ಮಡಿಕೇರಿ ಮೇ 4 NEWS DESK : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 5 ರಿಂದ 7ರ ವರೆಗೆ ನಡೆಯಲಿದೆ. ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಮೇ 5 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮೇ 6 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ. ::: ನಾಗದರ್ಶನ ::: ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶದ ಪ್ರಯುಕ್ತ…
ಲೇಖಕ: admin
ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲೆಯ ಖಾಸಗಿ ಜಮೀನಿನಲ್ಲಿರುವ ಸರಕಾರಿ ಮರಗಳ ಸರ್ವೆ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸದಿದ್ದಲ್ಲಿ ಬೆಳೆಗಾರರ ಬೆಂಬಲದೊಂದಿಗೆ ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ವ್ಯಾಪಿ ಬೃಹತ್ ಹೋರಾಟವನ್ನು ರೂಪಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಅರಣ್ಯ ಅಧಿಕಾರಿಗಳು ಖಾಸಗಿ ಜಮೀನಿನಲ್ಲಿರುವ ಸರಕಾರಿ ಮರಗಳ ಪಟ್ಟಿ ಮಾಡಿ ಕಂದಾಯ ಇಲಾಖೆಗೆ ವರದಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ. ಜಿಲ್ಲೆಯ ಬೆಳೆಗಾರರಲ್ಲಿ ಗೊಂದಲ ಸೃಷ್ಟಿಸಿರುವ ಆದೇಶವನ್ನು ಸರಕಾರ ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ಜಿಲ್ಲೆಯ ಬೆಳೆಗಾರರು ಪರಿಸರಕ್ಕೆ ಪೂರಕವಾಗಿ ಮರಗಳನ್ನು ಸಂರಕ್ಷಿಸಿಕೊಂಡು ಬಂದಿದ್ದಾರೆ. ಯಾವುದೇ ದುರುದ್ದೇಶಕ್ಕೆ ಮರಗಳ ಹನನ ಮಾಡಿಲ್ಲ. ಕೊಡಗಿನ ಜನರ ಪರಿಸರ ಕಾಳಜಿಯಿಂದ ಅರಣ್ಯ ಪ್ರದೇಶ ಮತ್ತು ದೇವರಕಾಡುಗಳು ಸಂರಕ್ಷಿಸಲ್ಪಟ್ಟಿವೆ. ತೋಟ ಮಾಡುವಾಗಲೂ ಮರಗಳನ್ನು ಕಡಿಯುತ್ತಿಲ್ಲ, ಬದಲಿಗೆ ಹಸಿರನ್ನು ಕಾಪಾಡಿಕೊಂಡು ಬರಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರಕಾರ ಏಕಾಏಕಿ ಖಾಸಗಿ ಜಮೀನಿನಲ್ಲಿರುವ ಮರಗಳ ಸರ್ವೆ…
ಮಡಿಕೇರಿ ಮೇ 4 NEWS DESK : ಚಿಂಚಾ ಪಾನಕಕ್ಕೆ ಇನ್ನೊಂದು ಹೆಸರು ಹುಣಸೆ ಹಣ್ಣಿನ ಪಾನಕ ಎನ್ನಬಹುದು. 100 ಗ್ರಾಂ ಹುಣಸೆ ಹಣ್ಣು, 400 ಮಿಲಿ ಬೆಲ್ಲದ ಪುಡಿ, 10 ಗ್ರಾಂ ಜೀರಿಗೆ ಪುಡಿ, 5 ಗ್ರಾಂ ಕಾಳುಮೆಣಸಿನ ಪುಡಿ, 5 ಗ್ರಾಂ ಸೈಂದವ ಲವಣ ಬಳಕೆ ಮಾಡುವ ಮೂಲಕ ಚಿಂಚಾ ಪಾನಕ ತಯಾರಿಸಬಹುದಾಗಿದೆ. ಚಿಂಚಾ ಪಾನಕವನ್ನು ತಯಾರಿಸುವ ವಿಧಾನ :ಹುಣಸೆ ಹಣ್ಣನ್ನು ಅಗತ್ಯ ಪ್ರಮಾಣದ ನೀರಿನಲ್ಲಿ ಇಡೀ ರಾತ್ರಿ ನೆನೆಸಬೇಕು. ಮರುದಿನ ಬೆಳಗ್ಗೆ ಅದನ್ನು ಶುದ್ಧವಾದ ಕೈಗಳಿಂದ ಚೆನ್ನಾಗಿ ಹಿಸುಕಿ ಸೋಸಿಕೊಳ್ಳಬೇಕು. ಅಗತ್ಯ ಪ್ರಮಾಣದಷ್ಟು ನೀರನ್ನು ಪಾತ್ರೆಯಲ್ಲಿ ಹಾಕಿಕೊಂಡು ಹುಣಸೆ ಹಣ್ಣಿನ ಮಿಶ್ರಣವನ್ನು ನೀರಿನ ಪಾತ್ರೆಗೆ ಬೆರೆಸಬೇಕು. ಬೆಲ್ಲದ ಪುಡಿ ಹಾಗೂ ಜೀರಿಗೆ ಪುಡಿ, ಕಾಳುಮೆಣಸು, ಸೈಂದವ ಲವಣವನ್ನು ಬೆರೆಸುವ ಮೂಲಕ ಚಿಂಚಾ ಪಾನಕ ಸಿದ್ದಪಡಿಸಿಕೊಳ್ಳಬೇಕು. ಪ್ರತೀ ದಿನ ಪ್ರತಿಯೊಬ್ಬರೂ 50 ರಿಂದ 100 ಮಿಲಿ ಚಿಂಚಾ ಪಾನಕ ಸೇವಿಸುವುದರಿಂದ ಜೀರ್ಣ ಕ್ರಿಯೆ ಉತ್ತಮಗೊಳ್ಳುತ್ತದೆ. ಮಲಬದ್ಧತೆ ನಿವಾರಣೆಯಾಗುವುದು. ಶರೀರದ…
ಮಡಿಕೇರಿ ಮೇ 4 NEWS DESK : ಭದ್ರಾವತಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಅವರ ಪರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರೋಡ್ ಶೋ ನಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಸಚಿವ ಚೆಲುವರಾಯಸ್ವಾಮಿ ಮತ್ತು ಪಕ್ಷದ ಮುಖಂಡರು ಹಾಜರಿದ್ದರು.
