ಸೋಮವಾರಪೇಟೆ ಮೇ 4 NEWS DESK : ಜೂನಿಯರ್ ಇಂಡಿಯಾ ಹಾಕಿ ತಂಡಕ್ಕೆ ಸೋಮವಾರಪೇಟೆಯ ಎಚ್.ಎ.ವಚನ್ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮೇ.20ರಿಂದ 29ರ ತನಕ ಯುರೋಪ್ನಲ್ಲಿ ನಡೆಯುವ ಹಾಕಿ ಪಂದ್ಯಾವಳಿಯಲ್ಲಿ ಜೂನಿಯರ್ ಇಂಡಿಯಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಭಾರತ, ಜರ್ಮನಿ, ಬೆಲ್ಜಿಯಂ, ನೆದರ್ಲ್ಯಾಂಡ್ ದೇಶಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಸೋಮವಾರಪೇಟೆ ಕ್ಲಬ್ ರಸ್ತೆ ನಿವಾಸಿ ಎಚ್.ಎನ್.ಅಶೋಕ್ ಮತ್ತು ಸುಜಿನಿ ದಂಪತಿ ಪುತ್ರ ವಚನ್ ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದು, ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಹಾಕಿ ತರಬೇತಿ ಪಡೆಯುತ್ತಿದ್ದಾರೆ.
ಲೇಖಕ: admin
ಮಡಿಕೇರಿ ಮೇ 4 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶನಿವಾರದ ಎರಡನೇ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ 78 ರನ್ಗಳ ಜಯ ಸಾಧಿಸಿತು. ಕೂರ್ಗ್ ಯುನೈಟೆಡ್ v/s MTB ರಾಯಲ್ಸ್ MTB ರಾಯಲ್ಸ್ ಟಾಸ್ ಗೆದ್ದು ಫೀಲ್ಡ್ ಆಯ್ಕೆ ಮಾಡಿಕೊಂಡಿತು ಕೂರ್ಗ್ ಯುನೈಟೆಡ್ — 199/5 (20.0 ಓವರ್ಗಳು) MTB ರಾಯಲ್ಸ್ — 121/9(20.0 ಓವರ್ಗಳು) ಕೂರ್ಗ್ ಯುನೈಟೆಡ್ 78 ರನ್ಗಳ ಜಯ ಸಾಧಿಸಿತು ಪಂದ್ಯಪುರುಷ:: ಸಿ ಆರ್ ಅಯ್ಯಪ್ಪ — 89(47)
ಕಡಂಗ ಮೇ 4 NEWS DESK : ಕಡಂಗ ಬದ್ರಿಯಾ ಮಸೀದಿಯ ಅಧಿನದಲ್ಲಿ ನೂತನವಾಗಿ ಆರಂಭಗೊಂಡ ದರ್ಸ್ ಹಾಗೂ ವಾರ್ಷಿಕ ಬದರ್ ಮೌಲೀದ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕೂರತು ಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಲ್ ಕೂರತ್ ಉದ್ಘಾಟಿಸಿ, ದರ್ಸ್ ನ ಮಹತ್ವ ಕುರಿತು ಮಾತನಾಡಿದರು. ನಂತರ ದುಆ ಆಶೀರ್ವಚನ ನೀಡಿದರು. ಬದ್ರಿಯಾ ಮಸೀದಿಯ ಅಧ್ಯಕ್ಷ ಕೆ.ಇ.ಉಸ್ಮಾನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೂರ್ಗ್ ಜಮಿಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ, ಬದ್ರಿಯಾ ಮಸೀದಿಯ ಮುದರಿಸ್ ಅಬ್ದುಲ್ ಸತ್ತಾರ್ ಸಖಾಫಿ, ನಾಪೋಕ್ಲು ಮಸೀದಿಯ ಮುದರಿಸ್ ಅಶ್ರಫ್ ಹಸ್ಸನಿ, ಮೊಯದ್ದಿನ್ ಮಸೀದಿಯ ಅಧ್ಯಕ್ಷ ಅಬ್ದುಲ್ಲ, ಕಾರ್ಯದರ್ಶಿ ಅಬ್ದುಲ್ ರೆಹಮಾನ್, ಬದ್ರಿಯಾ ಮಸೀದಿಯ ಕೋಶಾಧಿಕಾರಿ ಸಿ.ಎ.ರಜಾಕ್, ಉಪಾಧ್ಯಕ್ಷರಾದ ರಝಕ್, ರಶೀದ್, ಸಹದ್, ನೌಫಲ್, ಹಾಸಿಮ್, ಸುಹೈಲ್, ಕರೀಂ, ಅರ್ಷಾದ್ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು, ಮತಿತ್ತರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ರಾಶೀದ್ ಸ್ವಾಗತಿಸಿ, ವಂದಿಸಿದರು. ವರದಿ : ನೌಫಲ್
