ಲೇಖಕ: admin

ಮಡಿಕೇರಿ ಫೆ.25  NEWS DESK : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ಮಕ್ಕಳ ಸಂತೆಯು ಗಮನ ಸೆಳೆಯಿತು. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ, ಸರ್ಕಾರಿ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಮಕ್ಕಳ ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು, ತರಕಾರಿ, ಆಹಾರ ಧಾನ್ಯಗಳು, ಹಣ್ಣು ಹಂಪಲುಗಳು, ಪಾನಿಪೂರಿ, ಮಸಾಲೆ ಪುರಿ, ಚುರುಮುರಿ ಹೀಗೆ ಜೊತೆಗೆ ಚಿಕನ್ ಬಿರಿಯಾನಿ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಮಕ್ಕಳು ಸಂತೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಗಣಿಕೆ ಸೊಪ್ಪು, ನೊಗ್ಗೆ, ಕೊತ್ತಂಬರಿ, ಕರಿಬೇವು, ಬಸಳೆ, ಪಾಲಕ್ ಸೊಪ್ಪು, ಟೊಮೆಟೋ, ಕೆಸ, ಹಲಸು, ಬಾಳೆಕಾಯಿ, ಬಾಳೆಹಣ್ಣು, ಸಪೋಟ, ಕಿತ್ತಳೆ, ಚಕೋತ, ಮೂಲಂಗಿ, ನಿಂಬೆಹಣ್ಣು, ಸಿಹಿಗೆಣಸು, ಕಲ್ಲಂಗಡಿ, ಬದನೆ, ಪರಂಗಿ ಹಣ್ಣು, ಆಲೂಗಡ್ಡೆ, ಈರುಳ್ಳಿ, ಸೌತೆಕಾಯಿ, ಜತೆಗೆ ಮಹಿಳೆಯರ ಸೀರೆ ಒಳಗೊಂಡಂತೆ ಪ್ಯಾನ್ಸಿ ವಸ್ತುಗಳು ಹಲವು ವಿಭಾಗದಲ್ಲಿ ಮಕ್ಕಳ ಸಂತೆ ಏರ್ಪಡಿಸಿದ್ದು, ವಿಶೇಷ ಆಕರ್ಷಣೀಯವಾಗಿತ್ತು. ವಿದ್ಯಾರ್ಥಿಗಳ ವ್ಯಾಪಾರಕ್ಕೆ ಪೋಷಕರು ಸಹ ಸಾಥ್ ನೀಡಿದ್ದು…

Read More

ಮಡಿಕೇರಿ ಫೆ.25 NEWS DESK : ತ್ರಿವೇಣಿ ಪೊಮ್ಮಕ್ಕಡ ಕೂಟದ ಪ್ರಮುಖರು ನಗರದ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದರು.  ಕೂಟದ ಅಧ್ಯಕ್ಷರಾದ ಕಿಕ್ಕೇರಿಯಂಡ ಲೀಲಾ ಅಯ್ಯಪ್ಪ, ಉಪಾಧ್ಯಕ್ಷರಾದ ಬೊಪ್ಪoಡ ಸರಳ ಕರುಂಬಯ್ಯ, ಕಾರ್ಯದರ್ಶಿ ಮಲ್ಚೀರ ಯಶೋಧ ದೇವಯ್ಯ ಸದಸ್ಯರುಗಳಾದ ಕೂಪದಿರ ಜೂನಾ ವಿಜಯ್, ಉಡುವೇರ ರೇಖಾ ರಘು, ಅಮ್ಮoಡಿರ ರಾಣಿ ಮುತ್ತಮ್ಮ, ಮುಕ್ಕಾಟಿರ ಸವಿತಾ, ಕರವ0ಡ ಸೀಮಾ, ಚಿಂಡಮಾಡ ಸರಿತಾ ಮೊಣ್ಣಪ್ಪ, ಕೊಡಂದೇರ ಸ್ವಾತಿ ಲವ ಅವರು ಭೇಟಿ ನೀಡಿ ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿದರು. ನಂತರ ವಿವಿಧ ಅಗತ್ಯತೆಯ ವಸ್ತುಗಳನ್ನು ಕೊಡುಗೆಯಾಗಿ ನೀಡಿದರು. ವೃದ್ಧರಿಗೆ ರಾತ್ರಿಯ ಭೋಜನದ ವ್ಯವಸ್ಥೆ ಮಾಡಿದರು.

