ಲೇಖಕ: admin

ಮಡಿಕೇರಿ ಮೇ 1 NEWS DESK : ಕೊಡಗು ಜಿಲ್ಲಾ ಎಐಟಿಯುಸಿ ಕಾರ್ಮಿಕ ಸಂಘಟನೆ ವತಿಯಿಂದ ಬಿಳಿಗೇರಿ ಗ್ರಾಮದಲ್ಲಿ ವಿಶ್ವ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರ ನೇತೃತ್ವದಲ್ಲಿ ಟಾಟಾ ಸಂಸ್ಥೆಯ ಜಂಬೂರು ತೋಟದ ಕಾರ್ಮಿಕರ ಸಮ್ಮುಖದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭ ಮಾತನಾಡಿದ ಹೆಚ್.ಎಂ.ಸೋಮಪ್ಪ ಅವರು ಕಾರ್ಮಿಕರ ಶ್ರಮದಿಂದ ಇಂದು ದೇಶ ಪ್ರಗತಿಯನ್ನು ಸಾಧಿಸುತ್ತಿದೆ. ಕಾರ್ಮಿಕ ವರ್ಗ ಸದಾ ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕೆಂದು ಕರೆ ನೀಡಿದರು. ನೆರೆದಿದ್ದ ಕಾರ್ಮಿಕರು ಶ್ರಮಿಕ ವರ್ಗದ ಪರ ಘೋಷಣೆಗಳನ್ನು ಕೂಗಿದರು. ಹೋಬಳಿ ಅಧ್ಯಕ್ಷ ಗಣೇಶ, ಕಾರ್ಮಿಕ ನಾಯಕ ಲೋಕೇಶ್, ಸೂರ್ಯ, ಪ್ರೇಮ, ಸಂಜೀವ, ಕೆ.ಎಂ.ನಾರಾಯಣ, ರಮೇಶ್ ಮತ್ತಿತರ ಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಮೇ 1 NEWS DESK : ಸ್ಕೌಟ್ಸ್, ಗೈಡ್ಸ್  ರಾಜ್ಯ ಸಂಸ್ಥೆಯ ಉಪಾಧ್ಯಕ್ಷರಾದ ಎ.ಎನ್.ಮಹೇಶ್ ಅವರು ಮಡಿಕೇರಿಯ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್, ಗೈಡ್ಸ್ ಭವನಕ್ಕೆ ಭೇಟಿ ನೀಡಿದರು. ಸಂಸ್ಥೆಯ ಶತಮಾನೋತ್ಸವ ಭವನದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗವನ್ನು ಪರಿಶೀಲಿಸಿದರು. ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾಹಿತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಮೇ 1 NEWS DESK  : ವಿಶ್ವವ್ಯಾಪಿಯಾಗಿರುವ ಸ್ಕೌಟ್, ಗೈಡ್ಸ್ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವ ಪೀಳಿಗೆಯಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ, ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದರೊಂದಿಗೆ ಯುವ ಸಮೂಹದಲ್ಲಿ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆ ವೃದ್ಧಿಗೆ ಸಹಕಾರಿಯಾಗಿದೆ ಎಂದು ಸ್ಕೌಟ್ಸ್, ಗೈಡ್ಸ್ ನ ರಾಜ್ಯ ಸಂಸ್ಥೆಯ ಉಪಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು. ಮಡಿಕೇರಿ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಚೇರು ಆವರಣದಲ್ಲಿ ನಿರ್ಮಿಸಲುದ್ದೇಶಿಸಿರುವ ಶತಮಾನೋತ್ಸವ ಭವನ ನಿರ್ಮಾಣಕ್ಕೆ ರಾಜ್ಯ ಸಂಸ್ಥೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಸೂಕ್ತ ಅನುದಾನ ಪಡೆದು ಸ್ಕೌಟ್ಸ್ ಮತ್ತು ಗೈಡ್ಸ್ ನ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸಂಸ್ಥೆಯ ವತಿಯಿಂದ ಸಹಕರಿಸಲಾಗುವುದು ಎಂದರು. ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ…