ಮಡಿಕೇರಿ ಮೇ 4 NEWS DESK : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ʼವಾರ್ತಾಭಾರತಿʼ ಕೊಡಗು ಜಿಲ್ಲೆಯ ವಿಶೇಷ ವರದಿಗಾರ ಕೆ.ಎಂ. ಇಸ್ಮಾಯಿಲ್ ಕಂಡಕರೆ ಆಯ್ಕೆಯಾಗಿದ್ದಾರೆ. 2023ರ ಏ.6 ರಂದು ‘ವಾರ್ತಾಭಾರತಿ’ ಪತ್ರಿಕೆಯಲ್ಲಿ ಪ್ರಕಟವಾದ ‘ರಸ್ತೆ ಕೊಡಿ ಇಲ್ಲದಿದ್ದರೆ ಸಾವಿಗೆ ದಾರಿ ಮಾಡಿಕೊಡಿ’ ಎಂಬ ವರದಿಯು ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಹಿರಿಯ ಪತ್ರಕರ್ತ ಕೇಶವ ಕುಂದರ್, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಟಿ.ಎನ್. ಆಯ್ಕೆ ಸಮಿತಿಯಲ್ಲಿದ್ದರು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಇನ್ ಜರ್ನಲಿಸಮ್ನಲ್ಲಿ ಸರ್ಟಿಫಿಕೆಟ್ ಕೋರ್ಸ್ ಪಡೆದಿರುವ ಇಸ್ಮಾಯಿಲ್ ಈ ಹಿಂದೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಮತ್ತು ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಯನ್ನೂ ಗಳಿಸಿದ್ದರು. 2021ರಲ್ಲಿ ಇಸ್ಮಾಯಿಲ್ ಅವರ ಚೊಚ್ಚಲ ಕೃತಿ ‘ಮರಿಯಮ್’ ಪ್ರಕಟಗೊಂಡಿತ್ತು. ಫುಟ್ಬಾಲ್ ಕ್ರೀಡಾಪಟು ಮತ್ತು ತರಬೇತುದಾರರಾಗಿರುವ ಇವರು ಕರ್ನಾಟಕ…
ವಿರಾಜಪೇಟೆ ಮೇ 4 NEWS DESK : ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಉಚಿತ ಬೇಸಿಗೆ ಶಿಬಿರವು ಯಶಸ್ವಿಯಾಗಿ ನಡೆಯಿತು. 22 ದಿವಸಗಳ ಕಾಲ ನಡೆದ ಶಿಬಿರದಲ್ಲಿ ವಿವಿಧ ಶಾಲೆಗಳ ಮೂವತ್ತಕ್ಕೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ ವಿರಾಜಪೇಟೆಯ ನುರಿತ ತರಬೇತುದಾರರು ಮಕ್ಕಳಿಗೆ ಯೋಗ, ಕರಾಟೆ, ಮಾರ್ಷಲ್ ಆರ್ಟ್ಸ್, ಕ್ರಾಫ್ಟ್, ನೃತ್ಯ, ಸಂಗೀತ, ಆಂಗ್ಲ ಭಾಷೆ ಕಲಿಕೆ, ಕ್ರೀಡೆ, ಡ್ರಾಯಿಂಗ್, ಕ್ಷೇತ್ರ ಪರಿಚಯ ಇನ್ನೂ ಮುಂತಾದ ವಿಚಾರಗಳ ಬಗ್ಗೆ ತರಬೇತಿ ನೀಡಿದರು. ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಆಯೋಜಕರಾದ ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಮ್ಮ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪ್ರಕಾಶ್ ಅವರ ಸಹಕಾರ, ಇತರ ಇಲಾಖಾಧಿಕಾರಿಗಳು, ಗ್ರಾಮಸ್ಥರು, ದಾನಿಗಳು ಮತ್ತು ವಿಶೇಷವಾಗಿ ಸ್ಥಳೀಯರು ಮತ್ತು ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ರವೀಂದ್ರ ನೀಡಿದ ಸಹಕಾರದಿಂದ ಈ ಶಿಬಿರ ಯಶಸ್ಸನ್ನು ಕಂಡಿದೆ. ಮಕ್ಕಳ ಪೋಷಕರ ಪ್ರೋತ್ಸಾಹಕ್ಕೂ ನಾನು ಆಭಾರಿಯಾಗಿದ್ದೇನೆ ಎಂದರು. ಮಕ್ಕಳು ಹಲವಾರು ವಿಷಯಗಳನ್ನು ಈ ಶಿಬಿರದಿಂದ…