Read More

ಮಡಿಕೇರಿ ಫೆ.25 NEWS DESK : ನಗರದ ಅಭಿವೃದ್ಧಿಯ ನಿರ್ಲಕ್ಷ್ಯ ಮತ್ತು ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಿತು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರ ನೇತೃತ್ವದಲ್ಲಿ ಬುಧವಾರ ನಗರಸಭಾ ಕಛೇರಿಯ ಎದುರು ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು “ಗುಂಡಿ ಮುಚ್ಚಿ ರಸ್ತೆಗೆ ಮುಕ್ತಿ ಕೊಡಿ” ಎಂದು ಆಗ್ರಹಿಸಿದರು. ನಗರಸಭೆಯ ಆಡಳಿತ ವೈಖರಿಯನ್ನು ತೀವ್ರವಾಗಿ ಖಂಡಿಸಿದ ಎಸ್‍ಡಿಪಿಐ ಸದಸ್ಯರು, ‘ನಗರಸಭೆ ಕೊಠಡಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ” ಎಂದು ಬರೆದಿರುವ ನಾಮ ಫಲಕವನ್ನು ನಗರಸಭೆಯ ಅಧ್ಯಕ್ಷರು ಹಾಗೂ ಅಧಿಕಾರಿಗಳ ಕಚೇರಿಗೆ ಅಂಟಿಸುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಮಧ್ಯ ಪ್ರವೇಶಿಸಿ ಈ ಪ್ರಯತ್ನವನ್ನು ತಡೆದರು. ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಮಾತನಾಡಿ, ಪ್ರತಿನಿತ್ಯ ಪ್ರವಾಸಿ ಕೇಂದ್ರವಾದ ಮಡಿಕೇರಿಗೆ ಆಗಮಿಸುವ ಸಹಸ್ರಾರು ಪ್ರವಾಸಿಗರನ್ನು ಗುಂಡಿಬಿದ್ದು ಹದಗೆಟ್ಟ ರಸ್ತೆಗಳು, ಅಶುಚಿತ್ವ ಸ್ವಾಗತಿಸುತ್ತಿದೆ. ನಗರದ ಯಾವುದೇ ರಸ್ತೆಗಳು ಯೋಗ್ಯವಾಗಿಲ್ಲ. ಜನರ ಸಂಕಷ್ಟಗಳಿಗೆ ನಗರಸಭೆಯಿಂದ ಯಾವುದೇ ಸ್ಪಂದನ ದೊರಯುತ್ತಿಲ್ಲವೆಂದು ಟೀಕಿಸಿದರು. ಕೇಬಲ್…

Read More

ಮಡಿಕೇರಿ ಫೆ.25 : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ ತಡೆಗೋಡೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ರಕ್ಷಣಾ ತಡೆಗೋಡೆ ಕಾಮಗಾರಿಯು 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದರು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ನಿತಿನ್ ಗಡ್ಕರಿ ಅವರ ಪ್ರಯತ್ನದಿಂದ ರಾಷ್ಟçದಲ್ಲಿ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿವೆ ಎಂದು ಸಂಸದರು ಹೇಳಿದರು.  ರಾಷ್ಟçದ ರಾಜದಾನಿ ನವದೆಹಲಿ, ಮುಂಬೈ, ಬೆಂಗಳೂರು, ಚೆನೈ, ಕೊಲ್ಕತ್ತಾ ಮತ್ತಿತ್ತರ ಕಡೆಗಳಲ್ಲಿ ಸಂಪರ್ಕ ರಸ್ತೆಯನ್ನಾಗಿ ಸರ್ಕಾರ ಕೈಗೊಂಡಿದೆ. ಹಾಗೆಯೇ…

