ಲೇಖಕ: admin

ಸೋಮವಾರಪೇಟೆ ಮೇ 21 NEWS DESK : ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಕಳೆದ ಒಂದು ತಿಂಗಳಿನಿಂದ ಸಾರ್ವಜನಿಕರ ಸೇವೆಗೆ ಲಭ್ಯವಿರದ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.  ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಕಛೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಆಡಳಿತಾಧಿಕಾರಿ ಮೀನಾಕ್ಷಿ ಅವರು ಮಾತನಾಡಿ, ನಾನು ಇತ್ತೀಚೆಗಷ್ಟೇ ಅಧಿಕಾರವಹಿಸಿಕೊಂಡಿದ್ದು, ಈ ಬಗ್ಗೆ ಗಮನ ಹರಿಸಲು ಸಾಧ್ಯವಾಗಲಿಲ್ಲ. ಎರಡು ದಿನಗಳೊಳಗೆ ಸಮಸ್ಯೆ ಸರಿಪಡಿಸುವುದಾಗ ಭರವಸೆ ನೀಡಿದರು. ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ರೋಗಿಗಳಿಗೆ ಸಮಸ್ಯೆಯಾಗಿದೆ. ಆಸ್ಪತ್ರೆಯ ಖಾಲಿ ಹುದ್ದೆಗಳು ಭರ್ತಿ ಆಗಿಲ್ಲ. ಗ್ರಾಮೀಣ ಭಾಗದ ಬಡ ರೋಗಿಗಳು ಈ ಆಸ್ಪತ್ರೆಯನ್ನೇ ಅವಲಂಭಿಸಿದ್ದಾರೆ. ತಜ್ಞ ವೈದ್ಯರಿಲ್ಲದೆ ಪ್ರಾಥಮಿಕ ಚಿಕಿತ್ಸೆ ಮಾತ್ರ ದೊರೆಯುತ್ತಿದೆ. ರೋಗಿ ನಗರ ಪ್ರದೇಶಗಳಿಗೆ ತೆರಳಬೇಕಾಗಿದೆ ಎಂದು ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಆಸ್ಪತ್ರೆಗೆ ಬೇಕಾಗಿರುವ ಅಗತ್ಯ ಸೌಲಭ್ಯಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ವೈದ್ಯಾಧಿಕಾರಿ…

Read More

ಸೋಮವಾರಪೇಟೆ ಮೇ 21 NEWS DESK : ಸೋಮವಾರಪೇಟೆ ಪಟ್ಟಣದ ಜನತಾ ಕಾಲೋನಿಯ ಚೌಡೇಶ್ವರಿ ಬ್ಲಾಕ್‌ನ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ 23ನೇ ವರ್ಷದ ದೇವಿಯ ಮಹಾಪೂಜೆ ಶ್ರದ್ಧಾಭಕ್ತಿಯಿಂದ ಮಂಗಳವಾರ ನಡೆಯಿತು. ಮಹಾಪೂಜೆ, ಅಭಿಷೇಕ ಪೂಜೆ ನಂತರ ಮಹಾಮಂಗಳಾರತಿ ನಡೆಯಿತು. ನೆರೆದಿದ್ದ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯ ಸಮಿತಿಯ ಅಧ್ಯಕ್ಷ ಸುಹಾಸ್, ಕಾರ್ಯದರ್ಶಿ ವೀಕ್ಷಿತ್ ಲೊಕೇಶ್, ಸಂತೋಷ್, ಮಂಜುನಾಥ್ ಇದ್ದರು.

Read More

ಮಡಿಕೇರಿ ಮೇ 21 NEWS DESK :  ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ  ದೇವರಪುರ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಮತ್ತು ಭದ್ರಕಾಳಿ ದೇವರ ಬೇಡು(ಕುಂಡೆ) ಹಬ್ಬವು ಮೇ 22 ಮತ್ತು 23 ರಂದು ನಡೆಯಲಿದ್ದು,  ಈ ಹಿನ್ನೆಲೆ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇ 22 ರ ಬೆಳಿಗ್ಗೆ 6 ಗಂಟೆಯಿಂದ ಮೇ 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಗೋಣಿಕೊಪ್ಪ ಮತ್ತು ಸುತ್ತಮುತ್ತಲಿನ 15 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟರಾಜ್ ಆದೇಶಿಸಿದ್ದಾರೆ.