Read More

ಮಡಿಕೇರಿ ಮೇ 1  NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಮೇ 2 ರಂದು ಸ್ವಲಾತ್ ಮಜ್ಲಿಸ್ ನಡೆಯಲಿದೆ. ಮಗ್ರಿಬ್ ನಮಾಝಿನ ಬಳಿಕ ಮುದರ್ರಿಸ್ ಎಮ್ಮೆಮಾಡು ಹಂಝ ಸಖಾಫಿ ಮಲಪ್ಪುರಂ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಯ್ಯಿದ್ ಸಮೀಹ್ ಅನ್ವಾರಿ ಅಲ್ ಅಹ್ಸನಿ (ಮುದರ್ರಿಸ್ ಕೀಚೇರಿ) ದುಆಃ ನೆರವೇರಿಸಲಿದ್ದಾರೆ. ಎ.ಎಂ.ನೌಶಾದ್ ಬಾಖವಿ ಕೊಲ್ಲಂ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಯ್ಯಿದ್ ನುಅಮಾನ್ ಸಅದಿ ಅಲ್ ಹೈದರೂಸಿ ಎಮ್ಮೆಮಾಡು, ಸಯ್ಯಿದ್ ಝಕರಿಯಾ ಸಅದಿ ಅಲ್ ಹಾದಿ, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಹಸೈನಾರ್ ಕನ್ನಡಿಯಂಡ, ಹಳೇ ತಾಲೂಕು ಖತೀಬ್ ಹಾಫಿಳ್ ಶಬೀರ್ ಹಿಮಮಿ, ರಿಯಾಝ್ ಫೈಝಿ ಎಮ್ಮೆಮಾಡು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮೇ 1  NEWS DESK : ಮೂಡಬಿದಿರೆಯಲ್ಲಿ ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭಗೊಳ್ಳಲಿದೆ. ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸುವ ‘ಪುಸ್ತಕ ಪೋಷಕ ಯೋಜನೆ’, ‘ಮೊಬೈಲ್ ಬಿಡಿ ಪುಸ್ತಕ ಹಿಡಿ’ ಇಂತಹ ಹಲವಾರು ಯೋಜನೆಗಳನ್ನು ಕಾರ್ಯಗತ ಮಾಡಿ ಜನಮಾನಸದಲ್ಲಿ ಗುರುತಿಸಿಕೊಂಡಿದೆ. ಇದೀಗ ಪುಸ್ತಕ ಮನೆಯ ಎರಡನೇ ಶಾಖೆಯು ಮೂಡಬಿದಿರೆಯಲ್ಲಿ ಶುಭಾರಂಭಗೊಳ್ಳುತ್ತಿದ್ದು, ಪುಸ್ತಕಗಳು ಹಾಗೂ ಎಲ್ಲಾ ರೀತಿಯ ಉಡುಗೊರೆಗಳ ಮೇಲೆ ವಿಶೇಷ ರಿಯಾಯಿತಿ ಇದ್ದು, ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Read More

