ಲೇಖಕ: admin

ವಿರಾಜಪೇಟೆ ಡಿ.16 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ,ಸಿ ಟ್ರಸ್ಟ್, ವಿರಾಜಪೇಟೆ ತಾಲ್ಲೂಕು, ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಕೃಷಿ ಕಾರ್ಯಕ್ರಮದಡಿಯಲ್ಲಿ ಮಣ್ಣು ಪರೀಕ್ಷೆ ಮಾಹಿತಿ ಕಾರ್ಯಕ್ರಮ ಕಾನೂರು ವಲಯದ ನಿಟ್ಟೂರು ಕಾರ್ಯಕ್ಷೇತ್ರದ ಕಾವೇರಿ ಅವರ ಕೃಷಿ ತಾಕುವಿನಲ್ಲಿ ನಡೆಯಿತು. ಮಣ್ಣು ವಿಜ್ಞಾನದ ವಿಷಯ ತಜ್ಞರಾದ ಡಾ.ಮೋಹನ್ ಕುಮಾರ್ ಕೆ.ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿ ಮಣ್ಣು ಪರೀಕ್ಷೆ ಮತ್ತು ಮಣ್ಣು ಆರೋಗ್ಯ ಕಾರ್ಡ್, ಸಸ್ಯ ಪೋಷಕಾಂಶಗಳು, ಪೋಷಕಾಂಶ ಅಸಮತೋಲನದ ಪರಿಣಾಮಗಳು, ಮಣ್ಣು ಪರೀಕ್ಷೆಯ ಮಹತ್ವ ಮಣ್ಣು ಮಾದರಿ ಸಂಗ್ರಹಿಸಲು ಗಮನಿಸಬೇಕಾದ ಅಂಶಗಳು, ಮಣ್ಣು ಮಾದರಿ ಸಂಗ್ರಹಣೆ ಪ್ರಕ್ರಿಯೆ ಹೇಗೆ ಮಾಡಬೇಕು ಮತ್ತು ಆಮ್ಲ ಮಣ್ಣು ಮತ್ತು ಅದರ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ವಲಯದ ಮೇಲ್ವಿಚಾರಕರಾದ ಸುಜೀರ್, ಕೃಷಿ ಮೇಲ್ವಿಚಾರಕರಾದ ವಸಂತ್, ನಿಟ್ಟೂರು ಸೇವಾ ಪ್ರತಿನಿಧಿ ಸರೋಜ, ಬ್ರಹ್ಮಗಿರಿ ಸೇವಾ ಪ್ರತಿನಿಧಿ ಉದಯ್, ಪ್ರಗತಿಪರ ಕೃಷಿಕರು ನಿಟ್ಟೂರು ಒಕ್ಕೂಟದ ಪದಾಧಿಕಾರಿ ಕಾವೇರಿ ಸಂಘದ…

Read More

ಕುಶಾಲನಗರ ಡಿ.16 NEWS DESK : ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳುವುದರಿಂದ‌ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಹಿರಿಯ ಪತ್ರಕರ್ತ ರವಿ ಕುಮಾರ್ ಟೆಲೆಕ್ಸ್ ಅಭಿಮತ ವ್ಯಕ್ತಪಡಿಸಿದರು. ಕುಶಾಲನಗರ ಸಮೀಪದ ಹುಣಸೆವಾಡಿ ಸರ್ಕಲ್ ನಲ್ಲಿರುವ ಕೂರ್ಗ್ ವಾಟರ್ ಪಾರ್ಕ್ ನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಕರ್ತರ ಉದ್ಯೋಗ, ಜೀವನ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತದೆ. ಇದೀಗ ರಚನಾತ್ಮಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಿ ಮಾದರಿಯಾಗುತ್ತಿದೆ. ಇದಕ್ಕೆ ಕೊಡಗು ಸಂಘ ಪ್ರೇರಣಾ ಶಕ್ತಿಯಾಗಿದೆ. ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿ. ಈ ಕಾರ್ಯಕ್ರಮವನ್ನು ರಾಜ್ಯ ಮಟ್ಟದಲ್ಲಿ ವಿಸ್ತರಿಸುವ ಪ್ರಯತ್ನ ಮಾಡಲಾಗುವುದು ಎಂದ ಅವರು, ಕೊಡಗು ಸಾಂಸ್ಕೃತಿಕ ವೈಭವದ ತವರೂರು ಎಂದು ಬಣ್ಣಿಸಿದರು. ಪತ್ರಕರ್ತರ ಸಾಂಸ್ಕೃತಿಕ ವೇದಿಕೆಯನ್ನು ತಬಲ ಬಾರಿಸುವ ಮೂಲಕ ಉದ್ಘಾಟಿಸಿ…

Read More

ಸೋಮವಾರಪೇಟೆ ಡಿ.16 NEWS DESK : “ಕಣಿವೆ ಕಟ್ಟೆ”ಕೊಡಗು ಬಳಗದ ವತಿಯಿಂದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಶ್ರೀ ಶಿವ ಬಸವೇಶ್ವರ ದೇವಸ್ಥಾನ ಸಮಿತಿಯ ಸಂಯುಕ್ತಾಶ್ರಯದಲ್ಲಿ ಯಡವನಾಡು ಗ್ರಾಮದ ಶ್ರೀ ಶಿವ ಬಸವೇಶ್ವರ ದೇವಸ್ಥಾನದ ಆವರಣದ ಹಸಿರು ಪರಿಸರದ ಅಂಗಳದಲ್ಲಿ ಆಹ್ವಾನಿತ ಕವಿಗಳಿಂದ ಏರ್ಪಡಿಸಿದ್ದ ಕವಿಗೋಷ್ಠಿ ಕಾರ್ಯಕ್ರಮವು ಸಾಹಿತ್ಯಾಸಕ್ತರ ಮನೆಸೂರೆಗೊಂಡಿತು. ಯಡವನಾಡು ಗ್ರಾಮದ ಹಸಿರು ಪರಿಸರದ ಮಧ್ಯೆ ಪ್ರಕೃತಿ ಮಡಲಲ್ಲಿ ತೇಲಿ ಬಂದ ಕವನಗಳು. ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಿ ಸಭಿಕರನ್ನು ರಂಜಿಸಿದರು. ಪ್ರಕೃತಿ ಮಡಿಲಲ್ಲಿ ಕವನಗಳ ಸಾಗರದಲ್ಲಿ ಮಿಂದೆದ್ದ ಸಹೃದಯರು. ಕಣಿವೆ ಕಟ್ಟೆ ಕೊಡಗು ಬಳಗದ ವತಿಯಿಂದ ಹಸಿರು ಪ್ರಕೃತಿ ಪರಿಸರದ ಮಧ್ಯೆ ಯಡವನಾಡು ಗ್ರಾಮದ ಹಸಿರು ಬನದ ಶ್ರೀ ಶಿವ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕವಿಗೋಷ್ಠಿಯಲ್ಲಿ ಒಟ್ಟು 28 ಮಂದಿ ವಾಚಿಸಿದ ಕವನಗಳು ಕೇಳುಗರ ಮನೆಸೂರೆಗೊಂಡವು. ಹಸಿರು ಪರಿಸರವನ್ನು ಹೊದ್ದುಕೊಂಡಿರುವ ಯಡವನಾಡು ಗ್ರಾಮದ ಶಿವ ಬಸವೇಶ್ವರ ದೇವಸ್ಥಾನವು ಹಸಿರು ಪರಿಸರದ ಮಧ್ಯೆ ಪ್ರಕೃತಿ ಸೌಂದರ್ಯವನ್ನು ಆಹ್ಲಾದಿಸುವುದೇ ಆನಂದ.…

