮೃತಪಟ್ಟ ಕನಕರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ ನಗದು ಪರಿಹಾರ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಮೃತ ಕಾಂತರಾಜು ಅವರ ಸಹೋದರ ರವಿಗೆ ಕೆಲಸ ಕೊಡಿಸುವ ಭರವಸೆ ನೀಡಿದರು.
ಮಡಿಕೇರಿ ಮೇ 23 NEWS DESK : ಶ್ರೀ ಮುತ್ತಪ್ಪ ಮಹಿಳಾ ವೇದಿಕೆ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿರುವ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಪಾರ್ವತಿ, ಸರಸ್ವತಿ, ಮಹಾಲಕ್ಷ್ಮಿ ಸಂಕಲ್ಪದಲ್ಲಿರುವ ಶ್ರೀ ಭಗವತಿ ದೇವಿಗೆ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ನಂತರ ದೇವಾಲಯದ ಆವರಣದಲ್ಲಿ ನೂರಾರು ಮಹಿಳೆಯರು ಏಕಕಾಲದಲ್ಲಿ ಸೌದೆ ಸೌದೆ ಒಲೆಯನ್ನು ಬಳಸಿ ಮಣ್ಣಿನ ಮಡಕೆಯಲ್ಲಿ ಸಿಹಿ ಪೊಂಗಲ್ ತಯಾರಿಸಿ ದೇವರಿಗೆ ಅರ್ಪಿಸಿದರು. ಇದು ಕೇವಲ ಮಹಿಳೆಯರು ಮಾತ್ರ ನಡೆಸುವ ಪುಣ್ಯ ಕಾರ್ಯವಾಗಿದ್ದು, ಪೊಂಗಾಲ ಸಮರ್ಪಣೆಯಿಂದ ಮನೆಯಲ್ಲಿ ಆರೋಗ್ಯ ಶಾಂತಿ, ನೆಮ್ಮದಿ ನೆಲೆಸುವ ನಂಬಿಕೆ ಇದೆ ಎಂದು ಶ್ರೀ ಮುತ್ತಪ್ಪ ಮಹಿಳಾ ವೇದಿಕೆಯ ಅಧ್ಯಕ್ಷೆ ಶಾರದ ರಾಮನ್ ಮಾಹಿತಿ ನೀಡಿದರು.






