ಬೆಂಗಳೂರು: ರಿಷಬ್ ಶೆಟ್ಟಿ ಅಭಿನಯದ ಜಾಗತಿಕ ಖ್ಯಾತಿಯ ‘ಕಾಂತಾರಾ’ ಚಿತ್ರದ ದೈವಾರಾಧನೆಯ ದೃಶ್ಯಗಳನ್ನು ಅಪಹಾಸ್ಯ ಮಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ನೀವು ಸೂಪರ್ ಸ್ಟಾರ್ ಇರಬಹುದು ಅಥವಾ ಯಾರೇ ಇರಬಹುದು, ಜನರ ಧಾರ್ಮಿಕ ಭಾವನೆಗಳ ವಿಚಾರದಲ್ಲಿ ಹಗುರವಾಗಿ ಮಾತನಾಡುವುದು ಸಲ್ಲದು” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಖಡಕ್ ಎಚ್ಚರಿಕೆ ನೀಡಿದೆ. ಪ್ರಕರಣದ ಹಿನ್ನೆಲೆ ಏನು? ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ವೇದಿಕೆಯೊಂದರಲ್ಲಿ ರಣವೀರ್ ಸಿಂಗ್ ಅವರು ಕಾಂತಾರಾ ಚಿತ್ರದ ದೈವದ ಪಾತ್ರವನ್ನು ‘ಫೀಮೇಲ್ ಗೋಸ್ಟ್’ (ಮಹಿಳಾ ದೆವ್ವ) ಎಂದು ಕರೆದು ಮಿಮಿಕ್ರಿ ಮಾಡಿದ್ದರು ಎಂಬ ಆರೋಪವಿದೆ. ಈ ಹೇಳಿಕೆಯು ಕರಾವಳಿಯ ದೈವಾರಾಧನೆ ಮತ್ತು ಭಕ್ತರ ಭಾವನೆಗೆ ಧಕ್ಕೆ ತಂದಿದೆ ಎಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಹೈಕೋರ್ಟ್ ಪೀಠದ ಕಟು ಮಾತುಗಳು ವಿಚಾರಣೆ ವೇಳೆ ರಣವೀರ್ ಸಿಂಗ್ ಅವರ…
ಲೇಖಕ: admin
ಬೆಂಗಳೂರು/ಉದಯಪುರ: ದಕ್ಷಿಣ ಭಾರತದ ಖ್ಯಾತ ತಾರಾ ಜೋಡಿಗಳಾದ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸುವ ಮೂಲಕ ತಮ್ಮ ಅಭಿಮಾನಿಗಳ ದಶಕದ ಕನಸನ್ನು ನನಸು ಮಾಡಿದ್ದಾರೆ. ರಾಜಸ್ಥಾನದ ಉದಯಪುರದ ಐಷಾರಾಮಿ ಹೋಟೆಲೊಂದರಲ್ಲಿ ಕುಟುಂಬ ಸದಸ್ಯರು ಹಾಗೂ ಅತ್ಯಂತ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಸಪ್ತಪದಿ ತುಳಿದಿದ್ದಾರೆ. ಬೆಳಿಗ್ಗೆ ತೆಲುಗು ಸಂಪ್ರದಾಯ, ಸಂಜೆ ಕೊಡವ ವೈಭವ ವಿಭಿನ್ನ ಸಂಸ್ಕೃತಿಯ ಹಿನ್ನೆಲೆ ಹೊಂದಿರುವ ಈ ಜೋಡಿ, ಪರಸ್ಪರರ ಸಂಪ್ರದಾಯಗಳಿಗೆ ಸಮಾನ ಆದ್ಯತೆ ನೀಡುವ ಮೂಲಕ ಮಾದರಿಯಾಗಿದ್ದಾರೆ: ಮಂಗಳ ಮುಹೂರ್ತ: ಇಂದು ಬೆಳಿಗ್ಗೆ ವಿಜಯ್ ದೇವರಕೊಂಡ ಅವರ ತೆಲುಗು ಕುಟುಂಬದ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ವಿವಾಹ ಕಾರ್ಯಕ್ರಮಗಳು ನೆರವೇರಿವೆ. ಕೊಡವ ಸಂಪ್ರದಾಯ: ನಟಿ ರಶ್ಮಿಕಾ ಕೊಡವ ಸಮುದಾಯಕ್ಕೆ ಸೇರಿದವರಾದ್ದರಿಂದ, ಇಂದು ಸಂಜೆ ರಶ್ಮಿಕಾ ಕುಟುಂಬಸ್ಥರ ನೇತೃತ್ವದಲ್ಲಿ ಕೊಡಗಿನ ವಿಶಿಷ್ಟ ಸಂಪ್ರದಾಯದಂತೆ ಮತ್ತೊಂದು ಸುತ್ತಿನ ವಿವಾಹದ ಆಚರಣೆಗಳು ನಡೆಯಲಿವೆ ಎಂದು ವರದಿಯಾಗಿದೆ. ಚಿತ್ರರಂಗದ ಯಶಸ್ವಿ ಜೋಡಿ ಪರದೆ ಮೇಲೆ ಅದ್ಭುತ ಕೆಮಿಸ್ಟ್ರಿ…