ಮಡಿಕೇರಿ ಮೇ 1 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊದಲ ದಿನ ನಡೆದ ಟೀಮ್ ಕೊಡವ ಟ್ರೈಬ್ ಮತ್ತು ಕೂರ್ಗ್ ಬ್ಲಾಸ್ಟರ್ಸ್ ತಂಡಗಳ ನಡುವಿನ ರೋಚಕ ಪಂದ್ಯದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ 4 ವಿಕೆಟ್‍ಗಳ ಗೆಲುವನ್ನು ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ಕೊಡವ ಟ್ರೈಬ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್‍ಗಳನ್ನು ಮಾಡುವ ಮೂಲಕ ಎದುರಾಳಿ ತಂಡಕ್ಕೆ 158 ರನ್‍ಗಳ ಗೆಲುವಿನ ಗುರಿಯನ್ನು ನೀಡಿತು. ಇದಕ್ಕೆ ಪ್ರತಿಯಾಗಿ ಕೂರ್ಗ್ ಬ್ಲಾಸ್ಟರ್ಸ್ ತಂಡ 17.4 ಓವರ್‍ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್‍ಗಳನ್ನು ಕಲೆ ಹಾಕುವ ಮೂಲಕ ಗೆಲುವು ಸಾಧಿಸಿತು. ::: ಕಾರ್ತಿಕ್ ಪಂದ್ಯ ಪುರುಷೋತ್ತಮ ::: ವಿಜೇತ ತಂಡದ ಪರವಾಗಿ ಆಲ್ ರೌಂಡ್ ಆಟದ ಪ್ರದರ್ಶನ ನೀಡಿದ ಕಾರ್ತಿಕ್ ಅವರು 14…

Read More

ಮಡಿಕೇರಿ ಮೇ 1 NEWS DESK : ಕೊಡಗಿನ ಜನರ ಬಹುಕಾಲದ ಬೇಡಿಕೆಯಾಗಿರುವ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯ ಕುರಿತು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಆ ಮೂಲಕ ಕ್ರೀಡಾಸಕ್ತರ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸಾಧ್ಯವಿದೆ ಎಂದು ಹೈಕೋರ್ಟ್ ಹಿರಿಯ ವಕೀಲ ಮುಕ್ಕಾಟಿರ ತಿಮ್ಮಯ್ಯ ನಾಣಯ್ಯ ತಿಳಿಸಿದ್ದಾರೆ. ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಯುವ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು. ಸಣ್ಣ ಜಿಲ್ಲೆಯಾಗಿರುವ ಕೊಡಗನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಇಡೀ ಪ್ರಪಂಚಕ್ಕೆ ತಿಳಿಯುವಂತೆ ಮಾಡಿದ್ದಾರೆ. ಇದೀಗ ಜಿಲ್ಲೆಯ ಕ್ರೀಡಾಪಟುಗಳು ಹಾಗೂ ಯುವ ಪ್ರತಿಭೆಗಳು ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಹಾಗೂ ಸೈನಿಕರನ್ನು ಕೊಡುಗೆಯಾಗಿ ನೀಡಿದ ಹೆಗ್ಗಳಿಕೆ ಕೊಡಗು ಜಿಲ್ಲೆಯದ್ದಾಗಿದೆ. ದೇಶದ ಮುಂದಿನ ಭವಿಷ್ಯವಾಗಿರುವ…

Read More

ಕುಶಾಲನಗರ ಮೇ 1 NEWS DESK : ಸರ್ಕಾರಿ ಅಧಿಕಾರಿಗಳು ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವುದರ ಮೂಲಕ ಸಮಾಜದಲ್ಲಿ ಗೌರವ ಸಂಪಾದನೆ ಮಾಡಬೇಕು ಎಂದು ಡಿಡಿಪಿಐ ಎಂ.ಚಂದ್ರಕಾಂತ್ ಹೇಳಿದರು. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಉ.ರಾ.ನಾಗೇಶ್ ಅವರಿಗೆ ಶಾಲೆಯ ವತಿಯಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರತಿ ಸರ್ಕಾರಿ ನೌಕರರಿಗೆ ನಿವೃತ್ತಿ ಅನಿವಾರ್ಯ. ಯಾವುದೇ ಇಲಾಖೆಯಲ್ಲಿ ತಮ್ಮ ಕೆಲಸವನ್ನು ಯಶಸ್ವಿಯಾಗಬೇಕಾದರೆ ಮಾನವೀಯತೆ ಮತ್ತು ಸರಳತೆಯಿರಬೇಕು. ವೃತ್ತಿ ಮತ್ತು ಪ್ರವೃತ್ತಿಯಿಂದ ಉ.ರಾ.ನಾಗೇಶ್ ಅವರು ಉತ್ತಮ ಹೆಸರು ಗಳಿಸಿದ್ದಾರೆ ಎಂದರು. ಜಿಲ್ಲಾ ಜನಪದ ಪರಿಷತ್ ನ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಚಿತ್ರಕಲಾ ಕ್ಷೇತ್ರದಲ್ಲಿ ಉತ್ತಮ ಪ್ರಾವೀಣ್ಯತೆ ಹೊಂದುವ ಮೂಲಕ ಉತ್ತಮ ಶಿಕ್ಷಕರೆನಿಸಿಕೊಂಡಿರುವ ಉ.ರಾ.ನಾಗೇಶ್ ನಿವೃತ್ತಿ ನಂತರ ಚಿತ್ರಕಲಾ ಕ್ಷೇತ್ರದಲ್ಲಿ ಇನ್ನೂ ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದರು. ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಸರಳ…