ಸುಂಟಿಕೊಪ್ಪ ಮೇ 4 NEWS DESK : ಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷರಾಗಿ ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ವಿ.ಸುನೀಲ್ ಕುಮಾರ್(ಸ್ವಾಗತ್) ನೇಮಕಗೊಂಡಿದ್ದಾರೆ. ಸುಂಟಿಕೊಪ್ಪ ಮಧುರಮ್ಮ ಬಡಾವಣೆಯ ವೃಕ್ಷೋದ್ಭವ ಗಣಪತಿ ದೇವಸ್ಥಾನದ ಆವರಣದಲ್ಲಿ ರಮೇಶ್ ಶೇಟ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಾರ್ಷಿಕೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ ಪುಳಂಜನ ಕುಶಾಲಪ್ಪ, ಸಹಕಾರ್ಯದರ್ಶಿಯಾಗಿ ಶಿವರಾಮನ್,ಸಂಘಟನಾ ಕಾರ್ಯದರ್ಶಿಯಾಗಿ ನಿಖಿಲ್ ಹರೀಶ್, ಖಜಾಂಜಿಯಾಗಿ ಬಿ.ಎಸ್.ರಮೇಶ್, ಕಾರ್ಯಕಾರಿ ಸಮಿತಿ ಸದಸ್ಯರುಗಾಳಗಿ ಎ.ಶ್ರೀಧರ್ಕುಮಾರ್, ಮಹೇಶ್ ರೈ, ದಿವಾಕರ್ ಪೂಜಾರಿ, ದಿವಾಕರ್ ರೈ, ಕೆ..ಎನ್.ಪವಿ,ಬಿ.ಎಂ.ಸುರೇಶ್,ಸುರೇಶ್ಗೋಪಿ, ಲೋಕೇಶ್(ಲೋಕಿ), ಮಣಿಕಂಠ (ಮುನಿಯ),ಸುರೇಶ್ ಚಂದು,ಕಿಶೋರ್, ಬಿ.ಆರ್.ಸತೀಶ್, ವಿ.ಕೆ.ರಾಜ ಇವರುಗಳನ್ನು ದೇವಸ್ಥಾನದ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೇಮಕ ಮಾಡಲಾಯಿತು. ಈ ಸಂದರ್ಭ ಟ್ರಸ್ಟಿ ಕೆ.ಸುರೇಶ್ ಕುಮಾರ್, ಬಿ.ಎಸ್.ಸದಾಶಿವ ರೈ, ಮಾಜಿ ಅಧ್ಯಕ್ಷ ರಮೇಶ್ ಶೇಟ್ ಉಪಸ್ಥಿತರಿದ್ದರು. ದೇವಸ್ಥಾನ ಟ್ರಸ್ಟ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.ಲೋಕೇಶ್ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮೇ 3 NEWS DESK : ಇತ್ತೀಚಿನ ದಿನಗಳಲ್ಲಿ ದಾಖಲೆಯ ತಾಪಮಾನವನ್ನು ದಾಖಲಿಸಿಕೊಂಡಿದ್ದ ಕೊಡಗು ಜಿಲ್ಲೆಯಾದ್ಯಂತ ಇಂದು ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಯೂ ನಡೆದಿದೆ. ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ನಾಪೋಕ್ಲು, ಕುಶಾಲನಗರ, ಕೊಪ್ಪ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ರಭಸವಾಗಿ ಗಾಳಿ ಬೀಸಿದ ಪರಿಣಾಮ ಕೆಲವು ಕಡೆ ಹಾನಿ ಸಂಭವಿಸಿದೆ. ಸಿಡಿಲು ಬಡಿದು ಅಸ್ಸಾಂ ಮೂಲದ ತೋಟದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಪ್ರಮಾತ್ ಗರ್ಮಾನಿ(37) ಮೃತ ದುರ್ದೈವಿ. ಬೆಟ್ಟಗೇರಿ ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಾಗಿದ್ದ ಕಾರ್ಮಿಕ ಶುಕ್ರವಾರ ಸಂಜೆ ಮಳೆ ಸುರಿಯುವ ಸಂದರ್ಭ ಮನೆಯಿಂದ ಹೊರ ಬಂದಿದ್ದ ಎನ್ನಲಾಗಿದೆ. ಈ ವೇಳೆ ಸಿಡಿಲು ಬಡಿದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ತಕ್ಷಣವೇ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಅಷ್ಟೊತ್ತಿಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಘಟನೆ ಕುರಿತು…