Read More

ಸುಂಟಿಕೊಪ್ಪ ಡಿ.16 NEWS DESK : ಗ್ರಾಮ ಪಂಚಾಯಿತಿ ನೌಕರರ ಪ್ರಮುಖ 17 ಬೇಡಿಕೆಗಳಲ್ಲಿ ಕೆಲವನ್ನು ಮುಂದಿಟ್ಟುಕೊಂಡು ಡಿ.20 ರಿಂದ ಬೆಂಗಳೂರಿನಲ್ಲಿ ಅನಿರ್ಧಿಷ್ಟವಾದಿ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಹೇಳಿದ್ದಾರೆ. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಿಸುಮಾರು 36 ಸಾವಿರ ನೌಕರರು ಇದ್ದು, 17 ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ನಿರಂತರ ಹೋರಾಟ ಮಾಡುತ್ತ ಬರಲಾಗಿದೆ. ಕೆಲವು ಬೇಡಿಕೆಗಳನ್ನು ಪಡೆಯಲಾಗಿದ್ದರೂ ಕೂಡ ಪ್ರಸ್ತುತ ಬೆಲೆ ಏರಿಕೆ ಆಧಾರದಲ್ಲಿ ಕನಿಷ್ಠ ವೇತನ ರೂ.36 ಸಾವಿರ ನಿಗಧಿಗಾಗಿ ಇದನ್ನೇ ಮಾನದಂಡವಾಗಿ ಇಟ್ಟುಕೊಂಡು ವಾರ್ಷಿಕ ವರಮಾನ ಹೆಚ್ಚು ಮಾಡಲು ಒತ್ತಾಯಿಸಿ ಕಾರ್ಮಿಕರ ಬಿಪಿಎಲ್ ಕಾರ್ಡ್ ರದ್ದು ಪಡಿಸದಿರಲು ಹೋರಾಟ ನಡೆಸಲಾಗುವುದೆಂದು ಅವರು ಹೇಳಿದರು. ಜೊತೆಗೆ ಸೇವ ಹಿತನದ ಆಧಾರದಲ್ಲಿ ವೇತನ ನಿಗಧಿಪಡಿಸಬೇಕು, ಸ್ವಚ್ಛಾವಾಹಿನಿ ನೌಕರರಿಗೆ ಪಂಚಾಯಿತಿ ನೌಕರರೆಂದು ಪರಿಗಣಿಸಬೇಕು, ಪಂಚಾಯಿತಿ ನೌಕರರ ನಿವೃತ್ತಿ ನಂತರ ರೂ.10…

Read More

ಮಡಿಕೇರಿ ಡಿ.16 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2025 -26 ನೇ ಸಾಲಿನ ಮತೀಯ ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆಗೆ ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸಾಂತ್ವನ ಯೋಜನೆ ಹಾಗೂ ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ https://kccdclonline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಸಬಹುದು. ಹೆಚ್ಚಿನ ಮಾಹಿತಿ ಪಡೆಯಲು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು. ಆನ್‍ಲೈನ್ ಅರ್ಜಿ ಸಲ್ಲಸಲು ಡಿಸೆಂಬರ್, 20 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ…

Read More

ಮಡಿಕೇರಿ ಡಿ.16 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ವಿರಾಜಪೇಟೆ ತಾಲ್ಲೂಕು ಘಟಕದ ವತಿಯಿಂದ ಡಿ.17 ರಂದು ಶಾಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ನಿರ್ದೇಶನ ದಲ್ಲಿ, ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಸಹಕಾರದೊಂದಿಗೆ, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ಮುಕ್ಕಾಟಿರ ಕಾವೇರಮ್ಮ ಕರುಂಬಯ್ಯ ಅವರ ಅಧ್ಯಕ್ಷತೆಯಲ್ಲಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಂಡಿಗೆರೆ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ , ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಕರಿನೆರವಂಡ ಡ್ಯಾನಿ ಕುಶಾಲಪ್ಪ, ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಂ.ಎಂ.ಇಸ್ಮಾಯಿಲ್, ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಜಿ.ಸವಿತಾ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಹಾಗೂ ತಾಲ್ಲೂಕು ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಕಾರ್ಯದರ್ಶಿ ಡ್ಯಾನಿ…

