ಲೇಖಕ: admin

ಮಡಿಕೇರಿ ಏ.27 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಇಂದು ಸಯ್ಯಿದ್ ಶಿಹಾಬುದ್ದೀನ್ ಅಲ್ ಅಹ್ದಲ್ (ಮುತ್ತನೂರ್ ತಂಙಳ್) ನೇತೃತ್ವದಲ್ಲಿ ದ್ಸಿಕ್ರ್ ಹಲ್ಖಾ ಮತ್ತು ಮತ ಪ್ರವಚನ ನಡೆಯಿತು. ಮುಳ್ಳೂರ್ಕೆರೆ ಮುಹಮ್ಮದ್ ಅಲಿ ಸಖಾಫಿ “ಆಧುನಿಗ ಯುಗತ್ತಿಲ್ ಇಸ್ಲಾಮಿಂಡೆ ಪ್ರಶಸ್ವಿ: ಎಂಬ ವಿಷಯದ ಕುರಿತು ಮಾತನಾಡಿದರು. ಏ.28ರ ಕಾರ್ಯಕ್ರಮದ ವಿವರ :: ಏ.28 ರಂದು ಮಗ್ರಿಬ್ ನಮಾಝಿನ ಬಳಿಕ ಖತಂ ದುಆ ಮಜ್ಲಿಸ್ ನಡೆಯಲಿದ್ದು, ಇದರ ನೇತೃತ್ವವನ್ನು ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದರೂಸಿ ಎಮ್ಮೆಮಾಡಿ (ಕಿಲ್ಲೂರ್ ತಂಙಳ್) ವಹಿಸಲಿದ್ದಾರೆ. ಅಬ್ದುಸ್ಸಲಾಂ ಮುಸ್ಲಿಯಾರ್ ದೇವರ್ಶೋಲ “ಕುಟುಂಬ ಜೀವಿದಂ” ಎಂಬ ವಿಷಯದ ಕುರಿತು ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯರಾದ ಸಯ್ಯಿದ್ ಶರಫುದ್ದೀನ್ ಹಿಮಮಿ ಅಲ್ ಹೈದರೂಪಿ ಎಮ್ಮೆಮಾಡು, ಅಬ್ದುಲ್ ಲತೀಫ್ ಕೂರುಳಿ, ಸಯ್ಯಿದ್ ಝೈನುದ್ದೀನ್ ಸಖಾಫಿ ಅಲ್ ಹೈದರೂಪಿ, ಎಮ್ಮೆಮಾಡು ಶಹೀದಿಯ ಅನಾಥಾಲಯದ ಉಪಾಧ್ಯಕ್ಷ ಉಮರ್ ಹಾಜಿ ಕನ್ನಡಿಯಂಡ ಉಪಸ್ಥಿತರಿರಲಿದ್ದಾರೆ.