MADIKERI MAY 3 NEWS DESK : H H Yaduveer Krishnadatta Chamaraja Wadiyar with Aadhyaveer Narasimharaja Wadiyar
ಮಡಿಕೇರಿ ಮೇ 3 NEWS DESK : ಮುಂಬೈನ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾಲಯದಲ್ಲಿ ನಡೆದ 43ನೇ ಇಂಡಿಯಾ ಮಾಸ್ಟರ್ ಆಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2024ರಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆ ತೋರಿದ್ದಾರೆ. ಜಿಲ್ಲೆಯ ಕ್ರೀಡಾಪಟು ಪಾಸುರ ಇಂದಿರಾ ಮುತ್ತಣ್ಣ ಅವರು ಭಾರದ ಗುಂಡು ಎಸೆತ ಮತ್ತು ರಿಲೇಯಲ್ಲಿ ಪ್ರಥಮ, ಡಿಸ್ಕಸ್ ಎಸೆತ ಹಾಗೂ ಜಾವಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಇನ್ನೊಬ್ಬರು ಕ್ರೀಡಾಪಟು ಮುಲ್ಲೆರ ಪೊನ್ನಮ್ಮ ಪೂವಣ್ಣ ಅವರು 100 ಮೀ. ಹಾಗೂ 200 ಮೀ. ಓಟ, ಭಾರದ ಗುಂಡು ಹಾಗೂ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿ ಕ್ರೀಡಾ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮಡಿಕೇರಿ ಮೇ 3 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶುಕ್ರವಾರದ ಎರಡನೇ ಪಂದ್ಯದಲ್ಲಿ ಕೊಡವ ವಾರಿಯರ್ಸ್ ತಂಡದ ವಿರುದ್ಧ ಎಂಟಿಬಿ ರಾಯಲ್ಸ್ ತಂಡಕ್ಕೆ 2 ವಿಕೆಟ್ಗಳ ಜಯ ದಾಖಲಿಸಿತು. ಕೊಡವ ವಾರಿಯರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 19 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಎಂಟಿಬಿ ರಾಯಲ್ಸ್ ತಂಡ 18 ಓವರ್ ಗಳಲ್ಲಿ 90 ರನ್ ದಾಖಲಿಸಿ ಜಯ ಸಾಧಿಸಿತು. ಸೋಮಣ್ಣ ಸಿ.ಎಂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.
ಮಡಿಕೇರಿ ಮೇ 3 NEWS DESK : ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ ಆಯುಷ್ ಪಾನಕ ಉತ್ತಮವಾಗಿದೆ. ಚಿಂಚಾ ಪಾನಕ ಮೂಲಕ ಶರೀರದ ದಾಹ ನಿವಾರಣೆ ಸಾಧ್ಯ ಎಂದು ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಶುಭ ರಾಜೇಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆಯಿಂದ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಚಿಂಚಾ ಪಾನಕ ಸಿದ್ಧಪಡಿಸುವ ಹಾಗೂ ಉಪಯೋಗಿಸುವ ಬಗೆಯನ್ನು ಪರಿಚಯಿಸಿದರು. ಬೇಸಿಗೆಯಲ್ಲಿ ಅಧಿಕ ಉಷ್ಣಾಂಶದಿಂದಾಗಿ ಜನಸಾಮಾನ್ಯರು ಸುಸ್ತಾಗುವ ಸಂಭವ ಅಧಿಕವಾಗಿರುತ್ತದೆ. ದೇಹವನ್ನು ತಂಪು ಮಾಡುವ ಆಹಾರದಿಂದ ತಮ್ಮ ಆರೋಗ್ಯವನ್ನು ತಾವು ಕಾಯ್ದುಕೊಳ್ಳಬೇಕು. ಸರಿಯಾದ ಸಮಯಕ್ಕೆ ದೇಹಕ್ಕೆ ಸರಿಯಾಗಿ ಊಟ ಹಾಗೂ ಪಾನೀಯ ಸೇವನೆ ಮಾಡುವ ಮೂಲಕ ಜೀವನ ಶೈಲಿಯನ್ನು ಉತ್ತಮವಾಗಿಸಿಕೊಳ್ಳಬೇಕು ಎಂದರು. ಆಯುಷ್ ಇಲಾಖೆಯ ಮತ್ತೋರ್ವ ವೈದ್ಯಾಧಿಕಾರಿ ಡಾ.ಪಲ್ಲವಿ…






