ಮಡಿಕೇರಿ ಮೇ 13 NEWS DESK : ಮೂರ್ನಾಡುವಿನಲ್ಲಿ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ವೇಳೆ ವಿದ್ಯುತ್ ತಗುಲಿ ಮೃತಪಟ್ಟ ಆಸಿಫ್ ಎಂಬ ಯುವಕನ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ಲೇಖಕ: admin
ಕೂಡಿಗೆ ಮೇ 13 NEWS DESK : ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಬಸವನತೂರು ಗ್ರಾಮದಲ್ಲಿ ನೆಲೆಸಿರುವ ಶ್ರೀ ಚೌಡಮ್ಮ ದೇವಿಯ ವಾರ್ಷಿಕ ಪೂಜೋತ್ಸವವು ಮೇ 17 ರಂದು ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಯಿಂದ ದೇವರಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದ್ದು, ಮಧ್ಯಾಹ್ನ 12.30 ಕ್ಕೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. ಹೆಚ್ಚಿನ ಮಾಹಿತಿಗೆ ಪ್ರವೀಣ್ -9845667906, ಸುಮಂತ್ -9535043956, ಸತೀಶ್ -8105314959, ಕಿರಣ್ 7795553752 ಸಂಪರ್ಕಿಸಬಹದಾಗಿದೆ. ವರದಿ : ಕೆ.ಆರ್.ಗಣೇಶ್ ಕೂಡಿಗೆ
ಕೂಡಿಗೆ ಮೇ 13 NEWS DESK : ಕೂಡಿಗೆ, ಕೊಪ್ಪಲು, ಹೆಗ್ಗಡಳ್ಳಿ, ಕೋಟೆ ಗ್ರಾಮ ದೇವತೆ ಶ್ರೀ ದಂಡಿನಮ್ಮ, ಶ್ರೀ ಬಸವೇಶ್ವರ ಹಾಗೂ ಶ್ರೀ ಮುತ್ತತ್ ರಾಯ ದೇವಾಲಯದ ಜಾತ್ರ ಮಹೋತ್ಸವವು ಮೇ 20 ರಿಂದ ಆರಂಭವಾಗಲಿದೆ. ಮೇ 20 ರಂದು ಸಂಜೆ 6 ಗಂಟೆಗೆ ಶ್ರೀ ಬಸವೇಶ್ವರ ದೇವರ ವಾನ್ಯ ಹಾಗೂ ಮೆರವಣಿಗೆ ನಡೆಯಲಿದೆ. ಮೇ 24 ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ದಂಡಿನಮ್ಮ ದೇವಿಯ ವಾರ್ಷಿಕ ಪೂಜಾ ಮಹೋತ್ಸವದ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ, ಸಂಜೆ 8 ಗಂಟೆಯಿಂದ ಅಗ್ನಿ ಸ್ಥಾಪನೆ ನೆರವೇರಲಿದೆ. ನಂತರ ಶ್ರೀ ಬಸವೇಶ್ವರ ದೇವಸ್ಥಾನದಿಂದ ಗ್ರಾಮಸ್ಥರುಗಳು ಹಾಗೂ ಭಕ್ತಾದಿಗಳು ಕಾವೇರಿ ನದಿಗೆ ತೆರಳಿ ಕಳಸ ಪೂಜೆ ನಡೆಯಲಿದೆ. ಬಳಿಕ ಹಣ್ಣೆಡಗೆ ಉತ್ಸವ ಮತ್ತು ಕೊಂಡೋತ್ಸವ ನಡೆಯಲಿದ್ದು, ಮರುದಿನ ಮುಂಜಾನೆ ದೇವಾಲಯದ ಮುಂಭಾಗ ಉಯ್ಯಾಲೋತ್ಸವ ಜರುಗಲಿದೆ. ಹನ್ನೆಡೆಗೆ ಹಾಗೂ ಕಳಸ ಹೊತ್ತ ಮಹಿಳೆಯರು ಹಾಗೂ ಪುರುಷರು…
ಮಡಿಕೇರಿ ಮೇ 13 NEWS DESK : ರಾಜ್ಯ ವ್ಯಾಪಿ ಮೇ 13 ರಿಂದ 21 ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 19 ಮತ್ತು 20 ರಂದು, ದಕ್ಷಿಣ ಒಳನಾಡಿನ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಡಿಕೇರಿ ಮೇ 13 NEWS DESK : ವಿರಾಜಪೇಟೆ ತಾಲ್ಲೂಕು ಗೇಟಾಡಿ ಮಾಲ್ದಾರೆ ಗ್ರಾಮದಲ್ಲಿ “ಜೇನು ಕುರುಬ ಕಪ್” ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ತಂಡಗಳಿಗೆ ಶುಭಹಾರೈಸಿದರು.