ಮಡಿಕೇರಿ, NEWS DESK ಫೆ.26:-ಇದೇ ಮಾರ್ಚ್ 3 ರಂದು ಸಂಭವಿಸುವ ಫಾಲ್ಗುನ ಶುಕ್ಲ ಪೌರ್ಣಮಿ ಖಗ್ರಾಸ ಗ್ರಸ್ತೋದಯ ಚಂದ್ರಗ್ರಹಣ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ 9 ರಿಂದ ರಾತ್ರಿ 7.15 ರವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ. ಈ ದಿನದಂದು ಯಾವುದೇ ಪಿಂಡಪ್ರಧಾನ, ಪಿತೃ ಕಾರ್ಯಗಳು, ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಭಕ್ತಾದಿಗಳಿಗೆ ಅನ್ನದಾಸೋಹ ಇರುವುದಿಲ್ಲ. ಅಂತೆಯೇ ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9 ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ ಎಂಬುದನ್ನು ಸ್ವಷ್ಟಪಡಿಸಲಾಗಿದೆ. ಆದ್ದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಯಾದ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
ಹಿಂದೂ ಸಂಗಮ ಆಯೋಜನಾ ಸಮಿತಿ ಕಡಗದಾಳು ವತಿಯಿಂದ ಮಾರ್ಚ್ 1 ರಂದು ಭಾನುವಾರ ಹಿಂದೂ ಸಂಗಮ ಕಾರ್ಯಕ್ರಮ ಮತ್ತು ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮಾತೃಭೂಮಿ, ಹಿಂದೂ ಸಂಸ್ಕೃತಿ, ಆಚಾರ, ವಿಚಾರ, ಪರಂಪರೆ, ಸಂಪ್ರದಾಯವನ್ನು ರಕ್ಷಣೆ ಮಾಡುವುದರ ಜೊತೆಗೆ ಉಳಿಸಿ ಬೆಳೆಸುವ ಮೂಲಕ ಸುಭದ್ರವಾದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಪ್ರತಿಯೊಬ್ಬ ಹಿಂದೂ ಕೂಡ ಸಂಘಟಿತವಾಗುವ ಮೂಲಕ ಹಿಂದುತ್ವದ ವಿಚಾರದಲ್ಲಿ ಮುಂದಾಲೋಚನೆಯೊಂದಿಗೆ ಬದುಕಿದರೆ ಮಾತ್ರ ಹಿಂದೂ ಧರ್ಮ ಮತ್ತು ಸಂಸ್ಕೃತಿಯಲ್ಲಿ ಉಳಿಸಲು ಸಾಧ್ಯ. ಮಾತೃ ಭೂಮಿಯ ರಕ್ಷಣೆ ಜೊತೆಗೆ ಧರ್ಮವನ್ನು ಉಳಿಸುವ ಉದ್ದೇಶವಾಗಿ ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆಗೊಂಡಿದೆ. ಹಿಂದೂ ಸಂಗಮ ಕಾರ್ಯಕ್ರಮದ ಪ್ರಯುಕ್ತ ಭವ್ಯ ಶೋಭಾಯಾತ್ರೆ ಕಡಗದಾಳು ಸರಕಾರಿ ಪ್ರೌಢ ಶಾಲಾ ಮೈದಾನದಿಂದ ಬೆಳಗ್ಗೆ 10.30 ಗಂಟೆಗೆ ಆರಂಭವಾಗಲಿದೆ. ಕಳಶ ಹೊತ್ತ ಮಹಿಳೆಯರು, ಸ್ತಬ್ಧಚಿತ್ರ, ಭಜನೆ, ವಿವಿಧ ಕಲಾತಂಡಗಳು…
