ಮಡಿಕೇರಿ ಮೇ 7 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ಹಾಗೂ ತೀರ್ಥ ಸ್ನಾನ ನಡೆಯಿತು. ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ಬಳಿಕ ದೇವಾಲಯದ ಆವರಣದ ಸುತ್ತಲೂ ದೇವಿಯ ರಥೋತ್ಸವವು ಜರುಗಿತು. ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ, ಮಂಗಳಾರತಿ ಹಾಗೂ ತಾಯಿಯ ದರ್ಶನ ನಡೆಯಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ದೇವಾಲಯಕ್ಕೆ ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ, ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.
ಲೇಖಕ: admin
ಮಡಿಕೇರಿ ಮೇ 7 NEWS DESK : ಬದುಕನ್ನು ಪ್ರತೀ ವ್ಯಕ್ತಿಯೂ ಮನಸ್ಸಾರೆ ಆನಂದಿಸಬೇಕು, ಆಗ ಅವರ ನಡುವಳಿಕೆಯಲ್ಲಿ ಶ್ರೇಷ್ಠತೆ, ಮನತೃಪ್ತಿ ಕಾಣಲು ಸಾಧ್ಯವಾಗುತ್ತದೆ ಎಂದು ಮ್ಯಾನೇಜ್ ಮೆಂಟ್ ಸಲಹೆಗಾರ ಮೈಸೂರಿನ ಕೊಡಂದೆರ ಹರೀಶ್ ಮಾಚಯ್ಯ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ 20 ದಿನಗಳಿಂದ ಆಯೋಜಿಸಲಾಗಿದ್ದ ಸಮಾಗಮ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಲಾಕೃತಿಗಳ ಪ್ರದಶ೯ನ ಅನಾವರಣಗೊಳಿಸಿದ ಬಳಿಕ ಮಾತನಾಡಿದ ಕೊಡಂದೆರ ಹರೀಶ್ ಮಾಚಯ್ಯ, ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಯು ಚಾಂಪಿಯನ್ ಆಗಿ ಹೊರಹೊಮ್ಮುತ್ತಾನೆಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬ ವ್ಯಕ್ತಿ ಜೀವನವನ್ನು ಆನಂದಿಸಬೇಕು, ಹಾಗೇ ಅವರ ನಡವಳಿಕೆಯಲ್ಲಿ ಶ್ರೇಷ್ಠತೆಯನ್ನು ಹೊಂದಿರಬೇಕು, ಇಂದು ಎಲ್ಲಿದ್ದೀರಿ ಹಾಗೂ ಮುಂದೆ ಭವಿಷ್ಯದಲ್ಲಿ ನೀವು ಎಲ್ಲಿರುವಿರಿ ಎಂಬುದು ಬಹಳ ಮುಖ್ಯವಾಗುತ್ತದೆ ಎಂದು ಮಕ್ಕಳಿಗೆ ಹರೀಶ್ ಮಾಚಯ್ಯ ಕಿವಿಮಾತು ಹೇಳಿದರು. ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ ಮಾತನಾಡಿ, ಈ ಬಾರಿಯ ಮಾಗಮ ಬೇಸಿಗೆ ಶಿಬಿರ ಯಶಸ್ವಿಯಾಗಲು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ…
ಕುಶಾಲನಗರ ಮೇ 7 NEWS DESK : ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ 10ನೇ ತರಗತಿ ನಂತರದ ಭವಿಷ್ಯದ ಶೈಕ್ಷಣಿಕ ಕೋರ್ಸ್ಗಳು ಮತ್ತು ಸಿಇಟಿ ನೀಟ್ ಕೋರ್ಸ್ನ ಪ್ರಾಮುಖ್ಯತೆಯ ಕುರಿತು ಓರಿಯಂಟೇಶನ್ ಕಾರ್ಯಕ್ರಮ ನಡೆಯಿತು. ವಿವೇಕಾನಂದ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಪನ್ಮೂಲ ವ್ಯಕ್ತಿಗಳು ಎಸ್ಎಸ್ಎಲ್ಸಿ ನಂತರ ಲಭ್ಯವಿರುವ ಶೈಕ್ಷಣಿಕ ಅವಕಾಶಗಳು ಮತ್ತು ಸಿಇಟಿ, ನೀಟ್ ಕೋರ್ಸ್ ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು. ಸಿಇಟಿ, ನೀಟ್ ತತರಬೇತುದಾರರದಾದ ಡಾ. ಪಿ.ಗೋವಿಂದರಾಜ್, ಎಚ್.ಕೆ.ಪ್ರಕಾಶ್, ಯೆನೆಪೊಯ ಪಿಯು ಕಾಲೇಜು ಡಾ. ರಾಕೇಶ್, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಡಾ. ಪ್ರಶಾಂತ್ ರಾವ್ ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿ ಸಮೂಹ ಹಾಗೂ ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿ, ಮಾರ್ಗದರ್ಶನ ನೀಡಿದರು. ಈ ಸಂದರ್ಭ ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಹಾಗೂ ಉಪನ್ಯಾಸಕ ವೃಂದದವರು ಇದ್ದರು.
