ಮಡಿಕೇರಿ ಏ.30 NEWS DESK : ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್ಗಳು ಮತ್ತು ಊರು ಹಬ್ಬಗಳ ಆಚರಣೆಯಲ್ಲಿದ್ದು, ಬೇಸಿಗೆ ಕಾಲವಾಗಿರುವುದರಿಂದ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲಾರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಎಲ್ಲಾ ಇಲಾಖೆಗಳಿಗೆ ಸೂಚಿಸಿದ್ದಾರೆ. ಮದುವೆ ಸಮಾರಂಭಗಳು, ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ…
ಲೇಖಕ: admin
ಮಡಿಕೇರಿ ಏ.30 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಮೇ 1 ರಂದು ಬೆಳಿಗ್ಗೆ 11 ಗಂಟೆಗೆ ದುಆಃ ಮಜ್ಲಿಸ್ ನಡೆಯಲಿದೆ. ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಫಝಲ್ ಕೊಯಮ್ಮ ತಂಙಳ್ (ಕೂರ ತಂಙಳ್) ವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಮತಪ್ರವಚನ ಕಾರ್ಯಕ್ರಮ ನಡೆಯಲಿದ್ದು, ನೌಫಲ್ ಸಖಾಫಿ ಕಳಸ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಯ್ಯಿದ್ ಸೈಫುದ್ದೀನ್ ಸಖಾಫಿ ಅಲ್ ಹೈದರೂಸಿ, ಹಾಫಿಳ್ ಫಝಲುರ್ರಹ್ಮಾನ್ ಸಖಾಫಿ, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಅಬ್ದುಲ್ಲಾ ಪೊಟ್ಟಂಡ, ಕೊಪ್ಪತ್ತಾಣೆ ಮಸೀದಿ ಇಮಾಂ ಅಶ್ರಫ್ ಸಖಾಫಿ ಕನ್ನಡಿಯಂಡ, ಅಯ್ಯಂಗೇರಿ ಖತೀಬರಾದ ಯೂನುಸ್ ಮರ್ಝೂಖಿ ಸಖಾಫಿ, ಎಮ್ಮೆಮಾಡು ರೇಂಜ್ ಅಧ್ಯಕ್ಷ ಅಬ್ದುಲ್ ರಝಾಖ್ ಸಅದಿ ಪಾಲ್ಗೊಳ್ಳಲಿದ್ದಾರೆ.
ಕಡಂಗ ಏ.30 NEWS DESK : ಕಡಂಗ ಬದ್ರಿಯ ಮಸೀದಿಯಲ್ಲಿ ಮೇ 1 ರಂದು ಬದರ್ ಮೌಲಿದ್ ಮಜ್ಲಿಸ್ ವಾರ್ಷಿಕ ಹಾಗೂ ದರ್ಸ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮದ್ಯಾಹ್ನ 2 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಳ್, ಮುಖ ರಾದ ಇಬ್ರಾಹಿಂ ಫೈಝಿ ಕೇರಳ, ಅಶ್ರಫ್ ಅಹ್ಸನಿ ವಿರಾಜಪೇಟೆ, ಅಬ್ದುಲ್ ಸತ್ತಾರ್ ಅಹ್ಸನಿ ಅಲ್-ಕಾಮಿಲ್ ಸಖಾಫಿ ಮುದರ್ರಿಸ್ ಬದ್ರಿಯ ಕಡ0ಗ ಭಾಗವಹಿಸಲಿದ್ದಾರೆ ಎಂದು ಜಮಹತ್ ಕಾರ್ಯದರ್ಶಿ ರಾಶಿದ್ ತಿಳಿಸಿದ್ದಾರೆ. ವರದಿ : ನೌಫಲ್ ಕಡಂಗ
ಮಡಿಕೇರಿ ಏ.30 NEWS DESK : ರಾಮನಾಥಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಇಂದು ಶ್ರೀ ಸುಬ್ರಹ್ಮಣ್ಯಸ್ವಾಮಿ ಉತ್ಸವಮೂರ್ತಿ ಬೆಳ್ಳಿ ರಥೋತ್ಸವ, ಸರ್ವಸೇವಾ ಉತ್ಸವ, ವೈಮಾಳಿಗೆ ಉತ್ಸವ ವನ್ನು ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಅಧ್ಯಕ್ಷರು ಎಂ.ಎನ್. ಕುಟುಂಬಸ್ಥರು ನೇರವೇರಿಸಿದರು. ಈ ಸಂದರ್ಭದಲ್ಲಿ ಶರಣ ದೊಡ್ಡಕಾಡನೂರು ಚಂದ್ರಶೇಖರ್, ಹೆಬ್ಬಾಲೆ ಶಿವಪ್ಪ, ಬಸವಪಟ್ಟಣ ಹೇಮಂತ್ ಕುಮಾರ್, ಆರ್.ಕೆ. ಚೇತನಕುಮಾರಸ್ವಾಮಿ, ಕಿರನಲ್ಲಿ ನಿಕೀತ್ ಮುಂತಾದವರು ಸೇವೆಯನ್ನು ಸಲ್ಲಿಸಿದರು.