ಮಡಿಕೇರಿ, NEWS DESK ಫೆ. 26 – ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಮಡಿಕೇರಿಯ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ವ್ಯಕ್ತಿತ್ವ ವಿಕಸನ ಮತ್ತು ಪರೀಕ್ಷಾ ಸಿದ್ಧತೆ ಕುರಿತು ಕಾರ್ಯಗಾರ ಜರುಗಿತು. ಪಿಯುಸಿ ನಂತರದ ಶಿಕ್ಷಣದ ಕುರಿತಾಗಿ ವೃತ್ತಿ ಮಾರ್ಗದರ್ಶನ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಸಂಪನ್ಮೂಲ ವ್ಯಕ್ತಿ ಪುತ್ತೂರಿನ ಅಕ್ಷರ ಚಾರಿಟೇಬಲ್ ಟ್ರಸ್ಟ್ ನ ಪ್ರೊಜೆಕ್ಟ್ ಮ್ಯಾನೇಜರ್ ಹೇಮಂತ್ ಕುಮಾರ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ವಿಶ್ವೇಶ್ವರ ಭಟ್ ಪರೀಕ್ಷಾ ಸಿದ್ಧತೆಯನ್ನು ಕುರಿತು ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸಮಾರಂಭದಲ್ಲಿ ರೋಟರಿ ಸಂಸ್ಥೆಯ ಜಿಲ್ಲಾ ಪ್ರಾಜೆಕ್ಟ್ ಸೆಕ್ರೆಟರಿ ರತನ್ ತಮ್ಮಯ್ಯ ಮಾತನಾಡಿ, ಗ್ರಾಮೀಣ ಶಾಲಾ ವಿದ್ಯಾಥಿ೯ಗಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವ ಗುರಿ ಹೊಂದುವಂೆ ಸ್ಪೂತಿ೯ದಾಯಕ ಉದಾಹರಣೆಗಳೊಂದಿಗೆ ಕರೆ ನೀಡಿದರು. ಮಡಿಕೇರಿ , ರೋಟರಿ…
ಮಡಿಕೇರಿ NEWS DESK ಫೆ.26 : ಸಹಕಾರ ಸಂಘಗಳು ಪ್ರತಿವರ್ಷ ಕಡ್ಡಾಯವಾಗಿ ಆಡಿಟಿಂಗ್ ಮಾಡಿಸುವ ಮೂಲಕ ಪಾರದರ್ಶಕ ಆಡಳಿತವನ್ನು ನೀಡಬೇಕು ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಕೆ.ಪಿ.ಗಣಪತಿ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಮತ್ತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಸಂಯುಕ್ತಾಶ್ರಯದಲ್ಲಿ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಆದಾಯ ತೆರಿಗೆ, ಜಿಎಸ್ಟಿ ಮಾಹಿತಿ ಹಾಗೂ ಪದಾಧಿಕಾರಿಗಳ ಕರ್ತವ್ಯ, ಜವಾಬ್ದಾರಿ ಕುರಿತು ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆದುಕೊಂಡು ಬಂದಿರುವ ಕೊಡಗು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ 115 ವರ್ಷಗಳ ಇತಿಹಾಸವಿದೆ. ಉತ್ತಮ ಸಹಕಾರಿ ಸಂಘಗಳಿರುವ ಹೆಗ್ಗಳಿಕೆಯನ್ನು ಹೊಂದಿರುವ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಮತ್ತು ಮಾದರಿ ಎನಿಸಿದೆ. ಈ ಖ್ಯಾತಿ ಹೀಗೆ ಮುಂದುವರಿಯಬೇಕಾದರೆ ಪಾರದರ್ಶಕ ಆಡಳಿತ ನಡೆಸುವುದು ಮುಖ್ಯ ಎಂದರು. ಜಿಲ್ಲೆಯಲ್ಲಿರುವ ಒಟ್ಟು ಸಹಕಾರಿ ಸಂಘಗಳಲ್ಲಿ 103 ಮಾತ್ರ…