Read More

ಮಡಿಕೇರಿ ಏ.27 NEWS DESK  : ನಾಪೋಕ್ಲುವಿನಲ್ಲಿ ಆಯೋಜಿತ ಕೊಡವ ಕುಟುಂಬಗಳ ನಡುವಣ ‘ಕುಂಡ್ಯೋಳಂಡ ಕಪ್ ಹಾಕಿ ಉತ್ಸವ’ದ ಕುತೂಹಲಕಾರಿ ಘಟ್ಟವನ್ನು ತಲುಪಿದ್ದು, ಇಂದು ನಡೆದ ರೋಚಕ ಸೆಮಿ ಫೈನಲ್ ಪಂದ್ಯಗಳಲ್ಲಿ ಅರ್ಹ ಗೆಲುವು ಸಾಧಿಸಿದ ಚೇಂದಂಡ ಮತ್ತು ನೆಲ್ಲಮಕ್ಕಡ ತಂಡಗಳು ಏ.28ರಂದು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಚೇಂದಂಡ ತಂಡ 3-1 ಗೋಲುಗಳ ಅಂತರದಿಂದ ಎದುರಾಳಿ ಕುಲ್ಲೇಟಿರ ತಂಡವನ್ನು ಮಣಿಸಿತು. ದ್ವಿತೀಯ ಸೆಮಿಫೈನಲ್‍ನಲ್ಲಿ ನೆಲ್ಲಮಕ್ಕಡ ತಂಡ 4-2 ಗೋಲುಗಳ ಅಂತರದಿಂದ ಕುಪ್ಪಂಡ(ಕೈಕೇರಿ) ತಂಡವನ್ನು ಪರಾಭವಗೊಳಿಸಿತು. ಪರಾಜಿತ ಕುಲ್ಲೇಟಿರ ಮತ್ತು ಕುಪ್ಪಂಡ ಕೈಕೇರಿ ತಂಡಗಳು ಮೂರನೇ ಸ್ಥಾನಕ್ಕಾಗಿ ಪೈಪೋಟಿ ನಡೆಲಿವೆ. ಚೇಂದಂಡ–ಕುಲ್ಲೇಟಿರ- ದಿನದ ಮೊದಲ ಕುತೂಹಲಕಾರಿ ಸೆಮಿಫೈನಲ್‍ನಲ್ಲಿ ಚೇಂದಂಡ ತಂಡದ ಮೋಕ್ಷಿತ್ ಉತ್ತಪ್ಪ ಪಂದ್ಯದ ಆರಂಭಿಕ 4ನೇ ನಿಮಿಷವೆ ಗೋಲು ಗಳಿಸಿ ತಂಡಕ್ಕೆ 1-0 ಮುನ್ನಡೆಯನ್ನು ದೊರಕಿಸಿಕೊಟ್ಟರು. ¥ಂದ್ಯದ ದ್ವಿತೀಯ ಕ್ವಾರ್ಟರ್‍ನಲ್ಲಿ ಗೋಲುಗಳು ದಾಖಲಾಗಲಿಲ್ಲವಾದರು, ತೃತೀಯ ಕ್ವಾರ್ಟರ್‍ನ 34 ನೇ ನಿಮಿಷ ಚೇಂದಂಡ ನಿಖಿನ್…

Read More

ಸೋಮವಾರಪೇಟೆ ಏ.27 NEWS DESK : ಅಂಕನಹಳ್ಳಿಯ ಶ್ರೀ ತಪೋವನ ಕ್ಷೇತ್ರ ಮನೆಹಳ್ಳಿಮಠದಲ್ಲಿ ಮೂರು ದಿವಸಗಳ ಕಾಲ ಶ್ರೀ ಗುರುಸಿದ್ಧವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಏ.23 ರಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿ, ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿಯವರಿಗೆ ಕಂಕಣ ಧಾರಣೆಯಾಗಿ, ಶ್ರೀ ಗುರುಸಿದ್ಧವೀರೇಶ್ವರ ಸ್ವಾಮಿಗೆ ಮಹಾಮಂಗಳಾರತಿಯಾಗಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಏ.24 ರಂದು ಬೆಳಿಗ್ಗೆ ಶ್ರೀ ಮದನಾಧಿ ಅನಘ ನಿರಂಜನ ಜಂಗಮ ಪೂಜೆ ನಡೆಯಿತು. ಸಂಜೆ ಶ್ರೀಸ್ವಾಮಿಯವರ “ಸೂರ್ಯ ಮಂಡಲೋತ್ಸವ” ನೆರವೇರಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ದಾಸೋಹ ನಡೆಯಿತು. ಏ.25 ರಂದು ಬೆಳಿಗ್ಗೆ ಶ್ರೀಕ್ಷೇತ್ರನಾಥ ವೀರಭದ್ರೇಶ್ವರ ಸ್ವಾಮಿಯ ಪ್ರೀತ್ಯರ್ಥ “ದುಗ್ಗಳ’ ಹಾಗೂ “ಅಗ್ನಿಕೊಂಡೋತ್ಸವ’ ಸೇವೆ ನೆರವೇರಿತು. ನಂತರ ಶ್ರೀ ಸ್ವಾಮಿಯವರ “ಅಡ್ಡಪಲ್ಲಕ್ಕಿ ಉತ್ಸವ” ನಡೆಯಿತು. ಶ್ರೀ ಪ್ರಸನ್ನ ತಪೋವನೇಶ್ವರಿ ಅಮ್ಮನವರ ಪ್ರೀತ್ಯರ್ಥ “ಮುತ್ತೈದೆ ಸೇವೆ” ಯಾಗಿ ಸುಮಂಗಲಿಯರಿಗೆ ಮಡಿಲು ತುಂಬುವ ಕಾರ್ಯಕ್ರಮದಲ್ಲಿ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಮಡಿಲು ತುಂಬಿಸಿಕೊಂಡರು. ನಂತರ ದಾಸೋಹ ಸೇವೆ…

