ಮಡಿಕೇರಿ ಏ.29 NEWS DESK : ಕೆ ಎಂ ಜೆ , ಎಸ್ ವೈ ಎಸ್ , ಎಸ್ ಎಸ್ ಎಫ್ ಸಂಘಟನೆಯ ವತಿಯಿಂದ 45 ಮಕ್ಕಳಿಗೆ ಉಚಿತವಾಗಿ ಸುನ್ನತ್ ಕಾರ್ಯಕ್ರಮ ನಡೆಸಲಾಯಿತು. ಪಾಲಿಬೆಟ್ಟ ಜುಮಾ ಮಸ್ಜಿದ್ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಪಾಲಿಬೆಟ್ಟ ಎಸ್ ಎಸ್ ಎಫ್ ವಲಯ ಅಧ್ಯಕ್ಷ ಶಿಹಾಬುದ್ದೀನ್ ಅಹ್ಸನಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದಲೂ ಸುನ್ನತ್ ಕಾರ್ಯಕ್ರಮ ವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಸಮುದಾಯ ಬಾಂಧವರು ಇದರ ಸದುಪಯೋಗ ಪಡಿಸಿಕೊಂಡು ಧಾರ್ಮಿಕ ಚಿಂತನೆಯನ್ನು ಮೈಗೂಡಿಸಿಕೊಂಡ ಮುನ್ನಡೆಯಬೇಕೆಂದರು. ಸುನ್ನತ್ ಕರ್ಮದಲ್ಲಿ ಕೊಡಗಿನ ನಾನ ಭಾಗಗಳಿಂದ ಬಂದಿದ್ದ ಎಲ್ಲ ಮಕ್ಕಳಿಗೆ ಪಾಲಿಬೆಟ್ಟ ಎಸ್ ಎಸ್ ಎಫ್ ಸಂಘಟನೆ ವತಿಯಿಂದ ಔಷದಿ ಹಾಗೂ ಸಿಹಿಯನ್ನು ಹಂಚಲಾಯಿತು. ಕಾರ್ಯಕ್ರಮದಲ್ಲಿ ಮುಸ್ತಫ ಸಖಾಫಿ ಪ್ರಾರ್ಥನೆ ನೆರವೇರಿಸಿದರು. ಪಾಲಿಬೆಟ್ಟ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಕಾರ್ಯದರ್ಶಿ ಸಮೀರ್ ಮುನ್ನ ಎಸ್ ವೈ ಎಸ್ ಅಧ್ಯಕ್ಷ ಬಶೀರ್, ಮಸೀದಿ ಆಡಳಿತ ಮಂಡಳಿಯ ಪ್ರಮುಖರು ಹಾಗೂ…
ಲೇಖಕ: admin
ವಿರಾಜಪೇಟೆ ಏ.29 NEWS DESK : ಹೊಸ ಜ್ಞಾನವನ್ನು ಪಡೆಯಲು ಸಂಶೋಧನೆ ಅಗತ್ಯವಾಗಿದೆ ಎಂದು ಹುಣಸೂರು ಮಹಿಳಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಕೆ.ಪಿ.ಪ್ರಸನ್ನ ಹೇಳಿದರು. ವಿರಾಜಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕ ಮತ್ತು ಕನ್ನಡ ವಿಭಾಗದ ಸಹಯೋಗದಲ್ಲಿ ಕಾಲೇಜಿನಲ್ಲಿ ಸಂಶೋಧನೆಯ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂಶೋಧನೆಯ ಉದ್ದೇಶ ಮತ್ತು ಸ್ವರೂಪದ ಬಗ್ಗೆ ಉಪನ್ಯಾಸವನ್ನು ನೀಡಿದರು. ಸಂಶೋಧನೆ ಎಂದರೇ ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ, ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಂಡರೆ ಸಂಶೋಧನೆಯಾಗುತ್ತದೆ. ಮನುಷ್ಯನ ಕ್ರಿಯಾಶೀಲ ಮನಸು ಸಂಶೋಧನೆಗೆ ಪ್ರೇರಣೆಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕೆ.ಬಸವರಾಜು ಮಾತನಾಡಿ, ವಿದ್ಯಾರ್ಥಿಗಳ ಚಿಂತನಾ ಮಟ್ಟ ಹೆಚ್ಚಿಸಿ ಪ್ರತಿಭಾ ಸಾಮಥ್ರ್ಯವನ್ನು ಅಭಿವ್ಯಕ್ತಪಡಿಸಲು ಒಂದು ವಿಷಯದ ಕುರಿತು ರಚಿಸುವ ಸಂಶೋಧನಾ ಕಿರು ಪ್ರಭಂದ ಸಹಕರಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ರಘುರಾಜ್, ಡಾ.