ಸೋಮವಾರಪೇಟೆ ಏ.30 NEWS DESK : ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿನಾಡು ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸುಗ್ಗಿ ಉತ್ಸವದ ಕೊನೆ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು. ಸುಗ್ಗಿ ಕುಣಿತ, ಸುಗ್ಗಿಹಾಡುವುದು, ಬಿಲ್ಲು ತೂಗುವುದು ಸೇರಿದಂತೆ ವಿವಿಧ ಜಾನಪದ ನೃತ್ಯಗಳು ನಡೆದವು. 18 ಗ್ರಾಮಗಳ ನವ ದಂಪತಿಗಳು ಮದುವೆ ಕಾಣಿಕೆಯನ್ನು ಸಲ್ಲಿಸಿದರು. ಹರಕೆ ತಿರಿಸುವುದು ಮತ್ತು ಹರಕೆ ಮಾಡಿಕೊಳ್ಳುವ ಕಾರ್ಯಗಳು ನಡೆದವು. ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ,…
ಮಡಿಕೇರಿ ಏ.30 NEWS DESK : ಪರಸ್ಪರ ಸೌಹಾರ್ದತೆ, ಸಹಬಾಳ್ವೆ, ಸಹನೆಯಿಂದ ನಾವೆಲ್ಲರೂ ಒಂದೇ ಎಂಬ ಮನೋಭಾವನೆ ಬೆಳೆಸಿಕೊಂಡರೆ ಸಮಾಜದ ಹಾಗೂ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹೇಳಿದರು. ಎಮ್ಮೆಮಾಡು ಉರೂಸ್ ಪ್ರಯುಕ್ತ ನಡೆದ ಸಾರ್ವಜನಿಕ ಸಮ್ಮೇಳನದಲ್ಲಿ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ತಿಳುವಳಿಕೆಯ ಕೊರತೆಯಿಂದ ಧರ್ಮ- ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಹಿಂದೂ ಮುಸಲ್ಮಾನರ ಸೌಹಾರ್ದತೆಗೆ ಧಕ್ಕೆ ಆಗಬಾರದು.ಮುಸಲ್ಮಾನರು ಉದಾತ್ತವಾದ, ಆಧ್ಯಾತ್ಮಿಕ ಚಿಂತನೆಯಿಂದ ಬೆಳೆದು ಬಂದಿದ್ದಾರೆ. ಧರ್ಮದ ಬಗ್ಗೆಗಿನ ಅಜ್ಞಾನದಿಂದ ಸಂಘರ್ಷ ಸೃಷ್ಟಿಯಾಗುತ್ತಿದೆ. ಸಮಾಜಕ್ಕೆ ಆತಂಕ ತಂದೊಡ್ಡುವ ಕೆಲಸವನ್ನು ಯಾವ ಯುವಕರು ಮಾಡಬಾರದು ಎಂದರು. ಇಂದು ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಇದರಿಂದ ನಾಡಿಗೆ, ರಾಜ್ಯಕ್ಕೆ ತೊಂದರೆಯಾಗಲಿದೆ. ಆದ್ದರಿಂದ ನಿರಂತರ ಜಾಗೃತಿ ಕೆಲಸ ಮೂಡಿಸುವ ಕೆಲಸವನ್ನು ಮಾಡಬೇಕಿದೆ. ಮನುಷ್ಯತ್ವವನ್ನು ಕಳೆದುಕೊಳ್ಳುವಂತಾಗಬಾರದು. ಪ್ರತಿ ಗ್ರಾಮ, ರಾಜ್ಯವನ್ನು ಗಾಂಜಾ ಮುಕ್ತವನ್ನಾಗಿ ಮಾಡಲು ಎಲ್ಲರೂ ಪಣ ತೊಡಬೇಕು ಎಂದರು.…
ಮಡಿಕೇರಿ ಏ.30 NEWS DESK : ಕೊಡಗಿನ ಇತಿಹಾಸ ಪ್ರಸಿದ್ಧ ಬೇತು ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬವು ಮೇ 2 ರಿಂದ 4ರ ವರೆಗೆ ನಡೆಯಲಿದೆ. ಮೇ 2 ರಂದು ರಾತ್ರಿ 9 ಗಂಟೆಗೆ ಶ್ರೀ ದೇವರನ್ನು ಕೊಟ್ಟಿ ಹಾಡುವುದು, ಮೇ 3 ರಂದು ಬೆಳಿಗ್ಗೆ 11.30 ಗಂಟೆಗೆ ಎತ್ತು ಪೋರಾಟ, ರಾತ್ರಿ 9.30 ಗಂಟೆಗೆ ಶ್ರೀ ಶಾಸ್ತಾವು ದೇವರ ದೀಪಾರಾಧನೆ [ ಅಂದಿ ಬೊಳಕು] ನಡೆಯಲಿದೆ. ಮೇ 4 ರಂದು ಬೆಳಿಗ್ಗೆ 9.30 ಗಟೆಗೆ ಶ್ರೀ ಕಲ್ಯಾಟ ಅಜ್ಜಪ್ಪ ದೇವರ ಕೋಲ ನಡೆಯಲಿದ್ದು, ಅಪರಾಹ್ನ 12.30 ಗಂಟೆಗೆ ಅನ್ನದಾನ ನಡೆಯಲಿದೆ. ಮಧ್ಯಾಹ್ನ1 ಗಂಟೆಗೆ ಶ್ರೀ ವಿಷ್ಣ ಮೂರ್ತಿದೇವರ ಕೋಲ ನಡೆಯಲಿದ್ದು, ನಾಡಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ತಕ್ಕ ಮುಖುಸ್ಥರು ಹಾಗೂ ಆಡಳಿತ ಮಂಡಳಿ ಕೋರಿದೆ.
