ಮಡಿಕೇರಿ ಮೇ 16 NEWS DESK : ಕುಶಾಲನಗರ ಕೊಪ್ಪ ಗೇಟ್ ಬಳಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸಂದರ್ಭದಲ್ಲಿ ಶಾಸಕ ಡಾ. ಮಂತರ್ ಗೌಡ, ಕುಶಾಲನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮುಖಂಡರಾದ ಕೆ.ಪಿ.ಚಂದ್ರಕಲಾ, ಆರ್.ಪಿ.ಚಂದ್ರಶೇಖರ್ ಸೇರಿದಂತೆ ಇತರ ಕಾರ್ಯಕರ್ತರು ಡಾ. ಜಿ.ಪರಮೇಶ್ವರ್ ಅವರಿಗೆ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಪುರಸಭೆ ಸದಸ್ಯ ಶಿವಶಂಕರ್. ದಿನೇಶ್ ಪ್ರಕಾಶ್. ನವೀನ್. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್. ಕೆ.ಪಿ.ಸಿ.ಸಿ ಸದಸ್ಯರಾದ ಮಂಜುನಾಥ್, ಹೆಬ್ಬಾಲೆ ರಂಜು, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್, ಸಾಜಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು. ಇದಕ್ಕೂ ಮುನ್ನ ಮಾದಪುರ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಹಂಸ ಹಾಗೂ ಸಮರ್ಪಡೆ ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಟಿ.ಎಂ.ಅಯ್ಯಪ್ಪ, ಕೆ.ಎ.ಯಾಕೂಬ್ , ಸುರಯ್ಯ ಅಬ್ರಾರ್, ಜುಲೆಕಾಬಿ, ಶೀಲಾ ಡಿಸೋಜಾ, ಕೆ.ಎ.ಆದಮ್,…
ಲೇಖಕ: admin
ಬೆಂಗಳೂರು ಮೇ 15 NEWS DESK : ಪಶ್ಚಿಮ ಘಟ್ಟಗಳಂತಹ ಕಾಡುಗಳನ್ನು ನಾಶಪಡಿಸುವ ಯೋಜನೆಗಳ ಚಿತ್ರಣವಿರುವ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ಎಂಥಾ ಕಥೆ ಮಾರಾಯ’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಚೆನ್ನೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆಗೆ ಪಾತ್ರವಾಗಿದ್ದ ‘ಎಂಥಾ ಕಥೆ ಮಾರಾಯ’ ಸಿನಿಮಾ ಪ್ರಸ್ತುತ ಏರ್ಟೆಲ್ ಎಕ್ಸ್ಟ್ರೀಮ್, ಹಂಗಾಮಾ ಪ್ಲೇ, ಒಟಿಟಿ ಪ್ಲೇಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಸಿನಿಮಾ ಬೆಂಗಳೂರಿನ ಪ್ರಸಕ್ತ ನೀರಿನ ಬಿಕ್ಕಟ್ಟನ್ನು ಎತ್ತಿ ತೋರಿಸುತ್ತದೆ ಮತ್ತು ಜಾಗತಿಕ ತಾಪಮಾನದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದೆ. ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ಅವರು ತಾವೇ ಬರೆದಿರುವ ‘ಕಾಡಿನ ನೆಂಟರು‘ ಕಥಾಸಂಕಲನವನ್ನು ಆಧರಿಸಿ “ಎಂಥಾ ಕಥೆ ಮಾರಾಯ” ಸಿನಿಮಾವನ್ನು ತೆರೆಗೆ ತಂದಿದ್ದಾರೆ.