ಪ್ರಭು, ಇತರ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ಏ.29 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮೈಸೂರಿನಲ್ಲಿ ಹಿರಿಯ ನಾಯಕರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಪಿ.ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು. ಹಿರಿಯ ನಾಯಕರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಪಿ.ಶ್ರೀನಿವಾಸ್ ಪ್ರಸಾದ್ ಅವರ ನಿಧನ ಸುದ್ದಿ ತಿಳಿದು ನೋವಾಗಿದೆ. ಅನ್ಯಾಯ, ಅಸಮಾನತೆ ವಿರುದ್ಧ ಧ್ವನಿಯಾಗಿದ್ದ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. ಈ ಸಮಯದಲ್ಲಿ ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಭಗವಂತ ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಶಾಸಕ ಪೊನ್ನಣ್ಣ ಸಂತಾಪ ಸೂಚಿಸಿದರು.
ಮರವಂತೆ ಭಾರತದ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿರುವ ಒಂದು ಗ್ರಾಮ ಮತ್ತು ಕಡಲತೀರವಾಗಿದೆ .ಮರವಂತೆ ಬೀಚ್ ಕುಂದಾಪುರದಿಂದ 12 ಕಿ.ಮೀ ದೂರದಲ್ಲಿದೆ, ಇದು ಉಡುಪಿಗೆ ಉತ್ತರಕ್ಕೆ 50 ಕಿ.ಮೀ ಮತ್ತು ಮಂಗಳೂರಿನಿಂದ 105 ಕಿ.ಮೀ ದೂರದಲ್ಲಿದೆ. ಈ ಬೀಚ್ನ್ನು ವರ್ಜಿನ್ ಬೀಚ್ ಎಂದೂ ಅಡ್ಡಹೆಸರಿನಿಂದ ಕರೆಯಲಾಗುತ್ತದೆ. ಸಮುದ್ರ ತೀರ : ಇದು ಕೈಗಾರಿಕಾ ಕೇಂದ್ರವಾದ ಮಂಗಳೂರಿನಿಂದ ಸುಮಾರು 115 ಕಿಮೀ , ಉಡುಪಿಯಿಂದ 55 ಕಿಮೀ ದೂರದಲ್ಲಿದೆ .ಕುಂದಾಪುರದಿಂದ 18 ಕಿಮೀ ದೂರದಲ್ಲಿದೆ . ಮತ್ತು ಬೈಂದೂರಿನಿಂದ 21 ಕಿ.ಮೀ. NH-66 (ಹಿಂದಿನ NH-17) ಕಡಲತೀರದ ಪಕ್ಕದಲ್ಲಿದೆ ಮತ್ತು ರಸ್ತೆಯ ಇನ್ನೊಂದು ಬದಿಯಲ್ಲಿ ಸುಪರ್ಣಿಕಾ ನದಿ ಹರಿಯುತ್ತದೆ. ಔಟ್ಲುಕ್ ಟ್ರಾವೆಲರ್ಗಳು ಇದನ್ನು ಕರ್ನಾಟಕದ ಅತ್ಯಂತ ಸುಂದರವಾದ ಕಡಲತೀರಗಳಲ್ಲಿ ಒಂದೆಂದು ಪರಿಗಣಿಸುತ್ತಾರೆ. ಇಲ್ಲಿ ಅರೇಬಿಯನ್ ಸಮುದ್ರವನ್ನು ಬಹುತೇಕ ಸ್ಪರ್ಶಿಸುವ ಸುಪರ್ಣಿಕಾ ನದಿಯು ಯು-ಟರ್ನ್ ಮಾಡುತ್ತದೆ ಮತ್ತು ಸುಮಾರು 10 ಕಿಮೀ (6.2 ಮೈಲಿ) ಗಿಂತ ಹೆಚ್ಚಿನ ಪ್ರಯಾಣದ ನಂತರ ಸಮುದ್ರವನ್ನು…
ಮಡಿಕೇರಿ ಏ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಬಾಣೆಯ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು. ಮಹೋತ್ಸವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಏ.29 NEWS DESK : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಮಹಾಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ನಂತರ ಮಹಾಪೂಜೆ ಹಾಗೂ ತೀರ್ಥ ಪ್ರಸಾದ ವಿತರಿಸಲಾಯಿತು. ಮಧ್ಯಾಹ್ನ ತಕ್ಕಾರ ಮನೆಯಿಂದ ಭಂಡಾರ ತಂದು ದೇವಲಯಕ್ಕೆ ಒಪ್ಪಿಸಲಾಯಿತು. ಮಧ್ನಾಹ್ನ ಹಬ್ಬಾಚರಣೆ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ವಿವಿಧ ಗ್ರಾಮದಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಏ.29 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಲೈಟ್ ಕ್ರಿಕೆಟ್ ಕ್ಲಬ್ ಸ್ಕ್ವಾಡ್ 2 ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಎಲೈಟ್ ಕ್ರಿಕೆಟ್ ಕ್ಲಬ್ ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಗೌಡ ಮಹಿಳೆಯರ ಕ್ರಿಕೆಟ್ನಲ್ಲಿ ಪ್ಯಾಂಥರ್ಸ್ ಕ್ಲಬ್ ಕೊಡಗು ಮೊದಲ ಸ್ಥಾನ ಪಡೆದರೆ, ಬ್ಲ್ಯಾಕ್ ಪ್ಯಾಂಥರ್ಸ್ ತಂಡ ದ್ವಿತೀಯ ಸ್ಥಾನಗಳಿಸಿತು. ಪರುಷರ ವಿಭಾಗದ 2ನೇ ಎಲಿಮಿನೇಟರ್ ಪಂದ್ಯದಲ್ಲಿ ಎಲೈಟ್ ಕ್ರೆಕೆಟ್ ಕ್ಲಬ್ ತಂಡ ಕೂರ್ಗ್ ವಾರಿಯರ್ಸ್ ತಂಡದ ವಿರುದ್ಧ 7 ವಿಕೆಟ್ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನಿಗದಿತ 10 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿತು. ತಂಡದ ಅನಿಲ್ ಕುಡೆಕಲ್ 2 ಎಸೆತಗಳಲ್ಲಿ 4 ಬೌಂಡರಿ, 6 ಸಿಕ್ಸರ್ ಒಳಗೊಂಡು 66 ರನ್ಗಳಿಸಿದರು. ಎಲೈಟ್ ಪರವಾಗಿ ಕಾರ್ತಿಕ್,…
ಮಡಿಕೇರಿ ಏ.29 NEWS DESK : ಕಂಡಕರೆ ಗಾಂಧಿ ಯುವಕ ಸಂಘದ ವತಿಯಿಂದ ವರ್ಷಂಪ್ರತೀ ನೀಡಲಾಗುತ್ತಿರುವ 2023-24ನೇ ಸಾಲಿನ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿಗೆ ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಸಿ.ಇ.ತೀರ್ಥಕುಮಾರ್(ಮೂಡಳ್ಳಿ ರವಿ), ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ ಹಂಸ ಕೊಟ್ಟಮುಡಿ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವಕ್ತಾರ ಕೆ.ಎ.ಅಬ್ದುಲ್ ರಜಾಕ್ ಬಜೆಗುಂಡಿ, ಕೂಡಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಸುದ್ದೀನ್ ಕುಶಾಲನಗರ, ಮತ್ತು ಸಮಾಜ ಸೇವಕಿ ಶಹರಬಾನು ಚೆಟ್ಟಳ್ಳಿ ಭಾಜನರಾಗಿದ್ದಾರೆ. ಜೂ.9 ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವುದೆಂದು ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ. 2020-21ನೇ ಸಾಲಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ, 2022-23ನೇ ಸಾಲಿನ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿಯನ್ನು ಹಿಂದೂ ಮಲಯಾಳಿ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ.ಶಶಿಕುಮಾರ್ ಗಾಂಧಿ ಯುವಕ ಸಂಘದ ಅತ್ಯುತ್ತಮ…
