ಮಡಿಕೇರಿ ಮೇ 6 NEWS DESK : ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೀಗ 110 ವರ್ಷಗಳ ಸಂಭ್ರಮ. ಕನ್ನಡ ನಾಡು, ನುಡಿ, ಸಂಸ್ಕೃತಿ ರಕ್ಷಣೆಗಾಗಿ 1915ರಲ್ಲಿ ಆಗಿನ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ವಿಶೇಷ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಷತ್ ಸಂಸ್ಥಾಪನೆಗೊಳ್ಳಲು ಪ್ರಮುಖ ಕಾರಣರಾಗಿದ್ದರು. ಆಗಿನಿಂದ ಇಂದಿನವರೆಗೂ ಹಲವು ಮಹನೀಯರು ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿ ಕನ್ನಡ ನಾಡು, ನುಡಿ ಬೆಳವಣಿಗೆಗೆ ನೆರವಾಗಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ನಗರದ ಕ.ಸಾ.ಪ ಕಚೇರಿಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಕರ್ನಾಟಕ ಸುವರ್ಣ ಸಂಭ್ರಮ: 50 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯ ರಕ್ಷಣೆಗಾಗಿ ದುಡಿದವರನ್ನು ಸ್ಮರಿಸುವ ಮೂಲಕ ಎಲ್ಲರೂ ಕನ್ನಡಕ್ಕಾಗಿ ಕೈ…
ಲೇಖಕ: admin
ಮಡಿಕೇರಿ ಮೇ 6 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಸೋಮವಾರದ ಮೊದಲ ಪಂದ್ಯದಲ್ಲಿ ಎಂಟಿಬಿ ರಾಯಲ್ಸ್ ತಂಡದ ವಿರುದ್ಧ ಟೀಮ್ ಲಿವರೇಜ್ 2 ವಿಕೆಟ್ ಗಳ ಜಯ ಸಾಧಿಸಿದೆ. ಟಾಸ್ ಗೆದ್ದ ಟೀಮ್ ಲಿವರೇಜ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಎಂಟಿಬಿ ರಾಯಲ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 142 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಟೀಮ್ ಲಿವರೇಜ್ ತಂಡ 19.2 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಗೆಲುವು ಸಾಧಿಸಿತು. ಟೀಮ್ ಲಿವರೇಜ್ ತಂಡದ ಸಂಜು ಬೋಪಯ್ಯ ಅವರು 14 ರನ್ ಗಳನ್ನು ಗಳಿಸಿ, 29 ರನ್ ಗಳಿಗೆ 3 ವಿಕೆಟ್ ಗಳನ್ನು ಕಬಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಸೋಮವಾರಪೇಟೆ ಮೇ 6 NEWS DESK : ಅಕ್ಕನ ಬಳಗದ ವತಿಯಿಂದ ಪಟ್ಟಣದ ಕರ್ಕಳ್ಳಿಯಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ಅಕ್ಕನ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಳಗದ ಹಿರಿಯ ಸದಸ್ಯರಾದ ಸುಕನ್ಯಾ ಮೋಹನ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷೆ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಶಿವಾದೇವಿ ಅವನೀಶ್ ಚಂದ್ರ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಸಂಘದ ಉಪಾಧ್ಯಕ್ಷೆ ಗೀತರಾಜು, ಕಾರ್ಯದರ್ಶಿ ಮಾಯಾಗಿರಿಷ್, ಪದಾಧಿಕಾರಿಗಳಾದ ರಜಿನಿ, ದಿವ್ಯ, ಜಗಧಾಂಬ, ಅನುಪಮ, ನಂದಿನಿ, ಸರಿತಾ, ಸವಿತಾ ಹಾಗೂ ಮುಂತಾದವರು ಈ ಸಂದರ್ಭ ಹಾಜರಿದ್ದರು.