ಸಿಂಗಾಪುರ ಮೇ 15 NEWS DESK : ಸಿಂಗಾಪುರದ 4ನೇ ಪ್ರಧಾನಮಂತ್ರಿಯಾಗಿ ಅರ್ಥಶಾಸ್ತ್ರಜ್ಞ ಲಾರೆನ್ಸ್ ವಾಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 72 ವರ್ಷದ ಲೀ ಹ್ಸಿಯೆನ್ ಲೂಂಗ್ ಎರಡು ದಶಕಗಳ ನಂತರ ಅಧಿಕಾರ ತ್ಯಜಿಸಿದ ನಂತರ ಅವರ ಉತ್ತರಾಧಿಕಾರಿಯಾಗಿ 51ವರ್ಷದ ವಾಂಗ್ ಅಧಿಕಾರ ವಹಿಸಿಕೊಂಡರು. ಇಬ್ಬರೂ ಆಡಳಿತಾರೂಢ ಪೀಪಲ್ಸ್ ಆಕ್ಷನ್ ಪಾರ್ಟಿ (PAP) ಗೆ ಸೇರಿದವರು.
ನವದೆಹಲಿ ಮೇ 15 NEWS DESK : ಗುಜರಾತ್ ನ ಮಾಜಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕಮಲಾ ಬೆನಿವಾಲ್ (97) ಅವರು ಇಂದು ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘಾವಧಿಯ ಅನಾರೋಗ್ಯದ ಕಾರಣ ಬೆನಿವಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಪಲ್ನಾಡು ಮೇ 15 NEWS DESK : ಲಾರಿ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಸಂಪೂರ್ಣ ಅಗ್ನಿಗಾಹುತಿಯಾಗಿ ಆರು ಮಂದಿ ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ. ಈ ಭೀಕರ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಲಕಲುರಿಪೆಟ್ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ. ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು. ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು. ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು. ಎಸ್ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು. ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು. ಕಾರು ಚಾಲಕ ಕಾರ್ತಿಕ್ನನ್ನು ಕೂಡಲೇ ಬಂಧಿಸಬೇಕು. ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು. ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ…
ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೂರ್ವ ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. `ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 42 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ನಾಯಿ ಕಡಿತಕ್ಕೆ 3,144, ಹಾವು ಕಡಿತಕ್ಕೆ 89 ಮಂದಿ, ಬೇಧಿ(ಡಯೇರಿಯಾ) ಪ್ರಕರಣಗಳು 1,486, ಕಾಲರಾ 2 ಪ್ರಕರಣ,…
ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಮತ್ತು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ 21ನೇ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭವು ಮೇ 21 ರಂದು ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ(ಕುಶಾಲನಗರ ಹಾರಂಗಿ ರಸ್ತೆ) ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಎಂ.ಪ್ರವೀಣ್ಕುಮಾರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಅಧ್ಯಾಪಕರು, ಸಾಹಿತಿ ಮಾರುತಿ ದಾಸಣ್ಣವರ್, ಕುಶಾಲನಗರ ಸಾಹಿತಿ ಮತ್ತು ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಸುನಿತಾ ಲೋಕೇಶ್, ಕುಶಾಲನಗರ ಸರ್ಕಾರ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಸುನೀಲ್ ಕುಮಾರ್, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ…
ಮಡಿಕೇರಿ ಮೇ 15 NEWS DESK : ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮೇ, 16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಮೇ 15 NEWS DESK : ಶ್ರೀಮಂಗಲದ ಕುರ್ಚಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಚೋಕಿರ ಕಲ್ಪನ ತಿಮ್ಮಯ್ಯ ನೇತೃತ್ವದಲ್ಲಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ವಲಯ ಅಧ್ಯಕ್ಷ ಪೆಲ್ವಿನ್ ಪೂಣಚ್ಚ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಭ ಮಾತನಾಡಿದ ಕಾರ್ಯಕರ್ತರು ಶಾಸಕ ಪೊನ್ನಣ್ಣ ಅವರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗ್ರಾ.ಪಂ ಸದಸ್ಯ ಸುದಿ ಪೊನ್ನಪ್ಪ, ಪ್ರಮುಖರಾದ ಚೋಕಿರ ತಿಮ್ಮಯ್ಯ, ಪ್ರಶಾಂತ್ ಕಾಳಿಮಾಡ, ಮುಕ್ಕಾಟ್ಟಿರ ಅಯ್ಯಪ್ಪ, ಬೋಸ್ ಮಾದಪ್ಪ, ಮಚ್ಚಮಾಡ ಉದಯ ಹಾಜರಿದ್ದರು.