Read More

ಧಾರವಾಡ/ನ್ಯೂಯಾರ್ಕ್: ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿರುವ ಧಾರವಾಡ ಮೂಲದ ಖ್ಯಾತ ವಿಜ್ಞಾನಿ ಡಾ. ಕಟ್ಟೇಶ್ ವಿ. ಕಟ್ಟಿ (Dr. Kattesh V. Katti) ಅವರಿಗೆ ಅಂತರಾಷ್ಟ್ರೀಯ ಮನ್ನಣೆ ದೊರೆತಿದೆ. ಇವರ ಅಪೂರ್ವ ಸಂಶೋಧನೆಯನ್ನು ಗುರುತಿಸಿರುವ ಅಂತರಾಷ್ಟ್ರೀಯ ಉನ್ನತ ವೃತ್ತಿಪರರ ಸಂಘ (IAOTP), 2026ನೇ ಸಾಲಿನ ‘ಹೆಲ್ತ್‌ಕೇರ್ ಟಾಪ್ ಇನೋವೇಟರ್ ಆಫ್ ದಿ ಇಯರ್’ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದೆ. ನ್ಯೂಯಾರ್ಕ್‌ನಲ್ಲಿ ಗೌರವ ಸಮರ್ಪಣೆ ಬರುವ ಡಿಸೆಂಬರ್‌ನಲ್ಲಿ ನ್ಯೂಯಾರ್ಕ್ ನಗರದ ಐತಿಹಾಸಿಕ ‘ದಿ ಪ್ಲಾಜಾ ಹೋಟೆಲ್’ನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಡಾ. ಕಟ್ಟಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಗ್ರೀನ್ ನ್ಯಾನೋಟೆಕ್ನಾಲಜಿ ಕ್ಷೇತ್ರದಲ್ಲಿ ಅವರು ಮಾಡಿರುವ ಕ್ರಾಂತಿಕಾರಿ ಬದಲಾವಣೆಗಳಿಗಾಗಿ ಈ ಗೌರವ ಸಂದಿದೆ. ಯಾರು ಈ ಡಾ. ಕಟ್ಟೇಶ್ ಕಟ್ಟಿ? ಮೂಲತಃ ಧಾರವಾಡದವರಾದ ಡಾ. ಕಟ್ಟಿ ಅವರು ಪ್ರಸ್ತುತ ಅಮೆರಿಕದ ಮಿಸೌರಿ ವಿಶ್ವವಿದ್ಯಾಲಯದ ಮೆಡಿಕಲ್ ಸ್ಕೂಲ್‌ನಲ್ಲಿ ಕ್ಯುರೇಟರ್ಸ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಜಗತ್ತು “ಹಸಿರು…

Read More

ಧಾರಾವಾಡ/ಬೆಂಗಳೂರು, ಫೆಬ್ರವರಿ 25, 2026: ರಾಜ್ಯದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಹಸ್ರಾರು ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಇಂದು ಧಾರಾವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಧಾರಾವಾಡದ ಜುಬಿಲಿ ಸರ್ಕಲ್‌ನಲ್ಲಿ ಜಮಾಯಿಸಿದ ಯುವ ಜನರು ಸರ್ಕಾರದ ವಿಳಂಬ ನೀತಿಯ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯ ಕಿಚ್ಚು: ‘ಗೋ ಬ್ಯಾಕ್’ ಘೋಷಣೆ ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು, ಪರೀಕ್ಷೆಗಳ ಮುಂದೂಡಿಕೆ ಮತ್ತು ನೇಮಕಾತಿ ಅಧಿಸೂಚನೆಗಳ ವಿಳಂಬದಿಂದ ಕಂಗೆಟ್ಟಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಬಂದ ವಿರೋಧ ಪಕ್ಷದ ನಾಯಕರಿಗೆ ‘ಗೋ ಬ್ಯಾಕ್’ ಘೋಷಣೆ ಕೂಗುವ ಮೂಲಕ ಪ್ರತಿಭಟನೆಯನ್ನು ಪಕ್ಷಾತೀತವಾಗಿ ಇರಿಸಲು ಅಭ್ಯರ್ಥಿಗಳು ಪ್ರಯತ್ನಿಸಿದರು. ಸಂಚಾರ ದಟ್ಟಣೆಯಿಂದಾಗಿ ಧಾರಾವಾಡದ ಕೇಂದ್ರ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇಲಾಖಾವಾರು ಖಾಲಿ ಹುದ್ದೆಗಳ ಕಂಪ್ಲೀಟ್ ಲಿಸ್ಟ್ ಸರ್ಕಾರದ ಅಧಿಕೃತ ಮಾಹಿತಿಯ ಪ್ರಕಾರ, ಸುಮಾರು 2,84,881 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯ…