Read More

ಮಡಿಕೇರಿ ಮೇ 21 NEWS DESK : ಕರ್ನಾಟಕ ವಿಧಾನ ಪರಿಷತ್ತು ದ್ವೈವಾರ್ಷಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳ ಚುನಾವಣೆಯು ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳಲ್ಲಿ ಮೇ, 20 ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನವಾಗಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 02, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ -01 ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ -01 ಅಭ್ಯರ್ಥಿ ನಾಮಪತ್ರಗಳನ್ನು ಹಿಂಪಡೆದಿದ್ದು, ಅಂತಿಮವಾಗಿ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ವಿವರ ಇಂತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11 ಅಭ್ಯರ್ಥಿಗಳು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 08 ಅಭ್ಯರ್ಥಿಗಳು ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾರತ ಚುನಾವಣಾ ಆಯೋಗ ಸೂಚಿಸಿರುವಂತೆ ಮತದಾರನ ಬೆರಳಿಗೆ ಅಳಿಸಲಾಗದ ಶಾಯಿಯನ್ನು…

Read More

ಮಡಿಕೇರಿ ಮೇ 21 NEWS DESK : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಉಪಸ್ಥಿತಿಯಲ್ಲಿ ಮಂಗಳವಾರ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ ‘ಪ್ರತಿಜ್ಞಾ ವಿಧಿ’ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಪ್ರತಿಜ್ಞಾ ವಿಧಿಯನ್ನು ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಬಸಪ್ಪ ಅವರು ಪ್ರಮಾಣ ವಚನ ಬೋಧಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿಲ್ಲಾ ಸಾಂಖ್ಯಿಕ…

Read More

ಮಡಿಕೇರಿ ಮೇ 21 NEWS DESK : ಕವಿತೆ ರಚನೆಗೆ ಯಾವುದೇ ಛಂದ, ಬಂಧ, ಪ್ರಾಸ, ಧೋರಣೆ, ವಸ್ತು, ಆಶಯಗಳಂತಹ ಸಿದ್ದ ರಚನೆ ಇರಬೇಕಿಲ್ಲ. ವಾಸ್ತವಿಕ ನೆಲೆಗಟ್ಟಿನಲ್ಲಿ ಭಾವನಾತ್ಮಕ ಸನ್ನಿವೇಶದಲ್ಲಿ ಸ್ವಾಭಾವಿಕವಾಗಿ ಹುಟ್ಟಿಕೊಳ್ಳುವ ಕವಿತೆಗಳು ಗಟ್ಟಿಯಾಗಿ ನೆಲೆಯೂರುತ್ತವೆ ಎಂದು ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ ಹಾಗೂ ಸಾಹಿತಿ ಮಾರುತಿ ದಾಸಣ್ಣನವರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.) ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಂದರ್ಭದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿನಡೆದ 2023-24ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಮೂರ್ನಾಡಿನ ಕವಿಯಿತ್ರಿ, ಶಿಕ್ಷಕಿ ಕೆ.ಜಿ.ರಮ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಕವಿತೆ – ಕಾವ್ಯ ರಚನೆ ಕುರಿತು ಮಾತನಾಡಿದರು. ಪೂರ್ವಾಗ್ರಹದ ಕನ್ನಡಕ ಹಾಕಿಕೊಂಡೇ ಒಂದು…

