ಲೇಖಕ: admin

ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಗೆ ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯಲ್ಲಿ  ಸಂಜೆ 5 ಗಂಟೆ ವೇಳೆಗೆ 70.58  ರಷ್ಟು ಮತದಾನ ನಡೆದಿದೆ. ಮಡಿಕೇರಿ ಕ್ಷೇತ್ರದಲ್ಲಿ 70.54 ರಷ್ಟು ಮತದಾನ ನಡೆದಿದ್ದು, ವಿರಾಜಪೇಟೆ ಕ್ಷೇತ್ರದಲ್ಲಿ  70.22 ರಷ್ಟು ಮತದಾನ ನಡೆದಿದೆ. ಮತದಾರರು ಮತಗಟ್ಟೆಯಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತದಾನ ಮಾಡಿದರು.

Read More

ಮಡಿಕೇರಿ ಏ.26 NEWS DESK : ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯಿದ್ ಹಸನ್ ಸಖಾಫ್ ಅಲ್ ಹಳ್ರಮಿ(ರ) ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ಎಮ್ಮೆಮಾಡಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭವು ಮೇ 3ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏ.27 ರಂದು ಸಯ್ಯಿದ್ ಶಿಹಾಬುದ್ದೀನ್ ಅಲ್ ಅಹ್ದಲ್ (ಮುತ್ತನೂರ್ ತಂಙಳ್) ದ್ಸಿಕ್ರ್ ಹಲ್ಖಾ ಮತ್ತು ಮತ ಪ್ರವಚನ ನೇತೃತ್ವ ವಹಿಸಲಿದ್ದು, ಮುಳ್ಳೂರ್ಕೆರೆ ಮುಹಮ್ಮದ್ ಅಲಿ ಸಖಾಫಿ ಆಧುನಿಗ ಯುಗತ್ತಿಲ್ ಇಸ್ಲಾಮಿಂಡೆ ಪ್ರಶಸ್ವಿ ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಹಂಸ ಸಅದಿ, ಮಾಜಿ ಅಧ್ಯಕ್ಷ ಮೂಸ ಹಾಜಿ ಚಕ್ಕೇರ, ಸಯ್ಯದ್ ಆಟಕೋಯ ತಂಙಳ್ ಬಾಣೆಪುರ, ಸಯ್ಯಿದ್ ಪೊಕೊಯ ತಂಙಳ್ ಬಾಣೆಪುರ, ಸಯ್ಯಿದ್ ಫಝಲ್ ಅಲ್ ಹೈದರೂಪಿ, ಎಮ್ಮೆಮಾಡು ಶಹೀದಿಯ ಅನಾಥಾಲಯದ ಕೋಶಾಧಿಕಾರಿ ಉಸ್ಮಾನ್ ನೆರೂಟ್, ಮೇಯಾಣೆ ಮಸೀದಿ ಇಮಾಂ ಹಾರಿಸ್…

Read More

ವಿರಾಜಪೇಟೆ ಏ.26 NEWS DESK :  ವಿರಾಜಪೇಟೆ ನಗರದ ಚಿಕ್ಕಪೇಟೆ ನಿವಾಸಿ ವಿಶ್ವ ಹಾಕಿ ಕಪ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಹಾಲಿ ಒಮನ್ ದೇಶದ ಹಾಕಿ ತಂಡದ ಮುಖ್ಯ ತರಬೇತುದಾರರಾಗಿರುವ ಕೂತಂಡ ಕೆ.ಪೂಣಚ್ಚ ಬಿಜೆಪಿಗೆ ಸೇರ್ಪಡೆಯಾದರು. ವಿರಾಜಪೇಟೆ ನಗರದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ಚಾಮರಾಜ ಒಡೆಯರ್ ಅವರ ರೋಡ್ ಶೋ ನಡೆದ ಸಂದರ್ಭದಲ್ಲಿ ಪೂಣಚ್ಚ ಅವರು ಬೆಂಬಲಿಗರ ಮತ್ತು ರಾಜ್ಯ ವಿಧಾನ ಪರಿಷತ್‌ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹಾಗೂ ಪಕ್ಷ ಪ್ರಮುಖರ ಸಮ್ಮುಖದಲ್ಲಿ ಬಿಜೆಪಿ ಗೆ ಸೇರ್ಪಡೆಯಾದರು. ನಂತರ ಮಾತನಾಡಿದ  ಪೂಣಚ್ಚ, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಅಥವಾ ಮೋದಿ ಅವರು ದೇಶವನ್ನು ವಿಶ್ವದ ಭೂಪಟದಲ್ಲಿ ಭಾರತವನ್ನು ವಿಶ್ವ ಗುರು ಮಾಡುವತ್ತಾ ಶ್ರಮವಹಿಸಿದ್ದಾರೆ. ದೇಶದಲ್ಲಿ ನಡೆದಿರುವ ಅಮೂಲಾಗ್ರ ಬದಲಾವಣೆಯು ಹೊಸ ದಿಕ್ಕು ತೋರುವಂತೆ ಮಾಡಿದೆ. ಉತ್ತಮ ಸೇವೆ ನೀಡುವ ದೇಶ ಸೇವಕ ಮೋದಿ ಅವರು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯಬೇಕು…

Read More

ಮಡಿಕೇರಿ ಏ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ  ಮಧ್ಯಾಹ್ನ 3 ಗಂಟೆವರೆಗೆ ಜರುಗಿದ ಮತದಾನದಲ್ಲಿ ಶೇ.53.55 ಪ್ರತಿಶತ ಮತದಾನವಾಗಿದೆ.