ಮಡಿಕೇರಿ ಮೇ 7 NEWS DESK : ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಾಡಿ, ಪಡ್ಪು ಹಾಗೂ ಮಂಗಳಪಾರೆಗೆ ಸಂಪರ್ಕಿಸುವ ರಸ್ತೆ ಕಾಮಗಾರಿ ಕೆಲಸ ಭರದಿಂದ ಸಾಗಿದೆ. ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ಸಂಪರ್ಕ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ರಸ್ತೆ ಕಾಮಗಾರಿಗೆ ಅನುದಾನ ಮಂಜೂರು ಮಾಡಿದ್ದು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮೇ 6 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಸೋಮವಾರದ ಎರಡನೇ ಪಂದ್ಯದಲ್ಲಿ ಅಂಜಿಗೇರಿ ನಾಡ್ ತಂಡದ ವಿರುದ್ಧ ಕೊಡವ ಟ್ರೈಬ್ ತಂಡ 81 ರನ್ಗಳ ಜಯ ಸಾಧಿಸಿದೆ. ಟಾಸ್ ಗೆದ್ದ ಅಂಜಿಗೇರಿ ನಾಡ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕೊಡವ ಟ್ರೈಬ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್ ಗಳನ್ನು ಗಳಿಸಿತು. ಅಂಜಿಗೇರಿ ನಾಡ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಕೇವಲ 115 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು. ಕೊಡವ ಟ್ರೈಬ್ ತಂಡದ ಆಯುಷ್ ಪೊನ್ನಪ್ಪ 54 ರನ್ ಗಳನ್ನು ದಾಖಲಿಸಿ, 1 ವಿಕೆಟ್ ನ್ನು ಪತನಗೊಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಪಡೆದುಕೊಂಡರು. ಮೇ 7 ರ ಕ್ರಿಕೆಟ್ ಪಂದ್ಯ :: Match…
ಸುಂಟಿಕೊಪ್ಪ ಮೇ 6 NEWS DESK : ವ್ಯಕ್ತಿಯೊಬ್ಬರು ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಂಟಿಕೊಪ್ಪದ 7ನೇ ಹೊಸಕೋಟೆಯಲ್ಲಿ ನಡೆದಿದೆ. ಐಗೂರು ಗ್ರಾಮದ ನಿವಾಸಿ ಮಧು (42) ಎಂಬುವವರೇ ಮೃತ ವ್ಯಕ್ತಿ. ಸುಂಟಿಕೊಪ್ಪ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ವಿರಾಜಪೇಟೆ ಮೇ 6 NEWS DESK : ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿಗಳ ಆನ್ಸ್ ಪ್ರೀಮಿಯರ್ ಲೀಗ್ ಅಂತರ್ ತರಗತಿ ಕ್ರಿಕೆಟ್ ಮತ್ತು ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿ ನಡೆಯಿತು. ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳ ನಡುವೆ ಜಿದ್ದಾಜಿದ್ದಿನ ಪಂದ್ಯಾವಳಿ ನಡೆಯಿತು. ಕ್ರಿಕೆಟ್ ಪಂದ್ಯಾವಳಿಯ ವಿಶೇಷವೆಂದರೆ ಉಪನ್ಯಾಸಕರೇ ತಂಡಗಳ ನಿರ್ವಹಣೆಗಾರರಾಗಿ ಕಾರ್ಯನಿರ್ವಹಿಸಿದರು. ಎರಡು ದಿನಗಳ ಕಾಲ ನಡೆದ ಈ ಕ್ರೀಡಾಕೂಟವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಾಕರ್ ಉದ್ಘಾಟಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದ ಅವರು ಪಂದ್ಯಾವಳಿಯನ್ನು ಆಯೋಜಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳಲ್ಲಿಯೂ ಭಾಗವಹಿಸಬೇಕೆಂದು ಕಿವಿಮಾತು ಹೇಳಿದರು. ಒಟ್ಟು ಎಂಟು ತಂಡಗಳು ಭಾಗವಹಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎರಡನೇ ದಿವಸ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಾವಳಿ ನಡೆದು ಟೈಟಾನ್ಸ್ ತಂಡವು ಸ್ಪಾರ್ಟನ್ಸ್ ತಂಡದ ವಿರುದ್ಧ ಜಯಗಳಿಸಿ…
ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲೆಯ 5 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳಾಗಿ ಘೋಷಣೆ ಮಾಡಿದ್ದು ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಡಳಿತದ ಸಹಕಾರದೊಂದಿಗೆ ಎಲ್ಲಾ ಮುಂಜಾಗ್ರತಾ ಕ್ರಮವಹಿಸಲಾಗಿದೆ. ಜಿಲ್ಲೆಯಲ್ಲಿ 20 ನೇ ಜಾನುವಾರು ಗಣತಿಯ ಪ್ರಕಾರ 76920 ಜಾನುವಾರುಗಳು 8553 ಕುರಿ ಮತ್ತು ಮೇಕೆಗಳಿದ್ದು, ಸದ್ಯದ ಮಟ್ಟಿಗೆ ಜಿಲ್ಲೆಯಲ್ಲಿ ಮೇವಿನ ಕೊರತೆ ಕಂಡು ಬಂದಿರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಮೇವಿನ ಕೊರತೆ ಉಂಟಾಗದಂತೆ ಮೇವಿನ ಬೀಜಗಳ 476 ಎಟಿಎಂ ಹಾಗೂ 309 ಸೋರ್ಗಂ ಮಿನಿ ಕಿಟ್ಗಳನ್ನು ಆಸಕ್ತ ನೀರಾವರಿ ಸೌಲಭ್ಯ ಇರುವ ಜಾನುವಾರು ಹೊಂದಿದ ರೈತಬಾಂಧವರಿಗೆ ವಿತರಿಸಲಾಗುತ್ತಿದ್ದು, ಇದರಲ್ಲಿ ಎ.ಟಿ.ಎಂ, ಏಕವಾರ್ಷಿಕ ಬೆಳೆಯಾಗಿದ್ದು ಮತ್ತು ಸೋರ್ಗಂ ಬಹುವಾರ್ಷಿಕ ಬೆಳೆಯಾಗಿರುತ್ತದೆ. ಮೇವು ಬೀಜಗಳನ್ನು ಬಿತ್ತನೆ ಮಾಡಿದ 60 ರಿಂದ 75 ದಿನದೊಳಗೆ ಮೇವು ಕಟಾವಿಗೆ ಬರುತ್ತದೆ. ನಂತರ 2 ತಿಂಗಳಿಗೊಂದಾವರ್ತಿಯಂತೆ ಮೂರ್ನಾಲ್ಕು ಬಾರಿ ಮೇವು ಕಟಾವು ಮಾಡಬಹುದಾಗಿದೆ. ಹಾಗೆಯೇ ಜಿಲ್ಲೆಯಲ್ಲಿ ಏ.1 ರಿಂದ ಮೇ 10 ರವರೆಗೆ…
ಮಡಿಕೇರಿ ಮೇ 6 NEWS DESK : ಪ್ರಸಕ್ತ 2024ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯು ‘ಭೂಸುಧಾರಣೆ ಹಾಗೂ ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ’ ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿದೆ. ಈ ಜಾಗತಿಕ ಆಚರಣೆಯ ಅನುಗುಣವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು (ಎನ್ವಿರಾನ್ಮೆಂಟ್ ಅಸೋಸಿಯೇಷನ್ ಆಫ್ ಬೆಂಗಳೂರು) ಜಂಟಿಯಾಗಿ ‘ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು’ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ದಿನದ ರಾಷ್ಟ್ರೀಯ ಕಾರ್ಯಗಾರವು ಜೂ. 8 ರಂದು ಅಕಾಡೆಯ ಕಚೇರಿಯಲ್ಲಿ ನಡೆಯಲಿದೆ. ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಇಂಗ್ಲೀಷ್-1000 ಪದಗಳಿಗೆ ಮೀರದಂತೆ) ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್ಸೈಟ್ https://kstacademy.in ನ್ನು ವೀಕ್ಷಿಸಬಹುದು. ಪ್ರಬಂಧ ಸ್ಪರ್ಧೆಯನ್ನು ‘ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು’ ಎಂಬ ವಿಷಯದ ಮೇಲೆ ಆಯೋಜಿಸಲಾಗುತ್ತಿದ್ದು, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು ಹೆಸರು,…
ಮಡಿಕೇರಿ ಮೇ 6 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂ.19 ರಿಂದ ಜೂ.21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಭಾಗವಹಿಸಲು ಅವಕಾಶವಿದೆ. ಅಲ್ಲದೇ ಈ ಸಮ್ಮೇಳನದಲ್ಲಿ ರಿಸರ್ಚ್ ಪೇಪರ್ ಮಂಡಿಸಬಹುದಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್ಗಳಿಗೆ ನಗದು ಬಹುಮಾನ ನೀಡಲಾಗುವುದು. ಈ ಸಮ್ಮೇಳನದಲ್ಲಿ ಭಾಗವಹಿಸಲು ಜೂನ್, 10 ರೊಳಗೆಗೂಗಲ್ ಫಾರ್ಮ್ (https://forms.gle/QDXV64LDibFbHydc9) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮ ಸಂಯೋಜಕರು (ಮೊ. 9845258894 ಮತ್ತು 9743084194) ಅಥವಾ ಅಕಾಡೆಮಿಯ ವೆಬ್ಸೈಟ್ www.kstacademy.in ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…