Read More

ವಿರಾಜಪೇಟೆ ಮೇ 1 NEWS DESK : ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎ ಸಿ ಘಟಕ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಕಾಲೇಜಿನಲ್ಲಿ ಪಿಸಿಓಡಿ ಮತ್ತು ಸರ್ವಿಕಲ್ ಕ್ಯಾನ್ಸರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಕ್ರೆಡೋ ಮೆಡಿಕಲ್ ಸೆಂಟರ್ ನ ವೈದ್ಯರಾದ ಡಾ. ಮೇಜರ್ ಅಲ್ಲಂ ಪ್ರಭು ವಿದ್ಯಾರ್ಥಿನಿಯರಿಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಪ್ರಸ್ತುತ ಯುಗದಲ್ಲಿ ಆಹಾರ ಕ್ರಮಗಳು ಬದಲಾಗಿದ್ದು, ನಿಯಮಿತ ಆಹಾರ ಸೇವನೆ, ಯೋಗದಿಂದ ಮತ್ತು ಶುಚಿತ್ವದಿಂದ ಮಾತ್ರ ಆರೋಗ್ಯ ರಕ್ಷಣೆ ಸಾಧ್ಯ ಎಂದರು. ಸರ್ವಿಕಲ್ ಕ್ಯಾನ್ಸರ್ ಬಗ್ಗೆ, ಅದರ ನಿಯಂತ್ರಣ ಕ್ರಮಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಆರೋಗ್ಯವೇ ಭಾಗ್ಯ ಎಂಬ ಮಾತಿನಂತೆ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು. ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ನಾವು ಶುಚಿಯಾಗಿಡಬೇಕು ಎಂದು ಕಿವಿಮಾತು ಹೇಳಿದರು.…

Read More

ಮಡಿಕೇರಿ ಮೇ 1 NEWS DESK  : ಮುಂಬೈ ಯ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾನಿಲಯದಲ್ಲಿ ನಡೆದ 43ನೇ ಇಂಡಿಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024 ರಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ. ಮೂಲತಃ ಕೊಡಗು ಜಿಲ್ಲೆಯವರಾದ ಮುಲ್ಲೆರ ಪೂನ್ನಮ್ಮ ಪೂವಣ್ಣ 100 ಮೀ ಮತ್ತು 200 ಮೀ ಓಟದಲ್ಲಿ ಪ್ರಥಮ, ಶೋಟ್ ಪುಟ್ ನಲ್ಲಿ ಪ್ರಥಮ, ಜಾವಲಿನ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಜಿಲ್ಲೆಯವರೇ ಆದ ಮತ್ತೋರ್ವ ಕ್ರೀಡಾಪಟು ಪಾಸುರ ಇಂದಿರಾ ಮುತ್ತಣ್ಣ ಶಾಟ್‍ಪುಟ್ ರಿಲೇ ನಲ್ಲಿ ಪ್ರಥಮ, ಜಾವಲಿನ್ ಮತ್ತು ಡಿಸ್ಕಸ್ ಥ್ರೋ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

Read More