ಮಡಿಕೇರಿ ಮೇ 5 NEWS DESK : ಮಡಿಕೇರಿ ತಾಲ್ಲೂಕಿನ ಅಪ್ಪಂಗಳ ನಿವಾಸಿ ಶಂಕರನಾರಾಯಣ ಹೆಬ್ಬಾರ್ ಹಾಗೂ ಶ್ಯಾಮಲ ದಂಪತಿಯ ಪುತ್ರಿ ಅಶ್ವಿನಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿ ರವೀಶ್ ಕೇಕುಣ್ಣಾಯ್ಯ ಹಾಗೂ ಕುಸುಮ ದಂಪತಿಯ ಪುತ್ರ ಕೆ.ಆರ್.ಅನ್ವೇಶ್ ಅವರ ವಿವಾಹವು ಮೇ 1 ರಂದು ಪುತ್ತೂರಿನ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು.
ಮಡಿಕೇರಿ ಮೇ 4 NEWS DESK : ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗವು ಮೇ 2 ರಂದು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿರುತ್ತದೆ. ಅದರಂತೆ ಮತದಾನ ಪ್ರಕ್ರಿಯೆಯು ಜೂ.3 ರಂದು ಹಾಗೂ ಮತಎಣಿಕೆ ಕಾರ್ಯವು ಜೂ. 6 ರಂದು ನಡೆಯಲಿದೆ. ಈ ಮೂರು ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೇ 2023ರ ಡಿ.30 ರಂದು ಪ್ರಕಟಿಸಲಾಗಿದ್ದು, ಈವರೆಗೆ ಮತದಾರರ ಪಟ್ಟಿಗಳಿಗೆ ನೋಂದಾಯಿಸಿರುವ ಮತದಾರರ ಸಂಖ್ಯಾ ವಿವರಗಳು ಇಂತಿವೆ. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿರುವ ‘ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ’ ವ್ಯಾಪ್ತಿಯಲ್ಲಿ ಒಟ್ಟು 18,379 ಮಂದಿ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 10,355 ಪುರುಷರು ಮತ್ತು 8,022 ಮಹಿಳೆಯರು ಹಾಗೂ 2 ಇತರೆ ಮತದಾರರು ಇದ್ದಾರೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆಗಳನ್ನು ಒಳಗೊಂಡ…
ಮಡಿಕೇರಿ ಮೇ 4 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶನಿವಾರದ ಮೊದಲ ಪಂದ್ಯದಲ್ಲಿ ಕೊಡವ ಟ್ರೈಬ್ ತಂಡ 38 ರನ್ಗಳ ಅಂತರದಿಂದ ಎದುರಾಳಿ ರಾಯಲ್ ಟೈಗರ್ಸ್ ತಂಡವನ್ನು ಮಣಿಸಿತು. ಟಾಸ್ ಗೆದ್ದ ಮೊದಲು ಬ್ಯಾಟ್ ಮಾಡಲು ಇಳಿದ ಕೊಡವ ಟ್ರೈಬ್ ತಂಡ, ರಾಯಲ್ ಟೈಗರ್ಸ್ ತಂಡದ ಉತ್ತಮ ಬೌಲಿಂಗ್ ದಾಳಿಯ ಎದುರು ರನ್ ಗಳಿಸಲು ಸಾಕಷ್ಟು ಪರಿಶ್ರಮ ಪಡಬೇಕಾಗಿ ಬಂದಿತು. ನಿರಂತರವಾಗಿ ವಿಕೆಟ್ಗಳನ್ನು ಕಳೆದುಕೊಳ್ಳುತ್ತಾ ಸಾಗಿದ ಕೊಡವ ಟ್ರೈಬ್ 19.5 ಓವರ್ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 165 ರನ್ಗಳ ಗೌರವದ ಮೊತ್ತವನ್ನು ಪೇರಿಸಿತು. ಗೆಲುವಿನ ಮೊತ್ತವನ್ನು ಕಲೆಹಾಕುವಲ್ಲಿ ವಿಫಲವಾದ ರಾಯಲ್ ಟೈಗರ್ಸ್ ತಂಡ, ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 127 ರನ್ಗಳನ್ನಷ್ಟೆ ಮಾಡಲು ಶಕ್ತವಾಗಿ ಸೋಲಿಗೆ ಶರಣಾಯಿತು. ಕೊಡವ ಟ್ರೈಬ್ ತಂಡದ ಗ್ಯಾನ್ ಸೋಮಯ್ಯ ಅವರು…