Read More

ನಾಪೋಕ್ಲು ಡಿ.16 NEWS DESK : ಶಿಸ್ತು, ವಿದೇಯತೆ ಮತ್ತು ಸಮಯ ಪಾಲನೆ ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕಾದ ಉತ್ತಮ ಹವ್ಯಾಸಗಳು ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ  ಚೌರಿರ ಡಾ.ಜಗತ್ ತಿಮ್ಮಯ್ಯ ಹೇಳಿದರು. ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಪೆÇೀಷಕರು ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನ ನೀಡದಿದ್ದರೆ ಮಕ್ಕಳು ಬೆಳೆಯಲು ಸಾಧ್ಯವಿಲ್ಲ. ಪೋಷಕರು ಮಕ್ಕಳಿಗೆ ಶಿಸ್ತು ಮತ್ತು ಸಮಯ ಪಾಲನೆಯ ಮಹತ್ವದ ಅರಿವು ಮೂಡಿಸಬೇಕು. ಮಕ್ಕಳಿಗೆ ಯಾವತ್ತು ಒಳ್ಳೆಯದನ್ನು ಹೇಳಿಕೊಡಬೇಕು. ಮಕ್ಕಳ ಬುದ್ಧಿ ಸ್ಮಿತಕ್ಕೆ ಬಂದಾಗ ಅವರು ಖಂಡಿತ ಒಳ್ಳೆಯದನ್ನು ಪಾಲಿಸುತ್ತಾರೆ ಎಂದರು.  ಕೊಡಗಿನ ಮಕ್ಕಳಲ್ಲಿ ಶಿಸ್ತು ಇದೆ. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರು ಜೀವನದುದ್ದಕ್ಕು ಶಿಸ್ತನ್ನು ಪಾಲಿಸಿದರು. ಅಂತಹ ನಾಡಿನಲ್ಲಿ ಹುಟ್ಟಿದ ಮಕ್ಕಳು ಶಿಸ್ತುಬದ್ಧ ಜೀವನ ನಡೆಸಲು ಶಕ್ತರು ಎಂದ ಅವರು, ಇಂದಿನ ದಿನಗಳಲ್ಲಿ ಆಂಗ್ಲ ಭಾಷೆಯ ಅಗತ್ಯ ಬಹಳಷ್ಟು ಇದೆ. ಭಾಷೆ…

Read More

ನಾಪೋಕ್ಲು ಡಿ.16 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ಜ್ಞಾನವಿಕಾಸ ಕಾರ್ಯಕ್ರಮದ ಪ್ರಯುಕ್ತ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವು ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಮಾಜಮುಖಿ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಇಂತಹ ವಿಚಾರ ಗೋಷ್ಠಿ ಕಾರ್ಯಕ್ರಮ ಅತ್ಯಗತ್ಯ ಎಂದು ಹೇಳಿದರು. ಜಿಲ್ಲಾ ನ್ಯಾಯಾಲಯದ ವಕೀಲರಾದ ಮೀನಾಕುಮಾರಿ ಮಾತನಾಡಿ, ನೊಂದ ಮಹಿಳೆಗೆ ಕಾನೂನಿನಲ್ಲಿ ಸಿಗುವ ನ್ಯಾಯದ ಬಗ್ಗೆ, ಬಾಲ್ಯ ವಿವಾಹದ ಬಗ್ಗೆ, ಹೆಣ್ಣು ಮಕ್ಕಳಿಗೆ ಶಿಕ್ಷಣದ ಮೌಲ್ಯದ ಕುರಿತು ಮಹಿಳಾ ಸಹಾಯವಾಣಿಯ ಕುರಿತು ಮಾಹಿತಿ ನೀಡಿದರು. ಪ್ರಾಸ್ತವಿಕ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ಯೋಜನಾಧಿಕಾರಿ ಪುರುಷೋತ್ತಮ್, ಯೋಜನೆಯ ಹಿನ್ನೆಲೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಇಂದು ಮಹಿಳೆಯು ಸರ್ವತೋಮುಖ ಬೆಳವಣಿಗೆ ಸಾಧಿಸಿ, ಒಂದು ಕುಟುಂಬ ನಿರ್ವಹಣೆ ಮಾಡಲು ಮಹಿಳೆ ಸಿದ್ದರಾಗಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಎಲ್ಲಾ ಕಾರ್ಯಕ್ರಮಕ್ಕೆ ತೊಡಗಿಸಿಕೊಳ್ಳುವುದರಿಂದ ಪ್ರತಿಯೊಬ್ಬ ಮಹಿಳೆ…