Read More

ಮಡಿಕೇರಿ ಏ.27 NEWS DESK :  ನಾಪೋಕ್ಲುವಿನಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಣ ‘ಕುಂಡ್ಯೋಳಂಡ ಕಪ್ ಹಾಕಿ ಉತ್ಸವ’ದ ಕುತೂಹಲಕಾರಿ ಘಟ್ಟವನ್ನು ತಲುಪಿದ್ದು, ಇಂದು ನಡೆದ ರೋಚಕ ಸೆಮಿ ಫೈನಲ್ ಪಂದ್ಯಗಳಲ್ಲಿ ಅರ್ಹ ಗೆಲುವು ಸಾಧಿಸಿದ ಚೇಂದಂಡ ಮತ್ತು ನೆಲ್ಲಮಕ್ಕಡ ತಂಡಗಳು ಏ.28ರಂದು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಚೇಂದಂಡ ತಂಡ 3-1 ಗೋಲುಗಳ ಅಂತರದಿಂದ ಎದುರಾಳಿ ಕುಲ್ಲೇಟಿರ ತಂಡವನ್ನು ಮಣಿಸಿತು. ದ್ವಿತೀಯ ಸೆಮಿಫೈನಲ್‍ನಲ್ಲಿ ನೆಲ್ಲಮಕ್ಕಡ ತಂಡ 4-2 ಗೋಲುಗಳ ಅಂತರದಿಂದ ಕುಪ್ಪಂಡ(ಕೈಕೇರಿ) ತಂಡವನ್ನು ಪರಾಭವಗೊಳಿಸಿತು. ಪರಾಜಿತ ಕುಲ್ಲೇಟಿರ ಮತ್ತು ಕುಪ್ಪಂಡ ಕೈಕೇರಿ ತಂಡಗಳು ಮೂರನೇ ಸ್ಥಾನಕ್ಕಾಗಿ ಪೈಪೋಟಿ ನಡೆಲಿವೆ.