ಮಡಿಕೇರಿ ಮೇ 13 NEWS DESK : ವಿರಾಜಪೇಟೆ ರೋಟರಿ ಸಂಸ್ಥೆಯ ವತಿಯಿಂದ ಮೇ 18 ರಂದು ವಿರಾಜಪೇಟೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಯಲಿದೆ. ವಿರಾಜಪೇಟೆ ರೋಟರಿ ಶಾಲೆಯಲ್ಲಿ ( ವಿರಾಜಪೇಟೆ ತಾಲೂಕು ಕಚೇರಿ ಬಳಿ) ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶಿಬಿರ ನಡೆಯಲಿದೆ, ಪರಿಣಿತ ವೈದ್ಯರಾದ ಡಾ. ರಘುನಾಥ್ , ಎಂ.ಎಸ್.ಬೆಳ್ಯಪ್ಪ, ಡಾ.ರವಿ, ಡಾ.ಸುನಿತಾ, ಡಾ.ಸಾಗರಿಕ, ಡಾ.ನಿತ್ಯಾನಂದ ತಪಾಸಣೆ ಮತ್ತು ಚಿಕಿತ್ಸಾ ಸಲಹೆ ನೀಡಲಿದ್ದಾರೆ ಎಂದು ವಿರಾಜಪೇಟೆ ರೋಟರಿ ಅಧ್ಯಕ್ಷರಾದ ಎಂ.ಎಂ. ಬನ್ಸಿ ಪೂವಣ್ಣ, ಬೆಂಗಳೂರು ಗ್ಲೋಬಲ್ ಫೌಂಡೇಶನ್ ಟ್ರಸ್ಟಿ ಕನ೯ಲ್ ಸಿ.ಎ. ಅಯ್ಯಪ್ಪ ತಿಳಿಸಿದ್ದಾರೆ ಕ್ಯಾನ್ಸರ್ ತಪಾಸಣೆ ಅಥವಾ ಚಿಕಿತ್ಸೆಗಾಗಿ ಶಿಬಿರಕ್ಕೆ ಬರುವವರು ಅವರಿಗೆ ಸಂಬಂಧಿಸಿದ ವೈದ್ಯಕೀಯ ಮಾಹಿತಿ ಕಡತ ತರುವಂತೆ ಕೋರಲಾಗಿದೆ, ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ 7022924860, 9448448780 ಸಂಪರ್ಕಿಸಬಹುದಾಗಿದೆ.
ಪಾಟ್ನಾ ಮೇ 13 NEWS DESK : ಬಿಹಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ಪಾಟ್ನಾ ನಗರದಲ್ಲಿನ ತಾಖತ್ ಶ್ರೀ ಹರಿಮಂದಿರ್ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಸೋಮವಾರ ಭೇಟಿ ನೀಡಿದರು. ಬೆಳಿಗ್ಗೆ ಅವರು ಗುರುದ್ವಾರದಲ್ಲಿದ್ದ ಸಿಖ್ ಸಮುದಾಯದ ಜನರಿಗೆ ಆಹಾರ ಬಡಿಸುವ ಸೇವಾ ಕಾರ್ಯ ನಡೆಸಿದರು. ಗುರುದ್ವಾರದ ಸಿಖ್ ಸಮುದಾಯದ ಅಡುಗೆ ಹಾಲ್ಗೆ ತೆರಳಿದ ಅವರು ಸ್ಟೀಲ್ ಬಕೆಟ್ನಲ್ಲಿದ್ದ ಆಹಾರವನ್ನು ಸಾಲಿನಲ್ಲಿ ಕುಳಿತಿದ್ದ ಜನರಿಗೆ ಬಡಿಸಿದರು. ಅಲ್ಲದೆ ಅಡುಗೆ ಕೋಣೆಯಲ್ಲಿ ದಾಲ್ ಹಾಗೂ ಇತರೆ ಖಾದ್ಯ ತಯಾರಿಸುವ ಕಾರ್ಯದಲ್ಲಿಯೂ ನೆರವಾದರು. ಚಪಾತಿ ಕೂಡ ಲಟ್ಟಿಸಿ ಗಮನ ಸೆಳೆದರು.