ಕುಶಾಲನಗರ ಫೆ.25 NEWS DESK : ಕುಶಾಲನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ಅನಗತ್ಯ ವಿದ್ಯುತ್ ಕಡಿತ ಗೊಳಿಸಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಕೊಡಗು ಜಿಲ್ಲಾ ಸಂಚಾಲಕರಾದ ಎಂ.ಕೆ.ಆಶಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯುತ್ ಕಡಿತದಿಂದ ಕಂಗೆಟ್ಟ ಸಾರ್ವಜನಿಕರು ಕಾರಣ ಕೇಳಲು ಸೆಸ್ಕ್ ಕಚೇರಿಗೆ ಅಥವಾ ಅಧಿಕಾರಿಗಳಿಗೆ ಕರೆ ಮಾಡಿದರೆ ಸರಿಯಾಗಿ ಪ್ರತಿಕ್ರಿಯಿದಿರುವುದು ಖಂಡನೀಯ ಎಂದರು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳು ಹೊಸ್ತಿಲಲ್ಲಿವೆ. ಇಂತಹ ಸೂಕ್ಷ್ಮ ಸಮಯದಲ್ಲಿ ರಾತ್ರಿ ಮತ್ತು ಮುಂಜಾನೆ ವೇಳೆಯಲ್ಲಿ ದಿಢೀರ್ ವಿದ್ಯುತ್ ಕಡಿತ ಮಾಡುತ್ತಿರುವುದು ವಿದ್ಯಾರ್ಥಿಗಳ ಏಕಾಗ್ರತೆಯನ್ನು ಹಾಳುಗೆಡವುತ್ತಿದೆ. ಅಧಿಕಾರಿಗಳ ಈ ಅವೈಜ್ಞಾನಿಕ ನಡೆಯಿಂದ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಡುತ್ತಿದೆ. ಪ್ರಸ್ತುತ ಪವಿತ್ರ ರಂಜಾನ್ ಮಾಸ ನಡೆಯುತ್ತಿದ್ದು, ಮುಸ್ಲಿಂ ಬಾಂಧವರ ಉಪವಾಸದ ಸಮಯ ಹಾಗೂ ಸಂಜೆ ಇಫ್ತಾರ್ ಪ್ರಾರ್ಥನಾ ವೇಳೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಜನರ ಧಾರ್ಮಿಕ ಆಚರಣೆಗಳಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ ಎಂದು ದೂರಿದರು. ನಿರಂತರ…
ಸಿದ್ದಾಪುರ ಫೆ.25 NEWS DESK : ಎಸ್.ಎನ್.ಡಿ.ಪಿ. ಕೊಡಗು ಯೂನಿಯನ್ ವತಿಯಿಂದ ವನಿತಾ ಸಮಾವೇಶ ನಡೆಯಿತು. ಸಿದ್ದಾಪುರದ ಎಸ್ಎನ್ಡಿಪಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ ಮಾತನಾಡಿ, ಭಾರತೀಯ ಪಾರಂಪರಿಕ ಸಂಸ್ಕೃತಿ ಮತ್ತು ಸಮಾಜವನ್ನು ರಕ್ಷಿಸುವ ಮೂಲ ತತ್ವಗಳನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಇಂತಹ ಸಮಾವೇಶಗಳು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಅವರ ಸಾಧನೆಗಳನ್ನು ಗುರುತಿಸಲು ಮಹತ್ವದ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಸಂಘಟನೆ ಮೂಲಕ ಶಕ್ತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರು. ಪ್ರಸ್ತಾವಿಕವಾಗಿ ಮಾತನಾಡಿದ ಎಸ್.ಎನ್.ಡಿ.ಪಿ. ಕೊಡಗು ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್, ವನಿತಾರನ್ನು ಒಗ್ಗೂಡಿಸಿ ಅವರಿಗೆ ಬಲ ತುಂಬುವ ಉದ್ದೇಶದಿಂದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಸಂಘಟನೆಯಲ್ಲಿ ಒಟ್ಟು 18 ಸಾವಿರ ಸದಸ್ಯರಿದ್ದು, ಅದರಲ್ಲಿ 9 ಸಾವಿರ ಮಹಿಳೆಯರು ಸೇರಿದ್ದಾರೆ ಎಂದರು. ಸಂಘಟನೆಯು ಪ್ರತಿವರ್ಷ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸದಸ್ಯತ್ವ ಪಡೆದ ಕೊಡಗಿನ…