ಸೋಮವಾರಪೇಟೆ ಮೇ 6 NEWS DESK : ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಬಸವೇಶ್ವರ ಪ್ರತಿಮೆಯನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಲು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ. ಕಳೆದ 24 ವರ್ಷಗಳ ಹಿಂದೆ ಪಟ್ಟಣದ ಕಕ್ಕೆ ಹೊಳೆ ಸಮೀಪ ಅಶ್ವಾರೂಢ ಬಸವೇಶ್ವರ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಕಳೆದ 4 ತಿಂಗಳ ಹಿಂದೆ ಸೇತುವೆ ಕಾಮಗಾರಿಗಾಗಿ ಪ್ರತಿಮೆ ತೆರವುಗೊಳಿಸಲಾಗಿದ್ದು ಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ ಆದರೆ ಮೇ 10 ರಂದು ಬಸವಜಯಂತಿ ಇದ್ದು ಈ ಭಾರಿ ಕರ್ನಾಟಕ ರಾಜ್ಯ ಸರ್ಕಾರ ಬಸವೇಶ್ವರರು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿರುವುದು ಹೆಮ್ಮೆಯಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿಮೆಯನ್ನು ಮುಚ್ಚೀಡಾಲಾಗಿದೆ ,ಬಸವಜಯಂತಿಯ ದಿನವಾದರೂ ಅದನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಿ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಯೊಂದಿಗೆ ಗೌರವ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ತಹಶೀಲ್ದಾರ್ ನವೀನ್ ಕುಮಾರ್ ರವರಿಗೆ ಮನವಿ ಸಲ್ಲಿಸಿ,ಚರ್ಚಿಸಿದರು. ಈ ಸಂದರ್ಭ ತಹಶೀಲ್ದಾರ್ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ನಾಯಕ್ ರವರನ್ನು ದೂರವಾಣಿ ಮೂಲಕ ಸಂಪರ್ಕಿಸಿ…
ಮಡಿಕೇರಿ ಮೇ NEWS DESK 6 : ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಗಳಲ್ಲಿ ತಂದೆ, ತಾಯಿ, ಮಕ್ಕಳು ಎಲ್ಲರೂ ಮೊಬೈಲ್ ನಲ್ಲೇ ಮುಳುಗಿರುತ್ತಾರೆ, ಮೊಬೈಲ್ ನ್ನು ಬಿಟ್ಟು ಪುಸ್ತಕಗಳನ್ನು ಓದುವ ಮತ್ತು ಮಕ್ಕಳಿಗೆ ಓದುವ ಆಸಕ್ತಿಯನ್ನು ಮೂಡಿಸುವ ಕಾಳಜಿಯನ್ನು ಪೋಷಕರು ತೋರಬೇಕು ಎಂದು ಎಂ.ಬಾಡಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಮಡೆಯಂಡ ಉಮ್ಮಯ್ಯ ತಿಮ್ಮಯ್ಯ ಕಿವಿಮಾತು ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 90ನೇ ಪುಸ್ತಕ ಹಾಗೂ ಲೇಖಕಿ ಯಶೋಧ ಪೇರಿಯಂಡ ಅವರ ಎರಡನೇ ಪುಸ್ತಕ “ಮಕ್ಕಕ್ ಕೊದಿಮೊದ” ವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಬರಹಗಾರರ ಸಂಖ್ಯೆ ಹೆಚ್ಚಾಗುತ್ತಿದೆ, ಕಥೆ, ಕವನ ರಚನೆಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ಆದರೆ ಬರಹಗಾರರಿಗಷ್ಟೇ ಆಸಕ್ತಿ ಇದ್ದರೆ ಸಾಲದು. ಓದುಗರ ಸಂಖ್ಯೆಯೂ ಹೆಚ್ಚಾಗಬೇಕು. ಇಂದು ಮೊಬೈಲ್ ನಲ್ಲೇ ಕಾಲಕಳೆಯುವ ಹೆಚ್ಚು ಮಂದಿ ಇದ್ದಾರೆ, ಜ್ಞಾನಾರ್ಜನೆಗೆ ಪುಸ್ತಕಗಳನ್ನು ಓದಬೇಕು ಎಂದು ತಿಳಿಸಿದರು. ಬರಹಗಾರರು ಯಾರ ಸಹಕಾರ ಇಲ್ಲದೆ ಪುಸ್ತಕ ಬರೆದು ಅವುಗಳನ್ನು…
ಮಡಿಕೇರಿ ಮೇ 6 NEWS DESK : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶದ ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆಯಿಂದ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಪೂವಾಹ್ನ ಉಡುಪಿಯ ಪೆರ್ಲಂಪಾಡಿ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಟ್ಟರು. ನಂತರ ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ 7.30 ರಿಂದ ಮರುದಿನದ ವರೆಗೆ ಶ್ರೀ ಪಾಷಾಣಮೂರ್ತಿ ದೈವ ಕೋಲ ನಡೆಯಲಿದೆ. ::: ಅಗೆಲು ಸೇವೆ ::: ರಾತ್ರಿ 7.30ರಿಂದ ಶ್ರೀ ಪಾಷಾಣಮೂರ್ತಿ ದೈವದ ಅಗೆಲು ಸೇವೆ ನಡೆಯಲಿದೆ.
ಮಡಿಕೇರಿ ಮೇ 6 NEWS DESK : ಮೊದಲು ಮುದ್ರಣಗೊಂಡು ಮಾರಾಟವಾಗುತ್ತಿತ್ತು. ಈಗ ಮಾರಾಟಗೊಂಡು ಮುದ್ರಣವಾಗುತ್ತದೆ. ಇತೀಚೆಗೆ ವಾಟ್ಸ್ ಆಪ್ ನಲ್ಲಿ ಹರಿದಾಡುತ್ತಿಡ್ಡ ಒಂದು ಸಂದೇಶವನ್ನು ಓದಿದಾಗ ಮನದಲ್ಲಿ ಒಂದು ರೀತಿಯ ಗೊಂದಲ ಮೂಡಿತು. ಇದು ವಾಸ್ತವ ಕೂಡ, ನಗ್ನ ಸತ್ಯ ಕೂಡ. ಸುಮಾರು 3 ರಿಂದ 4 ತಿಂಗಳ ಹಿಂದೆ ಪತ್ರಿಕೆಯಲ್ಲಿ ಓದಿದ ನೆನಪು. ಕನ್ನಡ ದಿನಪತ್ರಿಕೆಯ ಮಹಿಳಾ ಪ್ರಕಾಶಕರೊಬ್ಬರು ಅವರ ಹೆಸರು ಮರೆತು ಹೋಗಿದೆ ಅವರು ಸಮಾರಂಭವೊಂದರಲ್ಲಿ ಬಹಿರಂಗವಾಗಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ನ್ಯಾಯಮಾರ್ಗದಲ್ಲಿ ಪತ್ರಿಕೆ ನಡೆಸಲು ಸಾಧ್ಯವಿಲ್ಲವೆಂದು. ಹೌದು ಇದು ವಾಸ್ತವ. ಭಾರತದಲ್ಲಿ ಮೂರು ಅಂಗಗಳು