Read More

ಮಡಿಕೇರಿ ಏ.26 NEWS DESK  : ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯುದ್ ಹಸನ್ ಸಖಾಫ್ ಹಳ್ರಮಿ(ರ) ಮತ್ತು ಇತರ ಮಹಾನುಭಾವರ ಹೆಸರಿನಲ್ಲಿ ವರ್ಷಂಪ್ರತಿ ನಡೆಯುವ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಗೆ ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಸಖಾಫಿ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಧ್ವಜಾರೋಹಣಕ್ಕೂ ಮೊದಲು  ಸಾಮೂಹಿಕ ನಮಾಜಿನ ಬಳಿಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಬೆಳ್ತಂಗಡಿ ದಾರುಸ್ಸಲಾಂ ಚೇರ್ಮೆನ್ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ನೇತೃತ್ವ ವಹಿಸಿದ್ದರು. ರಾತ್ರಿ 8 ಗಂಟೆಗೆ ಕೊಡಗು ನಾಇಬ್ ಖಾಝಿ ಅಬ್ದುಲ್ಲ ಫೈಝಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಎಮ್ಮೆಮಾಡು ಮುದರ್ರಿಸ್ ಹಂಝ ಸಖಾಫಿ ವಹಿಸಲಿದ್ದಾರೆ. ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ್ಲ ಪ್ರಶ್ನಂಙಳುಂ ಪರಿಹಾರವುಂ ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಎಮ್ಮೆಮಾಡು ಮಾಜಿ ಖತೀಬರಾದ ಸಯ್ಯಿದ್ ಅಬ್ದುಲ್ ಅಝೀಝ್ ಅಲ್ ಹೈದರೂಸಿ, ಹಾಫಿಳ್ ಜುನೈದ್ ಜಲಾಲಿ, ಎಮ್ಮೆಮಾಡು ಶಹೀದಿಯ ಅನಾಥಾಲಯ ಅಧ್ಯಕ್ಷ ಹಸೈನಾರ್ ಹಾಜಿ ಚಕ್ಕೇರ,…

Read More

ಮಡಿಕೇರಿ ಏ.26 NEWS DESK : ಕೊಡಗಿನ ವಿವಿಧೆಡೆ ಹಿರಿಯ ನಾಗರಿಕರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡುವ ಮೂಲಕ ಯುವ ಮತದಾರರಿಗೆ ಸ್ಫೂರ್ತಿಯಾದರು. ನಾಪೋಕ್ಲು  ಬೂತ್ ಸಂಖ್ಯೆ 56 ರಲ್ಲಿ ಬೊಪ್ಪೇರ ಕಾವೇರಪ್ಪ (98) ಮತದಾನ ಮಾಡಿದರು. ಚೌಡ್ಲೂ ಗ್ರಾಮದ ಹೊನ್ನಮ್ಮ (85) ಸಹಾಯಕರೊಂದಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತ ಗಟ್ಟೆಯಲ್ಲಿ ಮತ ಚಲಾಯಿಸಿದರು.

Read More

ಮಡಿಕೇರಿ ಏ.26 NEWS DESK :  ಚೆಟ್ಟಳ್ಳಿ ಸಮೀಪದ ಪೊನ್ನತ್ಮೊಟ್ಟೆ ಬೂತ್ ಸಂಖ್ಯೆ 237ರಲ್ಲಿ ಮೊದಲ ಬಾರಿ ಮತದಾನ ಮಾಡಿದ  ಕೆ.ಎಂ.ಇರ್ಷಾದ್,  ಸವಾದ್ ಉಸ್ಮಾನ್, ಸಫ್ವಾನ್ ಮತ್ತು ಮುಜಮ್ಮಿಲ್  ಮತಿತ್ತರರು ಮೊದಲ ಬಾರಿಗೆ ಮತ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತ ಚಲಾಯಿಸಿ ಸಂಭ್ರಮಿಸಿದರು.

Read More

ಮಡಿಕೇರಿ ಏ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮೈಸೂರಿನಲ್ಲಿ ಮತದಾನ ಮಾಡಿದರು. ಮೈಸೂರಿನ ಯಾದವಗಿರಿ ಸುನಂದ ಪಬ್ಲಿಕ್ ಶಾಲೆಯ ಮತಗಟ್ಟೆ 145 ರಲ್ಲಿ  ಪತ್ನಿ, ಮಕ್ಕಳ ಜೊತೆ ಆಗಮಿಸಿ ಮತಚಲಾಯಿಸಿದರು.

Read More

ಮಡಿಕೇರಿ ಏ.26 NEWS DESK : ಕೊಡಗಿನಲ್ಲಿ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆಗೆ ವೇಳೆಗೆ  ಶೇ.46.97 ರಷ್ಟು ಮತದಾನ ನಡೆದಿದೆ. ಮತದಾರರು ಉತ್ಸಹದಿಂದ ಮತಗಟ್ಟೆಗೆ ಆಗಮಿಸಿ ಮತಚಲಾಯಿಸುತ್ತಿದ್ದಾರೆ.

Read More