Read More

ಮಡಿಕೇರಿ, ಏ.27 NEWS DESK : ಕೊಡ್ಲಿಪೇಟೆಯ ಮೂದರವಳ್ಳಿ ಈಶ್ವರ ಹಾಗೂ ಕಟ್ಟೆ ಬಸವಣ್ಣ ಸೇವಾ ಸಮಿತಿಯ ವತಿಯಿಂದ ನೂತನವಾಗಿ ನಿರ್ಮಿಸಿರುವ ಈಶ್ವರ ಹಾಗೂ ಕಟ್ಟೆ ಬಸವಣ್ಣ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವವು ಏ.28 ಮತ್ತು 29 ರಂದು ನಡೆಯಲಿವೆ. ಏ.28 ರಂದು  ಬೆಳಿಗ್ಗೆ 8 ಗಂಟೆಗೆ ಗಂಗಾಪೂಜೆ, ಯಾಗ ಮಂಟಪ ಪ್ರವೇಶ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಗಣಪತಿ ಪೂಜೆ, ಕಳಶ ಪ್ರತಿಷ್ಠಾಪನೆ ಮತ್ತಿತರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಏ.29 ರಂದು ಸೋಮವಾರ ಬೆಳಿಗ್ಗೆ 4 ಗಂಟೆಯಿಂದ ಬಸವಣ್ಣ ಮೂರ್ತಿಗೆ ವಿಶೇಷ ಅಲಂಕಾರ, ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳ ಮೂಲಕ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವವನ್ನು ನೆರವೇರಿಸಲಾಗುವುದು. ಬೆಳಿಗ್ಗೆ 10.00 ಗಂಟೆಗೆ ಆದಿಚುಂಚನಗಿರಿ ಮಠಾಧ್ಯಕ್ಷರಾದ ಡಾ. ನಿರ್ಮಲಾನಂದ ಸ್ವಾಮೀಜಿ, ಶಾಖಾಮಠದ ಶಂಭುನಾಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಮಾಜಿ…

Read More

ಪ್ರಕೃತಿಯಲ್ಲಿ ವಿವಿಧ ಬಗೆಯ ಹಣ್ಣುಗಳು ಲಭ್ಯವಿದೆ. ಅವುಗಳಲ್ಲಿ ಕೆಲವು ಹಣ್ಣುಗಳು ವಿಶೇಷವಾದ ಔಷಧೀಯ ಗುಣ ಹಾಗೂ ಚಿಕಿತ್ಸಾ ಶಕ್ತಿಯನ್ನು ಪಡೆದುಕೊಂಡಿವೆ. ನಿಸರ್ಗದಲ್ಲಿ ಸಿಗುವ ಅಂತಹ ಅದ್ಭುತ ಹಣ್ಣುಗಳಲ್ಲಿ ಪ್ಯಾಷನ್ ಫ್ರೂಟ್ ಸಹ ಒಂದು. ಇದನ್ನು ಕೃಷ್ಣ ಫಲ ಎಂತಲೂ ಕರೆಯುತ್ತಾರೆ. ಇದು ಒಂದು ಬಗೆಯ ಬೆರ್ರಿ ಹಣ್ಣಿನ ಜಾತಿಗೆ ಸೇರಿದ್ದು. ಅಧಿಕ ಬೀಜಗಳು, ಸಿಹಿ ಮತ್ತು ಹುಳಿಯ ರುಚಿ ಹಾಗೂ ಅದ್ಭುತ ಪರಿಮಳದಿಂದ ಕೂಡಿರುವ ಈ ಹಣ್ಣಿನಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಬಹುದು. ಉಷ್ಣ ವಲಯದಲ್ಲಿ ಹೆಚ್ಚಾಗಿ ಬೆಳೆಯುವ ಈ ಹಣ್ಣಿನ ಬಳಕೆ ಮಾಡುವುದರಿಂದ ಕೆಲವು ಆರೋಗ್ಯ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಣದಲ್ಲಿ ಇಡಬಹುದು. ಪ್ಯಾಷನ್ ಹಣ್ಣು/ ಕೃಷ್ಣ ಫಲವು ಕಡಿಮೆ ಪ್ರಮಾಣದ ಗ್ಲೈಸೆಮಿಕ್ (ಐಜಿ) ಸೂಚ್ಯಂಕವನ್ನು ಮತ್ತು ಅಧಿಕ ಪ್ರಮಾಣದ ನಾರಿನಂಶವನ್ನು (ಶೇ. 10.4) ಒಳಗೊಂಡಿರುತ್ತದೆ. ಮಧುಮೇಹಿಗಳಿಗೆ ಇನ್ಸುಲಿನ್ ಪ್ರಮಾಣವನ್ನು ಕಾಪಾಡಿಕೊಳ್ಳಲು ಅದ್ಭುತವಾದ ಹಣ್ಣು. ಆಂಟಿ ಆಕ್ಸಿಡೆಂಟ್‍ಗಳು ನಮ್ಮ ಚರ್ಮಕ್ಕೆ ಉತ್ತಮ ಆರೈಕೆ ಮಾಡುವುದು. ಈ ಹಣ್ಣಿನಲ್ಲಿ ವಿಟಮಿನ್ ಎ,…