Read More

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ಬಿಸಿಲ ಬೇಗೆಗೆ ವರುಣ ತಂಪೆರೆಯಲಿದ್ದಾನೆ. ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ವಾಯು ಚಂಡಮಾರುತದ ಪರಿಚಲನೆಯ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಳೆಯಿಂದಾಗಿ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕಾಡುತ್ತಿದ್ದ ಕಾಡ್ಗಿಚ್ಚಿನ ಭೀತಿಯೂ ಸದ್ಯಕ್ಕೆ ದೂರವಾಗಿದೆ. ಇಂದಿನ ಹವಾಮಾನ: ಎಲ್ಲೆಲ್ಲಿ ಮಳೆ? ಇಂದು ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ: ಕರಾವಳಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ. ಒಳನಾಡು: ಬೆಳಗಾವಿ, ಬೀದರ್, ಕಲಬುರ್ಗಿ, ಗದಗ, ವಿಜಯಪುರ, ಕೊಡಗು, ಮೈಸೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಒಣಹವೆ: ಬಾಗಲಕೋಟೆ, ಧಾರವಾಡ, ಹಾವೇರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಫೆಬ್ರವರಿ 26 ಮತ್ತು 27ರ ಮುನ್ಸೂಚನೆ…

Read More

ಸೋಮವಾರಪೇಟೆ, NEWS DESK ಫೆ.25 : ನಿಜವಾದ ಮಾನವ ಧರ್ಮ ಹಿಂದೂ ಧರ್ಮವಾಗಿದೆ ಎಂದು ಕೊಡ್ಲಿಪೇಟೆ ಕಲ್ಲಹಳ್ಳಿ ಮಠದ ರುದ್ರಮುನಿ ಸ್ವಾಮೀಜಿ ಹೇಳಿದರು. ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಕೇರಿ ಸಮುದಾಯಭವನದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ ಕಿರಗಂದೂರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದೇಶಿಯರು ಭಾರತದ ಸಂಪತ್ತು ಕೊಳ್ಳೆಹೊಡೆವುದರೊಂದಿಗೆ ಸಂಸ್ಕೃತಿ ಸಂಪ್ರದಾಯವನ್ನು ನಾಶ ಮಾಡಿ ಹೋದರು. ಇನ್ನಾದರೂ ಹಿಂದೂಗಳು ಒಂದಾಗಬೇಕು. ದೇವರು, ದೇವಸ್ಥಾನ, ಮಠಗಳ ಬಗ್ಗೆ ಗೌರವ, ನಂಬಿಕೆ ಇರಬೇಕು ಎಂದು ಹೇಳಿದರು. ತಂದೆ ತಾಯಂದಿರು ಮಕ್ಕಳಿಗೆ ನೀತಿಪಾಠ ವನ್ನು ಹೇಳಿಕೊಡಬೇಕು. ಮಕ್ಕಳಿಗೆ ಹಿಂದೂ ಧರ್ಮ, ಸಂಸ್ಕೃತಿಯ ಬಗ್ಗೆ ಹೇಳಿಕೊಡಬೇಕು. ಮಕ್ಕಳನ್ನು ವಿದೇಶಗಳಲ್ಲಿ ಓದುವಂತೆ ಒತ್ತಡ ಹಾಕಿದರೆ, ಪೋಷಕರೇ ವೃದ್ಧಾಶ್ರಮಕ್ಕೆ ಸೇರಬೇಕಾಗುತ್ತದೆ. ಭಾರತದ ಶಿಕ್ಷಣ ಪವಿತ್ರವಾಗಿದೆ. ಇಲ್ಲಿಯೇ ಮಕ್ಕಳು ಬೆಳೆದು ಬದುಕಲು ಅವಕಾಶ ಮಾಡಿಕೊಡಿ ಎಂದು ತಿಳಿ ಹೇಳಿದರು. ಧರ್ಮದಂತೆ ಬದುಕಿದರೆ ನೆಮ್ಮದಿ ಸಿಗುತ್ತದೆ. ಧರ್ಮವನ್ನು ನಾವು ಕಾಪಾಡಿದರೆ ಧರ್ಮ ನಮ್ಮನ್ನು ಕಾಪಾಡುತ್ತದೆ ಎಂದು ಹೇಳಿದರು. ಸಭೆಯಲ್ಲಿ ಉಪಸ್ಥಿತರಿದ್ದ…

Read More