ಮಡಿಕೇರಿ ಏ.29 NEWS DESK : ಗಾಂಧಿ ಯುವಕ ಸಂಘ ಕಂಡಕರೆ ಮತ್ತು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಜೂ.9 ರಂದು ಕಂಡಕರೆಯಲ್ಲಿ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ಕಾರ್ಯಕ್ರಮದ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಮತ್ತು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ. ಪತ್ರಿಕಾ ಬಿಡುಗಡೆ ಮಾಡಿರುವ ಇಸ್ಮಾಯಿಲ್ ಕಂಡಕರೆ, 2023 ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇದೀಗ ಜೂ.9 ರಂದು ಕಂಡಕರೆಯಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದ್ದು,ಎಲ್ಲರೂ ಕೈ ಜೋಡಿಸಬೇಕಾಗಿ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ನಾಪೋಕ್ಲು ಏ.28 NEWS DESK : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಕೊಂಡಂಗೇರಿಯಲ್ಲಿ ಉರೂಸ್ ಸಮ್ಮೇಳನ ಶ್ರದ್ಧಾಭಕ್ತಿಯಿಂದ ನಡೆಯಿತು. ಜಿಲ್ಲೆ ಹಾಗೂ ಹೊರ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಅಪಾರ ಸಂಖ್ಯೆಯ ಭಕ್ತರು ಸೌಹಾರ್ಧತೆಗೆ ಸಾಕ್ಷಿಯಾದರು. ಕೊಂಡಂಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮೊಹಮ್ಮದ್ ಪೈಗಂಬರ್ ಸ.ಅ ರವರ ಸಂತತಿ ಪುತ್ರರಾದ ಬಹು ಅಸ್ಸಯ್ಯದ್ ಅಬ್ದುಲ್ಲಾಹಿ ಸಖಾಫ ಅಲ್ ಹಳ್ರಮಿ (ನ.ಮ) ಹಾಗೂ ಸಮೀಪದ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿಗೊಳ್ಳುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭದ ಅಂಗವಾಗಿ ಸಾರ್ವಜನಿಕ ಸೌಹಾರ್ಧ ಸಮ್ಮೇಳನ ನಡೆಯಿತು. ಧಾರ್ಮಿಕ ಪಂಡಿತ ಅಸ್ಸಯ್ಯದ್ ಶಿಹಾಬುದ್ದೀನ್ ಅಲ್ ಹೈದ್ರೋಸಿ ತಂಙಳ್ ಕಿಲ್ಲೂರು ಸಮ್ಮೇಳನ ಉದ್ಘಾಟಿಸಿ ಮಾತನಾಡಿ ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಗ್ರಾಮದಲ್ಲಿ ಧಾರ್ಮಿಕ ಆಚರಣೆಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣವಾಗಲಿದೆ. ಸೇವಾ ಮನೋಭಾವದೊಂದಿಗೆ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಮಾನವೀಯತೆ ತೋರಬೇಕೆಂದು ಹೇಳಿದ ಅವರು ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದರು. ಹೆಸರಾಂತ ಧಾರ್ಮಿಕ…