Read More

ಬೇಕಾಗುವ ಪದಾರ್ಥಗಳು :  ಮಟನ್- ಒಂದು ಕೆ.ಜಿ (ಚಿಕ್ಕ ತುಂಡುಗಳಾಗಿಸಿದ್ದು) ಅಚ್ಚ ಖಾರದ ಮೆಣಸಿನಪುಡಿ- ಒಂದು ದೊಡ್ಡ ಚಮಚ, ಗರಂ ಮಸಾಲಾ ಪುಡಿ-ಒಂದು ದೊಡ್ಡ ಚಮಚ,  ಕರಿಬೇವಿನ ಎಲೆಗಳು- ಸ್ವಲ್ಪ, ಅರಿಶಿನ ಪುಡಿ- ಸ್ವಲ್ಪ,  ಹಸಿಮೆಣಸಿನ ಕಾಯಿ-ನಾಲ್ಕು (ಉದ್ದಕ್ಕೆ ಸೀಳಿದ್ದು), ಕಾಳುಮೆಣಸಿನ ಪುಡಿ- ಮೂರು ದೊಡ್ಡಚಮಚ, ದನಿಯಾ ಪುಡಿ: ಒಂದು ದೊಡ್ಡ ಚಮಚ, ಶುಂಠಿ-ಬೆಳ್ಳುಳ್ಳಿ ಪೇಸ್ಟ್ – ಅರ್ಧ ದೊಡ್ಡ ಚಮಚ, ಎಣ್ಣೆ – ಸ್ವಲ್ಪ, ಉಪ್ಪು- ರುಚಿಗೆ ತಕ್ಕಷ್ಟು. ಮಾಡುವ ವಿಧಾನ :  ಮಾಂಸದ ತುಂಡುಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ನೀರೆಲ್ಲಾ ಹೊರಹೋಗುವಂತೆ ಬಸಿಯಿರಿ. ಇದಕ್ಕೆ ಅರಿಶಿನದ ಪುಡಿ ಹಚ್ಚಿ ಬದಿಗಿಡಿ. ಸುಮಾರು ಹದಿನೈದು ನಿಮಿಷದ ಬಳಿಕ ಪ್ರೆಶರ್ ಕುಕ್ಕರ್ ನಲ್ಲಿ ಕೊಂಚ ಎಣ್ಣೆ ಹಾಕಿ ಬಿಸಿಮಾಡಿ. ಬಿಸಿಯಾದ ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರಿಶಿನ ಪುಡಿ, ದನಿಯಾ ಪುಡಿ, ಖಾರದ ಪುಡಿ, ಉಪ್ಪು ಹಾಕಿ ಚಿಕ್ಕ ಉರಿಯಲ್ಲಿ ತಿರುವುತ್ತಾ ಹುರಿಯಿರಿ. ಕೊಂಚ ಕಂದು ಬಣ್ಣಕ್ಕೆ ತಿರುಗಿದ ಬಳಿಕ ಮಾಂಸದ ತುಂಡುಗಳನ್ನು ಹಾಕಿ ಕೆಲಕಾಲ ಹುರಿದು ಬಳಿಕ ಮುಚ್ಚಳ ಮುಚ್ಚಿ…

