ಮಡಿಕೇರಿ ಮೇ 5 NEWS DESK : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 5 ರಿಂದ 7ರ ವರೆಗೆ ನಡೆಯಲಿದೆ. ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಮೇ 6 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ. ::: ನಾಗದರ್ಶನ ::: ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶದ ಪ್ರಯುಕ್ತ ಅಂದು ಬೆಳಿಗ್ಗೆ 8 ಗಂಟೆಯಿಂದ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ ನಡೆಯಲಿದ್ದು, ಪೂವಾಹ್ನ 11 ಗಂಟೆಗೆ ನಾಗದರ್ಶನ, ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಲಿದ್ದು, ಮಧ್ಯಾಹ್ನ 12.30ಕ್ಕೆ…
ಲೇಖಕ: admin
ಮಡಿಕೇರಿ ಮೇ 5 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 7 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದೆ. ಬೆಳಿಗ್ಗೆ 9.20ಕ್ಕೆ ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾತಿ ನಡೆಯಲಿದೆ. ಹಗಲು 11.45ಕ್ಕೆ ದೇವಿಯ ರಥೋತ್ಸವವು ದೇವಾಲಯದ ಆವರಣದ ಸುತ್ತಲೂ ನೆರವೇರಲಿದ್ದು, ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ಜರುಗಲಿದೆ. ಅಪರಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ಜರುಗಲಿದ್ದು, ರಾತ್ರಿ 9 ಗಂಟೆಗೆ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ…
ಸೋಮವಾರಪೇಟೆ NEWS DESK ಮೇ 5 : ಮೇ 20 ರಿಂದ ಹತ್ತು ದಿನಗಳು ಯುರೋಪ್ ಪ್ರವಾಸಕ್ಕೆ ತೆರಳಲಿರುವ ಭಾರತ ಕಿರಿಯರ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದ್ದು, ತಂಡದಲ್ಲಿ ಜಿಲ್ಲೆಯ ಸೋಮವಾರಪೇಟೆಯ ಹಾಕಿ ಆಟಗಾರ ವಚನ್ ಅಶೋಕ್ ಮತ್ತು ಪೊನ್ನಂಪೇಟೆಯ ಬಿಪಿನ್ ರವಿ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇಬ್ಬರೂ ಆಟಗಾರರು ಪೊನ್ನಂಪೇಟೆಯ ಕ್ರೀಡಾಶಾಲೆಗೆ ಸೇರ್ಪಡೆಗೊಂಡು ಹತ್ತನೇ ತರಗತಿ ಮುಗಿದ ನಂತರ ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ಬೆಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಒಟ್ಟಿಗೆ ಭಾರತ ಕಿರಿಯರ ತಂಡಕ್ಕೆ ಆಯ್ಕೆಯಾಗುವ ಮೂಲಕ ಅಪರೂಪದ ಸ್ನೇಹಿತರೆನಿಸಿಕೊಂಡಿದ್ದಾರೆ. ಒಟ್ಟಾರೆ ಕರ್ನಾಟಕ ರಾಜ್ಯದಿಂದ 20 ಮಂದಿ ತಂಡದಲ್ಲಿ ಸ್ಥಾನ ಪಡೆದಿರುವ ಈರ್ವರು ಆಟಗಾರರು ಎಲ್ಲಾ ಪಂದ್ಯಾವಳಿಯಲ್ಲೂ ಜೊತೆಯಾಗಿ ಆಡಿರುವುದು ವಿಶೇಷ. ಮೂಲತಃ ಸೋಮವಾರಪೇಟೆಯ ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಅಶೋಕ್ ಮತ್ತು ಸುಜಿನಿ ದಂಪತಿಗಳ ಪುತ್ರನಾಗಿರುವ ವಚನ್, ಬಾಲ್ಯದಿಂದಲೇ ಹಾಕಿ ಕ್ರೀಡೆಯತ್ತ ಒಲವು ಮೂಡಿಸಿಕೊಂಡು ಎಂಟನೇ ತರಗತಿಗೆ ಪೊನ್ನಂಪೇಟೆಯ ಕ್ರೀಡಾಶಾಲೆಗೆ ಆಯ್ಕೆಯಾಗುತ್ತಾರೆ. ನಂತರ ಪಿಯುಸಿಗೆ ಬೆಂಗಳೂರಿನ…
ಮಡಿಕೇರಿ ಮೇ 5 NEWS DESK : ಮರ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ನಡೆದಿದೆ. ಸೋಮವಾರಪೇಟೆಯ ಎಡವಾರ ಗ್ರಾಮದ ನಿವಾಸಿ ಮಿತ್ರೇಶ್ (43) ಮೃತ ದುರ್ದೈವಿ. ಭಾನುವಾರ ಮಧ್ಯಾಹ್ನ 12.30ರ ಸಮಯದಲ್ಲಿ ಮರ ಕಡಿಯುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡ ಮಿತ್ರೇಶ್ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಘಟನೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಚೆಟ್ಟಳ್ಳಿ ಮೇ 5 NEWS DESK : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಶ್ವದಾಖಲೆಯ ಟೆನ್ನಿಸ್ ಆಟಗಾರ ಕೊಡಗಿನ ಮಚ್ಚಂಡ ರೋಹನ್ ಬೋಪಣ್ಣ ಅವರ ಪರವಾಗಿ ಮಾದಾಪುರದ ಅವರ ಸ್ವಗೃಹದಲ್ಲಿ ಪೋಷಕರಾದ ಮಚ್ಚಂಡ ಪ್ರಭಾ ಬೋಪಣ್ಣ ಹಾಗೂ ಮಲ್ಲಿಕಾ ಬೋಪಣ್ಣ ಅವರಿಗೆ ಮಡಿಕೇರಿ ಕೊಡವ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಸನ್ಮಾನಿಸಿ ಮಾತನಾಡಿ ಮಡಿಕೇರಿ ಕೊಡವ ಸಮಾಜದ ಸದಸ್ಯರಾಗಿರುವ ಬೋಪಣ್ಣರವರ ಮಗ ರೋಹನ್ ಬೋಪಣ್ಣ ಅವರ ಸಾಧನೆಯನ್ನು ಶ್ಲಾಘಿಸಿ ಇನ್ನಷ್ಟು ಸಾಧನೆಯನ್ನು ಮಾಡಲೆಂದು ಆಶಿಸಿದರು. ಈ ಸಂದರ್ಭ ಸಮಾಜದ ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರುಗಳಾದ ಮೂವೆರ ಜಯರಾಂ, ನಂದಿನೆರವಂಡ ರವಿಬಸಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಕಾಂಡೆರ ಲಲ್ಲುಕುಟ್ಟಪ್ಪ ಹಾಜರಿದ್ದರು.