ಶಾಸಕಾಂಗ, ಆಡಳಿತಾಂಗ, ನ್ಯಾಯಾಂಗ. ಅದರೊಂದಿಗೆ ಪತ್ರಿಕಾಂಗ ಸೇರಿಕೊಂಡಿದೆ. ಈ ನಾಲಕ್ಕು ಅಂಗಗಳು ಆಧಾರ ಕಂಬಗಳು ಪ್ರಜಾಪ್ರಭುತ್ವದಲ್ಲಿ. ಅವುಗಳಲ್ಲಿ ನ್ಯಾಯಾಂಗ ಇನ್ನು ಸ್ವಲ್ಪ ಮಟ್ಟಿಗೆ ಗೌರವ ಉಳಿಸಿಕೊಂಡಿತು. ಆದರೆ ಇತೀಚೆಗೆ ಸುಮಾರು 600ಕ್ಕು ಹೆಚ್ಚಿನ ಸುಪ್ರೀಂಕೋರ್ಟ್ನ ವಕೀಲರು ನ್ಯಾಯಾಂಗದ ವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದು ಕಳವಳ…
ಬೆಂಗಳೂರು ಮೇ 6 NEWS DESK : ಕಳೆದ ಕೆಲ ತಿಂಗಳುಗಳಿಂದ ಏರುಮುಖವಾಗಿದ್ದ ಕಾಫಿ ದರವು ಕಳೆದ ಐದು ದಿನಗಳಿಂದ ಇಳಿಮುಖವಾಗಿರುವುದು ಕಾಫಿ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ ಏಪ್ರಿಲ್ ಕೊನೆ ವಾರದಲ್ಲಿ ಸರ್ವಕಾಲಿಕ ದಾಖಲೆ ಏರಿಕೆ ಆಗಿ ಬೆಳೆಗಾರರಿಗೆ ಸಂತಸ ನೀಡಿದ್ದ ರೋಬಸ್ಟಾ ಕಾಫಿ ದರ ಕಳೆದ ಏಪ್ರಿಲ್ 29 ರಿಂದ ಕುಸಿತ ಕಾಣುತಿದ್ದು ಆತಂಕದ ಅಲೆ ಸೃಷ್ಟಿಸಿದೆ. ಲಂಡನ್ ಕಾಫಿ ಮಾರುಕಟ್ಟೆಯಲ್ಲಿ ರೊಬಸ್ಟಾ ಪಾರ್ಚ್ ಮೆಂಟ್ ಪ್ರತೀ ಟನ್ ಗೆ 4165 ಅಮೆರಿಕನ್ ಡಾಲರ್ ಗಳಿಗೆ ವಹಿವಾಟು ಆಗುತಿದ್ದ ಕಾಫಿ ನಾಲ್ಕು ದಿನಗಳ ಸತತ ಕುಸಿತದ ನಂತರ ಶುಕ್ರವಾರ ಸಂಜೆಯ ವೇಳೆಗೆ ಪುನಃ ಕುಸಿದು 3550 ಡಾಲರ್ ಗಳಿಗೆ ವಹಿವಾಟು ಮುಗಿಸಿದೆ. ಭಾರತೀಯ ಕಾಫಿಯು ತನ್ನ ಉತ್ಕೃಷ್ಟ ಗುಣಮಟ್ಟದ ಕಾರಣದಿಂದಾಗಿ ಮೊದಲಿನಿಂದಲೂ ಪ್ರೀಮಿಯಂ ಬೆಲೆಗೆ ಮಾರಾಟ ಆಗುತ್ತಿದೆ. ದೇಶದಲ್ಲಿ ಉತ್ಪಾದನೆಯಾಗುವ ಬಹುತೇಕ ಕಾಫಿ ರಫ್ತು ಆಗುವುದರಿಂದಾಗಿ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿಯೇ ದರ ನಿಗದಿ ಆಗುತ್ತದೆ. ಏರುಮುಖವಾಗಿದ್ದ ಕಾಫಿ ದರ ಕುಸಿತಕ್ಕೆ…
ಮಡಿಕೇರಿ ಮೇ 6 NEWS DESK : ಎಐಸಿಸಿ ವಿಶೇಷ ವೀಕ್ಷಕರಾಗಿ ರಾಯಚೂರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವ ಶಾಸಕ ಡಾ.ಮಂತರ್ ಗೌಡ ಅವರು, ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಭೋಸರಾಜು, ಶಾಸಕ ಜಿ.ಹಂಪಯ್ಯ ನಾಯಕ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಹಾಜರಿದ್ದರು.
ಬೆಂಗಳೂರು NEWS DESK ಮೇ 5 : ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