Read More

ಸೋಮವಾರಪೇಟೆ ಏ.27 NEWS DESK : ತೋಳೂರು ಶೆಟ್ಟಳ್ಳಿ ಸಬ್ಬಮ್ಮ ದೇವರ ವಾರ್ಷಿಕ ಸುಗ್ಗಿ ಉತ್ಸವ ಸಂಭ್ರಮದಿಂದ ನಡೆಯಿತು. ಶ್ರೀ ಸಬ್ಬಮ್ಮ ದೇವರ ಉತ್ಸವ ಮೂರ್ತಿಯನ್ನು ಸುಗ್ಗಿಕಟ್ಟೆಯಲ್ಲಿ ಇರಿಸಿ ಪೂಜಾ ಕಾರ್ಯವನ್ನು ಅರ್ಚಕರು ನಡೆಸಿದರು. ನಂತರ ಉತ್ಸವ ಮೂರ್ತಿಯನ್ನು ಸುಗ್ಗಿಕಟ್ಟೆಯ ಸುತ್ತ ಪ್ರದಕ್ಷಿಣೆ ಹಾಕಿದರು. ಈ ಸಂದರ್ಭ ಸ್ಥಳೀಯರೊಂದಿಗೆ, ಸುತ್ತಲಿನ ಗ್ರಾಮಸ್ಥರು ಪ್ರದಕ್ಷಿಣೆಯಲ್ಲಿ ಪಾಲ್ಗೊಂಡು, ಹರಕೆಯ ನೂರಾರು ತೆಂಗಿನ ಕಾಯಿಯನ್ನು ಹೊಡೆದರು. ಸುಗ್ಗಿ ತಂಡದವರು ಹಾಗೂ ಸ್ಥಳೀಯರು ಸುಗ್ಗಿ ಕುಣಿತದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಡಿ.ಎನ್. ರಾಜ್‍ಗೋಪಾಲ್, ಕಾರ್ಯದರ್ಶಿ ಎಚ್.ಜೆ.ಮಹೇಶ್, ಖಜಾಂಚಿ ಮನೋಹರ ಹಾಗೂ ಸುಗ್ಗಿ ಆಚರಣಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಏ.28 ರಂದು ಹೆದ್ದೇವರ ಬನಕ್ಕೆ ಹಾಲೆರಯುವ ಮೂಲಕ ಈ ವರ್ಷದ ಸುಗ್ಗಿ ಉತ್ಸವಕ್ಕೆ ತೆರೆ ಬೀಳಲಿದೆ.

Read More

ಮಡಿಕೇರಿ ಏ.27 NEWS DESK : ಮೈಸೂರು-ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್‍ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮತಯಂತ್ರಗಳಿಗೆ ಮೂರು ಹಂತದ ಭದ್ರತೆನೀಡಲಾಗುತ್ತಿದ್ದು, ಇವಿಎಂ, ವಿವಿ ಪ್ಯಾಟ್ ಇರುವ ರೂಂ ಗಳಿಗೆ ಮೊದಲ ಹಂತದಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ತುಕಡಿ, 2ನೇ ಹಂತದಲ್ಲಿ ಕರ್ನಾಟಕ ಸಶಸ್ತ್ರ ಮೀಸಲು ಪಡೆ ಹಾಗೂ 3ನೇ ಹಂತದಲ್ಲಿ ಸ್ಥಳೀಯ ಸಿವಿಲ್ ಪೊಲೀಸ್ ಸಿಬ್ಬಂದಿ ಯನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ಕಟ್ಟಡದ ಎಲ್ಲಾ ಸ್ಟ್ರಾಂಗ್ ರೂಂಗಳು, ಮತ ಎಣಿಕಾ ಕೇಂದ್ರಗಳಿಗೆ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ…

Read More

ಮಡಿಕೇರಿ ಏ.27  NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 17ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕೇರಳದ ಪಯ್ಯನೂರ್ ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಿತು. ಏ.26 ರಂದು ಸಂಜೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಜರುಗಿತು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಬೆಳಗ್ಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನಡೆಯಿತು. ಮಧ್ಯಾಹ್ನ ಅನ್ನದಾನ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More