ಮಡಿಕೇರಿ ಮೇ 13 NEWS DESK : ಕರಿಕೆಯ ಆಡ್ಕ ಗ್ರಾಮದ ಪುರಾತನ ದೈವಸ್ಥಾನದಲ್ಲಿ ಪ್ರತಿ ವರ್ಷದಲ್ಲಿ ಈ ಬಾರಿಯೂ ಶ್ರದ್ಧಾಭಕ್ತಿಯಿಂದ ದೈವ ಕೋಲಗಳು ನಡೆಯಿತು. ಗ್ರಾಮದ ವನದೇವತಾರಾಧನ ಸಮಿತಿ ಮತ್ತು ಗ್ರಾಮಸ್ಥರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ನಂತರ ಚಾಮುಂಡಿ, ವಿಷ್ಣುಮೂರ್ತಿ ಮತ್ತು ಉಪದೈವಗಳ ಕೋಲಗಳು ನೆರೆವೇರಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ನಾಪೋಕ್ಲು ಮೇ 13 NEWS DESK : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಮೇ 22 ರಿಂದ 27 ರವರೆಗೆ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ನಾಲ್ನಾಡು ಹಾಕಿ ಪಂದ್ಯಾವಳಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹೇಳಿದರು. ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ 2000 ದಿಂದ 2012 ರವರೆಗೆ ನಾಲ್ನಾಡ್ ಕಪ್ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಬಳಿಕ ಕಾರಣಾಂತರಗಳಿಂದ ಸ್ಥಗಿತಗೊಂಡಿತು. 10 ವರ್ಷಗಳ ಬಳಿಕ ಸಾರ್ವಜನಿಕರ ಒತ್ತಾಯದ ಮೇರೆಗೆ ಹೊಸ ಸಮಿತಿಯನ್ನು ರಚಿಸಿ ಪಂದ್ಯಾವಳಿಯನ್ನು ಆರಂಭಿಸಲಾಗಿದೆ ಎಂದರು. ನಾಲ್ನಾಡು ಕಪ್ ಹಾಕಿ ಪಂದ್ಯಾವಳಿಯ ಮೊತ್ತ ಮೊದಲು ಗ್ರಾಮೀಣ ಮಟ್ಟದಲ್ಲಿ ಯಾವುದೇ ಜಾತಿ ಭೇದಗಲಿಲ್ಲದೆ ಮನೋರಂಜನೆಯ ಜೊತೆಗೆ ಹಾಕಿ ಕ್ರೀಡೆಯ ಹೇಳಿಕೆಗಾಗಿ ಅಯೋಜಿಸಿದ ಹೆಗ್ಗಳಿಕೆ ಈ ಸಮಿತಿಯದಾಗಿದ್ದು ಬಳಿಕ ವಿವಿಧಡೆ ಹಾಕಿ ಪಂದ್ಯಾಟಗಳು ಆರಂಭಗೊಂಡವು. ಈ ವ್ಯಾಪ್ತಿಯಲ್ಲಿ ಬಹಳಷ್ಟು ಕ್ರೀಡಾ ಪ್ರತಿಭೆಗಳಿದ್ದು ಮನೋರಂಜನೆಯ ಜೊತೆಗೆ ಹಾಕಿ…
ಮಡಿಕೇರಿ ಮೇ 13 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಬೇವಿನ ಸೊಪ್ಪಿನ ಕರಗೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಪಂಪಿನ ಕೆರೆಯಲ್ಲಿ ಕರಗಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ವಾದ್ಯಗೋಷ್ಠಿಯೊಂದಿಗೆ ದೇವಿಯ ಕರಗಗಳ ಮೆರವಣಿಗೆ ನಡೆಯಿತು. ಅನಾದಿ ಕಾಲದಿಂದಲೂ ಶಕ್ತಿ ದೇವಿಯ ಬೇವಿನ ಸೊಪ್ಪಿನ ಕರಗೋತ್ಸವ ನಡೆಸಿಕೊಂಡು ಬರುತ್ತಿದ್ದು, ಭೀಕರ ಸಾಂಕ್ರಾಮಿಕ ರೋಗಗಳು ನಾಡಿಗೆ ಬರಬಾರದೆಂಬ ನಂಬಿಕೆಯಿಂದ ನಾಡಿನ ಸುಭಿಕ್ಷೆಗಾಗಿ ಈ ಕರಗೋತ್ಸವವನ್ನು ಆಚರಿಸಲಾಗುತ್ತಿದೆ. ಇಂದು ಕರಗಗಳಿಗೆ ವಿಶೇಷ ಪೂಜೆ, ನಡೆಯಲಿದೆ. ಮೇ 14 ರಂದು ರಾತ್ರಿ 10 ಗಂಟೆಗೆ ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ಮಾರಿಯಮ್ಮ ಸನ್ನಿಧಿಯಲ್ಲಿ ಸಾಂಪ್ರದಾಯಿಕ ದೇವಿಯ ಪೂಜೆಗಳು ಜರುಗಲಿದ್ದು, ನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಮೇ 15 ರಂದು ಸಂಜೆ 7 ಗಂಟೆಗೆ ದೇವಿಯ ಕರಗಗಳಿಗೆ ದೀಪಗಳ ಆರಾಧನೆಯೊಂದಿಗೆ ಸಾಂಪ್ರದಾಯಿಕ ಕರಗಗಳ ವಿಸರ್ಜನೋತ್ಸವ ಜರುಗಲಿದ್ದು, ಶ್ರೀ ಮಾರಿಯಮ್ಮ ಕರಗೋತ್ಸವಕ್ಕೆ ಭಕ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ…