ಮಡಿಕೇರಿ ಮೇ 4 NEWS DESK : ಕುತಂತ್ರದಿಂದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಹಿರಿಯರಿಗೆ ಗೌರವ ಅರ್ಪಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾμÉ, ಸಾಂಸ್ಕøತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು, ಕೊಡವ ಸಾಂಪ್ರದಾಯಿಕ “ಸಂಸ್ಕಾರ ಗನ್” ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು, ಟಿಪ್ಪು ಸಂಚಿನಿಂದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವರ ನರಮೇಧವನ್ನು ವಿಶ್ವ ರಾಷ್ಟ್ರಸಂಸ್ಥೆ ಯುಎನ್ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು.…
ವಿರಾಜಪೇಟೆ ಮೇ 4 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಚಿಣ್ಣರ ನಲಿಕಲಿ ಉಚಿತ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಸುಮಾರು 25 ದಿವಸಗಳ ಕಾಲ ನಡೆದ ಶಿಬಿರದಲ್ಲಿ ಮಕ್ಕಳಿಗೆ ಯೋಗ, ಕರಾಟೆ, ಕ್ರೀಡೆ, ಕಂಪ್ಯೂಟರ್ ಕಲಿಕೆ, ಡ್ಯಾನ್ಸ್, ಮ್ಯೂಸಿಕ್, ದೈಹಿಕ ಶಿಕ್ಷಣ, ಮುಂತಾದ ವಿಚಾರಗಳ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಮಾರೋಪದ ದಿನದಂದು ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ವೃದ್ಧಶ್ರಮದ ಹಿರಿಯರನ್ನು ಶಾಲೆಗೆ ಕರೆಯಿಸಿ ಶಾಲಾ ಮಕ್ಕಳಿಂದ ಮನೋರಂಜನಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಮಕ್ಕಳು ತಮ್ಮ ಕಾರ್ಯಕ್ರಮಗಳ ಮೂಲಕ ಹಿರಿಯರನ್ನು ರಂಜಿಸಿದರು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರು ಹಾಗೂ ಸಮಾಜ ಸೇವಕಿ ಪೂಜಾ ರವೀಂದ್ರ ಅವರು ಹಿರಿಯರನ್ನು ಸನ್ಮಾನಿಸಿ ಗೌರವಿಸಿದರು. ಮತ್ತು ಹೆಗ್ಗಳ ವೃದ್ಧಶ್ರಮಕ್ಕೆ ಏರ್ ಕೂಲರ್ ನ್ನು ಕೊಡುಗೆಯಾಗಿ ನೀಡಲಾಯಿತು. ನಂತರ ಶಾಲಾ ಮಕ್ಕಳನ್ನು ಹೆಗ್ಗಳದ ಗೋಲ್ಡನ್ ಬೀನ್ ರೆಸಾರ್ಟ್ ಗೆ ಕ್ಷೇತ್ರ ಭೇಟಿಗಾಗಿ ಕರೆದುಕೊಂಡು ಹೋಗಲಾಯಿತು. ಈ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿ ಪ್ರತಿಮಾ ರಂಜನ್, ಶಿಕ್ಷಕರು,…