ಮಡಿಕೇರಿ ಏ.30 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮೇ 1 ರಂದು ಮಡಿಕೇರಿಯಲ್ಲಿ ಲೆದರ್ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿ ನಡೆಯಲಿದೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹಿರಿಯ ವಕೀಲ ಮುಕ್ಕಾಟಿರ ಟಿ.ನಾಣಯ್ಯ, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಪಾಲ್ಗೊಳ್ಳಲಿದ್ದಾರೆ. 10 ಫ್ರಾಂಚೈಸಿಗಳನ್ನು ಒಳಗೊಂಡಂತೆ ಇದೇ ಪ್ರಥಮ ಬಾರಿಗೆ ಲೆದರ್ ಬಾಲ್ ಕ್ರೆಕೆಟ್ ಪಂದ್ಯಾವಳಿ ನಡೆಯಲಿದ್ದು, ಮೊದಲ ವರ್ಷದ ಫ್ರಾಂಚೈಸಿಗಳಾಗಿ ದಿ ಕೊಡವ ಬ್ರೈಟ್, ಕೊಡವ ವಾರಿಯರ್ಸ್, ವೈಲ್ಡ್ ಫ್ಲವರ್ ಹಾತೂರು, ಪ್ರಗತಿ ಕ್ರಿಕೆಟರ್ಸ್, ಕೂರ್ಗ್ ಬ್ಲಾಸ್ಟರ್ಸ್, ರಾಯಲ್ ಟೈಗರ್ಸ್, ಅಂಜಿಗೇರಿ ನಾಡ್, ಕೂರ್ಗ್ ಯುನೈಟೆಡ್, ಎಂ.ಟಿ.ಬಿ. ರಾಯಲ್ಸ್, ಟೀಮ್ ಲೀವರೇಜ್ ಭಾಗವಹಿಸಲಿದೆ. ನೂತನವಾಗಿ ನೋಂದಾಯಿತವಾದ ಸಂಸ್ಥೆಯಲ್ಲಿ ಪೊರ್ಕೊಂಡ ಸುನಿಲ್, ಪಾಲಚಂಡ ಜಗನ್ ಉತ್ತಪ್ಪ, ಚಂಡೀರ ರಚನ್…
ಮಡಿಕೇರಿ ಏ 30 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿತವಾಗಿರುವ ಸಮಾಗಮ ಬೇಸಿಗೆ ಶಿಬಿರ ನೂರಾರು ಮಕ್ಕಳಿಗೆ ವಿನೂತನ ವಿಚಾರಗಳ ಕಲಿಕೆಗೆ ನೆರವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾಥಿ೯ಗಳನ್ನು ತರಬೇತುಗೊಳಿಸುವ ಉದ್ದೇಶದಿಂದ 20 ದಿನಗಳಿಂದ ನಡೆಯುತ್ತಿರುವ ಸಮಾಗಮ ಬೇಸಿಗೆ ಶಿಬಿರದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 250 ಹೆಚ್ಚು ವಿದ್ಯಾಥಿ೯ಗಳು ವೈವಿಧ್ಯಮಯ ವಿಭಾಗಗಳಲ್ಲಿ ತಮ್ಮ ಇಷ್ಟದ ವಿಷಯಗಳನ್ನು ಆಯಾ ವಿಚಾರಗಳನ್ನು ಪರಿಣಿತರಿಂದ ತಿಳಿದುಕೊಳ್ಳುತ್ತಿದ್ದಾರೆ. ಭಾರತೀಯ ಸಂಸ್ಕೖತಿಯ ಜತೆಗೇ ಕ್ರೀಡೆಯಲ್ಲಿಯೂ ಸಮಾಗಮದಲ್ಲಿ ತರಬೇತಿ ನೀಡಲಾಗುತ್ತಿದೆ. ಹಾಕಿ ಕ್ರೀಡೆಯ ಬಗ್ಗೆ ಅರುಣ್ ಹಾಗೂ ಕುಶಾಲಪ್ಪ ಕ್ರಿಕೆಟ್ ಬಗ್ಗೆ ರೆನ್ ಟ್ರೆವರ್ ಡೈಸ್ , ಮಹೇಶ್ ಮತ್ತು ಶಾಹಿಲ್. , ಅಥ್ಲೆಟಿಕ್ಸ್ ಬಗ್ಗೆ ರೇಷ್ಮಾ ದೇವಯ್ಯ, ಬ್ಯಾಸ್ಕೆಟ್ಬಾಲ್ ಬಗ್ಗೆ ರಾಯಲ್ ಜೊಜೊ, ಫುಟ್ಬಾಲ್ ಸಂಬಂಧಿತ ಎಂ. ಕ್ರಿಸ್ಟೋಫರ್, ಹ್ಯಾಂಡ್ಬಾಲ್ ಕ್ರೀಡೆಯನ್ನು ಚಿಕ್ಕಣ್ಣ, ಟೇಬಲ್ ಟೆನ್ನಿಸ್ ಕ್ರೀಡಾವಿಭಾಗದಲ್ಲಿ ರಚನ್ ಪೊನ್ನಪ್ಪ ತರಬೇತುದಾರರಾಗಿದ್ದಾರೆ. ಮಡಿಕೇರಿಯ ಹಿರಿಯ ಚೆಸ್ ಆಟಗಾರ ಎನ್.ಟಿ.ಶಂಕರನಾರಾಯಣ ಅವರು ಮಕ್ಕಳಿಗೆ ಚೆಸ್ ಕಲಿಸಿದರೆ, ಕ್ಯಾಲಿಗ್ರಾಫಿ…
ಮಡಿಕೇರಿ ಏ.30 NEWS DESK : ಯು.ಎ.ಇ. ಯ ದುಬೈನಲ್ಲಿ ಜರುಗಿದ ಅಂಡರ್-20 ಜೂನಿಯರ್ ಏಷ್ಯನ್ ಚಾಂಪಿಯನ್ಶಿಪ್-2024ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕೊಡಗಿನ ಯುವತಿ ಬೊಳ್ಳಂಡ ಉನ್ನತಿ ಅಯ್ಯಪ್ಪ 100 ಮೀ. ಹರ್ಡಲ್ಸ್ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. 13.66 ಸೆಕೆಂಡ್ನಲ್ಲಿ ಉನ್ನತಿ ಗುರಿ ಸಾಧಿಸಿ ಸಾಧನೆ ತೋರಿದ್ದು, ಪದಕ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ಇಡೀ ಕುಟುಂಬದ ಕ್ರೀಡಾ ಸಾಧನೆ ಗಮನಾರ್ಹವಾಗಿದೆ. ಉನ್ನತಿ ಅವರ ತಂದೆ ರಾಷ್ಟ್ರೀಯ ಅಥ್ಲೆಟಿಕ್ ಕೋಚ್ ಬೊಳ್ಳಂಡ ಅಯ್ಯಪ್ಪ ಅವರು 1994ರ ಜೂನಿಯರ್ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿ4*400 ಮೀಟರ್ ರಿಲೇಯಲ್ಲಿ ಬೆಳ್ಳಿಪದಕ ಪಡೆದಿದ್ದಾರೆ. ತಾಯಿ ಮಾಜಿ ಒಲಂಪಿಯನ್ ಪ್ರಮೀಳಾ ಅಯ್ಯಪ್ಪ 1996ರಲ್ಲಿ ಹೆಫ್ಟಥ್ಲಾನ್ನಲ್ಲಿ ಭಾರತಕ್ಕೆ ಕಂಚಿನ ಪದಕ ಗಳಿಸಿದ ಸಾಧನೆ ಮಾಡಿದ್ದರು. ಇದೀಗ ಪುತ್ರಿ ಉನ್ನತಿ ಅಯ್ಯಪ್ಪ ಕೂಡ ಇದೇ ಜೂನಿಯರ್ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ 100 ಮೀಟರ್ ಹರ್ಡಲ್ಸ್ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಪೋಷಕರೊಂದಿಗೆ ಇದೀಗ ಪುತ್ರಿಯೂ ಭಾರತಕಕೆ ಪದಕ ತಂದ ಕೀರ್ತಿ ಈ ಕುಟುಂಬದ್ದಾಗಿದೆ.