Read More

ನಾಪೋಕ್ಲು ಡಿ.16 NEWS DESK : ಅರೆಭಾಷೆ ಸಮುದಾಯಕ್ಕೆ ತನ್ನದೇ ಆದ ಇತಿಹಾಸವಿದ್ದು, ಪ್ರಾಚೀನ ಕಾಲದಿಂದಲೂ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ ಎಂದು ನಿವೃತ್ತ ಮೇಜರ್, ಡಾ.ಕುಶ್ವಂತ್ ಕೋಳಿಬೈಲು ಅವರು ಅಭಿಪ್ರಾಯ ಪಟ್ಟರು. ಮೈಸೂರಿನ ಕೊಡಗು ಗೌಡ ಸಮಾಜದ ಆಶ್ರಯದಲ್ಲಿ ನಡೆದ ಅರೆಭಾಷೆ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಸಮುದಾಯದ ಸಹಬಾಳ್ವೆಯಿಂದಾಗಿ ಪ್ರಾಚೀನ ಕಾಲದ ಎಲ್ಲಾ ಊರುಗಳ ದೇವಾಲಯಗಳಲ್ಲಿ ತಕ್ಕ ಮುಖ್ಯಸ್ಥರಾಗಿ ಅಧಿಕಾರ ಹೊಂದಿ ಅಂದಿನ ಕಾಲದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದರು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. ಭಾರತದಿಂದ ಬ್ರಿಟಿಷರನ್ನು ಓಡಿಸಲು, 1837ರಲ್ಲೇ ಕೆದಂಬಾಡಿ ರಾಮೇಗೌಡ ಹಾಗೂ ಗುಡ್ಡೆಮನೆ ಅಪ್ಪಯ್ಯ ಗೌಡ ಎಲ್ಲಾ ಜನರನ್ನು ಸಂಘಟಿಸಿ ಹೋರಾಡಿರುವುದು ಅವರ ನಾಯಕತ್ವದ ಗುಣವನ್ನು ತೋರಿಸುತ್ತದೆ. ಇಂತಹ ಗುಣವನ್ನು ಹೊಂದಿದ ಸಮುದಾಯ ತನ್ನ ಇತಿಹಾಸವನ್ನು ಅರಿತುಕೊಂಡು ಮುನ್ನಡೆಯುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ಭಾಗವಹಿಸಿದ್ದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರಾದ…

Read More

ಮಡಿಕೇರಿ ಡಿ.16 NEWS DESK : ಕರ್ನಾಟಕ ಅರೆಭಾಷೆ ಅಕಾಡೆಮಿ, ಭಾಗಮಂಡಲ ನಾಡು ಗೌಡ ಸಮಾಜ ಮತ್ತು ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ವತಿಯಿಂದ ಅರೆಭಾಷೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾಗಮಂಡಲ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪ್ರಾಂಶುಪಾಲರಾದ  ಕುಂದಲ್ಪಾಡಿ ದಿವಾಕರ್, ಅರೆಭಾಷೆ ಅಕಾಡೆಮಿ, ಕೊಡಗು ಗೌಡ ಫೆಡರೇಶನ್, ಗೌಡ ಸಮಾಜಗಳು ಮತ್ತು ಗೌಡ ಯುವ ಒಕ್ಕೂಟಗಳ ವಿವಿಧ ಕಾರ್ಯಕ್ರಮಗಳ ಫಲವಾಗಿ ಇಂದು ಅರೆಭಾಷೆ ಹೆಚ್ಚು ಬಳಕೆಯಾಗಿ ಜನಪ್ರಿಯವಾಗಿದೆ. ಎಲ್ಲರೂ ಹೆಮ್ಮೆಯಿಂದ ಅರೆಭಾಷೆಯನ್ನು ಗಟ್ಟಿಧ್ವನಿಯಲ್ಲಿ ಮಾತನಾಡುತ್ತಾರೆ. ಮಕ್ಕಳಿಗೆಗೊತ್ತಿರುವ ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸಿ ಬದುಕಿನ ದಾರಿ ಕಲಿಸಬೇಕು ಎಂದು ಹೇಳಿದರು. ಬುದ್ಧಿಶಕ್ತಿ ಬೆಳವಣಿಗೆಗೆ ಅವರ ಮಾತೃಭಾಷೆ ಹೆಚ್ಚು ಪ್ರಯೋಜನ. ನಗರಗಳಲ್ಲಿ ಓದುವ ಅನಿವಾರ್ಯತೆ ಇಲ್ಲ, ಮಕ್ಕಳಿಗೆ ಮನೆಗಳಲ್ಲಿ ಮಾತೃಭಾಷೆಯಲ್ಲಿ ಸಾಕಷ್ಟು ವಿಷಯ ಕಲಿಸಬಹುದು, ಎಲ್ಲರೂ ನಮ್ಮ ಆಚಾರ ವಿಚಾರ ಸಂಪ್ರದಾಯಗಳನ್ನು ಬೆಳೆಸಲು ಒಂದಾಗುವ ಎಂದು ಕರೆ ನೀಡಿದರು. ಗೌಡ ಸಮಾಜ ಗೌರವಾಧ್ಯಕ್ಷ ಕುದುಪಜೆ ಪಳಂಗಪ್ಪ…

Read More