ಮಡಿಕೇರಿ ಫೆ.25 NEWS DESK : ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದಲ್ಲಿ ಮಾ.2 ರಂದು ಕುಂಬ್ಯಾರು ಕಲ್ಲಡ್ಚ (ವಾರ್ಷಿಕ) ಹಬ್ಬ ನಡೆಯಲಿದೆ. ಹಬ್ಬದ ಪ್ರಯುಕ್ತ ಮಾರ್ಚ್, 02 ರಂದು ಬೆಳಗ್ಗೆ 5.30 ಗಂಟೆಗೆ ಅಭಿಷೇಕ ಪೂಜೆ, 6 ಗಂಟೆಗೆ ಪ್ರಾತಃಕಾಲದ ಪೂಜೆ, 10 ಗಂಟೆಗೆ ಎತ್ತು ಪೋರಾಟ, 10.30 ಗಂಟೆಗೆ ತುಲಾಭಾರ ಸೇವೆ, 11 ಗಂಟೆಗೆ ಭಕ್ತಾದಿಗಳ ಸೇವಾ ಪೂಜೆಗಳು ಜರುಗಲಿದೆ. ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಣೆ, 1 ಗಂಟೆಗೆ ಅನ್ನ ಸಂತರ್ಪಣೆ ನೆರವೇರಲಿದ್ದು, 2 ಗಂಟೆಗೆ ದೇವರು ಹೊರಗೆ ಬಂದು ಮಲ್ಮಕ್ಕೆ ತೆರಳವುದು, ಸಂಜೆ 4 ಗಂಟೆಗೆ ಕಾಫಿ ಫಲಹಾರ, 6 ಗಂಟೆಗೆ ದೇವರು ಮಲ್ಮದಿಂದ ಬಂದು ದೇವರ ಬಲಿ ನೃತ್ಯ, ರಾತ್ರಿ 8 ಗಂಟೆಗೆ ಭೋಜನ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ವ್ಯವಸ್ಥಾಪನಾ ಸಮಿತಿ ಕೋರಿದೆ.
ಮಡಿಕೇರಿ ಫೆ.25 NEWS DESK : ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕ ಸಂಸದ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿಸಿದೆ. ಸಿದ್ದಾಪುರದ ಎಸ್.ಎನ್.ಡಿ.ಪಿ (ಶ್ರೀ ನಾರಾಯಣ ಗುರು ಪರಿಪಾಲನ ಯೋಗ) ಸಭಾಂಗಣದಲ್ಲಿ ನಡೆದ ಎಸ್.ಎನ್.ಡಿ.ಪಿ ವನಿತಾ ಮಹಿಳಾ ಸಮಾವೇಶದಲ್ಲಿ ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಜೀದ್ ಚೊಕಂಡಳ್ಳಿ ಅವರ ನೇತೃತ್ವದಲ್ಲಿ ನಲ್ವತೋಕ್ಲು ಮೋಹಿದೀನ್ ಜುಮಾ ಮಸೀದಿಯ ಕೆಲವು ಕಾಮಗಾರಿಗಳಿಗೆ ಸಂಸದರ ವಿಶೇಷ ನಿಧಿಯಿಂದ ಅನುದಾನವನ್ನು ನೀಡಲು ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷರಾದ ಜಯಮ್ಮ ಅಮ್ಮತಿ, ಮಡಿಕೇರಿ ತಾಲೂಕು ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಿಯಾಬುದ್ದೀನ್ ವಿ.ಪಿ.ಎಸ್. ನೆಲ್ಯ ಹುದಿಕೇರಿ, ವಿರಾಜಪೇಟೆ ತಾಲೂಕು ಯುವ ಜನತಾದಳದ ಅಧ್ಯಕ್ಷರಾದ ಸೈಫುದ್ದೀನ್ ಜಾಮಿಯಾಲ, ಹಾಜರಿದ್ದರು.