ಮಡಿಕೇರಿ ಮೇ 5 NEWS DESK : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ನಂತರ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. 2022 ಜೂ.8 ರಂದು 8.30 ಗಂಟೆಗೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನಂಗಿ ನಿವಾಸಿ ತಂಗಪ್ಪನ್.ಕೆ.ಕೆ ಎಂಬುವವರ ಮನೆಗೆ ಅಪರಿಚಿತ ಮುಸುಕುಧಾರಿ ವ್ಯಕ್ತಿಗಳು ನುಗ್ಗಿ ತಂಗಪ್ಪನ್ ಹಾಗೂ ಪತ್ನಿಯ ಮೇಲೆ ಹಲ್ಲೆ ಮಾಡಿ, ಬೆದರಿಸಿ ಮನೆಯಲ್ಲಿದ್ದ ಅಂದಾಜು ರೂ.2ಲಕ್ಷ ಹಾಗೂ 8 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದರು. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಚನ್ನಂಗಿ ನಿವಾಸಿ ಲವಕುಮಾರ್ ಎಂ.ಕೆ (51), ಅತ್ತೂರಿನ ವಿನೋದ್ ಹೆಚ್.ಸಿ (45), ವಿರಾಜಪೇಟೆಯ ಅಯ್ಯಪ್ಪ ಬೆಟ್ಟ ಸಮೀಪದ ಅನೀಶ್ ಪಿ.ಎಸ್ (33), ಅತ್ತೂರಿನ ಪ್ರವೀಣ್ ಕುಮಾರ್ (46) ಹಾಗೂ ಭದ್ರಗೊಳದ ರಫೀಕ್ ಕೆ.ಈ (45) ಎಂಬುವವರನ್ನು ಬಂಧಿಸಿದ್ದಾರೆ. ಬAಧಿತ ಆರೋಪಿಗಳ ಬಳಿಯಿಂದ ರೂ.60 ಸಾವಿರ ನಗದು, 7.9 ಗ್ರಾಂ ಚಿನ್ನದ ಸರ,…
ಮಡಿಕೇರಿ ಮೇ 5 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಭಾನುವಾರದ ಎರಡನೇ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ತಂಡಕ್ಕೆ ಪ್ರಗತಿ ಕ್ರಿಕೆಟರ್ಸ್ ತಂಡದ ವಿರುದ್ಧ 6 ವಿಕೆಟ್ಗಳ ಜಯ ಲಭಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಯುನೈಟೆಡ್ ತಂಡ 14.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ ಗಳನ್ನು ಗಳಿಸಿ ವಿಜಯ ದಾಖಲಿಸಿತು 50 ಬಾಲ್ ಗಳಲ್ಲಿ ಭರ್ಜರಿ 90 ರನ್ ಗಳನ್ನು ಗಳಿಸಿದ ಸಿ.ಆರ್.ಅಯ್ಯಪ್ಪ ಅವರು ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. (ಮೇ 6ರ ಪಂದ್ಯ) ಬೆಳಗ್ಗೆ 8.30 ಎಂಟಿಬಿ ರಾಯಲ್ಸ್- ಟೀಮ್ ಲಿವರೆಜ್ ಮಧ್ಯಾಹ್ನ 1.30 ಅಂಜಿಗೇರಿ ನಾಡ್- ಕೊಡವ…
ಮಡಿಕೇರಿ ಮೇ 5 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಭಾನುವಾರದ ಮೊದಲ ಪಂದ್ಯದಲ್ಲಿ ವೈಲ್ಡ್ ಫ್ಲವರ್ ತಂಡ 16 ರನ್ಗಳ ಅಂತರದಿಂದ ಎದುರಾಳಿ ಅಂಜಿಗೇರಿ ನಾಡ್ ತಂಡವನ್ನು ಮಣಿಸಿತು. ಟಾಸ್ ಗೆದ್ದ ಅಂಜಿಗೇರಿ ನಾಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ವೈಲ್ಡ್ ಫ್ಲವರ್ ತಂಡ 20 ಓವರ್ ಗಳಳ್ಲಿ 8 ವಿಕೆಟ್ ನಷ್ಟಕ್ಕೆ 144 ರನ್ ಗಳನ್ನು ದಾಖಲಿಸಿತು. ನಂತರ ಬ್ಯಾಟಿಂಗ್ ಮಾಡಿದ ಅಂಜಿಗೇರಿ ನಾಡ್ ತಂಡ 18.4 ಓವರ್ ಗಳಲ್ಲಿ 128 ರನ್ ಗಳನಷ್ಟೇ ಗಳಿಸಿತು. 21 ರನ್ ಗಳಿಸಿ, 3 ವಿಕೆಟ್ ಕಬಳಿಸಿದ ವೈಲ್ಡ್ ಫ್ಲವರ್ ತಂಡದ ನಿತಿನ್ ಬೋಪಣ್ಣ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಗಳಿಸಿದರು.
ಸೋಮವಾರಪೇಟೆ ಮೇ 4 NEWS DESK : ಕಾಡಾನೆಯೊಂದು ರಸ್ತೆಗೆ ಅಡ್ಡಬಂದ ಪರಿಣಾಮ, ಬೈಕ್ ಸಹಿತ ಸವಾರ ಆನೆಗೆ ಡಿಕ್ಕಿ ಹೊಡೆದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೇಳೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ 9.30ರ ಸುಮಾರಿಗೆ ಬೇಳೂರು ಗ್ರಾಮಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದ ಹಾನಗಲ್ಲುಬಾಣೆ ನಿವಾಸಿ ರಾಮು ಎಂಬವರಿಗೆ, ಕಾಟ್ನಮನೆ ಜಂಕ್ಷನ್ನ ತಿರುವಿನಲ್ಲಿ ದಿಢೀರನೆ ಕಾಡಾನೆ ಅಡ್ಡ ಬಂದಿದೆ. ಈ ಸಂದರ್ಭ ನಿಯಂತ್ರಣ ತಪ್ಪಿ ಬೈಕ್ ಆನೆಗೆ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ರಾಮು ಅವರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು, ಅದೃಷ್ಟವಶಾತ್ ಸ್ಥಳದಿಂದ ಓಡಿ ಪಾರಾಗಿದ್ದಾರೆ. ರಾಮು ಅವರ ಬಲಗೈ ಹಾಗೂ ಎಡಗಾಲಿಗೆ ಗಾಯಗಳಾಗಿದ್ದು, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸೋಮವಾರಪೇಟೆ ಮೇ 4 NEWS DESK : ಸೋಮವಾರಪೇಟೆ ತಾಲ್ಲೂಕು ಮೊಗೇರ ಯುವ ವೇದಿಕೆ ವತಿಯಿಂದ ಪಟ್ಟಣದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಅಯೋಜಿಸಿರುವ ಮೊಗೇರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಸದಸ್ಯ ಪಿ.ಎಂ. ರವಿ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ನಮ್ಮ ಸಂಸ್ಕೃತಿ, ಆಚಾರ-ವಿಚಾರ, ಪದ್ದತಿ-ಪರಂಪರೆಯನ್ನು ಉಳಿಸಿಕೊಂಡು ಮುಂದೆ ಸಾಗಲು ಸಮಾಜ ಬಾಂಧವರ ಒಗ್ಗೂಡುವಿಕೆ ಅಗತ್ಯ. ಕ್ರೀಡೆಯಿಂದ ಸಂಘಟನೆ ಸಾಧ್ಯ. ಮೊಗೇರ ಸಮಾಜವು ಜಿಲ್ಲೆಯಲ್ಲಿ 2003ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಅಲ್ಲಿಂದ ಇಲ್ಲಿಯವರೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿದೆ ಎಂದರು. ಜಿಲ್ಲೆಯಲ್ಲಿ 40 ಸಾವಿರಕ್ಕೂ ಅಧಿಕ ಮೊಗೇರ ಸಮಾಜ ಬಾಂಧವರಿದ್ದು, ಇನ್ನಷ್ಟು ಒಗ್ಗಟ್ಟು ಸಾಧಿಸಬೇಕಿದೆ. ಸಮುದಾಯದ ಯುವ ಜನಾಂಗ ಸಮಾಜದ ಬೆಳವಣಿಗೆಗೆ ಸಹಕಾರಿಯಾಗಬೇಕು. ಗ್ರಾಮ ಮಟ್ಟದಲ್ಲಿ ಸಂಘಟನೆಗಳು ಬಲಗೊಳ್ಳಬೇಕು ಎಂದು ರವಿ ಅಭಿಪ್ರಾಯಿಸಿದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎ. ಯಾಕೂಬ್, ಹಲವಷ್ಟು ವರ್ಷಗಳಿಂದ ಲೈನ್ಮನೆಗಳಲ್ಲಿಯೇ ನೆಲೆಸಿರುವ ಮೊಗೇರ ಸಮುದಾಯದವರಿಗೆ ವಸತಿ…