Read More

ಮಡಿಕೇರಿ ಮೇ 21 NEWS DESK : ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಮುಕ್ತ ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಿತು. ವಿವಿಧ ವಿಭಾಗಗಳಲ್ಲಿ ನಡೆದ ಪಂದ್ಯಾವಳಿಯಲ್ಲಿ ಸುಮಾರು 120ಕ್ಕೂ ಹೆಚ್ಚಿನ ಆಟಗಾರರು ಭಾಗವಹಿಸಿದ್ದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅರಣ್ಯ ಮಹಾ ವಿದ್ಯಾನಿಲಯದ ಡೀನ್ ಡಾ.ಜಿ.ಎಂ.ದೇವಗಿರಿ, ವಿದ್ಯಾರ್ಥಿಗಳಿಗೆ ಶುಭಕೋರಿ ಪಂದ್ಯಾವಳಿಯ ಸೋಲು ಗೆಲುವು ಮುಖ್ಯ ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಉನ್ನತ ಸ್ಥಾನಕ್ಕೆ ಏರಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭ ಭಾರತ ಹಾಕಿ ಕ್ರೀಡಾಪಟು ಕೆ.ಟಿ.ಮೋಹನ್, ಉಪಸ್ಥಿತರಿದ್ದರು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಧ್ಯಾಪಕರಾದ ಡಾ.ರಾಮಕೃಷ್ಣ ಹೆಗ್ಡೆ, ಡಾ.ಮಹೇಶರಪ್ಪ, ಗ್ರಂಥಪಾಲಕರಾದ ಸುಬ್ರಮಣಿ, ಪೊನ್ನಂಪೇಟೆ ಚುನಾವಣಾಧಿಕಾರಿ ಮಹೇಶ್ ಹೊಳ್ಳ, ಕೊಡಗು ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ನ ಗೌರವಾಧ್ಯಕ್ಷ ವಿ.ಎಸ್.ಮೊಹಮ್ಮದ್ ಅಸೀಫ್ ಮತ್ತು ಪಿ.ಎಲ್.ಮಂಜುನಾಥ್, ಕೆ.ಎನ್.ಪ್ರವೀಣ್‍ಶೇಟ್ ಹಾಜರಿದ್ದರು, ವಿಜೇತರಿಗೆ ಬಹುಮಾನ ವಿತರಿಸಿದರು. ವಿಜೇತರ ವಿವರ : ಯು-10 ಬಾಲಕರ ವಿಭಾಗದಲ್ಲಿ ಚಿರಂಜೀವಿ ಪ್ರಥಮ, ದರ್ಶನ್ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ…

Read More

ಅಹಮದಾಬಾದ್ ಮೇ 21 NEWS DESK : ನಾಲ್ವರು ಶಂಕಿತ ಐಎಸ್ ಉಗ್ರರ ಬಂಧನದ ನಂತರ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮೇ 20 ರಂದು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಎಸ್ ಉಗ್ರರನ್ನು ಬಂಧಿಸಲಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ನಡುವಿನ ಕಾಳಗ ಸಾವಿರಾರು ಅಭಿಮಾನಿಗಳನ್ನು ಆಕರ್ಷಿಸುವ ನಿರೀಕ್ಷೆಯಿದೆ. ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಕ್ರಮಗಳನ್ನು ಪೊಲೀಸರು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಮತ್ತು 10 ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಸೇರಿದಂತೆ 3,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಹೆಚ್ಚುವರಿಯಾಗಿ, 800 ಕ್ಕೂ ಹೆಚ್ಚು ಖಾಸಗಿ ಭದ್ರತಾ ಸಿಬ್ಬಂದಿ ಕ್ರೀಡಾಂಗಣದ ಆವರಣದಲ್ಲಿ ಇರುತ್ತಾರೆ. ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ಪೊಲೀಸ್ ಬೆಂಗಾವಲು ಪಡೆಯನ್ನು ಕ್ರೀಡಾಂಗಣದಲ್ಲಿ ಇರಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಮೈಸೂರು ಮೇ 21 NEWS DESK : ಕಲುಷಿತ ನೀರು ಸೇವಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಯುವಕ ಕನಕರಾಜು (20) ಮೃತ ದುರ್ದೈವಿ. ಅಸ್ವಸ್ಥಗೊಂಡಿರುವ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲುಷಿತ ನೀರು ಸೇವಿಸಿ ಹಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಆದರೆ ಚಿಕಿತ್ಸೆ ಫಲಿಸದೆ ಕನಕರಾಜು ಮೃತಪಟ್ಟಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.

Read More

ಮಡಿಕೇರಿ ಮೇ.21 NEWS DESK : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 32.24 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.67 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 230.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 123.56 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.80 ಮಿ.ಮೀ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 325.59 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 179.73 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 139.35 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 75.21 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 30.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…

Read More